Headlines

ಸಿಗಂಧೂರಿನಲ್ಲಿ ಸಂಭ್ರಮದ ಸಂಕ್ರಮಣ: ಹರಿದು ಬಂದ ಜನಸಾಗರ

ಸಿಗಂಧೂರಿನಲ್ಲಿ ಸಂಭ್ರಮದ ಸಂಕ್ರಮಣ: ಹರಿದು ಬಂದ ಜನಸಾಗರ ತುಮರಿ : ಸಮೀಪದ ಸಿಗಂದೂರು ಚೌಡೇಶ್ವರಿ ದೇವಸ್ಥಾನದಲ್ಲಿ ಮಕರ ಸಂಕ್ರಮಣ ಜಾತ್ರಾ ಮಹೋತ್ಸವದ ಮೊದಲ ದಿನ ದಿನ ದೇವಿಗೆ ವಿಶೇಷ ಪೂಜೆ ನೇರವೇರಿತು. ಮಂಗಳವಾರ ಬೆಳಿಗ್ಗೆ 5ರಿಂದ ದೇವಿಗೆ ಪಂಚಾಮೃತ ಅಭಿಷೇಕ. ಮಹಾಭಿಷೇಕ. ಅರ್ಚನೆ ದೇವಿಯ ಮೂಲ ಸ್ಥಾನದಲ್ಲಿ ನವ ಚಂಡಿಕಾ ಹೋಮ ನೆರವೇರಿತು. ಹೋಮ ಹವನ ಪೂರ್ವಹುತಿಯಲ್ಲಿ  ಧರ್ಮಾಧಿಕಾರಿ ಡಾ ಎಸ್ ರಾಮಪ್ಪನವರು ಕುಟುಂಬ ಸಮೇತರಾಗಿ ಭಾಗವಹಿಸಿ, ವಿವಿಧ ಧಾರ್ಮಿಕ ವಿಧಿ ವಿಧಾನಗಳಲ್ಲಿ ಭಾಗಿಯಾದರು. ಮೊದಲ ದಿನದ…

Read More

ಇಬ್ಬರು ಮಕ್ಕಳನ್ನು ಕೊಂದು ದಂಪತಿ ಆತ್ಮ*ಹತ್ಯೆ

BENGALURU, 15 ಅಕ್ಟೋಬರ್ :  ಯಲಹಂಕ ತಾಲ್ಲೂಕಿನ ಸಿಂಗನಾಯಕನಹಳ್ಳಿ ಸಮೀಪದ ಯಡಿಯೂರಪ್ಪ ನಗರದ ಮನೆಯೊಂದರಲ್ಲಿ ಇಬ್ಬರು ಪುಟ್ಟ ಮಕ್ಕಳು ಹಾಗೂ ಮಕ್ಕಳ ತಂದೆ-ತಾಯಿ ಸೇರಿ ನಾಲ್ವರ ಶವಗಳು ಸೋಮವಾರ ಪತ್ತೆಯಾಗಿವೆ. ಪತಿ ಅವಿನಾಶ್ (33), ಪತ್ನಿ ಮಮತಾ(30), ಮಕ್ಕಳಾದ ಅಧೀಯ(5) ಮತ್ತು ಅನಯಾ (3) ಮೃತರು. ‘ಕಲಬುರಗಿಯ ಕಮಲಾ‍‍ಪುರದ ತಾಂಡಾದ ದಂಪತಿ ಆರು ವರ್ಷಗಳಿಂದ ಯಡಿಯೂರಪ್ಪ ನಗರದಲ್ಲಿ ವಾಸವಾಗಿದ್ದರು. ಅವಿನಾಶ್ ಅವರು ಕ್ಯಾಬ್‌ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಮಮತಾ ಅವರು ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು’…

Read More

ನವೆಂಬರ 6ರಂದು ಮಳಲಿ ಮಠದಲ್ಲಿ ಕಾರ್ತಿಕ ದೀಪೋತ್ಸವ ಮತ್ತು ಜನಜಾಗೃತಿ ಧರ್ಮ ಸಮಾರಂಭ|ದೀಪೋತ್ಸವದ ಅಂಗವಾಗಿ ಭಕ್ತರಿಂದ ಮಠದ ಸ್ವಚ್ಚತಾ ಅಭಿಯಾನ|Malalimatt

