Headlines

ಭದ್ರಾವತಿ ಆಟೋ ಚಾಲಕನ ಕೊಲೆ ಪ್ರಕರಣ : ಸ್ನೇಹಿತರಿಂದಲೇ ನಡೆಯಿತು ಕೊಲೆ | ಮಗನ ಸಾವಿಗೆ ನೊಂದು ತಾಯಿ ಆತ್ಮಹತ್ಯೆ!!!!!???|Bhadravathi

ಭದ್ರಾವತಿ : ಸ್ನೇಹಿತರು ಅಂದರೆ ಪ್ರಾಣಕ್ಕೆ ಪ್ರಾಣ ಕೊಡೋರು ಅಂತಾರೆ, ಆದರೆ  ಭದ್ರಾವತಿಯಲ್ಲಿ ಸ್ನೇಹಿತರೆ ತಮ್ಮ ಗೆಳೆಯನನ್ನು ಕೊಲೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಅಕ್ಟೋಬರ್ 24ರಂದು ಭದ್ರಾವತಿಯ ಎಪಿಎಂಸಿ ಆವರಣದ ಮ್ಯಾಮ್ ಕೋಸ್ ಕಟ್ಟಡ ಬಳಿ ರೂಪೇಶ್ ಎಂಬಾತನ ಶವ ಪತ್ತೆಯಾಗಿತ್ತು. ಪ್ರಕರಣ ದಾಖಲಿಸಿಕೊಂಡ ಭದ್ರಾವತಿಯ ಹಳೇ ನಗರ ಠಾಣೆ ಪೊಲೀಸರು ತನಿಖೆ ನಡೆಸಿದಾಗ ಸ್ನೇಹಿತರ ಕೃತ್ಯ ಬಯಲಾಗಿದೆ. ಆಟೋ ಚಾಲಕನಾಗಿದ್ದ ರೂಪೇಶ್​ನನ್ನು ಆತನ ಸ್ನೇಹಿತರೇ ಆದ ಭದ್ರಾವತಿ ಕಾಚಗೂಂಡನಹಳ್ಳಿಯ ಕುಶಾಲ್(35) ಹಾಗೂ ಭದ್ರಾವತಿ ಹುತ್ತಾ…

Read More

ಗೃಹ ಸಚಿವ ಆರಗ ಜ್ಞಾನೇಂದ್ರ ತವರು ಕ್ಷೇತ್ರ ತೀರ್ಥಹಳ್ಳಿ ಸರ್ಕಾರಿ ಕಾಲೇಜಿನಲ್ಲಿ ಕೇಸರಿ ಶಾಲು-ಹಿಜಾಬ್ ಸಂಘರ್ಷ ..!!

ಕರಾವಳಿ,ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಾರಕಕ್ಕೇರಿರುವ ಕೇಸರಿ ಶಾಲು,ಹಿಜಾಬ್ ಧರಿಸುವ ಕುರಿತಾದ ಪ್ರಕರಣ ಇದೀಗ ರಾಜ್ಯದ ಗೃಹ ಸಚಿವರಾಗಿರುವ ಅರಗ ಜ್ಞಾನೇಂದ್ರ ತವರು ಕ್ಷೇತ್ರ ತೀರ್ಥಹಳ್ಳಿ ಬಾಳೆಬೈಲು ಸರ್ಕಾರಿ  ಡಿಗ್ರಿ ಕಾಲೇಜಿಗೂ ತಟ್ಟಿದೆ. ಇಂದು ಬೆಳಗ್ಗೆ ವಿದ್ಯಾರ್ಥಿಗಳು ಕಾಲೇಜಿಗೆ ಕೇಸರಿ ಶಾಲು ಧರಿಸಿಕೊಂಡು ಹೊಂದಿದ್ದು ಶಾಲೆಯ ಆಡಳಿತ ಇದಕ್ಕೆ ಅವಕಾಶ ಕಲ್ಪಿಸಿಲ್ಲ ಕೂಡಲೆ ವಿದ್ಯಾರ್ಥಿಗಳು ಕಾಲೇಜು ಮುಂಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವಿಚಾರಕ್ಕೆ ಸಂಬಂಧಪಟ್ಟಂತೆ ವಿದ್ಯಾರ್ಥಿಗಳು ಪ್ರಾಂಶುಪಾಲರಿಗೆ ಮನವಿ ಯನ್ನು ನೀಡಿದ್ದು ಕೆಲವು ವಿದ್ಯಾರ್ಥಿಗಳು ಹಿಜಾಬ್ ಧರಿಸಿ ಕೂರುತ್ತಿರುವುದರಿಂದ…

