Thirthahalli | ಕೆಟ್ಟ ರಾಜಕಾರಣವನ್ನು ಸುಟ್ಟು ಹಾಕಬೇಕು ಎಂದು ಹೋಳಿ ಹಬ್ಬ ಆಚರಿಸಿದ ರೈತರು..!!!

ಕೆಟ್ಟ ರಾಜಕಾರಣವನ್ನು ಸುಟ್ಟು ಹಾಕಬೇಕು ಎಂದು ಹೋಳಿ ಹಬ್ಬ ಆಚರಿಸಿದ ರೈತರು ! ತೀರ್ಥಹಳ್ಳಿ : ತಾಲ್ಲೂಕಿನ ಬಹು ಗ್ರಾಮ ಕುಡಿಯುವ ನೀರಿನ ಯೋಜನೆಯ ವಿರುದ್ಧ ಹೆಗ್ಗೋಡಿನಲ್ಲಿ ನಡೆಯುತ್ತಿರುವ ಧರಣಿ ಸತ್ಯಾಗ್ರಹದ 29 ನೇ ದಿನವನ್ನು ಹೋಳಿ ಹಬ್ಬದ ಹಿನ್ನೆಲೆಯಲ್ಲಿ ವಿಶಿಷ್ಟವಾಗಿ ಆಚರಿಸಲಾಯಿತು. ಕಾಮ ದಹನದ ಬದಲು “ಕೆಟ್ಟ ರಾಜಕಾರಣವನ್ನು ಸುಟ್ಟು ಹಾಕಬೇಕು” ಎಂದು ರೈತರು ಘೋಷಣೆ ಕೂಗುತ್ತಾ ಹುಲ್ಲಿನ ಗೊಂಬೆಯನ್ನು ದಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸೌಳಿ ನಾಗರಾಜ್ ಹಿಂದೆ ಪೆರಿಯಾರ್, ಅಂಬೇಡ್ಕರ್ ಮುಂತಾದ ಜನಪರ…

Read More

ಶಿವಮೊಗ್ಗದಿಂದ ಬೆಂಗಳೂರಿಗೆ ಜೀರೋ ಟ್ರಾಫಿಕ್ ಮೂಲಕ ಹೃದಯ ಸಂಬಂಧಿ ಮಗು ರವಾನೆ!!!|zero traffic

ಶಿವಮೊಗ್ಗ :  ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಮೂರು ದಿನದ ಹಸುಗೂಸು ಮಗುವನ್ನು ಬೆಂಗಳೂರಿಗೆ ಜೀರೋ ಟ್ರಾಫಿಕ್ ಮೂಲಕ ರವಾನೆ ಮಾಡಲಾಗಿದೆ. ಶಿವಮೊಗ್ಗದ ಸರ್ಜಿ ಮಕ್ಕಳ ಆಸ್ಪತ್ರೆಯಲ್ಲಿ ಜನಿಸಿದ್ದ ಮಗುವಿಗೆ ಹೃದಯ ಸಂಬಂಧಿ ಕಾಯಿಲೆಯಿದ್ದು ಮಗುವಿನ ಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ  ಮೂರು ದಿನದ ಮಗುವಿಗೆ ತೆರೆದ ಹೃದಯದ ಆಪರೇಶನ್ ಮಾಡುವ ಅವಶ್ಯಕತೆ ಇದ್ದ ಕಾರಣ ಬೆಂಗಳೂರಿನ ಎನ್ ಎಚ್ ಆಸ್ಪತ್ರೆಗೆ ರವಾನೆ ಮಾಡಲಾಯಿತು. ಶಿವಮೊಗ್ಗದ ಗಾಂಧಿ ಬಜಾರ್‌ ನ ನಿಲೇಶ್ ಜೈನ್ ಮತ್ತು ಮೋನಿಕಾ ದಂಪತಿಗಳ ಮಗುವಿಗೆ…

Read More

ರೋಹಿತ್ ಚಕ್ರತೀರ್ಥ ಪಠ್ಯಪುಸ್ತಕ ಪರಿಷ್ಕರಣ ವರದಿಯನ್ನು ಸರಕಾರ ತಿರಸ್ಕರಿಸಿಲಿ : ಬಿ ಸ್ವಾಮಿರಾವ್