ನವೆಂಬರ್ 6 ರ ಭಾನುವಾರದಂದು ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಮಳಲಿ‌ಮಠ ಮಹಾಸಂಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ ಮತ್ತು ಜನ ಜಾಗೃತಿ ಧರ್ಮ ಸಮಾರಂಭ ನಡೆಯಲಿದೆ ಎಂದು ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾ ಸ್ವಾಮಿಜಿಗಳು ತಿಳಿಸಿದರು. ಈ ಸಂಧರ್ಭದಲ್ಲಿ ಮಾತನಾಡಿದ ಅವರು ಮಾನವ ಜೀವನದಲ್ಲಿ ಕತ್ತಲೆ ಬೆಳಕಿನಂತೆ ಸುಖ ದುಃಖಗಳು ಶಾಶ್ವತವಲ್ಲ. ಭೌತಿಕ ಬದುಕು ಸಮೃದ್ಧಗೊಂಡಂತೆ ಆಂತರಿಕ ಜೀವನ ಪರಿಶುದ್ಧಗೊಳ್ಳಲು ಆಧ್ಯಾತ್ಮದ ಬೆಳಕು ಮಾನವನಿಗೆ ಅನಿವಾರ್ಯವಾಗುತ್ತದೆ ಎಂದರು. ನವೆಂಬರ್ 06 ಭಾನುವಾರದಂದು ರಂದು ನಡೆಯುವ ಕಾರ್ತೀಕ ದೀಪೋತ್ಸವ ಹಾಗೂ…

Read More

ಆರ್ ಎಸ್ ಎಸ್ ಬಗ್ಗೆ ಮಾತನಾಡುವ ಯೋಗ್ಯತೆ ಕಾಂಗ್ರೆಸ್ ನವರಿಗಿಲ್ಲ – ಬಿ ವೈ ರಾಘವೇಂದ್ರ

ತೀರ್ಥಹಳ್ಳಿ : ರಾಷ್ಟ್ರೀಯ ಸ್ವಯಂ ಸೇವಾ ಸಂಘದ ಬಗ್ಗೆ ಕೆಲವು ನಾಯಕರು ತುಂಬಾ ಹಗುರವಾಗಿ ಮಾತನಾಡುತ್ತಿದ್ದಾರೆ. ರಾಜಕಾರಣ ಮಾಡಲು ಬೇರೆ ವಿಚಾರಗಳಿದೆ. ಅದನ್ನೆಲ್ಲ ಬಿಟ್ಟು ಅಲ್ಲಿ ಆರ್ ಎಸ್ ಎಸ್ ಅನ್ನು ಎಳೆಯುವಂತಹದ್ದು ಸರಿಯಲ್ಲ ಆರ್ ಎಸ್ ಎಸ್ ಬಗ್ಗೆ ಮಾತನಾಡುವ ಯೋಗ್ಯತೆ ಕಾಂಗ್ರೆಸ್ ನವರಿಗಿಲ್ಲ ಎಂದು ಸಂಸದ ಬಿ ವೈ ರಾಘವೇಂದ್ರ ಆಕ್ರೋಶ ವ್ಯಕ್ತಪಡಿಸಿದರು.  ತೀರ್ಥಹಳ್ಳಿಯಲ್ಲಿ ಸಂಘಟನಾತ್ಮಕ ಸಭೆಯಲ್ಲಿ ಭಾಗವಹಿಸಿದ ನಂತರ ಮಾಧ್ಯಮದ ಜೊತೆ ಮಾತನಾಡಿ ಆರ್ ಎಸ್ ಎಸ್ ಎಂಬುದು ದೇಶಕ್ಕೋಸ್ಕರ, ಹಿಂದೂ ರಾಷ್ಟ್ರಕ್ಕೊಸ್ಕರ…

Read More

ಆಗುಂಬೆ ಘಾಟ್ ನಲ್ಲಿ ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ – ಪ್ರಯಾಣಿಕರ ಪರದಾಟ | agumbe Ghat traffic

ಆಗುಂಬೆ ಘಾಟ್ ನಲ್ಲಿ ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ – ಪ್ರಯಾಣಿಕರ ಪರದಾಟ | agumbe Ghat traffic ಎರಡು ಸ್ಥಳಗಳಲ್ಲಿ ವಾಹನಗಳು ಹಾಳಾಗಿ ಕೆಟ್ಟು ನಿಂತಿರುವ ಕಾರಣ ಆಗುಂಬೆ(agumbe ghat) ನಲ್ಲಿ ಮೊದಲ ತಿರುವಿನಿಂದ ಸಂಪೂರ್ಣ ಟ್ರಾಫಿಕ್ ಜಾಮ್ ಆಗಿರುವ ಘಟನೆ ನಡೆದಿದೆ. ಭಾನುವಾರ ಸಂಜೆ ವೇಳೆಯಲ್ಲಿ ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು ನೂರಾರು ವಾಹನಗಳು ಸಿಲುಕಿಕೊಂಡು ಪ್ರಯಾಣಿಕರು ಪರದಾಡುವಂತಾಗಿದೆ. ರಜೆ ದಿನದ ಹಿನ್ನಲೆಯಲ್ಲಿ ಬೇರೆ ಬೇರೆ ಕಡೆ ಪ್ರವಾಸಕ್ಕೆ ತೆರಳಿದ್ದವರು ಸಂಜೆ…

