ಕಾರು ಮತ್ತು ಗೂಡ್ಸ್ ವಾಹನದ ನಡುವೆ ಭೀಕರ ಅಪಘಾತ – ಡಿಸಿಸಿ ಬ್ಯಾಂಕ್ ಉದ್ಯೋಗಿ ಸಾವು..!

ಕಾರು ಮತ್ತು ಗೂಡ್ಸ್ ವಾಹನದ ನಡುವೆ ಭೀಕರ ಅಪಘಾತ – ಡಿಸಿಸಿ ಬ್ಯಾಂಕ್ ಉದ್ಯೋಗಿ ಸಾವು..! ತೀರ್ಥಹಳ್ಳಿ : ತಡ ರಾತ್ರಿ ಭೀಕರ ಅಪಘಾತವೊಂದು ಸಂಭವಿಸಿ ಸ್ಥಳದಲ್ಲೇ ಓರ್ವ ಸಾವನ್ನಪ್ಪಿರುವ ಘಟನೆ ತೀರ್ಥಹಳ್ಳಿ ಸಮೀಪದ ಶಿವರಾಜಪುರ ಬಳಿ ನಡೆದಿದೆ. ಮಂಗಳೂರಿಂದ ಕಾರಿನಲ್ಲಿ ಬರುತ್ತಿದ್ದ ವ್ಯಕ್ತಿ ನಿದ್ರೆ ಮಂಪರಿನಲ್ಲಿ ಟಾಟಾ ಗೂಡ್ಸ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು ಕಾರಿನ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತಪಟ್ಟ ವ್ಯಕ್ತಿಯನ್ನು ಶಾಶ್ವತ್ (30 ವರ್ಷ) ಎಂದು…

Read More

ನ.01 ರಂದು ರಿಪ್ಪನ್ ಪೇಟೆಯಲ್ಲಿ ಆದ್ದೂರಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಸಕಲ ಸಿದ್ದತೆ

ರಿಪ್ಪನ್ ಪೇಟೆಯಲ್ಲಿ ಆದ್ದೂರಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಸಕಲ ಸಿದ್ದತೆ ರಿಪ್ಪನ್‌ಪೇಟೆ;- ಪಟ್ಟಣದ ಕಸ್ತೂರಿ ಕನ್ನಡ ಸಂಘ ಮತ್ತು ದಿ.ಪುನೀತ್‌ರಾಜ್ ಆಭಿಮಾನಿ ಬಳಗದ ೩ ನೇ ವರ್ಷದ ವಾರ್ಷೀಕೋತ್ಸವ ಮತ್ತು ನವಂಬರ್ ೧ ರಂದು ಕನ್ನಡ ರಾಜ್ಯೋತ್ಸವವನ್ನು ಈ ಭಾರಿ ಆದ್ದೂರಿಯಾಗಿ ಆಚರಿಸುವ ಬಗ್ಗೆ ನಿರ್ಧರಿಸಲಾಗಿದ್ದು ಅದರನ್ವಯ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಇದರೊಂದಿಗೆ ದಿ.ಪುನೀತ್‌ರಾಜ್ ಪುಣ್ಯ ಸ್ಮರಣೆಯ ಕಾರ್ಯಕ್ರಮವು ಸಿದ್ದಿವಿನಾಯಕ ವೃತ್ತದಲ್ಲಿ ಏರ್ಪಡಿಸಲಾಗಿದೆ ಎಂದು ಕಸ್ತೂರಿ ಕನ್ನಡ ಸಂಘದ ಆಧ್ಯಕ್ಷರಾದ ಉಲ್ಲಾಸ್ ತೆಂಕೋಲ್ ಮತ್ತು ಆರ್.ಎ.ಚಾಬುಸಾಬ್ ಹಾಗೂ…

