Headlines

ರಿಪ್ಪನ್ ಪೇಟೆ ಸಮೀಪದ ಹೊಂಡಲಗದ್ದೆಯಲ್ಲಿ ಅರಣ್ಯ ಇಲಾಖೆಯ ಭರ್ಜರಿ ಭೇಟೆ : 60 ಕೆ.ಜಿ ಶ್ರೀಗಂಧ ವಶ !!!

ಹೊಸನಗರ: ಉಪ ಅರಣ್ಯ ಸಂರಕ್ಷಣಾದಿಕಾರಿ ರವೀಂದ್ರ ಕುಮಾರ್‌ರವರ ಮಾರ್ಗದರ್ಶನದಲ್ಲಿ ಹೊಸನಗರ ತಾಲ್ಲೂಕಿನ ಹುಂಚ ಹೋಬಳಿ ಹೊಂಡಲಗದ್ದೆ ತಿಮ್ಮಪ್ಪ ಬಿನ್ ಹೂವಪ್ಪರವರ ಮನೆಯಲ್ಲಿ ಅಕ್ರಮ ದಾಸ್ತಾನು ಮಾಡಿದ್ದ ಸುಮಾರು 60 ಕೆ.ಜಿ ಶ್ರೀಗಂಧವನ್ನು ಅರಣ್ಯ ಸಂಚಾರಿದಳ ಶಿವಮೊಗ್ಗ, ಹೊಸನಗರ ವಲಯ ಅರಣ್ಯಾಧಿಕಾರಿಗಳು ಮತ್ತು ಅರಣ್ಯ ಸಿಬ್ಬಂದಿಗಳು ಇಂದು ಜಂಟಿ ಕಾರ್ಯಾಚರಣೆ ನಡೆಸಿ ಮನೆ ಜಪ್ತಿ ನಡೆಸಿ ಶ್ರೀಗಂಧದ ತುಂಡುಗಳನ್ನು ವಶಪಡಿಸಿಕೊಂಡು ಪ್ರಕರಣವನ್ನು ದಾಖಲು ಮಾಡಿಕೊಂಡಿದ್ದಾರೆ. ಈ ಕಾರ್ಯಾಚರಣೆಯಲ್ಲಿ ವಲಯ ಅರಣ್ಯಾಧಿಕಾರಿ ಸಂಜಯ್, ಮಧುಕರ್ ಉಪವಲಯ ಅರಣ್ಯಾಧಿಕಾರಿಗಳಾದ ಅಶೋಕ್, ಯುವರಾಜ್,…

Read More

ಹೊಸನಗರ : ಭತ್ತದ ಒಕ್ಕಲು ಯಂತ್ರಕ್ಕೆ ಸಿಲುಕಿ ರೈತನ ಕೈ ಕಟ್|Hosanagar

ಹೊಸನಗರ : ಒಕ್ಕಲು ಮಾಡುವಾಗ ಮಿಷನ್ ಗೆ ಸಿಲುಕಿ ರೈತನ ಕೈ ತುಂಡಾಗಿದೆ. ಕೂಡಲೆ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.  ಹೊಸನಗರ ತಾಲೂಕು ದೇವಗಂಗೆ ಗ್ರಾಮದ ರೈತ ವಿಶ್ವಾನಾಥ್ ಅವರ ಬಲಗೈ ತುಂಡಾಗಿದೆ. ಗ್ರಾಮದ ಮಹೇಶ ಗೌಡ ಎಂಬುವವರ ಜಮೀನಿನಲ್ಲಿ ಭತ್ತದ ಒಕ್ಕಲು ಮಾಡಲಾಗುತ್ತಿತ್ತು. ಈ ವೇಳೆ ವಿಶ್ವನಾಥ್ ಅವರ ಬಲಗೈ ಒಕ್ಕಲು ಯಂತ್ರಕ್ಕೆ ಸಿಲುಕಿ ತುಂಡಾಗಿದೆ. ತಕ್ಷಣ ವಿಶ್ವನಾಥ್ ಅವರನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ…

