ಗ್ರಾಮ ಲೆಕ್ಕಾಧಿಕಾರಿ ವರ್ಷಿಣಿ ರವರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ :

ರಿಪ್ಪನ್ ಪೇಟೆ ನಾಡಕಚೇರಿಯಲ್ಲಿ ಗ್ರಾಮಲೆಕ್ಕಾಧಿಕಾರಿಯಾಗಿ ಕೆಂಚನಾಲ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವರ್ಷಿಣಿ ರವರು ವರ್ಗಾವಣೆಗೊಂಡಿರುವ ಹಿನ್ನೆಲೆಯಲ್ಲಿ ಕೆಂಚನಾಲ ಗ್ರಾಮ ಪಂಚಾಯಿತ್ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು. ವರ್ಷಿಣಿ ರವರು ಕಳೆದ 6 ವರ್ಷಗಳಿಂದ ಕೆಂಚನಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗ್ರಾಮಲೆಕ್ಕಿಗರಾಗಿ ಕಾರ್ಯನಿರ್ವಹಿಸುತ್ತಿದ್ದು ಇದೀಗ ತೀರ್ಥಹಳ್ಳಿ ತಾಲ್ಲೂಕಿನ ಮಂಡಗದ್ದೆ ಗ್ರಾಮಕ್ಕೆ ವರ್ಗಾವಣೆಗೊಂಡಿದ್ದಾರೆ. ಇವರ ಅನುಪಮ ಸೇವೆ ಹಾಗೂ ಕರ್ತವ್ಯಕ್ಕೆ ಗೌರವಸೂಚಕವಾಗಿ ಇಲ್ಲಿನ ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಹಾಗೂ ಅಧಿಕಾರಿ ವರ್ಗದವರು ಇಂದು ವರ್ಷಿಣಿ ರವರಿಗೆ ಸನ್ಮಾನಿಸಿ ಗೌರವಯುತವಾಗಿ ಬೀಳ್ಕೊಟ್ಟಿದ್ದಾರೆ. ಈ…

Read More

ಸೈಕಲ್‌ಗೆ ಡಿಕ್ಕಿ ಹೊಡೆದ ಟಿಪ್ಪರ್ ಲಾರಿ :ಬಾಲಕ ಸ್ಥಳದಲ್ಲಿಯೇ ಸಾವು

ಸೊರಬ : ಸೈಕಲ್ ಗೆ ಯಮಸ್ವರೂಪಿ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಬಾಲಕನೊಬ್ಬ ಸ್ಥಳದಲ್ಲಿ ಮೃತಪಟ್ಟ ಘಟನೆ ತಾಲೂಕಿನ ಚಂದ್ರಗುತ್ತಿ ಸಮೀಪದ ತೋರಗೊಂಡನಕೊಪ್ಪ ಗ್ರಾಮದಲ್ಲಿ ಶನಿವಾರ ನಡೆದಿದೆ. ಕಾನುಗೋಡು ಗ್ರಾಮದ ಜೀವ (13) ಮೃತ ದುರ್ದೈವಿ. ಸಿದ್ದಾಪುರದಿಂದ ಚಂದ್ರಗುತ್ತಿಯಡೆಗೆ ತೆರಳುತ್ತಿದ್ದ ಯಮ ಸ್ವರೂಪಿ ಟಿಪ್ಪರ್ ಸೈಕಲ್ ಗೆ ಡಿಕ್ಕಿ ಹೊಡೆದಿದ್ದು ಅಪಘಾತದ ರಭಸಕ್ಕೆ ಸೈಕಲ್ ನಲ್ಲಿದ್ದ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸೈಕಲ್ ಸವಾರ ಕಾನುಗೋಡು ಗ್ರಾಮದ ಸಂದೀಪ (32) ಎಂಬ ವ್ಯಕ್ತಿಯು ತೀವ್ರವಾಗಿ ಗಾಯಗೊಂಡಿದ್ದು, ಸಿದ್ದಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ….

