Headlines

ಉಚಿತ ಅಕ್ಕಿ ಹಂಚುವ ಬಗ್ಗೆ ಬಿಜೆಪಿಗೆ ಬೇಸರ: ಆಯನೂರು ಮಂಜುನಾಥ್ | Election

ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಪರ ಮತಯಾಚನೆ ಸಭೆ ಉಚಿತ ಅಕ್ಕಿ ಹಂಚುವ ಬಗ್ಗೆ ಬಿಜೆಪಿಗೆ ಬೇಸರ: ಆಯನೂರು ಮಂಜುನಾಥ ಶಿವಮೊಗ್ಗ: ರಾಜ್ಯ ಕಾಂಗ್ರೆಸ್‌ ಸರ್ಕಾರ ಬಡವರಿಗೆ ಉಚಿತವಾಗಿ ಅಕ್ಕಿ ಹಂಚುತ್ತದೆ ಎಂದು ಬಿಜೆಪಿಗರಿಗೆ ಬೇಸರವಿದೆ. ಅದೇ ಉದ್ದೇಶದಿಂದ ರಾಜ್ಯದ ಅನ್ನಭಾಗ್ಯ ಯೋಜನೆಗೆ ಅಗತ್ಯವಿರುವ ಅಕ್ಕಿಯನ್ನು ಕೇಂದ್ರ ಸರ್ಕಾರ ಒದಗಿಸಲಿಲ್ಲ ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ ದೂರಿದರು. ಶಿಕಾರಿಪುರ ತಾಲ್ಲೂಕಿನ ಬಗನಕಟ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಡಬ್ಬನ ಬೈರನಹಳ್ಳಿ ಗ್ರಾಮದಲ್ಲಿ ಗುರುವಾರ ಆಯೋಜಿಸಿದ್ದ ಕಾಂಗ್ರೆಸ್ ಅಭ್ಯರ್ಥಿ…

Read More

HOSANAGARA | ಚಿರತೆಯ ಮೃತದೇಹ ಪತ್ತೆ

A leopard’s dead body was found in village of Hosanagar taluk. Post-mortem revealed the leopard was around five years old, with a suspected natural death. ಹೊಸನಗರ ತಾಲೂಕಿನ ಯಡೂರು ಗ್ರಾಮದಲ್ಲಿ ಚಿರತೆಯೊಂದರ ಮೃತದೇಹ ಪತ್ತೆಯಾಗಿದೆ. ಅರಣ್ಯ ಸಿಬ್ಬಂದಿ ಗಸ್ತು ಕಾರ್ಯದಲ್ಲಿ ನಿರತರಾಗಿದ್ದ ವೇಳೆ ಈ ಘಟನೆ ಬೆಳಕಿಗೆ ಬಂದಿದೆ. ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಮೃತ ಚಿರತೆ ಸುಮಾರು ಐದು ವರ್ಷದ ಪ್ರಾಯದ್ದಾಗಿದ್ದು, ಮೇಲ್ನೋಟಕ್ಕೆ ಇದು ಸ್ವಾಭಾವಿಕ…

Read More

ಹಣದಾಸೆಗೆ ದೇವಸ್ಥಾನದಲ್ಲಿ ಭಿಕ್ಷೆ ಬೇಡುತಿದ್ದ ಅಜ್ಜಿಯ ಹತ್ಯೆ ಪ್ರಕರಣದ ಆರೋಪಿ ಜೈಲಿನಲ್ಲಿ ನೇಣು ಬಿಗಿದುಕೊಂಡು ಸಾವು|JAIL

ಶಿವಮೊಗ್ಗ : ಕೇಂದ್ರ ಕಾರಗೃಹದಲ್ಲಿ ವಿಚಾರಣಾಧೀನ ಕೈದಿ ಸೆಲ್ ನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.  ಕುಂದಾಪುರದ ಕರುಣಾಕರ ದೇವಾಡಿಗ(24) ನೇಣುಬಿಗಿದುಕೊಂಡು ಸಾವನ್ನಪ್ಪಿದ ಯುವಕ. ಇಂದು ಮುಂಜಾನೆ ಜೈಲಿನಲ್ಲಿ ತಿಂಡಿ ಕೊಡುವ ಹೊತ್ತಿನಲ್ಲಿಯೇ  ಕರುಣಾಕರ ಸೆಲ್ ನ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೈ ಉಜ್ಜುವ  ನಾರನ್ನೇ ಹಗ್ಗವನ್ನಾಗಿ ಮಾಡಿಕೊಂಡು ಕರುಣಾಕರ ನೇಣು ಹಾಕಿಕೊಂಡಿದ್ದಾನೆ ಎನ್ನಲಾಗಿದೆ. ದೇವಸ್ಥಾನದ ಮುಂದೆ ಭಿಕ್ಷೆ ಬೇಡುತಿದ್ದ ಅಜ್ಜಿಯನ್ನು ಹಣದಾಸೆಗೆ ಕೊಲೆ ಮಾಡಿದ್ದ ಕರುಣಾಕರ ದೇವಾಡಿಗ 2022 ರ ಡಿಸೆಂಬರ್ 3 ರಂದು‌…