Read More

ಕಸ್ತೂರಿ ಕನ್ನಡ ಸಂಘದ ನೂತನ ಅಧ್ಯಕ್ಷರಾಗಿ ಜಿ ಆರ್ ಗೋಪಾಲಕೃಷ್ಣ ಆಯ್ಕೆ

ಕಸ್ತೂರಿ ಕನ್ನಡ ಸಂಘದ ಅಧ್ಯಕ್ಷರಾಗಿ ಜಿ ಆರ್ ಗೋಪಾಲಕೃಷ್ಣ ಆಯ್ಕೆ ರಿಪ್ಪನ್ ಪೇಟೆ : ಕಸ್ತೂರಿ ಕನ್ನಡ ಸಂಘ ಮತ್ತು ಪುನೀತ್ ರಾಜ್‍ಕುಮಾರ್  ಆಭಿಮಾನಿ ಬಳಗದ ಐದನೇ ವರ್ಷದ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು ಅಧ್ಯಕ್ಷರಾಗಿ ಜಿ ಆರ್ ಗೋಪಾಲಕೃಷ್ಣ , ಪ್ರಧಾನ ಕಾರ್ಯದರ್ಶಿಗಳಾಗಿ ಹಸನಬ್ಬ ಬ್ಯಾರಿ ಹಾಗೂ ಶ್ರೀಧರ್ ಚಿಗುರು ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ದೇವರಾಜ್ ಕೆ ,ರಮೇಶ್ ಫ್ಯಾನ್ಸಿ , ಸಾಜೀದಾ ಹನೀಪ್, ವಾಣಿ ಗೋವಿಂದಪ್ಪ ಗೌಡ , ಸಹಕಾರ್ಯದರ್ಶಿಯಾಗಿ ದೀಪಾ ನಾಗರಾಜ್…

Read More

ರಿಪ್ಪನ್‌ಪೇಟೆ : ದುಷ್ಕರ್ಮಿಗಳಿಂದ ಹತ್ಯೆಯಾದ ಪ್ರವೀಣ್ ನೆಟ್ಟಾರು ರವರಿಗೆ ಹಿಂದೂಪರ ಸಂಘಟನೆಗಳಿಂದ ಶ್ರದ್ದಾಂಜಲಿ

ರಿಪ್ಪನ್ ಪೇಟೆ : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಮಂಗಳವಾರ ಸಂಜೆ ಬಿಜೆಪಿ ಯುವ ಮೋರ್ಚಾ ಧುರೀಣ ಪ್ರವೀಣ್‌ ನೆಟ್ಟಾರು ಅವರನ್ನು ಅಮಾನುಷವಾಗಿ ಹತ್ಯೆಗೈದ ಘಟನೆಯನ್ನು ಖಂಡಿಸಿ ರಿಪ್ಪನ್‌ಪೇಟೆಯ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಮೇಣದ ಬತ್ತಿ ಹಚ್ಚಿ ಶ್ರದ್ದಾಂಜಲಿ ಸಲ್ಲಿಸಿದರು. ಪಟ್ಟಣದಲ್ಲಿ ಇಂದು ಹಿಂದೂಪರ ಸಂಘಟನೆಗಳ ವತಿಯಿಂದ ವಿನಾಯಕ ವೃತ್ತದಲ್ಲಿ ಮೊಂಬತ್ತಿ ಹಚ್ಚಿ,2ನಿಮಿಷ ಮೌನಾಚರಣೆ ನಡೆಸಿ ಬಳಿಕ ಪ್ರವೀಣ್ ನೆಟ್ಟಾರು ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಈ ಸಂಧರ್ಭದಲ್ಲಿ ಮಾತನಾಡಿದ ಮುಖಂಡರಾದ ಆರ್…

