Headlines

ವಿದ್ಯುತ್ ಸ್ಪರ್ಶದಿಂದ ಪತ್ನಿಯನ್ನು ರಕ್ಷಿಸಲು ಹೋದ ಪತಿ ಸಾವು – ಮೆಸ್ಕಾಂ ಇಲಾಖೆಯ ನಿರ್ಲಕ್ಷ್ಯಕ್ಕೆ ರೈತನೊಬ್ಬನ ದುರ್ಮರಣ|Electric shock

ರಿಪ್ಪನ್‌ಪೇಟೆ : ವಿದ್ಯುತ್ ತಂತಿ ತುಳಿದು ರೈತನೋರ್ವ ಸಾವನ್ನಪ್ಪಿರುವ ಘಟನೆ ಇಲ್ಲಿನ ಸಮೀಪದ ನಂಜವಳ್ಳಿ ಗ್ರಾಮದಲ್ಲಿ  ನಡೆದಿದೆ. ಹರತಾಳು ಗ್ರಾಪಂ ವ್ಯಾಪ್ತಿಯ ಹರತಾಳು ಗ್ರಾಮದ ರೈತ ಶೇಷಗಿರಿ(45) ಮೃತ ದುರ್ದೈವಿಯಾಗಿದ್ದಾರೆ. ಇಂದು ಬೆಳಗ್ಗೆ ಮನೆಯ ಬಳಿ ಶೇಷಗಿರಿ ರವರ ಪತ್ನಿ ಹೂ ಕೀಳಲು ಹೋದಾಗ ಅವರಿಗೆ ವಿದ್ಯುತ್ ಸ್ಪರ್ಶಿಸಿ ಕೂಗಿದ್ದಾರೆ ಕೂಡಲೇ ಅವರನ್ನು ರಕ್ಷಿಸಲು ಹೋದ ಶೇಷಗಿರಿ ರವರು ಪಾದರಕ್ಷೆ ಧರಿಸದೆ ವಿದ್ಯುತ್ ತಂತಿಯನ್ನು ತುಳಿದಿದ್ದಾರೆ. ಮೂಲತಃ ರಿಪ್ಪನ್‌ಪೇಟೆ ಸಮೀಪದ ಚಿಕ್ಕಜೇನಿ ಗ್ರಾಮದ ಒಡ್ಡಿನಬೈಲು ನಿವಾಸಿಯಾದ ಇವರು…

Read More

ಚೋರಡಿ ಬಳಿ ಸರಣಿ ಅಪಘಾತ – ಟ್ರಾಫಿಕ್ ಜಾಮ್|accident

ಶಿವಮೊಗ್ಗ ಜಿಲ್ಲೆಯ ಚೋರಡಿಯಲ್ಲಿ ನಾಲ್ಕು ವಾಹನಗಳ ನಡುವೆ ಸರಣಿ ಅಪಘಾತವಾಗಿದ್ದು,ಅರ್ಧ ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್‌ ಆದ ಘಟನೆ ನಡೆದಿದೆ. ಖಾಸಗಿ ಬಸ್, ಗೂಡ್ಸ್ ವಾಹನ, ಲಾರಿ ಮತ್ತು ಕಾರಿನ ನಡುವೆ ಸರಣಿ ಅಪಘಾತ ಸಂಭವಿಸಿದೆ. ವಾಹನಗಳಿಗೆ ಹಾನಿ ಉಂಟಾಗಿದೆ. ಆದರೆ ಯಾವುದೆ ವಾಹನದಲ್ಲಿರುವವರಿಗು ಸಮಸ್ಯೆಯಾಗಿಲ್ಲ. ಅದೃಷ್ಟವಶಾತ್ ಎಲ್ಲರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಸಾಗರ ಕಡೆಯಿಂದ ಬಂದ ಖಾಸಗಿ ಬಸ್, ಚೋರಡಿ ಗ್ರಾಮದಲ್ಲಿ ಪ್ರಯಾಣಿಕರು ಇಳಿಯಲು ನಿಲ್ಲಿಸಲಾಗಿತ್ತು. ಈ ವೇಳೆ ಹಿಂಬದಿಯಿಂದ ಗೂಡ್ಸ್ ಆಟೋ ಬಂದಿದೆ. ಅದರ…

