Headlines

ಸಿದ್ದಿವಿನಾಯಕ ದೇವಸ್ಥಾನದ 5ನೇ ವರ್ಷದ ಪ್ರತಿಪ್ಠಾವರ್ಧಂತ್ಯುತ್ಸವ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ :

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ದ ಶ್ರೀವರಸಿದ್ದಿವಿನಾಯಕ ಸ್ವಾಮಿ ಮತ್ತು ಮಾತೆ ಅನ್ನಪೂರ್ಣೇಶ್ವರಿ ಅಮ್ಮನವರ ದೇವಸ್ಥಾನದ ಐದನೇ ವರ್ಷದ ಪ್ರತಿಪ್ಠಾವರ್ಧಂತ್ಯುತ್ಸವದ ಎರಡು ದಿನದ ವಿಶೇಷ ಧಾರ್ಮಿಕ ಸಮಾರಂಭ ಪೂಜಾ ಕಾರ್ಯಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು. ಇಂದು ಬೆಳಗ್ಗೆ ಆಗಮಿಕ ಪರಿವಾರದವರನ್ನು ಪೂರ್ಣಕುಂಭ ಸ್ವಾಗತದೊಂದಿಗೆ ಸ್ವಾಗತಿಸಲಾಯಿತು. ನಂತರ ಶಿವಮೊಗ್ಗದ ವೇದ ಬ್ರಹ್ಮಶ್ರೀ ವಸಂತಭಟ್ ನೇತೃತ್ವದಲ್ಲಿ ಅಗಮಿಕ ಪರಿವಾರದವರು ದೇವತಾ ಪ್ರಾರ್ಥನೆ, ಗಣಪತಿ ಪೂಜೆ, ಸ್ವಸ್ತಿಪುಣ್ಯಾಹ ವಾಚನನಾಂದಿ ಸಮಾರಾಧನೆ ಮಹಾಸಂಕಲ್ಪ, ಋತ್ವಿಗ್ವರಣ, ಸಾಮೂಹಿಕ ಷಣ್ ನಾರೀಕೇಳ ಗಣಹೋಮ, ನವಗ್ರಹ ಹೋಮ, ತೀರ್ಥಪ್ರಸಾದ ವಿನಿಯೋಗ…

Read More

ಹೊಸನಗರ : ರೈತನ ಬೆಳೆ ನಾಶಪಡಿಸಿದ ಅಧಿಕಾರಿಗಳು ಹಾಗೂ ಸರ್ಕಾರದ ವಿರುದ್ದ ಆರಗ ಮತ್ತು ಹಾಲಪ್ಪ ನೇತ್ರತ್ವದಲ್ಲಿ ಅಹೋರಾತ್ರಿ ಧರಣಿ|hosanagar

ಹೊಸನಗರ : ರೈತನ ಸಾಗುವಳಿ ಜಮೀನಿನಲ್ಲಿ ಬೆಳೆದಿದ್ದ ಬೆಳೆಯನ್ನು‌ ನಾಶಪಡಿಸಿದ ಅಧಿಕಾರಿಗಳು ಹಾಗೂ ರೈತ ವಿರೋಧಿ ಸರ್ಕಾರದ ವಿರುದ್ದ ಮಾಜಿ ಗೃಹ ಸಚಿವ ಹಾಗೂ ಶಾಸಕ ಆರಗ ಜ್ಞಾನೇಂದ್ರ ಮತ್ತು ಮಾಜಿ ಸಚಿವ ಹರತಾಳು ಹಾಲಪ್ಪ ನೇತ್ರತ್ವದಲ್ಲಿ ತಾಲೂಕ್ ಕಛೇರಿ‌ ಮುಂಭಾಗದಲ್ಲಿ ಅಹೋರಾತ್ರಿ ಧರಣಿ‌ ನಡೆಸಲಾಗುತ್ತಿದೆ. ಹೊಸನಗರ ತಾಲೂಕಿನ ಕಚ್ಚಿಗೆಬೈಲು ಗ್ರಾಮದಲ್ಲಿ ರೈತರು ಸಾಗುವಳಿ ಮಾಡಿಕೊಂಡ ಜಮೀನಿನಲ್ಲಿ ಬೆಳೆದಿದ್ದ ಬೆಳೆಯನ್ನು JCB ಯಂತ್ರದ ಮೂಲಕ ತೆರವುಗೊಳಿದ ಅಧಿಕಾರಿಗಳ ದೌರ್ಜನ್ಯ ಹಾಗೂ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ…