Read More

ಕಾಂಗ್ರೆಸ್ ಮುಖಂಡ ಅರಸಾಳಿನ ಪಿಯೂಸ್ ಡಿಸೋಜ ಇನ್ನಿಲ್ಲ …

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಅರಸಾಳು ಗ್ರಾಮ ಪಂಚಾಯತಿ ಮಾಜಿ ಪ್ರಧಾನರು ಹಾಗೂ ಕಾಂಗ್ರೆಸ್ ಮುಖಂಡರಾದ ಪಿಯೂಸ್ ಡಿಸೋಜ ರವರು ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಅನಾರೋಗ್ಯದಿಂದ ಬಳಲುತಿದ್ದ ಅವರನ್ನು ಎರಡು ದಿನಗಳ ಹಿಂದೆ ಚಿಕ್ಕಮಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ನಿನ್ನೆ ರಾತ್ರಿ 10.30ಕ್ಕೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಅರಸಾಳು ಗ್ರಾಮ ಪಂಚಾಯತಿಯ ಮಾಜಿ ಪ್ರಧಾನರಾಗಿದ್ದ ಅವರು ಕಾಂಗ್ರೆಸ್ ಪಕ್ಷದ ಪ್ರಭಾವಿ ಮುಖಂಡರಾಗಿದ್ದರು.ರಾಜಕಾರಣದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಇವರು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾಗಿ ಗುರುತಿಸಿಕೊಂಡಿದ್ದರು. ಬಂಗಾರಪ್ಪ, ಕಾಗೋಡು ತಿಮ್ಮಪ್ಪ…

Read More

ಕಾರು ಹಾಗೂ ಗೂಡ್ಸ್ ಆಟೋ ನಡುವೆ ಮುಖಾಮುಖಿ ಡಿಕ್ಕಿ : ಕಾರು ಚಾಲಕ ಸಾವು

ಸಾಗರ ಹೊಸನಗರ ಹೆದ್ದಾರಿಯ ಮಾರುತಿಪುರ ಸಮೀಪ ಕೇಶವಪುರ ಸೇತುವೆ ಬಳಿಯ ತಿರುವಿನಲ್ಲಿ ಗೂಡ್ಸ್ ಆಟೋ ಹಾಗೂ ಮಾರುತಿ ಓಮ್ನಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓಮ್ನಿ ಚಾಲಕ ಸತೀಶ್ ಕಾಡವಳ್ಳಿ (52) ಸಾವನ್ನಪಿದ್ದಾರೆ. class=”separator” style=”clear: both; text-align: center;”> ಅಫಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು,ಓಮಿನಿಯಲ್ಲಿ  ಚಾಲಕರಾದ ಸತೀಶ್ ಕಾಡವಳ್ಳಿ ಪ್ರಯಾಣ ಮಾಡುತ್ತಿದ್ದರು ಹಾಗೂ ಗೂಡ್ಸ್ ಆಟೋದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರಿಗೆ ಸಣ್ಣ ಪುಟ್ಟ ಗಾಯವಾಗಿರುವ ವರದಿಯಾಗಿದ್ದು ,ಹೊಸನಗರದಿಂದ ಬಟ್ಟೆಮಲಪ್ಪ ಕಡೆಗೆ ಪ್ರಯಾಣಿಸುತ್ತಿದ್ದರು. ಮೃತ ಸತೀಶ್ ಕಾಡವಳ್ಳಿ ರವರು…

Read More

ಚಲಿಸುತ್ತಿದ್ದ ರೈಲಿನಿಂದ ಬಿದ್ದ ಮಹಿಳೆ: ರೈಲ್ವೆ ಪೊಲೀಸರ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ..!

ಶಿವಮೊಗ್ಗ: ಚಲಿಸುತ್ತಿದ್ದ ರೈಲಿನಿಂದ ಮಹಿಳೆ ಆಯತಪ್ಪಿ ಬಿದ್ದ ಘಟನೆ ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಸಂಬಂಧಿಕರನ್ನು ಬಿಡಲು ರೈಲ್ವೆ ನಿಲ್ದಾಣಕ್ಕೆ ಬಂದಿದ್ದ ಮಹಿಳೆ ತಾಳಗುಪ್ಪದಿಂದ ಬೆಂಗಳೂರಿಗೆ ತೆರಳುವ ಇಂಟರ್‌ಸಿಟಿ ರೈಲಿನ ಒಳಗೆ ಪ್ರಯಾಣಿಕರೊಂದಿಗೆ ಹತ್ತಿದ್ದಾರೆ. ಬಳಿಕ ರೈಲು ಚಲಿಸಲು ಆರಂಭವಾಗುತ್ತಿದ್ದಂತೆ ಕೆಳಗೆ ಇಳಿಯಲು ಪ್ರಯತ್ನಿಸಿದ್ದು, ಈ ವೇಳೆ ಆಯತಪ್ಪಿ ರೈಲಿನಿಂದ ಬಿದ್ದಿದ್ದಾರೆ. ಕೂಡಲೇ ಸ್ಥಳದಲ್ಲಿದ್ದ ಆರ್‌ಪಿಎಫ್ ಸಿಬ್ಬಂದಿ ಜಗದೀಶ್, ರೈಲ್ವೆ ಪೊಲೀಸ್ ಅಣ್ಣಪ್ಪ ಹಾಗೂ ಸಂತೋಷ್ ಮಹಿಳೆಯನ್ನು ರಕ್ಷಿಸಿದ್ದಾರೆ. ರೈಲ್ವೆ ಪೊಲೀಸರ ಸಮಯ ಪ್ರಜ್ಞೆ ಅದೃಷ್ಟವಶಾತ್​ ಯಾವುದೇ…

