ಭಾರಿ ಮಳೆಗೆ ಮರ ಬಿದ್ದು ರಸ್ತೆ ಮೇಲೆ ಬಿದ್ದ ವಿದ್ಯುತ್ ಕಂಬ : ರಿಪ್ಪನ್‌ಪೇಟೆ – ಹೊಸನಗರ ಸಂಚಾರ ಅಸ್ತವ್ಯಸ್ತ | chikkajeni

ಭಾರಿ ಮಳೆಗೆ ಮರ ಬಿದ್ದು ರಸ್ತೆ ಮೇಲೆ ಬಿದ್ದ ವಿದ್ಯುತ್ ಕಂಬ : ರಿಪ್ಪನ್‌ಪೇಟೆ – ಹೊಸನಗರ ಸಂಚಾರ ಅಸ್ತವ್ಯಸ್ತ ರಿಪ್ಪನ್‌ಪೇಟೆ : ಬೃಹತ್ ಮರ ಬಿದ್ದು ವಿದ್ಯುತ್ ಕಂಬವೊಂದು ಮುರಿದು ರಸ್ತೆಗೆ ರಸ್ತೆಗೆ ಬಿದ್ದ ಪರಿಣಾಮ ರಿಪ್ಪನ್‌ಪೇಟೆ- ಹೊಸನಗರ ಸಂಚಾರ ಅಸ್ತವ್ಯಸ್ತವಾದ ಘಟನೆ ಚಿಕ್ಕಜೇನಿ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ನಡೆದಿದೆ. ಗಾಳಿ ಮಳೆಗೆ ಚಿಕ್ಕಜೇನಿ ಗ್ರಾಪಂ ಮುಂಭಾಗದಲ್ಲಿದ್ದ ಬೃಹತ್ ಮರವೊಂದು ಕೆಳಕ್ಕುರುಳಿದೆ. ಇದರಿಂದಾಗಿ ವಿದ್ಯುತ್ ತಂತಿಗಳು ಸಹ ಧಾರಾಶಾಹಿಯಾಗಿವೆ.‌ ಇದರಿಂದ ಸುಮಾರು ಒಂದು ಗಂಟೆಗೂ ಹೆಚ್ಚು…

Read More

ಕ್ಷುಲ್ಲಕ ಕಾರಣಕ್ಕೆ ಹಾಡಹಗಲೇ ಶಿವಮೊಗ್ಗದ ಯುವಕನ ಕೊಲೆ:

ಶಿವಮೊಗ್ಗ: ಕ್ಷುಲ್ಲಕ ಕಾರಣಕ್ಕೆ ನಗರದಲ್ಲಿ ಇಂದು ಹಾಡುಹಗಲೇ ಭೀಕರ ಕೊಲೆಯಾಗಿದೆ. ಚಾಕುವಿನಿಂದ ಇರಿದು ಈ ಕೊಲೆ ಮಾಡಲಾಗಿದ್ದು, ನಗರದ ಟ್ಯಾಂಕ್ ಮೊಹಲ್ಲಾದಲ್ಲಿ ಈ ಘಟನೆ ನಡೆದಿದೆ. ರಾಹಿಲ್(20) ಕೊಲೆಯಾದ ಯುವಕನಾಗಿದ್ದು, ಅಜ್ಗರ್(19) ಕೊಲೆಮಾಡಿರುವ ಯುವಕನಾಗಿದ್ದಾನೆ.ನಿನ್ನೆ ಸಂಜೆ ಕೊಲೆ ಆರೋಪಿ ಅಜ್ಗರ್ ತಂದೆಯು ಟ್ಯಾಂಕ್ ಮೊಹಲ್ಲಾ ರಸ್ತೆಯಲ್ಲಿ ಸೈಕಲ್ ನಲ್ಲಿ ಬರುತ್ತಿದ್ದ ವೇಳೆ, ರಾಹಿಲ್ ನ ಬೈಕ್ ಡಿಕ್ಕಿ ಹೊಡೆದಿತ್ತು. ಈ ವಿಚಾರದಲ್ಲಿ ತನ್ನ ತಂದೆಯ ಸೈಕಲ್ ರಿಪೇರಿ ಮಾಡಿಕೊಡುವಂತೆ ಅಜ್ಗರ್ ತಿಳಿಸಿದ್ದನಂತೆ. ಈ ವೇಳೆ ಮಾತಿಗೆ ಮಾತು…

Read More

ಚನ್ನಗಿರಿಯ ಯುವಕ ಆಗುಂಬೆ ಸ್ಮಶಾನದ ಶೆಡ್ ನಲ್ಲಿ ಶವವಾಗಿ ಪತ್ತೆ :

