ಅಧಿಕಾರ ಕಳೆದುಕೊಂಡು ಹಪಹಪಿಸುತ್ತಿರುವ ಕಾಂಗ್ರೆಸ್ ತಿರುಕನ ಕನಸು ಕಾಣುತ್ತಿದೆ : ಬಿ ವೈ ವಿಜಯೇಂದ್ರ

ಶಿವಮೊಗ್ಗ : ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾದ ಮೇಲೆ ಭಾರತದಲ್ಲಿ ಬದಲಾವಣೆಯ ಪರ್ವ ಆರಂಭವಾಗಿದೆ. ಅವರ ಜನಪ್ರಿಯತೆ ಸಹಿಸದ ಕಾಂಗ್ರೆಸ್ ಅನಗತ್ಯ ಟೀಕೆ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಣ್ಣಿಸಿದರು.  ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮೋದಿ ಅವರ 71ನೇ ಜನ್ಮದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಪಕ್ಷದ ವಿಶೇಷ ಕಾರ್ಯಕಾರಿಣಿ ಉದ್ಘಾಟಿಸಿ ಅವರು ಮಾತನಾಡಿದರು. ಮೋದಿ ಅವರು ದೇಶದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ. ರಾಮ ಮಂದಿರ ನಿರ್ಮಾಣ, ಕಾಶ್ಮೀರದಲ್ಲಿ ಉಗ್ರರರನ್ನು ಮಣಿಸಿದರು. 370ನೇ…

Read More

ಶಿವಮೊಗ್ಗ : ನಡುರಾತ್ರಿ ಮೂವರು ದುಷ್ಕರ್ಮಿಗಳಿಂದ ಯುವಕನ ಬರ್ಬರ ಹತ್ಯೆ

ಶಿವಮೊಗ್ಗ : ನಗರದಲ್ಲಿ ನಡುರಾತ್ರಿ ವ್ಯಕ್ತಿಯೊಬ್ಬನನ್ನ ಬರ್ಬರವಾಗಿ ಹತ್ಯೆ ಮಾಡಲಾಗಿದೆ.ಜೈನುದ್ದೀನ್ (23) ಎಂಬ ರೌಡಿಶೀಟರ್ ನನ್ನು ದುಷ್ಕರ್ಮಿಗಳು ನಿನ್ನೆ ರಾತ್ರಿ 12ರ ಸಮಯದಲ್ಲಿ ನಗರದ ವಾದಿ-ಎ ಹುದಾ ಬಡಾವಣೆಯಲ್ಲಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಇತ್ತೀಚೆಗಷ್ಟೇ ವಾದಿ-ಎ ಹುದಾ ಬಡಾವಣೆಗೆ ಜೈನುದ್ದೀನ್ ಸ್ಥಳಾಂತರಗೊಂಡಿದ್ದ. ಜೈನುದ್ದೀನ್ ಮನೆಯ ಬಳಿ ನಿಂತು ಮಾತನಾಡುತ್ತಿದ್ದಾಗ ಮೂರು ಜನ ದುಷ್ಕರ್ಮಿಗಳು ಏಕಾಏಕಿ ಬಂದು ಲಾಂಗ್, ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ. ದಾಳಿಯಿಂದಾಗಿ ಜೈನುದ್ದಿನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಅಥವಾ ಯಾವ ಕಾರಣಕ್ಕಾಗಿ ಈ…

Read More

ಅಂತರ್ ಜಿಲ್ಲಾ ಬೈಕ್ ಕಳ್ಳರ ಹೆಡೆಮುರಿ ಕಟ್ಟಿದ ಸಾಗರದ ಪೊಲೀಸರು : ಮೂವತ್ತು ಲಕ್ಷಕ್ಕೂ ಅಧಿಕ ಮೌಲ್ಯದ ಬೈಕ್ ಗಳು ವಶ

ಶಿವಮೊಗ್ಗ ಜಿಲ್ಲೆ ಸಾಗರ ಪೋಲಿಸರ ಚಾಣಾಕ್ಷತನದಿಂದ ಅಂತರ್ ಜಿಲ್ಲೆಗಳಲ್ಲಿ ಬೈಕ್  ಕಳ್ಳತನ ಮಾಡುತ್ತಿದ್ದ 3 ಜನ ಆರೋಪಿಗಳನ್ನು ಬಂಧಿಸಿ ಮೂವತ್ತು ಲಕ್ಷಕ್ಕೂ ಅಧಿಕ ಮೌಲ್ಯದ ವಿವಿಧ ಜಿಲ್ಲೆಗಳಲ್ಲಿ ಕಳ್ಳತನ ಮಾಡಿದ ಬೈಕ್ ಗಳನ್ನು ಸಾಗರದ ಚಾಣಾಕ್ಷ  ಪೊಲೀಸರು ವಶಪಡಿಸಿಕೊಂಡು ಕಳ್ಳರನ್ನು ಬಂಧಿಸಿದ್ದಾರೆ. ರಾಜ್ಯದ ಹಲವು ಭಾಗಗಳಲ್ಲಿ ಬೈಕ್ ಕಳ್ಳತನ ಆಗುತ್ತಿರುವ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಯವರ ಸೂಚನೆ ಮೇರೆಗೆ ಸಾಗರ ಎಎಸ್ಪಿ ರೋಹನ್ ಜಗದೀಶ್ ರವರ ಮಾರ್ಗದರ್ಶನದಲ್ಲಿ ಸಾಗರ ಪೊಲೀಸರು  ಕಾರ್ಯಾಚರಣೆ…

