Headlines

ವಿದ್ಯಾರ್ಥಿಗಳು ಬಜೆಟ್ ವಿಶ್ಲೇಷಣೆ ಮಾಡುವ ಕೌಶಲ್ಯವನ್ನು ಬೆಳೆಸಿಕೊಳ್ಳಬೇಕು : ಪ್ರೋ.ಚಂದ್ರಶೇಖರ್.ಟಿ

ರಿಪ್ಪನ್ ಪೇಟೆ : ಇಲ್ಲಿನ  ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾಣಿಜ್ಯ ಶಾಸ್ತ್ರ ವಿಭಾಗ, ನಿರ್ವಹಣಾ ಶಾಸ್ತ್ರ ವಿಭಾಗ ಮತ್ತು ಅರ್ಥಶಾಸ್ತ್ರ ವಿಭಾಗದ ವತಿಯಿಂದ ಕರ್ನಾಟಕ ರಾಜ್ಯ ಅಯವ್ಯಯ -2022 ದ ನೇರವಿಕ್ಷಣೆ ಮತ್ತು ವಿಶ್ಲೇಷಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪ್ರಾಂಶುಪಾಲರಾದ ಶ್ರೀ ಚಂದ್ರಶೇಖರ.ಟಿ ರವರು ವಿದ್ಯಾರ್ಥಿಗಳು ಬಜೆಟ್ ವಿಶ್ಲೇಷಣೆ ಮಾಡುವ ಕೌಶಲ್ಯವನ್ನು ಬೆಳೆಸಿಕೊಂಡರೆ ರಾಜ್ಯದ ವಸ್ತು ಸ್ಥಿತಿಯನ್ನು ಅರ್ಥಮಾಡಿಕೊಳ್ಳುವ ಸಾಮಾರ್ಥ್ಯವನ್ನು ಪಡೆದುಕೊಳ್ಳುತ್ತಾರೆ ಎಂದು ಹೇಳಿದರು. ರಾಜ್ಯ ಬಜೆಟ್ ನ ಗಾತ್ರ, ವಿಭಾಗವಾರು ಹಂಚಿಕೆ,ಹೊಸ ಕಾರ್ಯಕ್ರಮಗಳ ಘೋಷಣೆ,…

Read More

ಚಾಲಕನ ನಿಯಂತ್ರಣ ತಪ್ಪಿ ಶರಾವತಿ ಹಿನ್ನೀರಿಗೆ ಇಳಿದ ಬಸ್ – ತಪ್ಪಿದ ಭಾರಿ ಅನಾಹುತ|sigandur

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ  ಹೊಳೆಬಾಗಿಲು ಸಮೀಪ ಶರಾವತಿ  ಹಿನ್ನೀರಿನಲ್ಲಿ ಹಿಂದಕ್ಕೆ ತೆಗೆದುಕೊಳ್ಳುವ ವೇಳೆ ನಿಯಂತ್ರಣ ತಪ್ಪಿದ ಬಸ್ ನೀರಿಗೆ ಜಾರಿದ್ದು, ಸ್ವಲ್ಪದಲ್ಲಿ ಭಾರೀ ಅನಾಹುತವೊಂದು ತಪ್ಪಿದೆ. ಹೊಳಬಾಗಿಲಿನಲ್ಲಿ ಇಂದು ಘಟನೆ ನಡೆದಿದ್ದು, ಗಜಾನನ ಬಸ್ ರಿವರ್ಸ್ ಸಾಗರದಿಂದ ಕಟ್ಟಿನಕಾರುಗೆ ತೆರಳುತ್ತಿತ್ತು. ಲಾಂಚ್ ನಿಲ್ಲಿಸುವ ಸ್ಥಳದಲ್ಲಿ ರಿವರ್ಸ್ ತೆಗೆದುಕೊಳ್ಳುವ ವೇಳೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ನೀರಿಗೆ ಇಳಿದಿದೆ. ಇದರಿಂದ ಬಸ್’ನಲ್ಲಿದ್ದ ಜನರು ಕೂಗಿಕೊಂಡಿದ್ದರಿಂದ ಎಚ್ಚೆತ್ತ ಚಾಲಕ ಮೇಲಕ್ಕೆ ಚಲಿಸಲು ಯತ್ನಿಸಿದ್ದಾನೆ. ತತಕ್ಷಣವೇ ಎಚ್ಚೆತ್ತ ಸ್ಥಳೀಯರೂ ಸೇತುವೆ ಕಾಮಗಾರಿಗಾಗಿ…