Read More

ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ – ಸಾವಿನ ಬಗ್ಗೆ ಕುಟುಂಬಸ್ಥರ ಅನುಮಾನ | Crime News

ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ – ಸಾವಿನ ಬಗ್ಗೆ ಕುಟುಂಬಸ್ಥರ ಅನುಮಾನ ಶಿವಮೊಗ್ಗದ ಮಲವಗೊಪ್ಪದ ಮನೆಯೊಂದರಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮನೆಯಲ್ಲಿ ಫ್ಯಾನ್ ಗೆ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದ್ದು ಈ ಸಾವಿನ ಬಗ್ಗೆ ಆತನ ಕುಟುಂಬಸ್ಥರು ಅನುಮಾನ  ವ್ಯಕ್ತಪಡಿಸಿ ತುಂಗ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ. ಜಿತನ್ ಕುಮಾರ್(28) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಎರಡು ವರೆವರ್ಷದ ಹಿಂದೆ ಗಾಡಿಕೊಪ್ಪದ ಮಂಜುಳ ಎಂಬುವವರನ್ನು ಪ್ರೀತಿಸಿ ಮದುವೆಯಾಗಿದ್ದ…

Read More

ರಿಪ್ಪನ್‌ಪೇಟೆ – ಕಾರು ಮತ್ತು ಬಸ್ ನಡುವೆ‌ ಮುಖಾಮುಖಿ ಡಿಕ್ಕಿ|accident

ರಿಪ್ಪನ್‌ಪೇಟೆ – ಕಾರು ಮತ್ತು ಬಸ್ ನಡುವೆ‌ ಮುಖಾಮುಖಿ ಡಿಕ್ಕಿ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹಿರೇಜೇನಿ ಗ್ರಾಮದಲ್ಲಿ ಕಾರು ಮತ್ತು ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ‌ರುವ ಘಟನೆ ನಡೆದಿದೆ. ಹೊಸನಗರದಿಂದ ರಿಪ್ಪನ್‌ಪೇಟೆಗೆ ತೆರಳುತಿದ್ದ ಭಾಗ್ಯಲಕ್ಷ್ಮಿ ಬಸ್ ಹಾಗೂ ರಿಪ್ಪನ್‌ಪೇಟೆಯಿಂದ ಹೊಸನಗರ ಕಡೆಗೆ ತೆರಳುತಿದ್ದ ಮಾರುತಿ ಆಲ್ಟೋ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.ಕಾರು ಚಾಲಕನ ನಿಯಂತ್ರಣ ತಪ್ಪಿ ಬಸ್ ನ ಬಲ ಭಾಗಕ್ಕೆ ಕಾರು ಡಿಕ್ಕಿಯಾಗಿದೆ ಎನ್ನಲಾಗುತ್ತಿದೆ. ಅಪಘಾತದಲ್ಲಿ ಯಾವುದೇ ಗಂಭೀರ ಗಾಯಗಳಾಗಿಲ್ಲ ಎನ್ನಲಾಗುತಿದ್ದು ಹೆಚ್ಚಿನ…

Read More

ಮತಾಂತರ ನಿಷೇಧ ಮಸೂದೆ ಜಾರಿಗೆ ತರಲು ಆಗ್ರಹಿಸಿ ಮನವಿ ಸಲ್ಲಿಸಿದ ತೀರ್ಥಹಳ್ಳಿ ಭಜರಂಗದಳದ ಕಾರ್ಯಕರ್ತರು