Read More

ಶಿವಮೊಗ್ಗ ವಿಪ ಚುನಾವಣೆಯಲ್ಲಿ ಬಿಜೆಪಿ ಗೆಲುವು : ರಿಪ್ಪನ್ ಪೇಟೆಯಲ್ಲಿ ವಿಜಯೋತ್ಸವ

ರಿಪ್ಪನ್ ಪೇಟೆ : ಭಾರಿ ತೀವ್ರ ಕುತೂಹಲ ಕೆರಳಿಸಿದ್ದ ಶಿವಮೊಗ್ಗ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಡಿ ಎಸ್ ಅರುಣ್ ಭರ್ಜರಿ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಇಂದು ವಿನಾಯಕ ವೃತ್ತದಲ್ಲಿ ವಿಜಯೋತ್ಸವ ಆಚರಿಸಿ,ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರ ಮಿಸಿದರು. ಪಟ್ಟಣದ ವಿನಾಯಕ ವೃತ್ತದಲ್ಲಿ ಕಾರ್ಯಕರ್ತರು ಪ್ರಧಾನಿ ನರೇಂದ್ರಮೋದಿ, ರಾಷ್ಟ್ರಾಧ್ಯಕ್ಷ ಅಮಿತ್‌ಷಾ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ಕಟೀಲ್‌, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ,ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ,ಶಾಸಕ ಹರತಾಳು ಹಾಲಪ್ಪ ಅವರ ಪರ ಜೈಕಾರಗಳನ್ನು ಕೂಗುತ್ತಾ,ಪಟಾಕಿ ಸಿಡಿಸುವ ಮೂಲಕ…

Read More

ರಿಪ್ಪನ್‌ಪೇಟೆಯ ಜನಸ್ನೇಹಿ ಪಿಎಸ್‌ಐ ಪ್ರವೀಣ್ ಎಸ್ ಪಿ ವರ್ಗಾವಣೆ – ನೂತನ ಪಿಎಸ್‌ಐ ಯಾರು ಗೊತ್ತಾ..??ಈ ಸುದ್ದಿ ನೋಡಿ |PSI

ರಿಪ್ಪನ್‌ಪೇಟೆ : ಇಲ್ಲಿನ ಜನಸ್ನೇಹಿ ಪಿಎಸ್‌ಐ ಪ್ರವೀಣ್ ಎಸ್ ಪಿ ಯವರನ್ನು ದಾವಣಗೆರೆ ಜಿಲ್ಲೆಯ ನ್ಯಾಮತಿ ಪೊಲೀಸ್ ಠಾಣೆಗೆ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆಗೊಳಿಸಿ ಸ್ಥಳ ನಿಯುಕ್ತಿಗೊಳಿಸಲಾಗಿದೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ ಬಂಕಾಪುರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ನಿಂಗಪ್ಪ ಕರಕಣ್ಣನವರ ರವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆಗೊಳಿಸಿ ಸ್ಥಳ ನಿಯುಕ್ತಿಗೊಳಿಸಲಾಗಿದೆ. ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಈ ಪ್ರಕ್ರಿಯೆ ನಡೆದಿದ್ದು ಚುನಾವಣೆ ನಂತರ ಮರು ವರ್ಗಾವಣೆಯಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಲೋಕಸಭಾ ಚುನಾವಣೆ-2024 ಕ್ಕೆ ಸಂಬಂದಿಸಿದಂತೆ ಉಲ್ಲೇಖ [1] ರ ಮಾನ್ಯ…

Read More

ಹಲ್ಲೆಗೊಳಗಾಗಿದ್ದ ಅಮ್ಜದ್ ಚಿಕಿತ್ಸೆ ಫಲಿಸದೇ ಸಾವು | ಪೊಲೀಸರ ರಾ ಏಜೆಂಟ್ ಕೊಲೆಗೆ ಕಾರಣವೇನು..!!??