Read More

ಚಲಿಸುತಿದ್ದ ಕ್ಯಾಂಟರ್‌ಗೆ ವಿದ್ಯುತ್ ತಂತಿ ತಗುಲಿ ಚಾಲಕ ಸಾವು

ಚಲಿಸುತಿದ್ದ ಕ್ಯಾಂಟರ್‌ಗೆ ವಿದ್ಯುತ್ ತಂತಿ ತಗುಲಿ ಚಾಲಕ ಸಾವು ಶಿವಮೊಗ್ಗ: ವಿದ್ಯುತ್ ತಂತಿ ತಗುಲಿ ಕ್ಯಾಂಟರ್​​ ಚಾಲಕ ಮೃತಪಟ್ಟ ಘಟನೆ ಸೊರಬ ತಾಲೂಕಿನ ಸುತ್ತುಕೋಟೆ ಗ್ರಾಮದಲ್ಲಿ ನಡೆದಿದೆ. ಶಿರಾಳಕೊಪ್ಪದ ಮಠದಗದ್ದೆ ನಿವಾಸಿ ಮೊಹಮ್ಮದ್​ ಈಶಾಮ್​ (32) ಮೃತ ದುರ್ಧೈವಿಯಾಗಿದ್ದಾರೆ. ಡಿ.5ರಂದು ಶಿಕಾರಿಪುರ ತಾಲೂಕಿನ ಬಳ್ಳಿಗಾವಿಯಿಂದ ಸೊರಬ ತಾಲೂಕಿನ ಸುತ್ತಕೋಟೆಗೆ ತೆರಳುವ ರಸ್ತೆಮಾರ್ಗದಲ್ಲಿ ಸಾಸರಹಳ್ಳಿ ಸಮೀಪ ಜೋತು ಬಿದ್ದ ವಿದ್ಯುತ್ ತಂತಿ ಕ್ಯಾಂಟರ್​ಗೆ ತಗುಲಿದೆ. ಮೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ದುರ್ಘಟನೆ ಸಂಭವಿಸಿದೆ ಎಂದು ಮೃತನ ತಂದೆ ರಿಯಾಜ್ ಅಹ್ಮದ್​…

Read More

ಕೋವಿಡ್ ಬೂಸ್ಟರ್ ಡೋಸ್ ಲಸಿಕಾಕರಣ :: ಸಚಿವ ಈಶ್ವರಪ್ಪ ಚಾಲನೆ

ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಶಿವಮೊಗ್ಗ(ಸಿಮ್ಸ್) ನಲ್ಲಿ ಇಂದು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಸ್.ಈಶ್ವರಪ್ಪ ಇವರು ಕೋವಿಡ್-19 ಮುನ್ನೆಚ್ಚರಿಕೆ(ಬೂಸ್ಟರ್)ಡೋಸ್ ಲಸಿಕಾಕರಣಕ್ಕೆ ಚಾಲನೆ ನೀಡಿದರು. ಈ ವೇಳೆ ಅವರು ಮಾತನಾಡಿ, ಭಾರತ ಸರ್ಕಾರದ ನಿರ್ದೇಶನದಂತೆ ಜಿಲ್ಲೆಯಾದ್ಯಂತ ಜ.10 ರಿಂದ ಮೊದಲನೇ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಮತ್ತು 60 ವರ್ಷ ಮೇಲ್ಪಟ್ಟ ಸಹ ಅಸ್ವಸ್ಥತೆ(ಕೋಮಾರ್ಬಿಡಿಟಿ) ಹೊಂದಿರುವ ಫಲಾನುಭವಿಗಳಿಗೆ ಕೋವಿಡ್ 19 ಬೂಸ್ಟರ್ ಡೋಸ್ ಲಸಿಕೆ ನೀಡಲಾಗುತ್ತಿದ್ದು ಎಲ್ಲ ಅರ್ಹರು ಈ ಬೂಸ್ಟರ್ ಡೋಸ್ ಪಡೆಯಬೇಕೆಂದು ಕರೆ ನೀಡಿದರು….