Read More

ಆಯಾ ತಪ್ಪಿ ಬಿದ್ದು ಐದು ವರ್ಷದ ಮಗು ಸಾವು : ವಿಧಿಯ ಕ್ರೂರತನಕ್ಕೆ ಬಲಿಯಾದ ಪುಟ್ಟ ಕಂದಮ್ಮ

ಸಾಗರ : ಮನೆಯಲ್ಲಿ ಆಟವಾಡುತ್ತಿದ್ದ ಸಂದರ್ಭದಲ್ಲಿ ಆಯಾ ತಪ್ಪಿ ಬಿದ್ದು ಐದು ವರ್ಷದ ಮಗು ಮೃತಪಟ್ಟಿರುವ ಘಟನೆ ನಗರದಲ್ಲಿ ಶನಿವಾರ ಸಂಜೆ ನಡೆದಿದೆ. ಶನಿವಾರ ಸಂಜೆ ಸುಮಾರು 5-00 ಗಂಟೆಯ ಸುಮಾರಿಗೆ ಸಾಗರ ನಗರಸಭೆ ವ್ಯಾಪ್ತಿಯ ಅಣಲೇಕೊಪ್ಪದಲ್ಲಿ ವಾಸವಾಗಿದ್ದ ಮೂರ್ತಿಹಾಗೂ ರಾಜೇಶ್ವರಿ ದಂಪತಿಯ ಎರಡನೆ ಮಗು ಆಟವಾಡುವಾಗ ಆಯಾ ತಪ್ಪಿ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಕ್ರಿಶಾ (5) ಮೃತಳಾದ ದುರ್ದೈವಿ.  ಮೂರ್ತಿಹಾಗೂ ರಾಜೇಶ್ವರಿ ದಂಪತಿಗಳುಮೂಲತಃ ಸಾಗರ ತಾಲೂಕಿನ ಹೆಗ್ಗೋಡು ಗ್ರಾ.ಪಂ ವ್ಯಾಪ್ತಿಯ ಹೈತೂರಿನ ಕ್ವಾಗೇರಿರವರಗಿದ್ದಾರೆ. ಮೂರ್ತಿ…

Read More

ರಿಪ್ಪನ್‌ಪೇಟೆ : ವಿದ್ಯಾರ್ಥಿಗಳಲ್ಲಿ ಮತದಾನದ ಜಾಗೃತಿ ಮೂಡಿಸಿದ ಶಾಲಾ ಯುವ ಸಂಸತ್ ಚುನಾವಣೆ

ರಿಪ್ಪನ್ ಪೇಟೆ : ವಿದ್ಯಾರ್ಥಿಗಳಲ್ಲಿ ಮತದಾನದ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಶಾಲಾ ಯುವ ಸಂಸತ್ ಚುನಾವಣೆಯನ್ನು ವಿಭಿನ್ನವಾಗಿ ರಿಪ್ಪನ್ ಪೇಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಆಚರಿಸಲಾಯಿತು. ಮತದಾನಕ್ಕೆ ಸರ್ಕಾರ ಹದಿನೆಂಟು ವಯೋಮಿತಿ ನಿಗದಿ ಪಡಿಸಿದೆ ಆದರೆ ಮೊದಲ ಮತದಾನ ಮಾಡುವಾಗ ಯುವ ಮತದಾರರಲ್ಲಿ ಆತಂಕ ದುಗುಡ ಎದ್ದುಕಾಣುತ್ತದೆ ಕೆಲವರು ಅಂಜಿಕೆಯಿಂದಲೇ ಮತದಾನದಿಂದ ಹಿಂದೆ ಜರುಗುವುದು ಹೆಚ್ಚು ಇದನ್ನು ಗಮನದಲ್ಲಿಟ್ಟುಕೊಂಡು ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಮುಖ್ಯಸ್ಥರು ವಿದ್ಯಾರ್ಥಿದೆಸೆಯಲ್ಲಿ ಮತದಾನ ಜಾಗೃತಿ ಮೂಡಿಸುವ ಸಲುವಾಗಿ ತರಗತಿ…