Read More

ಹೊಸನಗರದಲ್ಲಿ ಅದ್ದೂರಿಯಾಗಿ ಜರುಗಿದ ಈದ್ ಮಿಲಾದ್ ಮೆರವಣಿಗೆ

ಹೊಸನಗರದಲ್ಲಿ ಅದ್ದೂರಿಯಾಗಿ ಜರುಗಿದ ಈದ್ ಮಿಲಾದ್ ಮೆರವಣಿಗೆ ಹೊಸನಗರ : ಪಟ್ಟಣದಲ್ಲಿ ಇಂದು ಮುಸ್ಲಿಂ ಬಾಂಧವರು ಜಗತ್ತಿಗೆ ಮಾನವತೆಯನ್ನು ಪಸರಿಸಿದ ವಿಶ್ವ ಪ್ರವಾದಿ ಮಹಮ್ಮದ್ ಮುಸ್ತಾಫಾ ರವರ ಜನ್ಮ ದಿನಾಚರಣೆಯನ್ನು ಸಡಗರ ಸಂಭ್ರಮದಿಂದ ಆಚರಿಸಿದರು. ಪ್ರಾರ್ಥನಾ ಮಂದಿರದಿಂದ ಹೊಸನಗರ ಬಸ್ ನಿಲ್ದಾಣ ವೃತ್ತದ ಮೂಲಕ ಪ್ರಮುಖ ಬೀದಿಗಳಲ್ಲಿ ಮುಸಲ್ಮಾನ ಭಾಂಧವರು ಯುವಕರ “ದಫ಼್’’ ಅಕರ್ಷಣೆಯೊಂದಿಗೆ  ಮುಸ್ಲಿಂ ಧರ್ಮಗುರುಗಳ ನೇತೃತ್ವದಲ್ಲಿ  ಮೆರವಣಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿದರು.

Read More

ಮಿಸ್ಟರ್ ಹಾಲಪ್ಪ ಸಾಗರ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಬಹಿರಂಗ ಚರ್ಚೆಗೆ ಬನ್ನಿ – ಬೇಳೂರು ಸವಾಲ್|sagara

ಮಿಸ್ಟರ್ ಹಾಲಪ್ಪ ಸಾಗರ ಕ್ಷೇತ್ರದ ಅಭಿವೃದ್ಧಿಗೆ ನಿಮ್ಮ ಕೊಡುಗೆಯೇನು, ನಾನು ಮತ್ತು ಕಾಗೋಡು ನೀಡಿದ ಕೊಡುಗೆ ಏನು ಎನ್ನುವುದನ್ನು ಚರ್ಚೆ ಮಾಡಲು ಗಾಂಧಿ ಮೈದಾನಕ್ಕೆ ಬನ್ನಿ ಎಂದು ಸಾಗರ ವಿಧಾನಸಭಾ ಕ್ಷೇತ್ರದ ಘೋಷಿತ ಕಾಂಗ್ರೆಸ್ ಅಭ್ಯರ್ಥಿ ಗೋಪಾಲಕೃಷ್ಣ ಬೇಳೂರು ಸವಾಲು ಎಸೆದಿದ್ದಾರೆ. ಇಲ್ಲಿನ ಮಹಿಳಾ ಸಮಾಜದ ಆವರಣದಲ್ಲಿ ಗುರುವಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸಾಗರಕ್ಕೆ ಕುಡಿಯುವ ನೀರು ತರಲು 70 ಕೋಟಿ ರೂ. ಬಂದದ್ದು ನನ್ನ ಕಾಗೋಡು ಅವಧಿಯಲ್ಲಿ, ತಹಶೀಲ್ದಾರ್ ಕಚೇರಿ ನಿರ್ಮಾಣಕ್ಕೆ…