ಆಗುಂಬೆ : ಕಳೆದ ವಾರ ಮನೆಯಿಂದ ನಾಪತ್ತೆಯಾಗಿದ್ದ ಯುವಕನೊಬ್ಬ ಸ್ಮಶಾನದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆಯಲ್ಲಿ  ನಡೆದಿದೆ. ಚನ್ನಗಿರಿ ತಾಲೂಕಿನ ಕಾಗತ್ತೂರು ಗ್ರಾಮದ ಎಂ.ಕೆ.ಸ್ವಾಮಿ(27) ಮೃತಪಟ್ಟಿರುವ ದುರ್ಧೈವಿಯಾಗಿದ್ದಾನೆ.ಆಗುಂಬೆ ಗ್ರಾಮದ ಸ್ಮಶಾನದ ಶೆಡ್​ನಲ್ಲಿ ಈತ ನೇಣಿಗೆ ಶರಣಾಗಿದ್ದಾನೆ. ಮೇ 24ರಂದು ಸ್ವಾಮಿ ನಾಪತ್ತೆಯಾಗಿದ್ದ. ಮಗ ಕಾಣೆಯಾದ ಬಗ್ಗೆ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದರು. ಯುವಕನ ಮೊಬೈಲ್ ನೆಟ್​ವರ್ಕ್​ ಆಧರಿಸಿ ಪೊಲೀಸರು ಹುಡುಕಾಟ ನಡೆಸುತ್ತಿದ್ದರು. ಆಗುಂಬೆಯ ಸ್ಮಶಾನದಲ್ಲಿ ಡೆತ್​ನೋಟ್​ ಬರೆದಿಟ್ಟು ದುರಂತ ಅಂತ್ಯಕಂಡಿದ್ದಾನೆ. …

Read More

ರಿಪ್ಪನ್‌ಪೇಟೆಯಲ್ಲಿ ಚಿರತೆ ಪ್ರತ್ಯಕ್ಷ – ದಾಳಿಗೆ ಬಲಿಯಾದ ಹಸು : ಆತಂಕದಲ್ಲಿ ಗ್ರಾಮಸ್ಥರು|leopard

ರಿಪ್ಪನ್‌ಪೇಟೆ : ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದಲ್ಲಿ ಶನಿವಾರ ತಡರಾತ್ರಿ ಚಿರತೆ ಪ್ರತ್ಯಕ್ಷವಾಗಿ ಜಾನುವಾರು ಬಲಿ  ಪಡೆದುಕೊಂಡ  ಘಟನೆ ನಡೆದಿದೆ. ರಿಪ್ಪನ್‌ಪೇಟೆ – ತೀರ್ಥಹಳ್ಳಿ ರಾಜ್ಯ ಹೆದ್ದಾರಿಯ ಸಮೀಪದ ಮಳವಳ್ಳಿ ಗ್ರಾಮದ ಸಂಪರ್ಕ ರಸ್ತೆಯ ಬದಿಯಲ್ಲಿ ತಡರಾತ್ರಿ ಚಿರತೆಯೊಂದು ಹಸುವಿನ ಮೇಲೆ ದಾಳಿ ನಡೆಸಿ, ಸಾಯಿಸಿ ಹಸುವಿನ ಹೊಟ್ಟೆಯೊಳಗಿದ್ದ ಕರುವನ್ನು ಎಳೆದು ಸುಮಾರು ನೂರು ಅಡಿಯಷ್ಟು ದೂರದಲ್ಲಿ ಎಳೆದು ಹಾಕಿ ಹೋಗಿರುವಂತಹ ಹೃದಯಾ ವಿದ್ರಾವಕ ಘಟನೆ ನಡೆದಿದೆ. ಮಳವಳ್ಳಿ ಗ್ರಾಮದ ಬಡ ರೈತ ವಿಶ್ವನಾಥ್…

Read More

ರಿಪ್ಪನ್ ಪೇಟೆ : ರಾಮಕೃಷ್ಣ ವಿದ್ಯಾಲಯದ ಅಂಕಪಟ್ಟಿ ಗೊಂದಲಕ್ಕೆ ತೆರೆ – ಪೋಷಕರ ಹೋರಾಟಕ್ಕೆ ಸಂದ ಜಯ