Read More

ಲೋಕಾಯುಕ್ತದ ಪವರ್ ತೋರಿಸಿದ್ದ ಎನ್ ವೆಂಕಟಾಚಲ ನಿಧನ :

ಬೆಂಗಳೂರು: ಲೋಕಾಯುಕ್ತ ಸಂಸ್ಥೆಯ ಅಧಿಕಾರವನ್ನು ಜನಪರವಾಗಿ ಬಳಸಿ, ‘ಲೋಕಾಯುಕ್ತರು ಹೀಗೂ ಕೆಲಸ ಮಾಡಬಹುದು’ ಎಂದು ಸಾಧಿಸಿ ತೋರಿಸಿದ ನ್ಯಾಯಮೂರ್ತಿ ಎನ್.ವೆಂಕಟಾಚಲ (90) ಬುಧವಾರ ಬೆಳಿಗ್ಗೆ 6 ಗಂಟೆಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಪತ್ನಿ, ಮೂವರು ಪುತ್ರರು ಮತ್ತು ಓರ್ವ ಪುತ್ರಿಯನ್ನು ಅಗಲಿದ್ದಾರೆ. ನ್ಯಾಯಮೂರ್ತಿ ವೆಂಕಟಾಚಲ ಅವರು ಲೋಕಾಯುಕ್ತರಾಗಿ ನೇಮಕಗೊಂಡ ನಂತರವೇ ಸರ್ಕಾರಿ ಅಧಿಕಾರಿಗಳಲ್ಲಿ ಲೋಕಾಯುಕ್ತ ಭಯವನ್ನು ಉಂಟು ಮಾಡಿತು. ಲೋಕಾಯುಕ್ತ ಸಂಸ್ಥೆಯಿಂದ ತಮ್ಮ ನೋವುಗಳಿಗೆ ಪರಿಹಾರ ಸಿಗುತ್ತದೆ ಎಂಬ ಭಾವನೆ ಜನರಲ್ಲಿಯೂ ಬಂತು. ‘ಬಳ್ಳಾರಿ ರಸ್ತೆಯ…

Read More

ಮುಖ್ಯಮಂತ್ರಿಯಾಗಿ ಆಯ್ಕೆಯಾದ ಬಸವರಾಜ್ ಬೊಮ್ಮಾಯಿ ಗೆ ಶುಭಾಶಯ ಕೋರಿದ ಕುಮಾರ್ ಬಂಗಾರಪ್ಪ:

  ಸೊರಬ: ಶಾಸಕರಾದ ಕುಮಾರ್ ಬಂಗಾರಪ್ಪನವರು ನೂತನ ನಿಯೋಜಿತ ಮುಖ್ಯಮಂತ್ರಿಯಾದ ಬಸವರಾಜ್ ಬೊಮ್ಮಾಯಿ ರವರಿಗೆ ಸೊರಬ ವಿಧಾನಸಭಾ ಜನತೆಯ ಪರವಾಗಿ ಶುಭಾಶಯ ಕೋರಿದರು. ಕರ್ನಾಟಕದ  ಜನರ ಸೇವೆ ಮಾಡುವ ಅವಕಾಶ ಅವರಿಗೆ ಸಿಕ್ಕಿದೆ,ಸಮರ್ಥವಾಗಿ ನಿಭಾಯಿಸುವ ಶಕ್ತಿ ಅವರಲ್ಲಿದೆ,ಜನಪರ ಹಾಗೂ ಅಭಿವೃದ್ಧಿ ಪರ ಸರ್ಕಾರ ನೀಡುತ್ತಾರೆ ಅನ್ನೋ ಭರವಸೆ ಇದೆ ಒಳ್ಳೆಯದಾಗಲಿ ಎಂದು ಹಾರೈಸುವೆ ಎಂದರು. ವರದಿ: ವೆಂಕಟೇಶ್ ಚಂದ್ರಗುತ್ತಿ ಪೋಸ್ಟ್‌ ಮ್ಯಾನ್ ನ್ಯೂಸ್ ನ ಎಲ್ಲಾ ಸುದ್ದಿಗಳ ಅಪ್ ಡೇಟ್ ಪಡೆಯಲು ಈ ಕೆಳಗಿನ ವಾಟ್ಸಾಪ್ ಲಿಂಕ್…