Read More

ಕಾಲೇಜಿನ ಗ್ರಂಥಾಲಯದಲ್ಲಿ ಪ್ರತ್ಯಕ್ಷವಾದ ಹಾವು – ಭಯ ಮೂಡಿಸಿದ್ದ ಬರೋಬ್ಬರಿ 8 ಅಡಿ ಉದ್ದದ ಹಾವು

ಶಿವಮೊಗ್ಗ ನಗರದ ಸಹ್ಯಾದ್ರಿ ಸೈನ್ಸ್ ಕಾಲೇಜು ಆವರಣದಲ್ಲಿರುವ ಗ್ರಂಥಾಲಯದಲ್ಲಿಯೇ ಹಾವೊಂದು ಕಾಣಿಸಿಕೊಂಡಿತ್ತು.  ಮೊನ್ನೆ ಕಾಲೇಜಿನ ಗ್ರಂಥಾಲಯದಲ್ಲಿ ಸುಮಾರು 8 ಅಡಿ ಉದ್ದದ ಹಾವೊಂದು ಕಾಣಿಸಿಕೊಂಡು ಆತಂಕ ಮೂಡಿಸಿತ್ತು. ಪುಸ್ತಕಗಳ ರಾಶಿಯ ಅಡಿಯಲ್ಲಿ ಸೇರಿಕೊಂಡಿದ್ದ ಹಾವು, ಆಗಾಗ ಸದ್ದು ಮಾಡುತ್ತಿತ್ತು. ಮೊದಲೇ ನಿಶ್ಚಬ್ಧವಾಗಿದ್ದ ಲೈಬ್ರರಿಯಲ್ಲಿ ಹಾವಿನ ಸದ್ದು ತುಸು ಜೋರಾಗಿಯೇ ಕೇಳಿಬರುತ್ತಿತ್ತು.  ಇನ್ನೂ ಏನು ಶಬ್ಧವಾಗುತ್ತಿದೆ ಎಂದು ನೋಡಿದ ಸಿಬ್ಬಂದಿ ಹಾವೊಂದು ಗೃಂಥಾಲಯವನ್ನು ಸೇರಿಕೊಂಡಿರುವುದು ಗೊತ್ತಾಗಿದೆ. ತಕ್ಷಣ ಹಾವನ್ನು ಸುರಕ್ಷಿತವಾಗಿ ಹಿಡಿಯಬಲ್ಲ ಸ್ನೇಕ್​ ಜಯಂತ್ ಬಾಬುರನ್ನ ಸಂಪರ್ಕಿಸಿದ್ದಾರೆ.  ಕರೆ…

Read More

ರಿಪ್ಪನ್‌ಪೇಟೆ : ಸಡಗರ, ಸಂಭ್ರಮ ಹಾಗೂ ಶ್ರದ್ದಾಭಕ್ತಿಯಿಂದ ಜರುಗಿದ ಮಹಾಶಿವರಾತ್ರಿಯ ಧಾರ್ಮಿಕ ಕಾರ್ಯಕ್ರಮ|shivarathri