After months of uncertainty, parents’ collective struggle helped resolve the SSLC 2024–25 marks card issue of Ramakrishna Vidyalaya, Ripponpete, ensuring justice for students’ academic future. ರಿಪ್ಪನ್ ಪೇಟೆ: 2024–25ನೇ ಸಾಲಿನ ಶ್ರೀ ರಾಮಕೃಷ್ಣ ವಿದ್ಯಾಲಯ, ರಿಪ್ಪನ್ ಪೇಟೆಯ 10ನೇ ತರಗತಿ ವಿದ್ಯಾರ್ಥಿಗಳ ಅಂಕಪಟ್ಟಿಗೆ ಸಂಬಂಧಿಸಿದ ಗೊಂದಲಕ್ಕೆ ಕೊನೆಗೂ ತೆರೆ ಬಿದ್ದಿದೆ. ಈ ಜಯ ಯಾವುದೇ ಒಂದು ಸಂಸ್ಥೆಯದ್ದಲ್ಲ, ಮಕ್ಕಳ ಭವಿಷ್ಯಕ್ಕಾಗಿ ನಿರಂತರವಾಗಿ ಹೋರಾಟ ನಡೆಸಿದ ಪೋಷಕರ ಹೋರಾಟದ…

Read More

ಸಾಗರ | ಡಿವೈಡರ್ ಮೇಲೆ ಹತ್ತಿದ ಖಾಸಗಿ ಬಸ್ ಪಲ್ಟಿ ; ಪ್ರಯಾಣಿಕರು ಪಾರು

ಸಾಗರ | ಡಿವೈಡರ್ ಮೇಲೆ ಹತ್ತಿದ ಖಾಸಗಿ ಬಸ್ ಪಲ್ಟಿ ; ಪ್ರಯಾಣಿಕರು ಪಾರು A private bus traveling from Sagara to Jog suffered an accident near Sannamane Bridge after losing control and climbing onto the road divider. All passengers escaped safely without injuries. ಸಾಗರ: ತಾಲೂಕಿನ ಸಣ್ಣಮನೆ ಸೇತುವೆ ಸಮೀಪ ಇಂದು ಬೆಳಿಗ್ಗೆ ಖಾಸಗಿ ಬಸ್‌ವೊಂದು ಅಪಘಾತಕ್ಕೀಡಾದ ಘಟನೆ ನಡೆದಿದೆ. ಸಾಗರದಿಂದ ಜೋಗ್‌ ಕಡೆಗೆ…

Read More

ಡಿ.ಕೆ. ಸುರೇಶ್ ವಿರುದ್ಧ ಸಾಗರ ಬಿಜೆಪಿ ಕಾರ್ಯಕರ್ತರ ಆಕ್ರೋಶದ ಪ್ರತಿಭಟನೆ…! ಡಿ.ಕೆ. ಸುರೇಶ್ ಪ್ರತಿಕೃತಿ ದಹನ…!

ಸಾಗರ: ರಾಮನಗರದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಸಂಸದ ಡಿ.ಕೆ.ಸುರೇಶ್, ಕಾಂಗ್ರೆಸ್ ಎಂಎಲ್ಸಿ ರವಿ ಅವರು ಸಚಿವ ಅಶ್ವಥ್ ನಾರಾಯಣ್ ಅವರ ಭಾಷಣಕ್ಕೆ ಅಡ್ಡಿ ಪಡಿಸಿ, ಗೂಂಡಾ ವರ್ತನೆ ತೋರಿದ್ದಾರೆಂದು ಆರೋಪಿಸಿ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಮಂಗಳವಾರ ನಗರ ಸಾಗರ್ ಹೋಟೆಲ್ ವೃತ್ತದ ಬಳಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ  ಡಿ.ಕೆ.ಸುರೇಶ್ ಅವರ ಭಾವಚಿತ್ರವನ್ನು ಧಹಿಸಿ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು, ಡಿ.ಕೆ.ಸುರೇಶ್ ಹಾಗೂ ಎಂಎಲ್ಸಿ ರವಿ ಇಬ್ಬರಿಗೂ ಕಾಂಗ್ರೆಸ್ ಪಕ್ಷ ಶಿಸ್ತು ಕ್ರಮ ಜರುಗಿಸಬೇಕು.ಹಾಗೂ ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕು ಎಂದು…