Read More

ಮಹಾನವಮಿ ಪೂಜೆ, ಉತ್ಸವ | ನವಧಾ ಭಕ್ತಿ ಸಮರ್ಪಣೆಯಿಂದ ನವಚೈತನ್ಯ ; ಹೊಂಬುಜ ಶ್ರೀ

ಮಹಾನವಮಿ ಪೂಜೆ, ಉತ್ಸವ | ನವಧಾ ಭಕ್ತಿ ಸಮರ್ಪಣೆಯಿಂದ ನವಚೈತನ್ಯ ; ಹೊಂಬುಜ ಶ್ರೀ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಭಕ್ತವೃಂದದವರ ಭಾಗವಹಿಸುವಿಕೆಯಿಂದ ಅತಿಶಯ ಶ್ರೀಕ್ಷೇತ್ರ ಹೊಂಬುಜ ಶ್ರೀ 1008 ಪಾರ್ಶ್ವನಾಥ ತೀರ್ಥಂಕರ ಹಾಗೂ ಜಗನ್ಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಒಂಬತ್ತು ದಿವಸಗಳಲ್ಲಿ ಶರನ್ನವರಾತ್ರಿ ಪೂಜೆ, ಉತ್ಸವಗಳು ನೆರವೇರಿದವು. ಹೊಂಬುಜ ಶ್ರೀ ಜೈನ ಮಠದ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳವರ ದಿವ್ಯ ಸಾನಿಧ್ಯ, ನೇತೃತ್ವ ಹಾಗೂ ಮಾರ್ಗದರ್ಶನದಲ್ಲಿ ಜಿನಾಗಮೋಕ್ತ ಶಾಸ್ತ್ರದನ್ವಯ…

Read More

ಉರುಳಿಗೆ ಸಿಲುಕಿ ಚಿರತೆ ಸಾವು

ಉರುಳಿಗೆ ಸಿಲುಕಿ ಚಿರತೆ ಸಾವು ಶಿವಮೊಗ್ಗ: ಅರಣ್ಯದ ಅಂಚಿನಲ್ಲಿ ಅಕ್ರಮವಾಗಿ ಹಾಕಲಾಗಿದ್ದ ಪ್ರಾಣಿಹಿಡಿಯುವ ಉರುಳಿಗೆ ಸಿಲುಕಿ ಚಿರತೆಯೊಂದು ಮೃತಪಟ್ಟಿರುವ ಘಟನೆ ಶಿರಾಳಕೊಪ್ಪ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ. ತಾಳಗುಂದ ರಾಜ್ಯ ಅರಣ್ಯ ಪ್ರದೇಶಕ್ಕೆ ಸೇರುವ ಖಾಸಗಿ ಜಮೀನಿನ ಅಂಚಿನಲ್ಲಿರುವ ಕಾಡಿನ ದಾರಿಯಲ್ಲಿ ಈ ಉರುಳು ಅಳವಡಿಸಲಾಗಿದೆ ಎಂದು ಅರಣ್ಯ ಇಲಾಖೆ ಪ್ರಾಥಮಿಕ ಅಂದಾಜು ವ್ಯಕ್ತಪಡಿಸಿದೆ. ಕೆಲವು ದಿನಗಳಿಂದ ದುರ್ವಾಸನೆ ಕಾಣುತ್ತಿದ್ದ ಹಿನ್ನೆಲೆಯಲ್ಲಿ ಸ್ಥಳೀಯರು ಪರಿಶೀಲನೆ ನಡೆಸಿದಾಗ, ಉರುಳಿಗೆ ಸಿಲುಕಿ ಕೊಳೆತ ಸ್ಥಿತಿಯಲ್ಲಿ ಮಲಗಿದ್ದ ಚಿರತೆಯ ದೇಹ ಕಣ್ಣಿಗೆ ಬಿದ್ದಿದೆ….