Read More

ಕಂಠಪೂರ್ತಿ ಕುಡಿದು, ತಿಂದು ನಂತರ ಬಿಲ್ ಕೇಳಿದ್ದಕ್ಕೆ ಬಿಸಿ ಎಣ್ಣೆ ಎರಚಿದ ದುಷ್ಕರ್ಮಿಗಳು

ಹೋಟೆಲ್ ನಲ್ಲಿ ಕಂಠಪೂರ್ತಿ ಕುಡಿದು ಊಟ ಮಾಡಿ ಬಿಲ್ ಕೇಳಿದ್ದಕ್ಕೆ ದುಷ್ಕರ್ಮಿಗಳು ಬಿಸಿ ಎಣ್ಣೆ ಎರಚಿದ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ನಡೆದಿದೆ. ಭದ್ರಾವತಿಯ ಜನ್ನಾಪುರದ ಕಮರ್ಷಿಯಲ್ ಸ್ಟ್ರೀಟ್ ಮದ್ಯದ ಅಂಗಡಿಯಲ್ಲಿ ಮದ್ಯಪಾನ ಮಾಡಿದ ದುಷ್ಕರ್ಮಿಗಳು ಅಲ್ಲೇ ಇದ್ದ ಹೋಟೆಲ್ ಗೆ ಹೋಗಿದ್ದಾರೆ.ಕಂಠಪೂರ್ತಿ ಮದ್ಯ, ಮಾಂಸದೂಟ ಸೇವಿಸಿ ಬಿಲ್ ಕೇಳಿದಾಗ ಗಲಾಟೆ ಮಾಡಿದ್ದಾರೆ. ಹೋಟೆಲ್ ನಲ್ಲಿ ಊಟ ಮಾಡುತ್ತಿದ್ದ ವ್ಯಕ್ತಿಯನ್ನು ಥಳಿಸಿದ್ದಲ್ಲದೆ, ಇದನ್ನು ಪ್ರಶ್ನಿಸಿದ ಮಾಲೀಕನೊಂದಿಗೆ ಜಗಳವಾಡಿದ್ದಾರೆ. ಮಾಲೀಕನ ಪರವಾಗಿ ಬಂದ ಅಡುಗೆ ಭಟ್ಟರಾದ ಮನೋಜ್ ಕುಮಾರ್…

Read More

ಭೂತ ಬಿಡಿಸಲು ಮಹಿಳೆಗೆ ಕೋಲಿನಿಂದ ಹೊಡೆತ – ಏಟು ತಾಳಲಾಗದೇ ಮಹಿಳೆ ಸಾವು

ಭೂತ ಬಿಡಿಸಲು ಮಹಿಳೆಗೆ ಕೋಲಿನಿಂದ ಹೊಡೆತ – ಏಟು ತಾಳಲಾಗದೇ ಮಹಿಳೆ ಸಾವು ರಾಜ್ಯದಲ್ಲಿ ಮೂಢ ನಂಬಿಕೆಗೆ ಮತ್ತೊಬ್ಬ ಮಹಿಳೆ ಬಲಿ ಆಗಿದ್ದಾರೆ. ‘ದೆವ್ವ ಬಿಡಿಸುವ’ ಪ್ರಯತ್ನದ ನಡುವೆ 45 ವರ್ಷದ ಮಹಿಳೆ, ಕೋಲುಗಳಿಂದ ಬೀಳುತ್ತಿದ್ದ ನಿರಂತರ ಏಟುಗಳನ್ನು ತಾಳಲಾಗದೇ ದಾರುಣವಾಗಿ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸ ಜಂಬರಘಟ್ಟದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಹಳೆ ಜಂಬರಘಟ್ಟ ನಿವಾಸಿ ಗೀತಾ ಎಂದು ಗುರುತಿಸಲಾಗಿದೆ. ಮಾಹಿತಿಯ ಪ್ರಕಾರ, ಶಾಂತಮ್ಮ ಎಂಬ ಮಹಿಳೆ ಗೀತಾಳ ಮೈ ಮೇಲೆ ‘ದೆವ್ವ ಬರುತ್ತದೆ….