ರಿಪ್ಪನ್‌ಪೇಟೆ : ಮಹಾಶಿವರಾತ್ರಿಯ ಅಂಗವಾಗಿ ಪಟ್ಟಣದ ಸಿದ್ದಪ್ಪನಗುಡಿಯ ಶ್ರೀ ಕಂತೆ ಸಿದ್ದೇಶ್ವರ ದೇವಸ್ಥಾನ,ಬರುವೆ ಈಶ್ವರ ದೇವಸ್ಥಾನ, ಮುಡುಬ ಈಶ್ವರ ದೇವಸ್ಥಾನ,ಗವಟೂರು ರಾಮೇಶ್ವರ ದೇವಸ್ಥಾನದಲ್ಲಿ ಶ್ರದ್ದಾ ಭಕ್ತಿಯಿಂದ ವಿಶೇಷ ಪೂಜಾ ಕಾರ್ಯಕ್ರಮವು ಜರುಗಿದವು.ಮುಂಜಾನೆಯಿಂದಲೇ ಭಕ್ತರು ಗ್ರಾಮದಲ್ಲಿನ ದೇವಸ್ಥಾನಗಳಿಗೆ ತೆರಳಿ ಪೂಜಾ ಸೇವೆಯನ್ನು ನೆರವೇರಿಸಿದರು. ಸಿದ್ದಪ್ಪನಗುಡಿಯ ಶ್ರೀ ಕಂತೆ ಸಿದ್ದೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶ್ರೀಕಂತೆ  ಸಿದ್ದೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ರುದ್ರಾಭಿಷೇಕ ಪೂಜೆಗೆ ಭಾರಿ ಸಂಖ್ಯೆಯಲ್ಲಿ ಜನಸ್ತೋಮ ಸೇರಿದ್ದರು,ಮಧ್ಯಾಹ್ನ ಎಲ್ಲಾ ಭಕ್ತಾಧಿಗಳಿಗೂ ಸಾಮೂಹಿಕ ಅನ್ನ ಸಂತರ್ಪಣೆ ಹಮ್ಮಿಕೊಳ್ಳಲಾಗಿತ್ತು. ಮಾಜಿ ಶಾಸಕ ಹಾಗೂ ಕೆಪಿಸಿಸಿ…

Read More

ಕಾರು- ಬೈಕ್ ನಡುವೆ ಅಪಘಾತ- ಓರ್ವನ ಸ್ಥಿತಿ ಗಂಭೀರ..!

ಕಾರು- ಬೈಕ್ ನಡುವೆ ಅಪಘಾತ- ಓರ್ವನ ಸ್ಥಿತಿ ಗಂಭೀರ..! ಕಾರು- ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಬೈಕ್ ಚಾಲಕನ ಸ್ಥಿತಿ ಗಂಭೀರವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಬಿಳಲುಕೊಪ್ಪದ್ ಬಳಿ ನಡೆದಿದೆ. ಬೀಳಲುಕೊಪ್ಪದ ಸಮೀಪ ವ್ಯಾಗನರ್ ಕಾರ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಬೈಕ್ ಸಂಪೂರ್ಣ ಜಖಂಗೊಂಡಿದೆ. ಬೈಕ್ ಸವಾರನ ಸ್ಥಿತಿ ಗಂಭೀರವಾಗಿದ್ದು ಮಣಿಪಾಲ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ಭೀಕರ ಅಪಘಾತ – ಲಾರಿ ಅಡಿಯಲ್ಲಿ ಸಿಲುಕಿದ ಬೈಕ್ ಸವಾರರು ,ಓರ್ವ ಸಾವು ಇನ್ನೊಬ್ಬನ ಸ್ಥಿತಿ ಗಂಭೀರ

ಭೀಕರ ಅಪಘಾತ – ಲಾರಿ ಅಡಿಯಲ್ಲಿ ಸಿಲುಕಿದ ಬೈಕ್ ಸವಾರರು ,ಓರ್ವ ಸಾವು ಇನ್ನೊಬ್ಬನ ಸ್ಥಿತಿ ಗಂಭೀರ ಲಾರಿ ಮತ್ತು ಬೈಕ್ ನಡುವೆ ಬೀಕರ ಅಪಘಾತ ಸಂಭವಿಸಿದ್ದು, ಒಬ್ಬ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೊಬ್ಬ ಯುವಕನ ಸ್ಥಿತಿ ಗಂಭೀರವಾಗಿರುವ ಘಟನೆ ತೀರ್ಥಹಳ್ಳಿ ತಾಲ್ಲೂಕಿನ ಕುಡುಮಲ್ಲಿಗೆಯ ಬಳಿ ನಡೆದಿದೆ. ಬಾಗಲಕೋಟೆಯಿಂದ ಇಬ್ಬರು ಯುವಕರು ತೀರ್ಥಹಳ್ಳಿ ಮಾರ್ಗದಲ್ಲಿ ಚಲಿಸುತ್ತಿದ್ದರು. ವೇಳೆ  ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಹೋಗುತ್ತಿದ್ದ 10 ಚಕ್ರದ ಲಾರಿಗೆ ಡಿಕ್ಕಿ ಹೊಡೆದಿದ್ದಾರೆ ಎನ್ನಲಾಗಿದೆ. ಈ ಹಿನ್ನಲೆ  ಬೈಕ್ ಲಾರಿಯ ಚಕ್ರಕ್ಕೆ…