Read More

ಉದ್ಯೋಗಾವಕಾಶ : ಏ.12 ರಂದು ವಿವಿಧ ಕಂಪನಿಗಳಿಂದ ನೇರ ಸಂದರ್ಶನ

 ಏಪ್ರಿಲ್ 12 ರಂದು ಶಿವಮೊಗ್ಗ ನಗರದ  ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ. ಏ.12 ರ ಬೆಳಗ್ಗೆ 10.00ಕ್ಕೆ ಪತ್ರಿಷ್ಠಿತ ಖಾಸಗಿ ಕಂಪನಿಗಳಿಂದ ನೇರ ಸಂದರ್ಶನವನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ. ವಿವಿಧ ಪ್ರತಿಷ್ಠಿತ ಖಾಸಗಿ ಕಂಪನಿಗಳು ಈ ನೇರ ಸಂದರ್ಶನದಲ್ಲಿ ಭಾಗವಹಿಸಲಿದ್ಧಾರೆ.  ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ. ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೊಮೊ ಮತ್ತು ಇತರೆ ಡಿಗ್ರಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ತಮ್ಮ…

Read More

ಏಪ್ರಿಲ್ 24 ಕ್ಕೆ ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗಕ್ಕೆ ಭೇಟಿ !!!! : ಯಾಕೆ ಗೊತ್ತಾ ????

ಈ ವರ್ಷದ ಪಂಚಾಯತ್​ರಾಜ್ ದಿವಸ್ ಕಾರ್ಯಕ್ರಮವನ್ನು ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದಲ್ಲಿ ಆಚರಣೆ ಮಾಡಲಿದ್ದು, ಏಪ್ರಿಲ್ 24ರಂದು ಶಿವಮೊಗ್ಗ ಜಿಲ್ಲೆಗೆ ಆಗಮಿಸುವ ಸಾಧ್ಯತೆ ಇದೆ. ಪ್ರಧಾನ ಮಂತ್ರಿ ಕಾರ್ಯಾಲಯ ಈ ಕುರಿತು ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿದ್ದು, ಜಿಲ್ಲೆಯ ಒಂದು ಗ್ರಾಮ ಪಂಚಾಯಿತಿ ಆಯ್ಕೆ ಮಾಡಲಿದ್ದಾರೆ. ಈಗಾಗಲೆ ಶಿವಮೊಗ್ಗ ತಾಲೂಕಿನ ಎರಡು ಗ್ರಾಪಂಗಳನ್ನು ಕೇಂದ್ರೀಕರಿಸಿ ಹಲವು ಸುತ್ತಿನ ಸಭೆ ನಡೆಸಿದ್ದು, ಪ್ರಧಾನಿ ಭದ್ರತೆ, ಸಮಯದ ಹೊಂದಾಣಿಕೆ, ರಸ್ತೆ ಮಾರ್ಗದ ವಾಹನ ದಟ್ಟಣೆ ಎಲ್ಲವನ್ನೂ ಗಮನಿಸಿ ಯಾವುದಾದರೂ ಒಂದು ಗ್ರಾಪಂಗೆ…

Read More

‘ವರ್ಕ್ ಫ್ರಂ ಹೋಮ್’ ಆಫರ್ ನಂಬಿ ಮೋಸ ಹೋದ ಇಂಜಿನಿಯರ್ — ಒಂಬತ್ತು ದಿನಗಳಲ್ಲಿ 11 ಲಕ್ಷ ವಂಚನೆ!

‘ವರ್ಕ್ ಫ್ರಂ ಹೋಮ್’ ಆಫರ್ ನಂಬಿ ಮೋಸ ಹೋದ ಇಂಜಿನಿಯರ್ — ಒಂಬತ್ತು ದಿನಗಳಲ್ಲಿ 11 ಲಕ್ಷ ವಂಚನೆ! ಶಿವಮೊಗ್ಗ: ನಗರದ  ಕುವೆಂಪು ನಗರದಲ್ಲಿ ವಾಸಿಸುವ ಮಹಿಳಾ ಎಂಜಿನಿಯರ್‌ರೊಬ್ಬರಿಗೆ ಸೈಬರ್ ವಂಚಕರು ಒಂಬತ್ತು ದಿನದಲ್ಲ್ಲಿ ೧೧ ಲಕ್ಷಕ್ಕೂ ಅಧಿಕ ಹಣವನ್ನು ವರ್ಗಾಯಿಸಿಕೊಂಡು ವಂಚಿಸಿದ್ದಾರೆ.  ಈ  ಹಿನ್ನೆಲೆ ಮಹಿಳೆ  ಶಿವಮೊಗ್ಗದ ಸಿಇಎನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಪ್ರಕಾರ, ನವೆಂಬರ್ ೨, ೨೦೨೫ ರಂದು ಮಹಿಳೆ ಮೊಬೈಲ್ ನೋಡುತ್ತಿದ್ದಾಗ, ವಂಚಕರು ಇನ್‌ಸ್ಟಾಗ್ರಾಮ್ ಅಪ್ಲಿಕೇಶನ್ ಮೂಲಕ ಅವರನ್ನು…