Read More

ಮುರುಘಾ ಮಠದಲ್ಲಿ ಐತಿಹಾಸಿಕ ಕಂಚಿನ ದೀಪ ರಥೋತ್ಸವ – ಪದ್ಮಶ್ರೀ ಮಂಜಮ್ಮ ಜೋಗತಿಗೆ ಕೆಳದಿ ರಾಣಿ ಚೆನ್ನಮ್ಮ ಪ್ರಶಸ್ತಿ | murugha matt

ಮುರುಘಾ ಮಠದಲ್ಲಿ ಐತಿಹಾಸಿಕ ಕಂಚಿನ ದೀಪ ರಥೋತ್ಸವ – ಪದ್ಮಶ್ರೀ ಮಂಜಮ್ಮ ಜೋಗತಿಗೆ ಕೆಳದಿ ರಾಣಿ ಚೆನ್ನಮ್ಮ ಪ್ರಶಸ್ತಿ | murugha matt ಸಾಗರ (Sagara) ತಾಲೂಕಿನ ಆನಂದಪುರ ಮುರುಘಾಮಠದಲ್ಲಿ ಮಂಗಳವಾರ ಐತಿಹಾಸಿಕ ಕಂಚಿನ ದೀಪ ರಥೋತ್ಸವ ನಿಮಿತ್ತ ಭಾವೈಕ್ಯ ಸಮ್ಮೇಳನ ವೈಭವದಿಂದ ನಡೆಯಿತು. ಪ್ರತಿ ವರ್ಷ ಶ್ರೇಷ್ಠ ಸಾಧಕಿ ಮಹಿಳೆಗೆ ಕೆಳದಿ ರಾಣಿ ಚೆನ್ನಮ್ಮ ರಾಣಿ ಪ್ರಶಸ್ತಿ ನೀಡಲಾಗುತ್ತಿದ್ದು ಈ ವರ್ಷ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಜಾನಪದ ಕಲಾವಿದೆ ಮಂಜಮ್ಮ ಜೋಗತಿಗೆ ಕೆಳದಿ ರಾಣಿ ಚೆನ್ನಮ್ಮ…

Read More

ಎರಡು ತಿಂಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿ ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆ

ಎರಡು ತಿಂಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿ ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆ ತೀರ್ಥಹಳ್ಳಿ ತಾಲ್ಲೂಕಿನ ತೂದೂರು ಸರ್ಕಾರಿ ಶಾಲೆಯ ಹಿಂಭಾಗದ ತುಂಗಾನದಿಯಲ್ಲಿ ಅಪರಿಚಿತ ಶವ ತೀರ್ಥಹಳ್ಳಿ ತಾಲೂಕಿನ ಗುಡ್ಡೆಕೊಪ್ಪ ಸಮೀಪದ ಕುಟ್ರ ನಿವಾಸಿ ಕೃಷ್ಣಮೂರ್ತಿ ಎಂದು ತಿಳಿದುಬಂದಿದೆ. ಗುಡ್ಡೆಕೊಪ್ಪ ನಿವಾಸಿ 14-07-2024 ರಂದು ತಮ್ಮ ನಿವಾಸದಿಂದ ನಾಪತ್ತೆಯಾಗಿದ್ದರು ಈ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಗೆ ದೂರು ಸಲ್ಲಿಸಲಾಗಿತ್ತು. ಮೃತದೇಹದ ಸೊಂಟದಲ್ಲಿ ಸೇಫ಼್ಟಿ ಪಿನ್ ಆಧಾರದ ಮೇಲೆ ಕುಟುಂಬಸ್ಥರು ಮೃತದೇಹವನ್ನು ಪತ್ತೆಹಚ್ಚಿದ್ದಾರೆ. ಮೃತದೇಹವು ಪ್ರಮಾಣದಲ್ಲಿ ಕೊಳೆತಿದ್ದು ಮುಖ, ದೇಹವನ್ನು…