ತೀರ್ಥಹಳ್ಳಿ : ರಾಜ್ಯದಲ್ಲಿ ಬಲವಂತದ ಮತಾಂತರ ನಡೆಯುತ್ತಿದೆ. ಹಲವಾರು ಕಡೆ ಜನರ ಬಡತನ, ಅನಾರೋಗ್ಯವನ್ನೇ ದುರುಪಯೋಗಪಡಿಸಿ, ಜನರ ಭಾವನೆಯೊಂದಿಗೆ ಆಟವಾಡಿ, ಆಸೆ ಆಮಿಷಗಳನೊಡ್ಡಿ `ಮತಾಂತರದಿಂದ ನಿಮ್ಮ ಮೋಸದ ಪ್ರಚಾರ,ಮಾತಿನ ಮೋಡಿಗಳಿಂದ ಭ್ರಮೆಗೊಳಪಟ್ಟು ಸಮಸ್ಯೆಗಳು ನೀಗುತ್ತವೆ ಎಂದು ಮತಾಂತರಗೊಳಿಸಿ “ಸ್ವಇಚ್ಚೆಯ ಮತಾಂತರ” ಎಂದು ಬಿಂಬಿಸಲಾಗುತ್ತಿದೆ.  ಇದರಿಂದ ಸಮಾಜದಲ್ಲಿ ಮತೀಯ ಸಾಮರಸ್ಯಕ್ಕೆ ಧಕ್ಕೆಯಾಗುತ್ತಿದೆ. ಕುಟುಂಬದಲ್ಲಿ ಒಬ್ಬರು ಮತಾಂತರಗೊಂಡರೆ ಕುಟುಂಬದ ಇತರ ವ್ಯಕ್ತಿಗಳ ಧಾರ್ಮಿಕ ಹಕ್ಕಿಗೆ ಧಕ್ಕೆ ಬಂದು ಮನೆಯ ಸದಸ್ಯರು ತೀವ್ರ ಮಾನಸಿಕ ಆಘಾತಕ್ಕೊಳಗಾಗುತ್ತಿರುವುದು ಕಂಡು ಬರುತ್ತಿದ್ದು ಅವರ ಮಾನಸಿಕ…

Read More

ಹೊಬುಜಾ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು – ಆರಗ ಜ್ಞಾನೇಂದ್ರ|hombuja

ಹೊಂಬುಜ ಕ್ಷೇತ್ರದ ಸರ್ವಾಂಗಿಣ ಅಭಿವೃದ್ಧಿಗೆ ಒತ್ತು –  ಆರಗ ಜ್ಞಾನೇಂದ್ರ   ರಿಪ್ಪನ್ ಪೇಟೆ : ಜೈನರ ಪ್ರಸಿದ್ಧ ಯಾತ್ರಾಸ್ಥಳವಾದ  ಹೊಂಬುಜ ಕ್ಷೇತ್ರದ ಸರ್ವಾಂಗಿಣ  ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದು  ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಭಾನುವಾರ ಶ್ರೀ ಕ್ಷೇತ್ರ ಹೊಂಬುಜದ ಮಠದ ಆಸುಪಾಸಿನ  ರಸ್ತೆ ಹಾಗೂ ಒಳಚರಂಡಿ ಯೋಜನೆಯ ರೂ ಎರಡು ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ  ಚಾಲನೆ ನೀಡಿ ಅವರು ಮಾತನಾಡಿದರು. ಮಾತೆ ಪದ್ಮಾವತಿ ದೇವಿ ನೆಲೆ ನಿಂತಿರುವ ಮಲೆನಾಡಿನ ಪ್ರಸಿದ್ಧ…

Read More

ಚಿಕ್ಕ ಜೇನಿ ಗ್ರಾಪಂ ವ್ಯಾಪ್ತಿಯಲ್ಲಿ ಎಗ್ಗಿಲ್ಲದೇ ನಡೆಯುತ್ತಿದೆ ಅಕ್ರಮ ಮರಳು ಧಂಧೆ – ಕಣ್ಮುಚ್ಚಿ ಕುಳಿತಿರುವ ಅಧಿಕಾರಿಗಳು

