ಹೆಣ್ಣು ಮಕ್ಕಳು ಮನಸ್ಸು ಮಾಡಿದರೆ ಸಶಕ್ತವಾದ ಸ್ವಾಭಿಮಾನಿ ಸಮಾಜ ನಿರ್ಮಿಸಬಹುದು : ಸೀಮಾ ಕಿರಣ್

ರಿಪ್ಪನ್‌ಪೇಟೆ : ಹೆಣ್ಣು ಮಕ್ಕಳು ರಾಷ್ಟ್ರದ ಶಕ್ತಿಯಾಗಿದ್ದಾರೆ, ಹೆಣ್ಣು ಮಕ್ಕಳು ಮನಸ್ಸು ಮಾಡಿ ನಿಂತರೆ ಸಾಕು ಸಶಕ್ತವಾದ ಸಧೃಡ ಸ್ವಾಭಿಮಾನಿ ಸಮಾಜವನ್ನು ಸುಲಭವಾಗಿ ನಿರ್ಮಿಸಬಹುದಾಗಿದೆ ಎಂದು ಜೆಸಿಐ ಅಧ್ಯಕ್ಷೆ  ಸೀಮಾ ಕಿರಣ್ ಹೇಳಿದರು ಅವರು ಪಟ್ಟಣದ ಶ್ರೀ ರಾಮ ಸಭಾ ಭವನ ಮಹಿಳೆಯರು ನೂತನವಾಗಿ ಆರಂಭಿಸಿದ ಹೊಸನಗರ ತಾಲೂಕ್ ರೈಸ್ ಅಂಡ್ ಶೈನ್ ಬ್ಯೂಟಿಷಿಯನ್ ಅಸೋಶಿಯೇಷನ್ ಸಂಘವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು. ಮನೆ, ಕುಟುಂಬ ಸೇರಿದಂತೆ ಇಡೀ ಸಮಾಜವನ್ನು ಸಶಕ್ತವಾಗಿ ಸದೃಡವಾಗಿ ಮುನ್ನಡೆಸುವ ಶಕ್ತಿಯು ಹೆಣ್ಣು…

Read More

SAGARA | ಜೋಗ್ ಫಾಲ್ಸ್ ನಲ್ಲಿ ಎರಡು ಮಂಗಗಳ ಮೃತದೇಹ ಪತ್ತೆ – ಹೆಚ್ಚಾಯು ಮಂಗನ ಖಾಯಿಲೆ ಆತಂಕ

SAGARA | ಜೋಗ್ ಫಾಲ್ಸ್ ನಲ್ಲಿ ಎರಡು ಮಂಗಗಳ ಮೃತದೇಹ ಪತ್ತೆ – ಹೆಚ್ಚಾಯು ಮಂಗನ ಖಾಯಿಲೆ ಆತಂಕ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಜೋಗ್‌ಫಾಲ್ಸ್‌ನ ವರ್ಕ್‌ಮನ್ ಬ್ಲಾಕ್ ಹಾಗೂ ರೆಡ್ಡಿ ಬ್ಲಾಕ್ ಪ್ರದೇಶದಲ್ಲಿ ಎರಡು ಮಂಗಗಳ ಮೃತದೇಹಗಳು ಭಾನುವಾರ ಪತ್ತೆಯಾಗಿದೆ. ಸಾರ್ವಜನಿಕರ ಮಾಹಿತಿ ಅನ್ವಯ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಪಶು ವೈದ್ಯಾಧಿಕಾರಿ ಮತ್ತು ಜೋಗ ಕಾರ್ಗಲ್ ಪಟ್ಟಣ ಪಂಚಾಯ್ತಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವೈದ್ಯಾಧಿಕಾರಿಗಳು ಮಂಗಗಳ ಮೃತ ದೇಹದ ಪರೀಕ್ಷೆ…

Read More

RIPPONPETE | 22 ವರ್ಷ ರಾಷ್ಟ್ರ ಸೇವೆ ಸಲ್ಲಿಸಿ ತವರಿಗೆ ಹಿಂದಿರುಗಿದ ಹೆಮ್ಮೆಯ ಯೋಧನಿಗೆ ಅದ್ದೂರಿ ಸ್ವಾಗತ

