ಲೋಕಾಯುಕ್ತದ ಪವರ್ ತೋರಿಸಿದ್ದ ಎನ್ ವೆಂಕಟಾಚಲ ನಿಧನ :
ಬೆಂಗಳೂರು: ಲೋಕಾಯುಕ್ತ ಸಂಸ್ಥೆಯ ಅಧಿಕಾರವನ್ನು ಜನಪರವಾಗಿ ಬಳಸಿ, ‘ಲೋಕಾಯುಕ್ತರು ಹೀಗೂ ಕೆಲಸ ಮಾಡಬಹುದು’ ಎಂದು ಸಾಧಿಸಿ ತೋರಿಸಿದ ನ್ಯಾಯಮೂರ್ತಿ ಎನ್.ವೆಂಕಟಾಚಲ (90) ಬುಧವಾರ ಬೆಳಿಗ್ಗೆ 6 ಗಂಟೆಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಪತ್ನಿ, ಮೂವರು ಪುತ್ರರು ಮತ್ತು ಓರ್ವ ಪುತ್ರಿಯನ್ನು ಅಗಲಿದ್ದಾರೆ. ನ್ಯಾಯಮೂರ್ತಿ ವೆಂಕಟಾಚಲ ಅವರು ಲೋಕಾಯುಕ್ತರಾಗಿ ನೇಮಕಗೊಂಡ ನಂತರವೇ ಸರ್ಕಾರಿ ಅಧಿಕಾರಿಗಳಲ್ಲಿ ಲೋಕಾಯುಕ್ತ ಭಯವನ್ನು ಉಂಟು ಮಾಡಿತು. ಲೋಕಾಯುಕ್ತ ಸಂಸ್ಥೆಯಿಂದ ತಮ್ಮ ನೋವುಗಳಿಗೆ ಪರಿಹಾರ ಸಿಗುತ್ತದೆ ಎಂಬ ಭಾವನೆ ಜನರಲ್ಲಿಯೂ ಬಂತು. ‘ಬಳ್ಳಾರಿ ರಸ್ತೆಯ…