Read More

ಹಲ್ಲೆಗೊಳಗಾಗಿದ್ದ ಗ್ರಾಪಂ ಸದಸ್ಯನ ಮನೆಗೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಭೇಟಿ

ಹಲ್ಲೆಗೊಳಗಾಗಿದ್ದ ಗ್ರಾಪಂ ಸದಸ್ಯನ ಮನೆಗೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಭೇಟಿ , ಸಾಂತ್ವಾನ ಹೊಸನಗರ: ಇತ್ತೀಚೆಗೆ ಹಳೇ ರಾಜಕೀಯ ದ್ವೇಷದ ಹಿನ್ನಲೆ ಮಾರಣಾಂತಿಕವಾಗಿ ಹಲ್ಲೆಗೊಳಗಾಗಿದ್ದ ತಾಲೂಕಿನ ನಿಟ್ಟೂರು ಗ್ರಾಮ ಪಂಚಾಯತಿ ಸದಸ್ಯ ನಾಗೋಡಿ ವಿಶ್ವನಾಥ್ ಮನೆಗೆ ಮಂಗಳವಾರ  ಮಾಜಿ ಶಿಕ್ಷಣ ಸಚಿವ ಹಾಗೂ ರಾಜ್ಯ ಕಾಂಗ್ರೆಸ್ ಪಕ್ಷದ ವಕ್ತಾರ ಕಿಮ್ಮನೆ ರತ್ನಾಕರ್ ಭೇಟಿ ನೀಡಿ ವಿಶ್ವನಾಥ್ ಅವರಿಗೆ ಸಾಂತ್ವನ ಹೇಳುವ ಮೂಲಕ ನೈತಿಕ ಸ್ಥೈರ್ಯ ತುಂಬಿದರು. ಅಲ್ಲದೆ, ಈ ಸಂಬಂಧ  ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಉನ್ನತ…

Read More

ರಿಪ್ಪನ್ ಪೇಟೆಯ ಯುವಕ ಚನ್ನಪಟ್ಟಣದಲ್ಲಿ ರೈಲಿಗೆ ತಲೆ ಕೊಟ್ಟು ಸಾವು

ರಿಪ್ಪನ್ ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯ ನಿವಾಸಿ ಬೆಂಗಳೂರಿನಲ್ಲಿ ಚಲಿಸುತಿದ್ದ ರೈಲಿಗೆ ತಲೆಕೊಟ್ಟು ಸಾವನ್ನಪ್ಪಿರುವ ಘಟನೆ ನಡೆದಿದೆ. ತೀರ್ಥಹಳ್ಳಿ ರಸ್ತೆಯ ನಿವಾಸಿ ರಾಮನಾಥ್ (28) ಮೃತಪಟ್ಟ ದುರ್ಧೈವಿಯಾಗಿದ್ದಾನೆ. ಶಬರೀಶ ನಗರದ ಸಾಯಿನಾಥ್ ಭಂಡಾರಿಯವರ ಪುತ್ರನಾದ ರಾಮನಾಥ್ ಬೆಂಗಳೂರಿನಲ್ಲಿ ಕಳೆದ ಐದಾರು ವರ್ಷಗಳಿಂದ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗ ಮಾಡಿಕೊಂಡಿದ್ದನು. ಚನ್ನಪಟ್ಟಣದಿಂದ ಮದ್ದೂರಿಗೆ ತೆರಳುವ ಮಾರ್ಗದ ನಿಡಗುಂಟೆ ರೈಲ್ವೆ ನಿಲ್ದಾಣದ ಗೇಟ್ ಬಳಿ ದ್ವಿಚಕ್ರ ವಾಹನವನ್ನು(KA 15 ED 9437) ನಿಲ್ಲಿಸಿ ಮೊಬೈಲ್ ನ್ನು ಸ್ವಿಚ್ ಆಫ಼್ ಮಾಡಿ…

Read More

ಹೊಬುಜಾ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು – ಆರಗ ಜ್ಞಾನೇಂದ್ರ|hombuja

ಹೊಂಬುಜ ಕ್ಷೇತ್ರದ ಸರ್ವಾಂಗಿಣ ಅಭಿವೃದ್ಧಿಗೆ ಒತ್ತು –  ಆರಗ ಜ್ಞಾನೇಂದ್ರ   ರಿಪ್ಪನ್ ಪೇಟೆ : ಜೈನರ ಪ್ರಸಿದ್ಧ ಯಾತ್ರಾಸ್ಥಳವಾದ  ಹೊಂಬುಜ ಕ್ಷೇತ್ರದ ಸರ್ವಾಂಗಿಣ  ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದು  ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಭಾನುವಾರ ಶ್ರೀ ಕ್ಷೇತ್ರ ಹೊಂಬುಜದ ಮಠದ ಆಸುಪಾಸಿನ  ರಸ್ತೆ ಹಾಗೂ ಒಳಚರಂಡಿ ಯೋಜನೆಯ ರೂ ಎರಡು ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ  ಚಾಲನೆ ನೀಡಿ ಅವರು ಮಾತನಾಡಿದರು. ಮಾತೆ ಪದ್ಮಾವತಿ ದೇವಿ ನೆಲೆ ನಿಂತಿರುವ ಮಲೆನಾಡಿನ ಪ್ರಸಿದ್ಧ…

Read More