RIPPONPETE | 22 ವರ್ಷದ ರಾಷ್ಟ್ರ ಸೇವೆ ಸಲ್ಲಿಸಿ ತವರಿಗೆ ಹಿಂದಿರುಗಿದ ಹೆಮ್ಮೆಯ ಯೋಧನಿಗೆ ಅದ್ದೂರಿ ಸ್ವಾಗತ ರಿಪ್ಪನ್‌ಪೇಟೆ: ದೇಶರಕ್ಷಣೆಯ ಕರ್ತವ್ಯವನ್ನು 22 ದೀರ್ಘ ವರ್ಷಗಳ ಕಾಲ ನಿರಂತರವಾಗಿ ನಿಭಾಯಿಸಿ ಗೌರವಪೂರ್ವಕ ನಿವೃತ್ತರಾಗಿರುವ ಗಿರೀಶ್ ಅವರು ತಮ್ಮ ಹೆಮ್ಮೆಯ ನಾಡಿಗೆ ಭಾನುವಾರ ಸಂಜೆ ಆಗಮಿಸಿದ್ದು ಗ್ರಾಮಸ್ಥರು ಅದ್ಭುತವಾದ ಗೌರವ ಸಮರ್ಪಣೆಯ ಮೂಲಕ ಅದ್ದೂರಿಯಾಗಿ ಬರಮಾಡಿಕೊಂಡರು. ಮೆಸ್ಕಾಂನ ನಿವೃತ್ತ ಉದ್ಯೋಗಿ ಮೋಹನ್ ಹಾಗೂ ಜಯಲಕ್ಷ್ಮಿ ದಂಪತಿಗಳ ಪುತ್ರನಾದ ಗಿರೀಶ್, 2003ರಲ್ಲಿ ಭಾರತೀಯ ಸೇನೆಗೆ ಸೇರಿದ್ದು ದೇಶದ ವಿವಿಧ ಗಡಿಭಾಗಗಳಲ್ಲಿ…

Read More

ಹುಂಚ ಸಮೀಪದ ಸರ್ಕಾರಿ ಶಾಲೆಯ ಇಬ್ಬರು ಶಿಕ್ಷಕರ ವಿರುದ್ದ ಪೋಕ್ಸೋ ಪ್ರಕರಣ ದಾಖಲು|pocso

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಸಮೀಪದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಇಬ್ಬರು ಶಿಕ್ಷಕರ ವಿರುದ್ಧ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.  ಕಳೆದೊಂದು ತಿಂಗಳ ಹಿಂದೆ 5ನೇ ತರಗತಿ ವಿದ್ಯಾರ್ಥಿನಿಯೊಂದಿಗೆ ಶಿಕ್ಷಕ ಅಸಭ್ಯವರ್ತನೆ ತೋರಿದ್ದು ನೊಂದ ಬಾಲಕಿ ತಾಯಿಯ ಬಳಿ ಘಟನೆಯ ವಿವರವನ್ನು ತಿಳಿಸಿದ್ದಾಳೆ. ಆಗ ಬಾಲಕಿಯ ತಾಯಿ ಶಾಲೆಯ ಶಿಕ್ಷಕಿಯಲ್ಲಿ ಶಿಕ್ಷಕನಿಗೆ ಬುದ್ದಿ ಹೇಳಲು ಹೇಳಿದ್ದಾರೆ. ಆದರೆ ಆದರೆ ಶಿಕ್ಷಕಿ ಘಟನೆಯ ಬಗ್ಗೆ ಪಾಲಕರಿಗೆ ಯಾವುದೇ ಮಾಹಿತಿ ನೀಡಿಲ್ಲ.  ಬಾಲಕಿಯ…

Read More

ವೈನ್ ಶಾಪ್ ನಲ್ಲಿ ಎಣ್ಣೆ ಸಾಲ ಕೊಡಲಿಲ್ಲವೆಂದು ರಸ್ತೆ ತಡೆ ನಡೆಸಿದ ಯುವಕ – ಹೀಗೊಂದು ಕುಡುಕನ ಕಿರಿಕ್ , ವೀಡಿಯೋ ವೈರಲ್ | Viral video