Read More

SHIVAMOGGA | ಹುಕ್ಕಾಬಾರ್ ಮೇಲೆ ದಾಳಿ

SHIVAMOGGA | ಹುಕ್ಕಾಬಾರ್ ಮೇಲೆ ದಾಳಿ ಶಿವಮೊಗ್ಗದ ಗೋಪಾಳದಲ್ಲಿರುವ ಹುಕ್ಕಾಬಾರ್ ಮೇಲೆ ದಾಳಿ ನಡೆಸಿ ತೆರವುಗೊಳಿಸಿದ ಘಟನೆ ನಡೆದಿದೆ. ಕರ್ನಾಟಕ ಸರ್ಕಾರದ ಆದೇಶ ಹಾಗೂ ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಗೋಪಾಳದಲ್ಲಿ ನಡೆಸಲಾಗುತ್ತಿದ್ದ ಹುಕ್ಕಾಬಾರ್ ಮೇಲೆ ಪೊಲೀಸ್ ಇಲಾಖೆ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಅಧಿಕಾರಿಗಳು ದಾಳಿ ನಡೆಸಿ ತೆರವುಗೊಳಿಸಿದ್ದಾರೆ. ಈ ಸಂದರ್ಭದಲ್ಲಿ ಉಪ ಪೋಲಿಸ್ ನಿರೀಕ್ಷಕರಾದ ರಘುನಾಥ್, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರರಾದ ಹೇಮಂತ್ ರಾಜ್ ಅರಸ್, ಮಹಾನಗರ ಪಾಲಿಕೆ ಅಧಿಕಾರಗಳು ಹಾಗೂ…

Read More

Ripponpete | ಬಾಳೂರು ಸೇತುವೆ ಬಳಿ ಕಾರು ಡಿಕ್ಕಿಯಾಗಿ ಮಹಿಳೆ ಸಾವು

Ripponpete | ಬಾಳೂರು ಸೇತುವೆ ಬಳಿ ಕಾರು ಡಿಕ್ಕಿಯಾಗಿ ಮಹಿಳೆ ಸಾವು  ರಿಪ್ಪನ್‌ಪೇಟೆ : ಇಲ್ಲಿನ ಬಾಳೂರು ಗ್ರಾಮದ ಸೇತುವೆ ಬಳಿ ಕಾರು ಡಿಕ್ಕಿಯಾಗಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಶಿಕಾರಿಪುರ ತಾಲೂಕಿನ ಸುಣ್ಣದಕೊಪ್ಪ ನಿವಾಸಿ ನಾಗಮ್ಮ(46) ಮೃತಪಟ್ಟ ದುರ್ಧೈವಿಯಾಗಿದ್ದಾರೆ.ಇವರು ಬಾಳೂರು ಸೇತುವೆ ಬಳಿಯ ಕ್ಯಾಂಪ್ ನಲ್ಲಿ ವಾಸಿಸುತಿದ್ದರು. ಸೇತುವೆ ಬಳಿಯಲ್ಲಿ ಅಪಘಾತದಲ್ಲಿ ಗಾಯಗೊಂಡಿದ್ದ ಎಮ್ಮೆಗೆ ನೀರುಣಿಸುತಿದ್ದ ಮಹಿಳೆಗೆ ಸಾಗರ ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಬರುತಿದ್ದ ಕಾರು ಏಕಾಏಕಿ ಡಿಕ್ಕಿಯಾಗಿದೆ. ಘಟನೆಯ ಹಿನ್ನಲೆ : ಬಾಳೂರು ಗ್ರಾಮದ…