ರಿಪ್ಪನ್‌ಪೇಟೆ: ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯ ಪಠ್ಯಪುಸ್ತಕಗಳ ಪರಿಷ್ಕರಣ ವರದಿಯನ್ನು  ಸಂಪೂರ್ಣವಾಗಿ ತಿರಸ್ಕರಿಸಬೇಕೆಂದು ಬಿಜೆಪಿ ಹಿರಿಯ ಮುಖಂಡ ಹಾಗೂ ಮಾಜಿ ಶಾಸಕರಾದ ಬಿ ಸ್ವಾಮಿರಾವ್ ಹೇಳಿದರು. ಪಟ್ಟಣದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ  ಜಗಜ್ಯೋತಿ ಬಸವಣ್ಣ ಮತ್ತು ರಾಷ್ಟ್ರಕವಿ ಕುವೆಂಪು ಹಾಗೂ ನಾರಾಯಣಗುರುಗಳ ಬಗ್ಗೆ ಪಠ್ಯ ಪುಸ್ತಕದಲ್ಲಿ ಅವಮಾನಿಸಿರುವ ಸಂಗತಿಯ ಬಗ್ಗೆ ಆಕ್ರೋಶ ವ್ಯಕ್ತ ಪಡಿಸಿದರು . ರಾಷ್ಟ್ರಕವಿ ಕುವೆಂಪು ಮತ್ತು ಬಸವಣ್ಣ, ನಾರಾಯಣ ಗುರುಗಳ ಬಗ್ಗೆ ಇತಿಹಾಸವನ್ನರಿಯದ ರೋಹಿತ್ ಚಕ್ರತೀರ್ಥ ಮತ್ತು ತಂಡ ಸಮಾಜದಲ್ಲಿನ …

Read More

ಮನೆ ಕಳ್ಳರ ಹೆಡೆಮುರಿ ಕಟ್ಟಿದ ಮಾಳೂರು ಪೊಲೀಸರು ! ಐವರು ಅರೆಸ್ಟ್ !

ತೀರ್ಥಹಳ್ಳಿ : ತಾಲೂಕಿನ ಹಣಗೆರೆ ಕಟ್ಟೆಯ ಭೂತಪ್ಪ ಚೌಡಮ್ಮ ಸೌಯದ್ ಸೌದತ್ ದೇವಸ್ಥಾನದ ಡಿ ದರ್ಜೆ ನೌಕರನ ಮನೆಯಲ್ಲಿ  2 ತಿಂಗಳ ಹಿಂದೆ ನಡೆದಿದ್ದ ಮನೆ ಕನ್ನತನ ಪ್ರಕರಣವನ್ನ ಪೊಲೀಸರು ಬೇಧಿಸಿ ಐವರು ಆರೋಪಿಗಳನ್ನ ಬಂಧಿಸಿದ್ದಾರೆ. ಹಣಗೆರೆ ಕಟ್ಟೆಯ ಭೂತಪ್ಪ ಚೌಡಮ್ಮ ಸೌಯದ್ ಸೌದತ್ ದೇವಸ್ಥಾನದಲ್ಲಿ ಡಿ ದರ್ಜೆ ನೌಕರರಾದ ಸೀನಪ್ಪ ಎಂಬುವರು ಪುರದಾಳಿಗೆ ಹೋದಾಗ ಒಟ್ಟು 250 ಗ್ರಾಂ ಚಿನ್ನ, 40 ಗ್ರಾಂ ಬೆಳ್ಳಿ ಹಾಗೂ 2100 ನಗದು ಕಳವಾಗಿತ್ತು. ಈ ಪ್ರಕರಣ ಪೊಲೀಸರಿಗೆ ಸವಾಲು…

Read More

ಅರಣ್ಯ ಜಮೀನು ಒತ್ತುವರಿ : ಶಿಕ್ಷೆ ನೀಡಿ ತೀರ್ಪು

ಅರಣ್ಯ ಜಮೀನು ಒತ್ತುವರಿ : ಶಿಕ್ಷೆ ನೀಡಿ ತೀರ್ಪು | Encroachment of forest land: Punishment and verdict ಶಿವಮೊಗ್ಗ, ಆ.14,:  ತಾಲ್ಲೂಕಿನ ಹೊಳಲೂರು ಹೋಬಳಿಯ ಬಿಕ್ಕೋನಹಳ್ಳಿ ಗ್ರಾಮದ ಸರ್ವೇ ನಂ 09 ರ ಕುಂಚೇನಹಳ್ಳಿ ಮೀಸಲು ಅರಣ್ಯ ಪ್ರದೇಶದಲ್ಲಿ ಅದೇ ಗ್ರಾಮದ ಚಂದ್ರಪ್ಪ, 50 ವರ್ಷ ಇವರು 01 ಎಕರೆ 20 ಗುಂಟೆ ಜಮೀನನ್ನು ಒತ್ತುವರಿ ಮಾಡಿಕೊಂಡಿರುವುದು ಸಾಬೀತಾದ ಕಾರಣ ಆರೋಪಿಗೆ 01 ವರ್ಷ ಸಾದಾ ಶಿಕ್ಷೆ ಮತ್ತು ರೂ.10 ಸಾವಿರ ದಂಡ ವಿಧಿಸಿ…