Read More

ಆನಂದಪುರ ಪೊಲೀಸ್ ಠಾಣೆಯ ಪಿಎಸ್‌ಐ ಆಗಿ ಪ್ರವೀಣ್ ಎಸ್ ಪಿ ಅಧಿಕಾರ ಸ್ವೀಕಾರ

ಆನಂದಪುರ ಪೊಲೀಸ್ ಠಾಣೆಯ ಪಿಎಸ್‌ಐ ಆಗಿ ಪ್ರವೀಣ್ ಎಸ್ ಪಿ ಅಧಿಕಾರ ಸ್ವೀಕಾರ ಆನಂದಪುರ : ಪಟ್ಟಣದ ಪೊಲೀಸ್ ಠಾಣೆಯ ನೂತನ ಪಿಎಸ್‌ಐ ಆಗಿ ಇತ್ತೀಚೆಗೆ ವರ್ಗಾವಣೆಗೊಂಡ ಪಿಎಸ್‌ಐ ಪ್ರವೀಣ್ ಎಸ್ ಪಿ ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಜೂನ್ 07 ರಂದು ಶಿವಮೊಗ್ಗ ಜಿಲ್ಲೆಯ ವಿವಿಧ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆಗೊಳಿಸಿ ಪೂರ್ವ ವಲಯ ಪೊಲೀಸ್ ಮಹಾನಿರೀಕ್ಷಕರಾದ ಬಿ ಆರ್ ರವಿಕಾಂತೇ ಗೌಡ ಆದೇಶ ಹೊರಡಿಸಿದ್ದರು ಸದರಿ ಆದೇಶದಂತೆ ರಿಪ್ಪನ್ ಪೇಟೆ ಠಾಣೆಯಲ್ಲಿ ಕಾರ್ಯನಿರ್ವಹಿಸುತಿದ್ದ…

Read More

ವೈನ್ ಶಾಪ್ ನಲ್ಲಿ ಎಣ್ಣೆ ಸಾಲ ಕೊಡಲಿಲ್ಲವೆಂದು ರಸ್ತೆ ತಡೆ ನಡೆಸಿದ ಯುವಕ – ಹೀಗೊಂದು ಕುಡುಕನ ಕಿರಿಕ್ , ವೀಡಿಯೋ ವೈರಲ್ | Viral video

ವೈನ್ ಶಾಪ್ ನಲ್ಲಿ ಎಣ್ಣೆ ಸಾಲ ಕೊಡಲಿಲ್ಲವೆಂದು ರಸ್ತೆ ತಡೆ ನಡೆಸಿದ ಯುವಕ – ಹೀಗೊಂದು ಕುಡುಕನ ಕಿರಿಕ್ , ವೀಡಿಯೋ ವೈರಲ್ |  ವೈನ್ ಶಾಪ್ ನಲ್ಲಿ ಎಣ್ಣೇ ಸಾಲ ಕೊಟ್ಟಿಲ್ಲ ಎಂದು ಯುವಕನೊಬ್ಬ ನಡುರೋಡ್‌ನಲ್ಲಿ ಛತ್ರಿ ಹಿಡಿದು ರಸ್ತೆತಡೆಯನ್ನೆ ನಡೆಸಿರುವ ವಿಚಿತ್ರ ಘಟನೆಯೊಂದು ಶಿವಮೊಗ್ಗದ ಎನ್ ಟಿ ರಸ್ತೆಯಲ್ಲಿ ನಡೆದಿದೆ. ಶಿವಮೊಗ್ಗದ ಹೊಸ ತೀರ್ಥಹಳ್ಳಿ(NT) ರೋಡ್‌ನಲ್ಲಿರುವ ಮದ್ಯದಂಗಡಿಗೆ ತೆರಳಿದ ಯುವಕನೊಬ್ಬ ಎಣ್ಣೆ ಕೊಡಿ ಆದರೆ ದುಡ್ಡು ಇಲ್ಲ ಅಂದಿದ್ದಾನೆ. ಹಣ ಕೊಡದೇ ಹೇಗಪ್ಪ ಎಣ್ಣೆ…