ವೈನ್ ಶಾಪ್ ನಲ್ಲಿ ಎಣ್ಣೆ ಸಾಲ ಕೊಡಲಿಲ್ಲವೆಂದು ರಸ್ತೆ ತಡೆ ನಡೆಸಿದ ಯುವಕ – ಹೀಗೊಂದು ಕುಡುಕನ ಕಿರಿಕ್ , ವೀಡಿಯೋ ವೈರಲ್ |  ವೈನ್ ಶಾಪ್ ನಲ್ಲಿ ಎಣ್ಣೇ ಸಾಲ ಕೊಟ್ಟಿಲ್ಲ ಎಂದು ಯುವಕನೊಬ್ಬ ನಡುರೋಡ್‌ನಲ್ಲಿ ಛತ್ರಿ ಹಿಡಿದು ರಸ್ತೆತಡೆಯನ್ನೆ ನಡೆಸಿರುವ ವಿಚಿತ್ರ ಘಟನೆಯೊಂದು ಶಿವಮೊಗ್ಗದ ಎನ್ ಟಿ ರಸ್ತೆಯಲ್ಲಿ ನಡೆದಿದೆ. ಶಿವಮೊಗ್ಗದ ಹೊಸ ತೀರ್ಥಹಳ್ಳಿ(NT) ರೋಡ್‌ನಲ್ಲಿರುವ ಮದ್ಯದಂಗಡಿಗೆ ತೆರಳಿದ ಯುವಕನೊಬ್ಬ ಎಣ್ಣೆ ಕೊಡಿ ಆದರೆ ದುಡ್ಡು ಇಲ್ಲ ಅಂದಿದ್ದಾನೆ. ಹಣ ಕೊಡದೇ ಹೇಗಪ್ಪ ಎಣ್ಣೆ…

Read More

ಕ್ಯಾತಿನಕೊಪ್ಪ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಜನತೆ

ಶಿವಮೊಗ್ಗ: ಕಳೆದೊಂದು ವಾರದಿಂದ ಶಿವಮೊಗ್ಗ ತಾಲೂಕಿನ ಕ್ಯಾತಿನಕೊಪ್ಪದ ತೋಟ ಹಾಗೂ ಮನೆಗಳ ಬಳಿ ಕಾಣಿಸಿಕೊಳ್ಳುತ್ತಿದ್ದ ಚಿರತೆ ಬೋನಿಗೆ ಬಿದ್ದಿದ್ದು, ಜನತೆ ನಿಟ್ಟುಸಿರು ಬಿಟ್ಟಿದ್ದಾರೆ. ಗ್ರಾಮದ ಸಮೀಪದಲ್ಲಿರುವ ತೋಟದ ಮನೆಯಲ್ಲಿ ಮಂಜುನಾಥ್ ಎಂಬವರ ಕುಟುಂಬ ವಾಸವಿದೆ. ಕಳೆದ ನಾಲ್ಕೈದು ದಿನದ ಹಿಂದೆ ಮಂಜುನಾಥ್ ಅವರ ಸಾಕು ನಾಯಿಯನ್ನು ಚಿರತೆ ಬೇಟೆ ಆಡಿದ್ದನ್ನು ಗಮನಿಸಿದ್ದರು. ಈ ಬಗ್ಗೆ ಅವರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು.  ಕಳೆದ ಐದು ದಿನದಿಂದ ಅರಣ್ಯ ಇಲಾಖೆ ಸಿಬ್ಬಂದಿ ಮಂಜುನಾಥ್ ಅವರ ತೋಟದ ಮನೆ ಬಳಿ…

Read More

Ripponpete | ಬೈಕ್ ಅಪಘಾತ – ವ್ಯಕ್ತಿ ಗಂಭೀರ : ಮಣಿಪಾಲ್ ಗೆ ರವಾನೆ

ಬೈಕ್ ಅಪಘಾತ – ವ್ಯಕ್ತಿ ಗಂಭೀರ : ಮಣಿಪಾಲ್ ಗೆ ರವಾನೆ ರಿಪ್ಪನ್‌ಪೇಟೆ : ಬಾಳೂರು ಗ್ರಾಪಂ ವ್ಯಾಪ್ತಿಯ ಪೂಜಾರದಿಂಬ ಬಳಿ ನಡೆದ ಬೈಕ್ ಅಪಘಾತದಲ್ಲಿ ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಇಂದು ಸಂಜೆ ನಡೆದಿದೆ. ಪುರಪ್ಪೆಮನೆ ಸಮೀಪದ ನಂದಿಗೆ ಗ್ರಾಮದ ಮೃತ್ಯುಂಜಯ ಗಾಯಗೊಂಡ ವ್ಯಕ್ತಿಯಾಗಿದ್ದಾರೆ. ಬಾಳೂರು ಗ್ರಾಪಂ ವ್ಯಾಪ್ತಿಯ ಪೂಜಾರದಿಂಬ ಬಳಿಯಲ್ಲಿ ಬಜಾಜ್ ಪ್ಲಾಟಿನಾ ಬೈಕ್ ಸ್ಕಿಡ್ ಆಗಿ ಕೆಳಕ್ಕೆ ಬಿದ್ದು ತಲೆಗೆ ಗಂಭೀರ ಗಾಯಗೊಂಡಿದ್ದರು. ಸ್ಥಳೀಯರು 108 ಆಂಬುಲೆನ್ಸ್ ನಲ್ಲಿ ರಿಪ್ಪನ್‌ಪೇಟೆ ಸರ್ಕಾರಿ ಪ್ರಾಥಮಿಕ…