Read More

ಗೋದಾಮಿನಲ್ಲಿದ್ದ ಅಡಿಕೆ ಮತ್ತು ಗೇರು ಬೀಜ ಕಳುವು | Theft

ಗೋದಾಮಿನಲ್ಲಿದ್ದ ಅಡಿಕೆ ಮತ್ತು ಗೇರು ಬೀಜ ಕಳುವು | Theft ಸೊರಬ: ತಾಲೂಕಿನ ಮೂಡುಗೋಡು ಗ್ರಾಮದ ಗೋದಾಮಿನಲ್ಲಿ ಸಂಗ್ರಹಿಸಿಟ್ಟಿದ್ದ ಸುಮಾರು 7 ಲಕ್ಷ ರೂ., ಮೌಲ್ಯದ ಅಡಿಕೆ ಮತ್ತು ಗೇರು ಬೀಜವನ್ನು ಕಳ್ಳರು ದರೋಡೆ ನಡೆಸಿರುವ ಘಟನೆ ಗುರುವಾರ ತಡರಾತ್ರಿ ನಡೆದಿದೆ.  ಗ್ರಾಮದ ಜಯಕುಮಾರ್ ಎಂಬುವವರು ಮನೆ ಪಕ್ಕದಲ್ಲಿ ಅಡಿಕೆ ಗೋದಾಮನ್ನು ನಿರ್ಮಿಸಿಕೊಂಡು ತಾವು ಬೆಳೆದ ಸುಮಾರು 200 ಕ್ವಿಂಟಾಲ್ ಸಿಪ್ಪೆ ಅಡಿಕೆ, 10 ಕ್ವಿಂಟಾಲ್ ಕೆಂಪು ಅಡಿಕೆ ಹಾಗೂ 17 ಕ್ವಿಂಟಾಲ್ ಗೇರು ಬೀಜವನ್ನು ಸಂಗ್ರಹಿಸಿದ್ದರು….

Read More

ಪತಿ ಸಾವನ್ನಪ್ಪಿ ಐದೇ ದಿನದಲ್ಲಿ ಪತ್ನಿಯೂ ಆತ್ಮ*ಹತ್ಯೆ

A tragic incident in Bhadravati where a woman died by suicide just five days after her husband’s suicide, raising questions over allegations and mental trauma. Police have registered a case and are investigating. ಭದ್ರಾವತಿ: ಪತಿ ಆತ್ಮಹತ್ಯೆ ಮಾಡಿಕೊಂಡ ಐದೇ ದಿನಗಳೊಳಗೆ ಪತ್ನಿಯೂ ಆತ್ಮಹತ್ಯೆಗೆ ಶರಣಾದ ದುರ್ಘಟನೆ ಭದ್ರಾವತಿ ನಗರದ ಹೊಸ ಸಿದ್ದಾಪುರ ಪ್ರದೇಶದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಸ್ವಾತಿ (26) ಎಂದು…

Read More

ಶಿವಮೊಗ್ಗ : ಮದುವೆಯಾಗುವುದಾಗಿ ನಂಬಿಸಿ ಯುವಕನಿಗೆ ಲಕ್ಷಾಂತರ ರೂ ವಂಚಿಸಿದ ನಟಿ – ಬಂಧನ|Arrested

ಶಿವಮೊಗ್ಗ : ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ವಂಚನೆ ಮಾಡಿದ ಆರೋಪದಲ್ಲಿ ಬೆಂಗಳೂರಿನ ಚಿತ್ರನಟಿ ಉಷಾ.ಆರ್ ಅವರನ್ನು ಬಂಧಿಸಲಾಗಿದೆ. ಶಿವಮೊಗ್ಗದ ಕಿರುತೆರೆ ನಟನಿಗೆ ವಂಚನೆ ಪ್ರಕರಣದಲ್ಲಿ ನಟಿಯನ್ನು ವಿನೋಬ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಟಿ ಉಷಾ ಎಂಬಾಕೆ ವಿರುದ್ಧ ವಾರೆಂಟ್‌ ಜಾರಿಯಾಗಿತ್ತು. ಬೆಂಗಳೂರಿನಲ್ಲಿ ನಟಿ  ಉಷಾಳನ್ನು ಬಂಧಿಸಿದ್ದ ವಿನೋಬನಗರ ಠಾಣೆ ಪೊಲೀಸರು, ಮೆಗ್ಗಾನ್‌ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದರು. ಬಳಿಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು. ನಟಿ ಉಷಾ ವಿರುದ್ಧ ಶಿವಮೊಗ್ಗದ ಶರವಣನ್‌ ಎಂಬಾತ ವಂಚನೆ ದೂರು ನೀಡಿದ್ದರು….