Read More

ರಿಪ್ಪನ್ ಪೇಟೆ ಪ್ರೌಡಶಾಲೆಯಲ್ಲಿ 97-98 ನೇ ಸಾಲಿನ ವಿದ್ಯಾರ್ಥಿಗಳಿಂದ ಸ್ನೇಹ ಸಮ್ಮಿಲನ , ಗುರುವಂದನಾ ಕಾರ್ಯಕ್ರಮ

ರಿಪ್ಪನ್ ಪೇಟೆ ಪ್ರೌಡಶಾಲೆಯಲ್ಲಿ 97-98 ನೇ ಸಾಲಿನ ವಿದ್ಯಾರ್ಥಿಗಳಿಂದ ಸ್ನೇಹ ಸಮ್ಮಿಲನ , ಗುರುವಂದನಾ ಕಾರ್ಯಕ್ರಮ ರಿಪ್ಪನ್ ಪೇಟೆ : ಇಲ್ಲಿನ ಸರಕಾರಿ ಪ್ರೌಢ ಶಾಲೆಯಲ್ಲಿ 1997 – 98 ನೇ ಸಾಲಿನ SSLC ವಿದ್ಯಾರ್ಥಿಗಳಿಂದ ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮವನ್ನು ನಿವೃತ ಶಿಕ್ಷಕರಾದ ಬಿ ನಾರಾಯಣಪ್ಪ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ನಂತರ ಮಾತನಾಡಿ 28 ವರ್ಷದ ಹಿಂದೆ ನಾವು ವಿದ್ಯಾಬ್ಯಾಸ ನೀಡಿದ್ದ ವಿದ್ಯಾರ್ಥಿಗಳು ಇವತ್ತು ಇಷ್ಟು ಎತ್ತರ ಮಟ್ಟಿಗೆ…

Read More

ನಕಲಿ ದಾಖಲೆ ಸೃಷ್ಠಿಸುತ್ತಿದ್ದ ವ್ಯಕ್ತಿಯ ಮನೆಯಲ್ಲಿ 48 ನಕಲಿ ಸೀಲ್, ನೂರಾರು ನಕಲಿ ಹಕ್ಕುಪತ್ರ ಪತ್ತೆ, ಆರೋಪಿ ವಿರುದ್ಧ ಪ್ರಕರಣ

ನಕಲಿ ದಾಖಲೆ ಸೃಷ್ಠಿಸುತ್ತಿದ್ದ ವ್ಯಕ್ತಿಯ ಮನೆಯಲ್ಲಿ 48 ನಕಲಿ ಸೀಲ್, ನೂರಾರು ನಕಲಿ ಹಕ್ಕುಪತ್ರ ಪತ್ತೆ, ಆರೋಪಿ ವಿರುದ್ಧ ಪ್ರಕರಣ ಹೊಸನಗರ; ನಕಲಿ ಹಕ್ಕುಪತ್ರ ತಯಾರಿಸಿ, ಜನರನ್ನು ವಂಚಿಸುತ್ತಿದ್ದ ಪ್ರಕರಣವೊಂದನ್ನು ತಹಸೀಲ್ದಾರ್ ಎಚ್.ಜೆ.ರಶ್ಮಿ ಬೇಧಿಸಿದ್ದಾರೆ. ಹೊಸನಗರ ತಾಲೂಕಿನ ಜಯನಗರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್.ಗುಡ್ಡೆಕೊಪ್ಪದ ರಾಜೇಂದ್ರ ಎಂಬಾತ ನಕಲಿ ಹಕ್ಕುಪತ್ರ ಹಾಗು ಸರಕಾರಿ ದಸ್ತಾವೇಜುಗಳ ನಕಲಿ ದಾಖಲೆ ಸೃಷ್ಠಿಸಿ ಮಾರುತ್ತಿರುವ ಕುರಿತು ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಸೋಮವಾರ ತಹಸೀಲ್ದಾರ್ ನೇತೃತ್ವದ ಅಧಿಕಾರಿಗಳ ತಂಡ ದಾಳಿ ನಡೆಸಿದರು….