ಅಮ್ಜದ್ ಅಪರಾಧ ಲೋಕದ ನಡುವೆ ಬದುಕುತ್ತಿದ್ದ, ಆದರೆ ಕಾನೂನಿನ ಬದಿಯಲ್ಲಿದ್ದ. ಹೊರಗಿನ ಕಣ್ಣಿಗೆ ಇಸ್ಪೀಟು ದಂಧೆಗಾರ, ಪೊಲೀಸರ ದೃಷ್ಟಿಗೆ ರಾ ಏಜೆಂಟ್! ಇದೇ ಅಮ್ಜದ್‌ನ ನಿಜವಾದ ಚಿತ್ರ. ಶಿವಮೊಗ್ಗ ನಗರದ ಗಲಭೆ, ಕೊಲೆ, ಕ್ರೈಂ ಎಂಬ ಎಲ್ಲ ಕಥೆಗಳಲ್ಲಿ ಅಜ್ಞಾತವಾಗಿ ಭಾಗಿಯಾಗಿದ್ದ ಈ ವ್ಯಕ್ತಿ, ಇನ್ನು ಇಹಲೋಕದಲ್ಲಿಲ್ಲ. ಪೊಲೀಸರ ನಂಬಿಕೆಯ “ರಹಸ್ಯ ಹಸ್ತ” ಅಮ್ಜದ್ ಹೆಸರು ಕೇಳಿದರೆ ಕ್ರೈಂ ಲೋಕದವರು ನಡುಗುತ್ತಿದ್ದರು. ಆದರೆ ಪೊಲೀಸರ ಕಚೇರಿಯಲ್ಲಿ ಅವನು “ಅವಶ್ಯಕ ಮಾಹಿತಿ ಮೂಲ” ಆಗಿದ್ದ. ರಾಜ್ಯದ 500ಕ್ಕೂ ಹೆಚ್ಚು…

Read More

ಪಿಯುಸಿ ಫಲಿತಾಂಶ ಪ್ರಕಟ – ಉಡುಪಿ ಪ್ರಥಮ , ಯಾದಗಿರಿ ಲಾಸ್ಟ್ ,ಶಿವಮೊಗ್ಗಕ್ಕೆ ಏಳನೇ ಸ್ಥಾನ

ಪಿಯುಸಿ ಫಲಿತಾಂಶ ಪ್ರಕಟ – ಉಡುಪಿ ಪ್ರಥಮ , ಯಾದಗಿರಿ ಲಾಸ್ಟ್ ,ಶಿವಮೊಗ್ಗಕ್ಕೆ ಏಳನೇ ಸ್ಥಾನ ಬೆಂಗಳೂರು: 2025ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಮಂಗಳವಾರ ಪ್ರಕಟಗೊಂಡಿದೆ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಬೆಂಗಳೂರಿನಲ್ಲಿಂದು ಫಲಿತಾಂಶದ ವಿವರ ನೀಡಿದರು. ಈ ಬಾರಿ ಶೇಕಡಾ 93.90 ಫಲಿತಾಂಶ ಗಳಿಸಿ ಉಡುಪಿ ಜಿಲ್ಲೆ ಪ್ರಥಮ, ಶೇಕಡಾ 48.45 ಫಲಿತಾಂಶದೊಂದಿಗೆ ಯಾದಗಿರಿ ಜಿಲ್ಲೆ ಕೊನೆಯ ಸ್ಥಾನ ಗಳಿಸಿದೆ. ದಕ್ಷಿಣ ಕನ್ನಡ ಜಿಲ್ಲೆ ಎರಡನೇ ಸ್ಥಾನ…

Read More

ನಾನು ಸಚಿವ ಸ್ಥಾನದ ಆಕಾಂಕ್ಷಿ,ಸಚಿವ ಸ್ಥಾನ ಕೊಟ್ಟರೆ ಉತ್ತಮವಾಗಿ ನಿರ್ವಹಿಸುವ ಸಾಮರ್ಥ್ಯ ನನ್ನಲ್ಲಿದೆ : ಶಾಸಕ ಹರತಾಳು ಹಾಲಪ್ಪ