Read More

ಕೊಡಚಾದ್ರಿ ಬೆಟ್ಟಕ್ಕೆ ತೆರಳುತಿದ್ದ ಪ್ರವಾಸಿಗರಿದ್ದ ಜೀಪ್ ಪಲ್ಟಿ

ಕೊಡಚಾದ್ರಿ ಬೆಟ್ಟಕ್ಕೆ ತೆರಳುತಿದ್ದ ಪ್ರವಾಸಿಗರಿದ್ದ ಜೀಪ್ ಪಲ್ಟಿ ಕೊಲ್ಲೂರಿನಿಂದ ಕೊಡಚಾದ್ರಿಗೆ ಬೆಟ್ಟಕ್ಕೆ ತೆರಳುತಿದ್ದ ಪ್ರವಾಸಿಗರಿದ್ದ ಜೀಪ್ ಪಲ್ಟಿಯಾಗಿರುವ ಘಟನೆ ನಿಟ್ಟೂರು – ಕಟ್ಟಿನಹೊಳೆ ಮಾರ್ಗದ ಕುಂಬಳೆ ಬಳಿ ನಡೆದಿದೆ. ಚಾಲಕನ ಅತಿ ವೇಗ ಮತ್ತು ಅಜಾಗರೂಕತೆಯಿಂದ ನಿಯಂತ್ರಣ ತಪ್ಪಿ ಕೇರಳ ಮೂಲದ ಎಂಟು ಜನ ಪ್ರವಾಸಿಗರಿದ್ದ ಜೀಪ್ ಕುಂಬಳೆ ಬಳಿ ಪಲ್ಟಿಯಾಗಿದೆ.ಘಟನೆಯಲ್ಲಿ ಪ್ರವಾಸಿಗರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಕೊಲ್ಲೂರು ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ.ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.. ಕೊಡಚಾದ್ರಿ ಜೀಪ್ ಚಾಲಕರ ಉದ್ದಟತನಕ್ಕೆ ಬೀಳಬೇಕಿದೆ ಪೊಲೀಸರ…

Read More

ಯಾವುದೇ ಕಾರಣಕ್ಕೂ ಮುಸ್ಲಿಂ ಮತ ಕೇಳಲ್ಲ – ಕೆ ಎಸ್ ಈಶ್ವರಪ್ಪ

ಶಿವಮೊಗ್ಗ : ನಾನು ಶಿವಮೊಗ್ಗದಲ್ಲಿ ಯಾವುದೇ ಕಾರಣಕ್ಕೂ ಮುಸ್ಲೀಂ ಜನರ ಬಳಿ ಮತ ಕೇಳುವುದಿಲ್ಲವೆಂದು ಮಾಜಿ ಶಾಸಕ ಕೆ.ಎಸ್.ಈಶ್ವರಪ್ಪ ಗುಡುಗಿದ್ದಾರೆ. ಅವರು ತಮ್ಮ ಕಚೇರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿ, ಮುಸ್ಲೀಂ ಮತಗಳ ಮೇಲೆ ಬಿಜೆಪಿ ಅವಲಂಬಿತವಾಗಿಲ್ಲ. ನಾನಂತು ಯಾವುದೇ ಕಾರಣಕ್ಕೂ ಶಿವಮೊಗ್ಗದಲ್ಲಿ ಮುಸ್ಲೀಂ ಜನರ  ಮತವನ್ನ ಕೇಳೊಲ್ಲ. 60 ಬೂತ್ ಗಳಲ್ಲಿ ಮುಸ್ಲೀಂ ಮತಗಳು ಬಿದ್ದಿವೆ. ಆದರೆ ವಿರೋಧ ಪಕ್ಷಗಳು ಮುಸ್ಲೀಂ ಮತಗಳ ಮೇಲೆ ಕಣ್ಣಿಟ್ಟು ಅವರನ್ನ ಓಲೈಸುತ್ತಿದೆ. ಹಾಗಾಗಿ ಆರ್ ಎಸ್ ಎಸ್ ನ್ನ‌ ಬೈದರೆ…