Read More

Humcha | ಭಾರಿ ಮಳೆಗೆ ಕುಸಿದ ರಸ್ತೆ – ಸ್ಥಳಕ್ಕೆ ಬಾರದ ಅಧಿಕಾರಿಗಳು, ಜನಪ್ರತಿನಿಧಿಗಳು ,ಗ್ರಾಮಸ್ಥರ ಆಕ್ರೋಶ

Humcha | ಭಾರಿ ಮಳೆಗೆ ಕುಸಿದ ಸೇತುವೆ – ಸ್ಥಳಕ್ಕೆ ಬಾರದ ಅಧಿಕಾರಿಗಳು, ಜನಪ್ರತಿನಿಧಿಗಳು ,ಗ್ರಾಮಸ್ಥರ ಆಕ್ರೋಶ  ಹೊಸನಗರ ತಾಲೂಕಿನ ಹುಂಚ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಠದ ಜಡ್ಡು ಎಸ್ ಸಿ ಕಾಲೋನಿ – ನಾಗರಹಳ್ಳಿ ಹೋಗುವ ಸೇತುವೆ ಭಾರಿ ಮಳೆಗೆ ಕುಸಿದು ಬಿದ್ದಿದ್ದು ಭಾರಿ ಅನಾಹುತಕ್ಕೆ ಎಡೆ ಮಾಡಿಕೊಟ್ಟಿದೆ. ಪ್ರತಿನಿತ್ಯ ಶಾಲಾ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಓಡಾಡುವ ರಸ್ತೆಯ ಸೇತುವೆ ಕುಸಿದಿದ್ದರೂ ಇಲ್ಲಿಯವರೆಗೂ ಸಂಬಂಧಪಟ್ಟ ಯಾವುದೇ ಅಧಿಕಾರಿಗಳಾಗಲಿ , ಜನಪ್ರತಿನಿಧಿಗಳಾಗಲಿ ಸ್ಥಳಕ್ಕೆ ಭೇಟಿ ನೀಡದೇ ನಿರ್ಲಕ್ಷ್ಯ…

Read More

ರಿಪ್ಪನ್ ಪೇಟೆಯಲ್ಲಿ ನಡೆದಿದ್ದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಟಿಪ್ಪರ್ ಚಾಲಕ ಸಾವು

ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಅರಸಾಳು ಬಳಿ ಮರಳು ತುಂಬಿದ್ದ ಟಿಪ್ಪರ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದ ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಚಾಲಕ ಸಾವನ್ನಪ್ಪಿದ್ದಾನೆ. ಹೊಸನಗರದ ಚರ್ಚ್ ರಸ್ತೆಯ ನಿವಾಸಿಯಾದ ಫ಼ೈಜಲ್(27) ಅಪಘಾತದಲ್ಲಿ ಮೃತಪಟ್ಟ ದುರ್ಧೈವಿಯಾಗಿದ್ದಾನೆ.ಈತನು ಕಳೆದ ಮಾರ್ಚ್ ತಿಂಗಳಲ್ಲಿ ವಿವಾಹವಾಗಿದ್ದನು. ಹೊಸನಗರದಿಂದ ಶಿವಮೊಗ್ಗಕ್ಕೆ ಮರಳು ತುಂಬಿಕೊಂಡು ಹೋಗುವಾಗ ಅರಸಾಳು ಸಮೀಪದ 9ನೇ ಮೈಲಿಕಲ್ ನಲ್ಲಿ ಬೆಳಗಿನಜಾವ ಈ ಘಟನೆ ಸಂಭವಿಸಿದೆ. ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಸಾವು | Accident

ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಸಾವು | Accident ಶಿವಮೊಗ್ಗ : ಬೈಕ್ ಹಾಗೂ ಬಸ್ ನಡುವೆ ಅಪಘಾತ ಸಂಭವಿಸಿ ಬೈ ಕ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಊರುಗಡೂರು ಸರ್ಕಲ್‌ ಬಳಿ ಬಸ್‌ವೊಂದಕ್ಕೆ ಬೈಕ್‌ ಡಿಕ್ಕಿಯಾಗಿ ಬೈಕ್‌ ಸವಾರ ಬಸ್‌ನ ಅಡಿಗೆ ಬಿದ್ದ ಪರಿಣಾಮ ಸವಾರ ಅಲ್ಲಿಯೇ ಸಾವನ್ನಪ್ಪಿದ್ದಾನೆ.  ಮೃತ ವ್ಯಕ್ತಿಯನ್ನು ಸಂತೋಷ್ ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ರಾಜಹಂಸ ಬಸ್‌ ಶಿವಮೊಗ್ಗಕ್ಕೆ ಬರುತ್ತಿತ್ತು. ಸಿಟಿ ಹೊರಗಡೆಯಿಂದ…

Read More

ಉದ್ಯೋಗಾವಕಾಶ : ಏ.12 ರಂದು ವಿವಿಧ ಕಂಪನಿಗಳಿಂದ ನೇರ ಸಂದರ್ಶನ

 ಏಪ್ರಿಲ್ 12 ರಂದು ಶಿವಮೊಗ್ಗ ನಗರದ  ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ. ಏ.12 ರ ಬೆಳಗ್ಗೆ 10.00ಕ್ಕೆ ಪತ್ರಿಷ್ಠಿತ ಖಾಸಗಿ ಕಂಪನಿಗಳಿಂದ ನೇರ ಸಂದರ್ಶನವನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ. ವಿವಿಧ ಪ್ರತಿಷ್ಠಿತ ಖಾಸಗಿ ಕಂಪನಿಗಳು ಈ ನೇರ ಸಂದರ್ಶನದಲ್ಲಿ ಭಾಗವಹಿಸಲಿದ್ಧಾರೆ.  ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ. ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೊಮೊ ಮತ್ತು ಇತರೆ ಡಿಗ್ರಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ತಮ್ಮ…

Read More

ಡಾ. ರಾಜ್ ಸ್ವರ ಸಂಭ್ರಮ ಸಂಗೀತ ಸ್ಪರ್ಧೆಯಲ್ಲಿ ಸ್ಪರ್ದಿಸಿರುವ ರಿಪ್ಪನ್ ಪೇಟೆಯ ಯುವ ಪ್ರತಿಭೆ ಪ್ರಣತಿ ಪ್ರವೀಣ್ ಗೆ ಬೆಂಬಲಿಸಿ:

ರಿಪ್ಪನ್ ಪೇಟೆ : ಸಾಗರದ ಯೂತ್ ಐಕಾನ್ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿಮಾನಿ ಬಳಗ ಇವರ ಆಶ್ರಯದಲ್ಲಿ ನಡೆಯುತ್ತಿರುವ “ಡಾ ರಾಜ್ ಸ್ವರ ಸಂಭ್ರಮ” ಕಾರ್ಯಕ್ರಮದ ಅಂತರ್ಜಾಲ ಸಂಗೀತ ಸ್ಪರ್ಧೆಯಲ್ಲಿ ರಿಪ್ಪನ್ ಪೇಟೆಯ ಪ್ರಣತಿ ಪ್ರವೀಣ್ ಸ್ಪರ್ಧಿಸಿದ್ದು  ಈ ಯುವ ಪ್ರತಿಭೆಯು ಸ್ಪರ್ಧೆಯಲ್ಲಿ ಮುಂದಿನ ಹಂತಕ್ಕೆ ತೆರಳಲು ವೀಕ್ಷಕರ ಸಹಕಾರದ ಅಗತ್ಯವಿದೆ. ರಿಪ್ಪನ್ ಪೇಟೆಯ ಮಹಾಲಕ್ಷ್ಮಿ ಹಾಗೂ ಪ್ರವೀಣ್ ದಂಪತಿಗಳ ಪುತ್ರಿಯಾದ ಪ್ರಣತಿ ಪ್ರವೀಣ್ ಸಂಗೀತ ಲೋಕದಲ್ಲಿ ಅಧ್ಬುತ ಸಾಧನೆಗೈದಿದ್ದು ಪ್ರಸ್ತುತ ಸಾಗರದ ಯೂತ್ ಐಕಾನ್…

Read More