Read More

ಅಸ್ವಸ್ಥ ಸ್ಥಿತಿಯಲ್ಲಿ ಅಪರೂಪದ ಚಿರತೆ ಬೆಕ್ಕು ಪತ್ತೆ – ಅರಣ್ಯಾಧಿಕಾರಿಂದ ರಕ್ಷಣೆ|Leopard cat

ಅಸ್ವಸ್ಥ ಸ್ಥಿತಿಯಲ್ಲಿ ಅಪರೂಪದ ಚಿರತೆ ಬೆಕ್ಕು ಪತ್ತೆ – ಅರಣ್ಯಾಧಿಕಾರಿಂದ ರಕ್ಷಣೆ|Leopard ಚತ್ ಪ್ರಾಣಿಗಳ ದಾಳಿಯಿಂದ ಅಸ್ವಸ್ಥ ಸ್ಥಿತಿಯಲ್ಲಿ ಜೀವನ್ಮರಣ ಹೋರಾಟ ನಡೆಸುತಿದ್ದ ಅಪರೂಪದ ಚಿರತೆ ಬೆಕ್ಕನ್ನು(Leopard cat)ಅರಣ್ಯಾಧಿಕಾರಿಗಳು ರಕ್ಷಿಸಿರುವ ಘಟನೆ ಹೊಸನಗರ ತಾಲೂಕಿನ ಪುರಪ್ಪೆಮನೆ ಬಳಿ ನಡೆದಿದೆ. ಚಿರತೆ ಬೆಕ್ಕು ಪಶ್ಚಿಮ ಘಟ್ಟಗಳಲ್ಲಿ ಕಂಡುಬರುವ ಅಪರೂಪದ ಜಾತಿಗಳಲ್ಲಿ ಒಂದಾಗಿದೆ. ಪುರಪ್ಪೆ ಮನೆ – ಗಡಿಕಟ್ಟೆ ಮಾರ್ಗ ಮಧ್ಯದಲ್ಲಿ ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ಜೀವನ್ಮರಣ ಹೋರಾಟದಲ್ಲಿದ್ದ ಚಿರತೆ ಬೆಕ್ಕು ರಸ್ತೆ ಬದಿಯ ಚರಂಡಿಯಲ್ಲಿ ಬಿದ್ದಿತ್ತು. ಚಿರತೆಯಂತೆ ಕಾಣಿಸುವ…

Read More

ಆಟೋ ಚಾಲಕನನ್ನು ಅಡ್ಡಗಟ್ಟಿ 2 ಲಕ್ಷ ರೂಪಾಯಿ ದರೋಡೆ

ಆಟೋ ಚಾಲಕನನ್ನು ಅಡ್ಡಗಟ್ಟಿ 2 ಲಕ್ಷ ರೂಪಾಯಿ ದರೋಡೆ ಶಿವಮೊಗ್ಗ : ನಗರದ ಕೆ.ಆರ್. ಪುರಂ ಬಳಿ ಆಟೋ ಚಾಲಕರೊಬ್ಬರನ್ನು ಅಡ್ಡಗಟ್ಟಿ, ಲಕ್ಷಾಂತರ ರೂಪಾಯಿ ನಗದು ದರೋಡೆ ಮಾಡಿದ ಘಟನೆ ನಡೆದಿದೆ. ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಶಿವಮೊಗ್ಗದ ವಿವಿದ ಆಟೋ ಸ್ಟ್ಯಾಂಡ್‌ನ ಚಾಲಕರು ಪ್ರತ್ಯೇಕವಾಗಿ ಮೂರು ಫಂಡ್‌ಗಳನ್ನು ಮಾಡಿಕೊಂಡಿದ್ದರು. ಪ್ರತಿ ಶನಿವಾರ ಈ ಫಂಡ್‌ಗಳಿಗೆ ಹಣ ಹಾಕಿ, ಅಗತ್ಯವಿರುವ ಆಟೋ ಚಾಲಕರಿಗೆ ನೀಡುವ ವ್ಯವಸ್ಥೆಯನ್ನು ಮಾಡಲಾಗಿತ್ತು. ಅದರಂತೆ,…

Read More