Read More

ರಿಪ್ಪನ್ ಪೇಟೆ ಸಮೀಪ ಕ್ಯಾಂಟರ್ ಲಾರಿ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಯುವಕ ಸಾವು

ರಿಪ್ಪನ್‌ಪೇಟೆ :ಇಲ್ಲಿನ ಸಮೀಪದ ಮೂಗುಡ್ತಿ ಗ್ರಾಮದ ಕಣಬಂದೂರು ತಿರುವಿನಲ್ಲಿ ನಡೆದ ಕ್ಯಾಂಟರ್ ಲಾರಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಹೆದ್ದಾರಿಪುರದ ಪುನೀತ್ (25) ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಡೆದಿದೆ. ರಿಪ್ಪನ್‌ಪೇಟೆಯ ದೇವಿ ಕೋಳಿ ಫಾರಂನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪುನೀತ್  ರಾತ್ರಿ 9.30 ರ ವೇಳೆಗೆ ಹೆದ್ದಾರಿಪುರದ ಮನೆಗೆ ಹೋಗುವಾಗ ಮೂಗುಡ್ತಿಯ ಕಣಬಂದೂರು ತಿರುವಿನಲ್ಲಿ ಈ ಅವಘಡ ಸಂಭವಿಸಿದ್ದು ಸ್ಥಳದಲ್ಲೇ ಬೈಕ್ ಸವಾರ ಪುನೀತ್ ತಲೆ ಮೇಲೆ  ಕ್ಯಾಂಟರ್ ಲಾರಿ ಹರಿದ ಪರಿಣಾಮ ಮೃತಪಟ್ಟಿದ್ದಾನೆ….

Read More

ವಿದ್ಯಾರ್ಥಿಗಳಿಗೆ ಕಾನೂನಿನ ಅರಿವು ಬಹುಮುಖ್ಯವಾಗಿದೆ : ಡಿವೈಎಸ್ಪಿ ಗಜಾನನ ವಾಮನ ಸುತಾರ|Pu college

ವಿದ್ಯಾರ್ಥಿಗಳಿಗೆ ಕಾನೂನಿನ ಅರಿವು ಬಹುಮುಖ್ಯವಾಗಿದೆ : ಡಿವೈಎಸ್ಪಿ ಗಜಾನನ ವಾಮನ ಸುತಾರ ರಿಪ್ಪನ್‌ಪೇಟೆ : ಇಂದಿನ ಯುವ ಸಮೂಹ ಹಲವು ದುಶ್ಚಟಗಳಿಗೆ  ಮಾರುಹೋಗಿ  ತಮ್ಮ ಅಮೂಲ್ಯವಾದ ಶೈಕ್ಷಣಿಕ  ಭವಿಷ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ಕಾನೂನಿನ ಅರಿವು ಬಹು ಮುಖ್ಯವಾಗಿದೆ  ಎಂದು ತೀರ್ಥಹಳ್ಳಿ ಉಪವಿಭಾಗದ ಡಿವೈಎಸ್ಪಿ ಗಜಾನನ ವಾಮನ ಸುತಾರ ಹೇಳಿದರು. ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಕಾನೂನು ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು  ಇಂದಿನ ಯುವ ಪೀಳಿಗೆ  ಪೊಲೀಸ್ ಇಲಾಖೆಯ ನಿಯಮಾವಳಿಗಳನ್ನು ಪಾಲಿಸಿದರೆ…