Read More

ರಿಪ್ಪನ್‌ಪೇಟೆ : ಅಪ್ರಾಪ್ತ ಯುವತಿಯ ಮೇಲೆ ಯುವಕನಿಂದ ಅತ್ಯಾಚಾರ – ಪೋಕ್ಸೋ ಪ್ರಕರಣ ದಾಖಲು|POCSO

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹುಂಚ ಗ್ರಾಪಂ ವ್ಯಾಪ್ತಿಯ ಗ್ರಾಮವೊಂದರಲಿ ಅಪ್ರಾಪ್ತ ವಯಸ್ಸಿನ ಯುವತಿಯನ್ನು ಅತ್ಯಾಚಾರ ಮಾಡಿದ ಆರೋಪದಲ್ಲಿ ಯುವಕನೊಬ್ಬನ ಮೇಲೆ ಪೋಕ್ಸೋ ಪ್ರಕರಣ ದಾಖಲಾಗಿದೆ. ಬನಶೆಟ್ಟಿಕೊಪ್ಪ ಗ್ರಾಮದ ಮನೋಜ್ (22) ಮೇಲೆ ಪ್ರಕರಣ ದಾಖಲಾಗಿದೆ. ದೂರಿನ ವಿವರ ಇಲ್ಲಿದೆ : ಸಂತ್ರಸ್ತ ಬಾಲಕಿಯ ತಂದೆ ತೀರಿಕೊಂಡಿದ್ದು ತಾಯಿ ಕೂಲಿ ಕೆಲಸ ಮಾಡಿಕೊಂಡಿರುತ್ತಾರೆ. ಸದರಿಯವರ ತಂದೆ ತಾಯಿಗೆ 2 ಜನ ಮಕ್ಕಳಿದ್ದು ಹಿರಿಯವನು ಅಣ್ಣ ಡ್ರೈವಿಂಗ್ ಕೆಲಸ ಮಾಡಿಕೊಂಡಿರುತ್ತಾನೆ.ನೊಂದ ಬಾಲಕಿಯು ೨ ನೇ ತರಗತಿ ವರೆಗೆ ವಿದ್ಯಾಭ್ಯಾಸ…

Read More

Ripponpete | ರಸ್ತೆ ಕಾಮಗಾರಿಗೆ ಅಡ್ಡಲಾದ ಕಟ್ಟಡ ತೆರವಿಗೆ ಮುಂದಾದ ಅಧಿಕಾರಿಗಳು – ಕಟ್ಟಡ ಮಾಲೀಕರ ಹೈಡ್ರಾಮ

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದ ಸಾಗರ ರಸ್ತೆಯಲ್ಲಿ ರಸ್ತೆ ಕಾಮಗಾರಿಗೆ ಅಡ್ಡಲಾಗಿರುವ ಕಟ್ಟಡವನ್ನು ಹಿಟಾಚಿ ಯಂತ್ರದ ಮೂಲಕ ತೆರವುಗೊಳಿಸಲು ಮುಂದಾದ ಅಧಿಕಾರಿಗಳು ಹಾಗೂ ಕಟ್ಟಡದ ಮಾಲೀಕರ ನಡುವೆ ಮಾತಿನ ಚಕಮಕಿ ನಡೆದ ಘಟನೆ ನಡೆದಿದೆ. ಪಟ್ಟಣದ ಅಭಿವೃದ್ಧಿಯ ಹಿನ್ನಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ಆಸಕ್ತಿಯಿಂದ ರಸ್ತೆಗಳನ್ನು ಅಗಲೀಕರಣಗೊಳಿಸಿ ಪಟ್ಟಣವನ್ನು ಸುಂದರವನ್ನಾಗಿಸುವ ಪ್ರಯತ್ನದ ಮೊದಲ ಹಂತವಾಗಿ ಸಾಗರ ರಸ್ತೆ ಅಗಲೀಕರಣ ಕಾಮಗಾರಿ ಸುಮಾರು 5.50 ಕೋಟಿ ರೂ ವೆಚ್ಚದಲ್ಲಿ ನಡೆಯುತ್ತಿದೆ. ಈ ಅಭಿವೃದ್ಧಿ ಕೆಲಸಕ್ಕೆ ಪಟ್ಟಣದ ಶೇ…