Read More

ಕೆಂಚನಾಲ ಗ್ರಾಮದಲ್ಲಿ ರೈಲು ನಿಲುಗಡೆಗೆ ಆಗ್ರಹಿಸಿ ಮನವಿ::

ರಿಪ್ಪನ್ ಪೇಟೆ: ಕೆಂಚನಾಲ ರೈಲ್ವೆ ನಿಲ್ದಾಣದಲ್ಲಿ ಮೈಸೂರು-ಬೆಂಗಳೂರು- ಶಿವಮೊಗ್ಗ- ತಾಳಗುಪ್ಪ ಪ್ಯಾಸೆಂಜರ್ ರೈಲು ನಿಲ್ದಾಣಕ್ಕೆ ಆಗ್ರಹಿಸಿ ಮಾನ್ಯ ಸಂಸದರಾದ ಬಿ ವೈ ರಾಘವೇಂದ್ರ ಹಾಗೂ ಶಾಸಕ ಮತ್ತು MSIL ಅಧ್ಯಕ್ಷರಾದ ಶ್ರೀ ಹರತಾಳು ಹಾಲಪ್ಪ ನವರಿಗೆ ಮಾಜಿ ಶಾಸಕರಾದ ಬಿ ಸ್ವಾಮಿರಾವ್ ಮತ್ತು ತಾಪಂ ಮಾಜಿ ಅಧ್ಯಕ್ಷರಾದ ವೀರೇಶ್ ಆಲುವಳ್ಳಿ ರವರ ನೇತೃತ್ವದಲ್ಲಿ ಸಾರ್ವಜನಿಕರೊಂದಿಗೆ ಮನವಿ ಪತ್ರ ಸಲ್ಲಿಸಿದರು. ಈ ಕುರಿತು ರಿಪ್ಪನ್ ಪೇಟೆ ಸಭಾಭವನದಲ್ಲಿ ಪತ್ರೀಕಾಗೋಷ್ಟಿ ನಡೆಸಿ ಮಾತನಾಡಿದ ಮಾಜಿ ಶಾಸಕರಾದ ಬಿ ಸ್ವಾಮಿರಾವ್ ರವರು…

Read More

ಕಲಿಕಾ ಹಬ್ಬವು ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಸಹಕಾರಿ|GJC

ರಿಪ್ಪನ್ ಪೇಟೆ : ಮಕ್ಕಳ ಕಲಿಕೆ ಮೇಲೆ ಕೊರೊನಾ ಮಹಾಮಾರಿಯಿಂದ ದುಷ್ಪಪರಿಣಾಮ ಉಂಟಾಗಿತ್ತು. ಕಲಿಕೆಯನ್ನು ಫಲಪ್ರದಗೊಳಿಸಲು ಶಿಕ್ಷಣ ಇಲಾಖೆಯ ಅನೇಕ ಯೋಜನೆಗಳನ್ನು ಹಾಕಿಕೊಳ್ಳುವ ಮೂಲಕ ಶೈಕ್ಷಣಿಕ ಕಾರ್ಯ ಚಟುವಟಿಕೆಗಳನ್ನು ನೂತನ ಶೈಲಿಯಲ್ಲಿ ರೂಪಿಸುತ್ತಾ ಬಂದಿದೆ. ಸದ್ಯ ಕಲಿಕಾ  ಹಬ್ಬ ಯೋಜನೆ ರೂಪಿಸುವ ಮೂಲಕ ಮಕ್ಕಳ ಕಲಿಕೆ ಸಹಾಯಕವಾಗುವ ನಿಟ್ಟಿನಲ್ಲಿ ಕಾರ್ಯ ಯೋಜನೆ ಹಮ್ಮಿಕೊಂಡಿದೆ ಎಂದು ಶಿವಮೊಗ್ಗ ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ಪರಮೇಶ್ವರಪ್ಪ ಹೇಳಿದರು. ಪಟ್ಟಣದ ಸರ್ಕಾರಿ ಪಿಯು ಕಾಲೇಜಿನ ಪ್ರೌಢ ಶಾಲೆಯಲ್ಲಿ…

Read More