ಶಿವಮೊಗ್ಗ ಮತ್ತೆ ಉದ್ವಿಗ್ನ | ಮಾರಕಾಸ್ತ್ರಗಳಿಂದ ವ್ಯಕ್ತಿಯ ಮೇಲೆ ಹಲ್ಲೆ : ಕಲ್ಲು ತೂರಾಟ|Shivamogga
ಶಿವಮೊಗ್ಗ: ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ಸೀಗೆಹಟ್ಟಿ ಬಳಿಯ ಧರ್ಮಪ್ಪ ನಗರದಲ್ಲಿ ನಡೆದಿದ್ದು, ಹಲ್ಲೆಗೊಳಗಾದ ವ್ಯಕ್ತಿಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಮವಾರ ರಾತ್ರಿ 11.30ರ ಸುಮಾರಿಗೆ ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಧರ್ಮಪ್ಪ ನಗರದ ಎರಡನೇ ಕ್ರಾಸ್ ನಿವಾಸಿ ಪ್ರಕಾಶ್ (25)ಎಂಬಾತನ ಮೇಲೆ ಹಲ್ಲೆ ನಡೆಸಿದ್ದಾರೆ. ಪ್ರಕಾಶ್ನ ತಲೆಗೆ ಗಾಯವಾಗಿದ್ದು, ಮೆಗ್ಗಾನ್ ಅಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಿಂದ ಕೆಲಕಾಲ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿತ್ತು. ಸುದ್ದಿ ತಿಳಿದು ಸ್ಥಳಕ್ಕೆ ಬಂದ ಎಸ್ಪಿ ಜಿ.ಕೆ.ಮಿಥುನ್…