Read More

ತಂಬಾಕು ಮಾರಾಟ ಮಾಡುತಿದ್ದ ಅಂಗಡಿಗಳ ಮೇಲೆ ಅಧಿಕಾರಿಗಳ ದಾಳಿ | Tobacco Raid

ತಂಬಾಕು ಮಾರಾಟ ಮಾಡುತಿದ್ದ ಅಂಗಡಿಗಳ ಮೇಲೆ ಅಧಿಕಾರಿಗಳ ದಾಳಿ | Tobacco Raid ಶಿವಮೊಗ್ಗ ಜಿಲ್ಲೆಯ ಹೊಸನಗರ ಪಟ್ಟಣದ ಆರೋಗ್ಯ ಇಲಾಖೆಯ ವೈದ್ಯಾಧಿಕಾರಿ ಡಾ|| ಸುರೇಶ್‌ರವರ ನೇತೃತ್ವದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕಾಯ್ದೆಯನ್ವಯ ಹೊಸನಗರ ಪಟ್ಟಣದ ಸುಮಾರು 25 ಅಂಗಡಿಗಳ ಮೇಲೆ ದಾಳಿ ನಡೆಸಿ ಸುಮಾರು 3 ಸಾವಿರ ರೂ. ನಷ್ಟು ಹಣವನ್ನು ಸರ್ಕಾರದ ಬೊಕ್ಕಸಕ್ಕೆ ತುಂಬಿಸಿದ್ದಾರೆ. ದಾಳಿ ನಡೆಸುವ ಸಂದರ್ಭದಲ್ಲಿ ಮಾತನಾಡಿದ ಬಿ.ಹೆಚ್.ಇ.ಓ ಕರಿಬಸಮ್ಮ, ತಂಬಾಕು ನಮ್ಮ ದೇಹವನ್ನು ಸಂಪೂರ್ಣ ಸುಟ್ಟು ಹಾಕುತ್ತದೆ. ಈ ಬಗ್ಗೆ…

Read More

ಅಡಿಕೆ ಕಳ್ಳತನಗೈದಿದ್ದ ಆರೋಪಿಯ ಬಂಧನ – ಲಕ್ಷಾಂತರ ರೂ ಮೌಲ್ಯದ ಮಾಲು ವಶಕ್ಕೆ .!

ಅಡಿಕೆ ಕಳ್ಳತನಗೈದಿದ್ದ ಆರೋಪಿಯ ಬಂಧನ – ಲಕ್ಷಾಂತರ ರೂ ಮೌಲ್ಯದ ಮಾಲು ವಶಕ್ಕೆ .! ಭದ್ರಾವತಿ : ತಾಲೂಕಿನ ಅರಹತೊಳಲು ಗ್ರಾಮದ ಮನೆಯ ಮುಂದೆ ಇಟ್ಟಿದ್ದ ಅಡಿಕೆ ಚೀಲಗಳನ್ನು ಕಳ್ಳತನ ಮಾಡಿಕೊಂಡು ಹೋದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆಯನೂರು ಕೋಹಳ್ಳಿಯ  ಯುವಕನನ್ನು ಬಂಧಿಸಿ ಕಳುವಾದ ಅಡಿಕೆಯನ್ನು ವಶಪಡಿಸಿಕೊಂಡಿದ್ದಾರೆ. ಅಡಿಕೆ ಕಳುವಾದ ಬಗ್ಗೆ ಹರ್ಷ ಎನ್ನುವವರು ಹೊಳೆಹೊನ್ನೂರು ಪೊಲೀಸರಿಗೆ ದೂರು ನೀಡಿದ್ದರು.  ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಾಗ  ಆಯನೂರು ಕೋಹಳ್ಳಿಯ ಸಯ್ಯದ್ ನವೀದ್ (೨೯) ಸಿಕ್ಕಿಬಿದ್ದಿದ್ದಾನೆ.  ಈತನನ್ನು ದಸ್ತಗಿರಿ…

Read More

ಹೊಸನಗರ : ಉರುಳಿಗೆ ಸಿಲುಕಿ ಚಿರತೆ ಸಾವು..!|leopard

ಹೊಸನಗರ : ಉರುಳಿಗೆ ಸಿಲುಕಿ ಚಿರತೆ ಸಾವು ! ಹೊಸನಗರ: ತಾಲೂಕಿನಲ್ಲಿ ನಗರ ಹೋಬಳಿ ವ್ಯಾಪ್ತಿಯ ಅಂಡಗದೋದೂರು ಗ್ರಾಮದ ಸರ್ವೆ ನಂಬರ್ 64 ರಲ್ಲಿ 4-5 ವರ್ಷ ಪ್ರಾಯದ ಗಂಡು ಚಿರತೆ ಕಾಡು ಪ್ರಾಣಿಗಳ ಬೇಟೆಗೆ ಹಾಕಿದ್ದ ಉರುಳಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಸಾರ್ವಜನಿಕರು ನೀಡಿದ ಮಾಹಿತಿ ಮೇರೆಗೆ ಸ್ಥಳಕ್ಕೆ ಶುಕ್ರವಾರ ನಗರ ವಲಯ ಅರಣ್ಯ ಅಧಿಕಾರಿ ಸಂಜಯ್ ಭೇಟಿ ನೀಡಿ ಪರಿಶೀಲನೆ ನಡೆಸಿ, ಜಿಲ್ಲಾ ವನ್ಯಜೀವಿ ಸಂರಕ್ಷಣ ವಿಭಾಗದ ವೈದ್ಯರನ್ನು ಸ್ಥಳಕ್ಕೆ ಕರೆಸಿ ಮೃತ…

Read More
Exit mobile version