ಕರ್ನಾಟಕದ ಗೃಹಮಂತ್ರಿಯವರ ಮೊಮ್ಮಗನಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ!! ಸರಳತೆ ಮೆರೆದ ಆರಗ ಜ್ಞಾನೇಂದ್ರ..
ತೀರ್ಥಹಳ್ಳಿ: ಹಾಲಿ ಗೃಹಮಂತ್ರಿ ಹಾಗೂ ತೀರ್ಥಹಳ್ಳಿಯ ಶಾಸಕರಾದ ಆರಗ ಜ್ಞಾನೇಂದ್ರರವರ ಹನ್ನೊಂದು ತಿಂಗಳಿನ ಮೊಮ್ಮಗ ಆರ್ಯವರ್ಥ ನಿಗೆ ಜ್ವರ ಹಾಗೂ ಕೆಮ್ಮು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತೀರ್ಥಹಳ್ಳಿ ಸರ್ಕಾರಿ ತಾಲೂಕು ಆಸ್ಪತ್ರೆಯಾದ ಜಯಚಾಮರಾಜೇಂದ್ರ ಆಸ್ಪತ್ರೆಗೆ ಭಾನುವಾರ ಬೆಳಿಗ್ಗೆ ದಾಖಲಿಸಲಾಗಿತ್ತು. ತವರಿನ ಪ್ರವಾಸದಲ್ಲಿದ್ದ ಗೃಹ ಸಚಿವ ಆರಗ ಜ್ಞಾನೇಂದ್ರ ಮೊಮ್ಮಗನ ಯೋಗಕ್ಷೇಮ ವಿಚಾರಿಸಲು ಆಸ್ಪತ್ರೆಗೆ ಭೇಟಿ ನೀಡಿದರು.. ಮಗುವಿನೊಂದಿಗೆ ಕೆಲಕ್ಷಣ ಸಂತಸದಿಂದ ಕಳೆದರು ನಂತರ ಮಾದ್ಯಮದೊಂದಿಗೆ ಮಾತನಾಡಿದ ಅವರು ತೀರ್ಥಹಳ್ಳಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಉತ್ತಮ ರೀತಿಯಲ್ಲಿ ಕೊಡುತಿದ್ದಾರೆ.ಕೋವಿಡ್ ಸಂಧರ್ಭದಲ್ಲಿ ಉತ್ತಮವಾಗಿ…