Read More

ರಿಪ್ಪನ್‌ಪೇಟೆ : ಪುನೀತ್ ಪುಣ್ಯ ಸ್ಮರಣೆ |ರಾಜರತ್ನ ಮರೆಯಾಗಿ ಕಳೆದೇ ಹೋಯ್ತು ಎರಡು ವರ್ಷ-PRK

ರಿಪ್ಪನ್‌ಪೇಟೆ : ಪುನೀತ್ ಪುಣ್ಯ ಸ್ಮರಣೆ |ರಾಜರತ್ನ ಮರೆಯಾಗಿ ಕಳೆದೇ ಹೋಯ್ತು ಎರಡು ವರ್ಷ ಮೊನ್ನೆ ಮೊನ್ನೆ ನಡೆದಿದೆಯೇನೋ.. ಎಂಬ ಭಾವನೆ ಇಂದಿಗೂ ಜನರ ಮನಸ್ಸಿನಲ್ಲಿದೆ. ಅಪ್ಪು ಅಗಲಿಕೆಗೆ ಆಗಲೇ ಎರಡು ವರ್ಷ. ಆ ದಿನ ಇಡೀ ಕರುನಾಡು ಕಣ್ಣೀರಿಟ್ಟಿತ್ತು. ಕರ್ನಾಟಕ ರತ್ನ ಡಾ| ಪುನೀತ್ ರಾಜ್‍ಕುಮಾರ್ ರವರ ದ್ವಿತೀಯ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದ ವಿನಾಯಕ ವೃತ್ತದಲ್ಲಿ ಕಸ್ತೂರಿ ಕನ್ನಡ ಸಂಘ ಹಾಗೂ ಪುನೀತ್ ರಾಜ್‍ಕುಮಾರ್ ಅಭಿಮಾನಿ ಬಳಗದ…

Read More

ಡಿಸೇಲ್ ಹಾಗೂ ಗ್ಯಾಸ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ಡಿಸೇಲ್ ಹಾಗೂ ಗ್ಯಾಸ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಹಾಗೂ ಸಾಗರ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಇಂಧನ ಹಾಗೂ ಎಲ್ .ಪಿ.ಜಿ ಬೆಲೆ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ನಡೆಯನ್ನು ಖಂಡಿಸಿ ಬೃಹತ್ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರವನ್ನು ವಜಾ ಗೊಳಿಸುವಂತೆ ಸಾಗರ ಉಪವಿಭಾಗದಿಕಾರಿಗಳ ಮೂಲಕ ಗೌರವಾನ್ವಿತ ರಾಷ್ಟಪತಿಗಳಿಗೆ ಮನವಿ ಸಲಿಸಲಾಯಿತು. ಈ ಸಂಧರ್ಭದಲ್ಲಿ ತಾಲೂಕು ಗ್ಯಾರಂಟಿ ಸಮಿತಿಯ ಅಧ್ಯಕ್ಷರು   ಬಿ ಆರ್ ಜಯಂತ್ ಸಾಗರ…

Read More

ವಿಷ ಸೇವಿಸಿದ್ದ ಪದವಿ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೇ ಸಾವು

ವಿಷ ಸೇವಿಸಿದ ಪದವಿ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೇ ಸಾವು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಬಾಳೆಬೈಲಿನ ಖಾಸಗಿ ಡಿಗ್ರಿ ಕಾಲೇಜಿನಲ್ಲಿ ಬಿಬಿಎ ಮೊದಲ ವರ್ಷದ ವಿದ್ಯಾರ್ಥಿನಿಯಾದ ಅಶ್ವಿನಿ (19) ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಸಂಭವಿಸಿದೆ. ಅಶ್ವಿನಿ ಮೂಲತಃ ಯಡೂರಿನವಳಾಗಿದ್ದು, ಪ್ರತಿದಿನ ತೀರ್ಥಹಳ್ಳಿಗೆ ಹೋಗಿ ತರಗತಿಗೆ ಹಾಜರಾಗುತ್ತಿದ್ದಳು. ದಿನದಂದು ಏಕಾಏಕಿ ಅವಳು ವಿಷ ಸೇವಿಸಿದ್ದಳು. ವಿಷ ಸೇವನೆಗೆ ನಿಖರವಾದ ಕಾರಣ ಇನ್ನೂ ಗೊತ್ತಾಗಿಲ್ಲ. ವಿಷ ಸೇವನೆ ಬಗ್ಗೆ ತಿಳಿದ ತಕ್ಷಣ ಆಕೆಯನ್ನು ತೀರ್ಥಹಳ್ಳಿ ಜೆಸಿ ಆಸ್ಪತ್ರೆಗೆ…

Read More