ಶಿವಮೊಗ್ಗ : ರಾತ್ರೋರಾತ್ರಿ ದೇವಸ್ಥಾನ ಕೆಡವಿ,ಅರ್ಚಕನ ಕಣ್ಣಲ್ಲಿ ನೀರು ತರಿಸಿದರು : ಗೋಪಾಲಕೃಷ್ಣ ಬೇಳೂರು
ಶಿವಮೊಗ್ಗ : ರಾತ್ರೋರಾತ್ರಿ ಕಳ್ಳರ ಹಾಗೆ ಹಿಂದೂ ದೇಗುಲಗಳನ್ನು ಕೆಡವಿದಾಗ ಹಿಂದುತ್ವದ ಕವಚ ತೊಟ್ಟ ಹಿಂದುತ್ವವಾದಿಗಳು ಮತ್ತು ಸರ್ಕಾರ ಎಲ್ಲಿ ಹೋಗಿತ್ತು ಅಂತಾ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಪ್ರಶ್ನಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಒಂದು ವೇಳೆ ಈ ಸಂದರ್ಭ ಕಾಂಗ್ರೆಸ್ ಸರ್ಕಾರಿವಿದ್ದಿದ್ದರೆ ಅಥವಾ ಮುಸ್ಲಿಂ ಅಧಿಕಾರಿಯೊಬ್ಬ ದೇಗುಲ ತೆರವು ಮಾಡಿಸಿದ್ದರೆ ಈ ಕವಚ ತೊಟ್ಟ ನಕಲಿ ಹಿಂದುತ್ವವಾದಿಗಳು ರಾಜ್ಯಕ್ಕೆ ಬೆಂಕಿ ಹಚ್ಚಿಬಿಡುತ್ತಿದ್ದರು ಎಂದು ಆರೋಪಿಸಿದರು. ರಾತ್ರೋರಾತ್ರಿ ಕಳ್ಳರ ಹಾಗೆ ದೇವಸ್ಥಾನವನ್ನು ಒಡೆಸಿದ್ದಾರೆ. ಅಲ್ಲಿ…