Read More

ಕೋಣಂದೂರಿನ ಬಿಜೆಪಿ ಬೆಂಬಲಿತ ಸದಸ್ಯನ ದೌರ್ಜನ್ಯ ಖಂಡಿಸಿ ಕಿಮ್ಮನೆ ರತ್ನಾಕರ್ ನೇತ್ರತ್ವದಲ್ಲಿ ಸೋಮವಾರ ಪತಿಭಟನೆ : ಅಮ್ರಪಾಲಿ ಸುರೇಶ್

ತೀರ್ಥಹಳ್ಳಿ : ಗುರುವಾರ ಕೋಣಂದೂರು ಗ್ರಾಪಂ ಸಾಮಾನ್ಯ ಸಭೆಯಲ್ಲಿ ಕಾಂಗ್ರೆಸ್ ಬೆಂಬಲಿಗ ಸದಸ್ಯ ರವರ ಮೇಲೆ ಏಕಾಏಕಿ ಹಲ್ಲೆ ನಡೆಸಿರುವ ಬಿಜೆಪಿ ಬೆಂಬಲಿತ ಸದಸ್ಯ ಪೂರ್ಣೇಶ್ ಗ್ರಾಮ‌ ಪಂಚಾಯತ್ ಸದಸ್ಯತ್ವವನ್ನು  ರದ್ದುಗೊಳಿಸ ಬೇಕೆಂದು ಆಗ್ರಹಿಸಿ ಸೋಮವಾರ ದಿನಾಂಕ 17/01/2022 ರಂದು ಮಾಜಿ ಸಚಿವರಾದ  ಕಿಮ್ಮನೆ ರತ್ನಾಕರ್ ರವರ ನೇತೃತ್ವದಲ್ಲಿ ತಾಲ್ಲೂಕು ತಹಶಿಲ್ದಾರ್ ಕಚೇರಿ ಎದುರು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕಾಂಗ್ರೆಸ್ ಮುಖಂಡರಾದ ಅಮ್ರಪಾಲಿ ಸುರೇಶ್ ತಿಳಿಸಿದ್ದಾರೆ.             (…

Read More

ಮಾನವೀಯತೆ ಮರೆತಿದ್ದಾರೆ ಸಾಗರದ ಶಾಸಕರು: ಬೇಳೂರು ಗೋಪಾಲಕೃಷ್ಣ

ಆನಂದಪುರ:ಕಿಟ್ ಹಾಗೂ ಕೊರೊನಾ ಲಸಿಕೆ ನೀಡುವಲ್ಲಿ  ಸಾರ್ವಜನಿಕರಿಗೆ ವಂಚಿಸುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು ರವರು ಶಾಸಕ ಹರತಾಳು ಹಾಲಪ್ಪ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಸಾಗರ ತಾಲೂಕಿನ ಆನಂದಪುರದಲ್ಲಿ ಕಿಟ್ ನೀಡುವ ಸಭೆಯಲ್ಲಿ ಭಾಗವಹಿಸಿದಂತಹ ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರರಾದ ಗೋಪಾಲಕೃಷ್ಣ ಬೇಳೂರು ಕಾರ್ಯಕರ್ತರೊಂದಿಗೆ ಸಭೆ ನಡೆಸಿ ಸಾಗರದ ಶಾಸಕರು ಇದೀಗ ಮಾನವೀಯತೆಯನ್ನು ಮರೆತಿದ್ದಾರೆ ಕೇವಲ ತಮ್ಮ ಕಾರ್ಯಕರ್ತರಿಗೆ ಕಿಟ್ಟನ್ನು ನೀಡುವಲ್ಲಿ ಹಾಗೂ ಕೊರೋನಾ ಲಸಿಕೆ ಕೊಡಿಸುವತ್ತ ಗಮನ ಹರಿಸುತ್ತಿದ್ದಾರೆ ಇನ್ನುಳಿದ ಜನರು…

Read More