ಚಿಕ್ಕ ಜೇನಿ ವ್ಯಾಪ್ತಿಯಲ್ಲಿ ಎಗ್ಗಿಲ್ಲದೇ ನಡೆಯುತ್ತಿದೆ ಅಕ್ರಮ ಮರಳು ಧಂಧೆ – ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಚಿಕ್ಕಜೇನಿ ಗ್ರಾಪಂ ವ್ಯಾಪ್ತಿಯ ಮುತ್ತಲ, ಜನ್ನಂಗಿ , ಗ್ರಾಮದ ನದಿ ಪಾತ್ರದಲ್ಲಿ ಎಗ್ಗಿಲ್ಲದೇ ಅಕ್ರಮ ಮರಳು ದಂಧೆ ನಡೆಯುತ್ತಿದ್ದು ನೂರಾರು ಲೋಡ್ ಅಕ್ರಮ ಮರಳು ಶೇಖರಿಸಿದ್ದರೂ ಅಕ್ರಮ ವ್ಯವಹಾರದಲ್ಲಿ ಮೌನ ಸಮ್ಮತಿ ನೀಡಿರುವ ಆಡಳಿತ ವ್ಯವಸ್ಥೆಯಿಂದ ಅಪಾರ ಪ್ರಮಾಣದ ಸಂಪತ್ತು ನಾಶವಾಗುತ್ತಿದೆ. ಶಾಂತಪುರ ಸೇತುವೆಯಿಂದ ಪ್ರಾರಂಭವಾಗಿ ಹತ್ತಾರು ಸ್ಥಳಗಳಲ್ಲಿ ಮರಳೆತ್ತುವ ಕಾರ್ಯದಲ್ಲಿ ಹೊರರಾಜ್ಯ ಬಿಹಾರದ ಹತ್ತಾರು ಕೂಲಿ ಕಾರ್ಮಿಕರನ್ನು…

Read More

ರಿಪ್ಪನ್‌ಪೇಟೆ : ಕಾರ್ಯಕರ್ತರನ್ನು ಭೇಟಿ ಮಾಡಿದ ಸಂಸದ ಬಿ ವೈ ರಾಘವೇಂದ್ರ – ಹೈಮಾಸ್ಕ್ ವಿದ್ಯುತ್ ದೀಪ ಅಳವಡಿಕೆಗೆ ವೀರೇಶ್ ಆಲುವಳ್ಳಿ ಮನವಿ|BYR

ರಿಪ್ಪನ್‌ಪೇಟೆ : ಪಟ್ಟಣದ ವಿನಾಯಕ ವೃತ್ತದಲ್ಲಿ ಇರುವ ಹೈಮಾಸ್ಕ್ ವಿದ್ಯುತ್ ದೀಪವನ್ನು ಉನ್ನತೀಕರಣಗೊಳಿಸುವಂತೆ ಸಂಸದ ಬಿ ವೈ ರಾಘವೇಂದ್ರ ರವರಿಗೆ ಹೊಸನಗರ ತಾಲೂಕ್ ಪಂಚಾಯತ್ ಮಾಜಿ ಅಧ್ಯಕ್ಷ ವೀರೇಶ್ ಆಲುವಳ್ಳಿ ಮನವಿ ಮಾಡಿದರು. ಕಾರ್ಯನಿಮಿತ್ತ ಬೈಂದೂರಿಗೆ ತೆರಳುತಿದ್ದ ಸಂಸದರು ವಿನಾಯಕ ವೃತ್ತದಲ್ಲಿ ಕಾರ್ಯಕರ್ತರು ಹಾಗೂ ಅಭಿಮಾನಿಗಳನ್ನು ಭೇಟಿ ಮಾಡಿದರು. ಈ ಸಂಧರ್ಭದಲ್ಲಿ ಸಂಸದರನ್ನು ಅಭಿನಂದಿಸಿದ ವೀರೇಶ್ ಆಲುವಳ್ಳಿ ಪಟ್ಟಣದ ವಿನಾಯಕ ವೃತ್ತದಲ್ಲಿ ಹೈಮಾಸ್ಕ್ ವಿದ್ಯುತ್ ದೀಪದ ಉನ್ನತೀಕರಣ ಹಾಗೂ ನಾಲ್ಕು ರಸ್ತೆಗಳಲ್ಲಿನ ಪ್ರಮುಖ ವೃತ್ತಗಳಾದ ಆಸ್ಪತ್ರೆ ವೃತ್ತ…

Read More