Read More

ರಿಪ್ಪನ್‌ಪೇಟೆ ಹೆಸರಿನ ಮೂಲ – ಲಾರ್ಡ್ ರಿಪ್ಪನ್ ಅವರ ಒಳ್ಳೆತನದ ಸ್ಮರಣೆ

ರಿಪ್ಪನ್‌ಪೇಟೆ ಹೆಸರಿನ ಮೂಲ – ಲಾರ್ಡ್ ರಿಪ್ಪನ್ ಅವರ ಒಳ್ಳೆತನದ ಸ್ಮರಣೆ ಬದಲಾಯಿಸಬೇಕಾಗಿರುವುದು ಊರಿನ ಹೆಸರನ್ನಲ್ಲ .. ಈ ಊರಿನ ವ್ಯವಸ್ಥೆಯನ್ನು..!!! ಕರ್ನಾಟಕದ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅರಣ್ಯಸೌಂದರ್ಯದಿಂದ ಕಂಗೊಳಿಸುವ ಪಟ್ಟಣಗಳಲ್ಲಿ ಒಂದಾದ ರಿಪ್ಪನ್‌ಪೇಟೆ, ಇತಿಹಾಸ ಮತ್ತು ಸಂಸ್ಕೃತಿಯ ಅದ್ಭುತ ಮಿಶ್ರಣವಾಗಿದೆ. ಈ ಊರಿನ ಹೆಸರಿನ ಹಿಂದಿರುವ ಕಥೆ ಅತ್ಯಂತ ಆಸಕ್ತಿದಾಯಕ. ಜನಪ್ರಚಲಿತವಾದ ನಂಬಿಕೆಯ ಪ್ರಕಾರ, ಈ ಸ್ಥಳಕ್ಕೆ “ರಿಪ್ಪನ್‌ಪೇಟೆ” ಎಂಬ ಹೆಸರು ಬ್ರಿಟಿಷ್ ಕಾಲದ ಲಾರ್ಡ್ ರಿಪ್ಪನ್ ( ಜಾರ್ಜ್ ಫ್ರೆಡೆರಿಕ್ ರಾಬಿನ್ಸನ್ )…

Read More

ಮಾನವೀಯತೆ ಮೆರೆದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ

ಬೈಕ್ ಸವಾರನೊಬ್ಬ ಆನಂದಪುರ ಸಮೀಪದ ಹೊಸೂರು ಬಳಿ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದರು, ಅದೇ ದಾರಿಯಲ್ಲಿ ಸಾಗುತ್ತಿದ್ದ ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರರಾದ ಬೇಳೂರು ಗೋಪಾಲಕೃಷ್ಣ ಅವರು ಅಪಘಾತಕ್ಕೀಡಾದ ವ್ಯಕ್ತಿಯನ್ನು ಉಪಚರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಇಂದು ಮಾಜಿ ಶಾಸಕರು ಸಾಗರದಿಂದ ಆನಂದಪುರ ಬರುವಾಗ ಹೊಸೂರು ಬಳಿ ರಸ್ತೆಯಲ್ಲಿ ಬೈಕ್ ಸವಾರ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದನು.ತಕ್ಷಣ ಕಾರಿನಿಂದ ಇಳಿದು ಸ್ಥಳಕ್ಕೆ ಧಾವಿಸಿದ ಮಾಜಿ ಶಾಸಕರು ಸಹಾಯಕರ ಸಹಾಯಕ್ಕೂ ಕಾಯದೇ ತಾವೇ ಬೈಕ್ ಎತ್ತಿ ನಿಲ್ಲಿಸಿ,…

Read More

ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ:

ಸಾಗರ: ಇಲ್ಲಿನ ಗುಡ್ಡೆಕೌತಿ ಸಮೀಪದಲ್ಲಿ ಮೈಸೂರು-ತಾಳಗುಪ್ಪ ಇಂಟರ್ ಸಿಟಿ ರೈಲಿಗೆ ಮಧ್ಯಾಹ್ನದ ವೇಳೆ ತಲೆಕೊಟ್ಟು ಸುಮಾರು 36 ವರ್ಷ ವಯಸ್ಸಿನ ವ್ಯಕ್ತಿ ಸಾವನ್ನಪ್ಪಿದ್ದಾರೆ. ಮೃತನ ವಿಳಾಸ ತಿಳಿದು ಬಂದಿಲ್ಲಾ. ಸಾಗರ ಠಾಣೆಯ ಸಬ್ ಇನ್ಸ್ಪೆಕ್ಟರ್ ಅಶೋಕ್ ಕುಮಾರ್  ಮತ್ತು ಗ್ರಾಮಾಂತರ ಇನ್ಸ್ಪೆಕ್ಟರ್ ಗಿರೀಶ್ ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದು ಘಟನೆ ಕುರಿತು ಹೆಚ್ಚಿನ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. ಮಾಹಿತಿ: ಇಮ್ರಾನ್ ಸಾಗರ್

Read More