Read More

ರಸ್ತೆಯಲ್ಲಿ ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ನವವಿವಾಹಿತ ಸಾವು!

ರಸ್ತೆಯಲ್ಲಿ ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ನವವಿವಾಹಿತ ಸಾವು! ಕೆಲಸ ಮುಗಿಸಿಕೊಂಡು ಮನೆಗೆ ತೆರಳುವಾಗ ರಸ್ತೆಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ನವವಿವಾಹಿತ ಸಾವನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಹೊಳೆ ಜೋಳದಗುಡ್ಡೆ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಗ್ರಾಮದ ದೇವರಾಜ ಎಂದು ಗುರುತಿಸಲಗಿದೆ. ಅವರು ಎಂದಿನಂತೆ ಕೆಲಸ ಮುಗಿಸಿಕೊಂಡು ರಾತ್ರಿ 8 ಗಂಟೆಗೆ ಮನೆಗೆ ತೆರಳುವ ವೇಳೆ ಮನೆಯ ವಿದ್ಯುತ್ ಲೈನ್ ತುಂಡಾಗಿ ಬಿದ್ದಿರುವುದನ್ನು ಗಮನಿಸದೆ ತುಳಿದು ವಿದ್ಯುತ್‌ ಸ್ಪರ್ಶವಾಗಿ ಅಸ್ವಸ್ಥರಾಗಿದ್ದರು. ಮೃತ…

Read More

AAP | ಭ್ರಷ್ಟಾಚಾರ ಮುಕ್ತ ಆಡಳಿತಕ್ಕೆ ಆಮ್ ಆದ್ಮಿ ಪಕ್ಷವನ್ನು ಬೆಂಬಲಿಸಿ – ಸಂಸ್ಥಾಪಕ ಸದಸ್ಯ ಶಹನವಾಜ್ ಹಿಂದೂಸ್ಥಾನಿ

ರಿಪ್ಪನ್‌ಪೇಟೆ : ದೆಹಲಿಯ ಅರವಿಂದ್ ಕೇಜ್ರಿವಾಲ್ ಸರ್ಕಾರ ನೀಡಿರುವ ಉನ್ನತಮಟ್ಟದ ಶಿಕ್ಷಣ ವ್ಯವಸ್ಥೆ,ಉಚಿತ ನೀರಿನ ವ್ಯವಸ್ಥೆ,ಉಚಿತ ವಿದ್ಯುತ್,ಆರೋಗ್ಯ ವ್ಯವಸ್ಥೆಯನ್ನು ಕರ್ನಾಟಕದ ಜನಸಾಮಾನ್ಯರು ಬಯಸುತಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಸಂಸ್ಥಾಪಕ ಸದಸ್ಯ ಹಾಗೂ ಸ್ಟಾರ್ ಕ್ಯಾಂಪೇನರ್ ಶಹನವಾಜ್ ಹಿಂದೂಸ್ಥಾನಿ ಹೇಳಿದರು. ರಿಪ್ಪನ್‌ಪೇಟೆ ಪಟ್ಟಣದಲ್ಲಿ ಸಾಗರ ಕ್ಷೇತ್ರದ ಆಪ್ ಅಭ್ಯರ್ಥಿ ಕೆ ದಿವಾಕರ್ ಪರ ಮತಯಾಚನೆ ನಡೆಸಿ ಎಎಪಿ ಕಛೇರಿಯಲ್ಲಿ ಅಯೋಜಿಸಲಾದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಭಾರತದೇಶದಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದ್ದು ಅದರಲ್ಲಿಯೂ ಕರ್ನಾಟಕದಲ್ಲಿ ಇನ್ನೂ ಹೆಚ್ಚಾಗಿದೆ ಎಂಬ ಬಗ್ಗೆ…

Read More