ವಿದ್ಯುತ್ ಸ್ಪರ್ಶದಿಂದ ಪತ್ನಿಯನ್ನು ರಕ್ಷಿಸಲು ಹೋದ ಪತಿ ಸಾವು – ಮೆಸ್ಕಾಂ ಇಲಾಖೆಯ ನಿರ್ಲಕ್ಷ್ಯಕ್ಕೆ ರೈತನೊಬ್ಬನ ದುರ್ಮರಣ|Electric shock
ರಿಪ್ಪನ್ಪೇಟೆ : ವಿದ್ಯುತ್ ತಂತಿ ತುಳಿದು ರೈತನೋರ್ವ ಸಾವನ್ನಪ್ಪಿರುವ ಘಟನೆ ಇಲ್ಲಿನ ಸಮೀಪದ ನಂಜವಳ್ಳಿ ಗ್ರಾಮದಲ್ಲಿ ನಡೆದಿದೆ. ಹರತಾಳು ಗ್ರಾಪಂ ವ್ಯಾಪ್ತಿಯ ಹರತಾಳು ಗ್ರಾಮದ ರೈತ ಶೇಷಗಿರಿ(45) ಮೃತ ದುರ್ದೈವಿಯಾಗಿದ್ದಾರೆ. ಇಂದು ಬೆಳಗ್ಗೆ ಮನೆಯ ಬಳಿ ಶೇಷಗಿರಿ ರವರ ಪತ್ನಿ ಹೂ ಕೀಳಲು ಹೋದಾಗ ಅವರಿಗೆ ವಿದ್ಯುತ್ ಸ್ಪರ್ಶಿಸಿ ಕೂಗಿದ್ದಾರೆ ಕೂಡಲೇ ಅವರನ್ನು ರಕ್ಷಿಸಲು ಹೋದ ಶೇಷಗಿರಿ ರವರು ಪಾದರಕ್ಷೆ ಧರಿಸದೆ ವಿದ್ಯುತ್ ತಂತಿಯನ್ನು ತುಳಿದಿದ್ದಾರೆ. ಮೂಲತಃ ರಿಪ್ಪನ್ಪೇಟೆ ಸಮೀಪದ ಚಿಕ್ಕಜೇನಿ ಗ್ರಾಮದ ಒಡ್ಡಿನಬೈಲು ನಿವಾಸಿಯಾದ ಇವರು…