Read More

ಪ್ರಧಾನಿ ಮೋದಿ ವಿರುದ್ದ ಸೂಕ್ತ ಕ್ರಮಕ್ಕೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ದೂರು – ಯಾಕೆ ಗೊತ್ತಾ..??? | Kimmane complaint for appropriate action against Modi

ಪ್ರಧಾನಿ ಮೋದಿ ವಿರುದ್ದ ಸೂಕ್ತ ಕ್ರಮಕ್ಕೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ದೂರು – ಯಾಕೆ ಗೊತ್ತಾ..??? | Kimmane complaint for appropriate action against Modi ಚುನಾವಣಾ ನೀತಿ ಸಂಹಿತೆಗೆ ವ್ಯತಿರಿಕ್ತವಾಗಿ ಕೋಮು ದ್ವೇಷ ಹರಡುವ ಹೇಳಿಕೆ ನೀಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದ ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ತೀರ್ಥಹಳ್ಳಿ ಡಿವೈಎಸ್‌ಪಿ ಕಚೇರಿಗೆ ದೂರು ನೀಡಿದ್ದಾರೆ.  ತಮ್ಮ ಲೆಟರ್‌ ಹೆಡ್‌ನಲ್ಲಿ ಅವರು ದೂರು ನೀಡಿದ್ದು, ಪತ್ರಿಕೆಯಲ್ಲಿ ಪ್ರಸಾರವಾದ…

Read More

ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದ ಒಳರೋಗಿ ಆಸ್ಪತ್ರೆ ಆವರಣದಲ್ಲಿ ಸಾವು|meggan

ಶಿವಮೊಗ್ಗದ ಮೆಗ್ಗಾನ್ ಬೋಧನಾ ಜಿಲ್ಲಾಸ್ಪತ್ರೆಯಲ್ಲಿ ನಡೆದ ಒಂದು ಘಟನೆ ಸದ್ಯ ಎಲ್ಲ ರೋಗಿ, ರೋಗಿಗಳ ಸಂಬಂಧಿಕರನ್ನು ಬೆಚ್ಚಿ ಬೀಳಿಸಿದೆ. ಜಿಲ್ಲಾಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಯು ಮೃತಪಟ್ಟಿದ್ದಾನೆ.  ಆಸ್ಪತ್ರೆ ಒಳಗೆ ಮೃತಪಟ್ಟಿದ್ದರೆ ಯಾರಿಗೂ ಅಚ್ಚರಿ ಆಗುತ್ತಿರಲಿಲ್ಲ. ಹೌದು ಇಲ್ಲಿ ಒಳ ರೋಗಿಯು ಆಸ್ಪತ್ರೆಯ ಆವರಣದಲ್ಲಿ ಮೃತಪಟ್ಟಿದ್ದಾನೆ. ಹೀಗೆ ಮೃತಪಟ್ಟಿರುವ ವ್ಯಕ್ತಿಯ ಹೆಸರು. ಮಂಜುನಾಥ್(32) ದಾವಣಗೆರೆ ಜಿಲ್ಲೆಯ ಚನ್ನಗರಿ ಪಟ್ಟಣದ ನಿವಾಸಿ.  ಮೇ. 19 ರಂದು ಅನಾರೋಗ್ಯದಿಂದ ಬಳಲುತ್ತಿದ್ದ ಕಾರಣಕ್ಕೆ ಇತನನ್ನು ಕುಟುಂಬಸ್ಥರು ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು….

Read More