ರಿಪ್ಪನ್ ಪೇಟೆ: ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಆಯ್ಕೆಯಾಗಿದ್ದಾರೆ ಸಚಿವ ಸಂಪುಟದ ವಿಸ್ತರಣೆಯತ್ತ ಇದೀಗ ಎಲ್ಲರ ಚಿತ್ತ ಮೂಡುತ್ತಿದೆ.ಯಾರು ಯಾರಿಗೆ ಮಂತ್ರಿ ಸ್ಥಾನ ಒಲಿಯಲಿದೆ ಎಂಬುದು ಇದೀಗ ಎಲ್ಲರಲ್ಲೂ ಕಾಡುತ್ತಿರುವಂತಹ ಕುತೂಹಲ ಯಾವುದೇ ಶಾಸಕರನ್ನು ವಿಚಾರಿಸಿದಾಗ ನಾವು ಮಂತ್ರಿಯಾಗುವ ಆಸೆ ಹೊಂದಿದ್ದೇವೆ ಅವಕಾಶವೂ ಸಿಗುವ ಸಾಧ್ಯತೆಗಳು ಹೆಚ್ಚಿದೆ ಎಂದು ಹೇಳುವುದು ಇದೀಗ ಸಹಜವಾಗಿದೆ.   ಜಿಲ್ಲೆಯ ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಹರತಾಳು ಹಾಲಪ್ಪನವರು ಹೊಸನಗರ ತಾಲ್ಲೂಕಿನ ಅರಸಾಳು ಗ್ರಾಮದಲ್ಲಿ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ …

Read More

ಅನಂದಪುರದಲ್ಲಿ ಭರ್ಜರಿಯಾಗಿ ಆರಂಭಗೊಂಡ ಕಾಂಗ್ರೆಸ್ ಸದಸ್ಯತ್ವ ಅಭಿಯಾನ !!

ರಾಜ್ಯಾದ್ಯಂತ ಇಂದು ಡಿಕೆ ಶಿವಕುಮಾರ್ ಅವರ ಮುಂದಾಳತ್ವದಲ್ಲಿ ಕಾಂಗ್ರೆಸ್ ಸದಸ್ಯತ್ವ ಅಭಿಯಾನವನ್ನು ಪ್ರಾರಂಭ ಮಾಡಲಾಗಿದೆ. ಜೂಮ್ ಆ್ಯಪ್ ನ ಮೂಲಕ ಇದೀಗ ಕಾಂಗ್ರೆಸ್ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಾಗಿದ್ದು ರಾಜ್ಯಾದ್ಯಂತ ಯುವ ಪೀಳಿಗೆಯನ್ನು ಸೆಳೆಯುವ ಉದ್ದೇಶದಿಂದ ಭರ್ಜರಿಯಾಗಿ ಇಂದಿನಿಂದ ಕಾಂಗ್ರೆಸ್ ಸದಸ್ಯತ್ವ ಅಭಿಯಾನವನ್ನು ಚಾಲನೆ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಆನಂದಪುರದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಡಾಕ್ಟರ್  ರಾಜ ನಂದಿನಿ. ಪ್ರಧಾನ ಕಾರ್ಯದರ್ಶಿಯಾದ ಅಘ ಸುಲ್ತಾನ್ ಹಾಗೂ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ರತ್ನಾಕರ…

Read More

ಶಿವಮೊಗ್ಗ | ಧರ್ಮ ಕೇಳಿ ವ್ಯಾಪಾರಿಯ ಮೇಲೆ ಹಲ್ಲೆ ಕೇಸ್‌ ಗೆ ಬಿಗ್ ಟ್ವಿಸ್ಟ್‌!

ಶಿವಮೊಗ್ಗ | ಧರ್ಮ ಕೇಳಿ ವ್ಯಾಪಾರಿಯ ಮೇಲೆ ಹಲ್ಲೆ ಕೇಸ್‌ ಗೆ ಬಿಗ್ ಟ್ವಿಸ್ಟ್‌ ಶಿವಮೊಗ್ಗದಲ್ಲಿ ಪಾತ್ರೆ ವ್ಯಾಪಾರಿ ಹರೀಶ್​​ ಮೇಲೆ ಜಾತಿ ಕೇಳಿ ಹಲ್ಲೆ(assault) ನಡೆಸಿದ ಆರೋಪ ಪ್ರಕರಣಕ್ಕೆ ಟ್ವಿಸ್ಟ್​ ಸಿಕ್ಕಿದೆ. ಹರೀಶ್ ಮೇಲಿನ ಪ್ರಕರಣವು ಕೋಮು ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಘಟನೆ ಸಂಬಂಧ ಅರ್ಮಾನ (21), ನಿರಂಜನ್ (20) ಮತ್ತು ಓರ್ವ ಅಪ್ರಾಪ್ತ ಸೇರಿ ಮೂವರನ್ನು ಬಂಧಿಸಲಾಗಿದೆ. ಆ ಬೆನ್ನಲ್ಲೇ ಹಲ್ಲೆ ನಡೆಸಿರೋದು ಅನ್ಯಕೋಮಿನ ಯುವಕರು ಮಾತ್ರವಲ್ಲ, ಗ್ಯಾಂಗ್​​ನಲ್ಲಿ ಹಿಂದೂಗಳು ಇದ್ದರು ಎಂಬ ವಿಷಯ ಬೆಳಕಿಗೆ…

Read More