Read More

ಶ್ರಮ ಪಟ್ಟು ಓದಿದರೆ ಸಿ ಎಸ್ (CS) ಪರೀಕ್ಷೆಯಲ್ಲಿ ಯಶಸ್ಸು ಸಾಧ್ಯ – ಸಿ ಎಸ್ ಸಂತೋಷ್

ಶ್ರಮ ಪಟ್ಟು ಓದಿದರೆ CS ಪರೀಕ್ಷೆಯಲ್ಲಿ ಯಶಸ್ಸು ಖಚಿತ ರಿಪ್ಪನ್‌ಪೇಟೆ : ಶ್ರಮಪಟ್ಟು ಓದಿದರೆ ಸಿಎಸ್ (ಕಂಪನಿ ಸೆಕ್ರೆಟರಿ) ಪರೀಕ್ಷೆಯಲ್ಲಿ ಯಶಸ್ಸು ಖಚಿತವಾಗಿದ್ದು ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಗಮನಹರಿಸಬೇಕು ಎಂದು ಮಂಗಳೂರಿನ ಹೆಸರಾಂತ ಕಂಪನಿಯ ಕಾರ್ಯದರ್ಶಿಗಳಾದ ಸಿ.ಎಸ್ ಸಂತೋಷ್ ಹೇಳಿದರು. ಅವರು ಇಂದು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ & ನಿರ್ವಹಣಾ ಶಾಸ್ತ್ರ ವಿಭಾಗ ಮತ್ತು ಕಾಲೇಜಿನ ಪ್ಲೇಸ್ಮೆಂಟ್ ವಿಭಾಗದ ಸಹಯೋಗದಲ್ಲಿ ನಡೆದ  ಸಿ.ಎಸ್ (ಕಂಪನಿ ಸೆಕ್ರೆಟರಿ) ಕೋರ್ಸಿನ ಬಗ್ಗೆ ನಡೆದ ಒಂದು ದಿನದ  ವಿಶೇಷ ಕಾರ್ಯಗಾರದಲ್ಲಿ…

Read More

ಭಾರಿ ಮಳೆಗೆ ತೆಪ್ಪದಗಂಡಿಯಲ್ಲಿ ರಸ್ತೆಗೆ ಅಡ್ಡಲಾಗಿ ಉರುಳಿದ ಮರ – ಸಂಚಾರ ಅಸ್ತವ್ಯಸ್ತ|CKM

ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತಿದ್ದು ಬಾಳೆಹೊನ್ನೂರು-ಕಳಸ ಮಾರ್ಗ‌ ಮಧ್ಯೆ ತೆಪ್ಪದಗಂಡಿ ಎಂಬಲ್ಲಿ ರಸ್ತೆಗೆ ಅಡ್ಡಲಾಗಿ ಬೃಹತ್ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿದೆ. ತೆಪ್ಪದಗಂಡಿಯಲ್ಲಿ ಭಾರೀ ಗಾತ್ರದ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತ್ತು. ಈ ವೇಳೆ ಸ್ಥಳೀಯರು ಹಾಗೂ ಯಾತ್ರಿಕರ ನೆರವಿನಿಂದ‌ ಮರ ತೆರವು ಕಾರ್ಯಾಚರಣೆ ನಡೆಸಿ ಕ್ರೇನ್ ಮುಖಾಂತರ ರಸ್ತೆಗೆ ಬಿದ್ದ‌ ಎರಡು ಮರಗಳನ್ನು ತೆರವುಗೊಳಿಸಲಾಯಿತು. ಮರಗಳು ವಿದ್ಯುತ್ ತಂತಿಗಳ ಮೇಲೆ ಬಿದ್ದ ಪರಿಣಾಮ ಕಂಬಗಳು ನೆಲಕ್ಕುರುಳಿರುವ ಹಿನ್ನಲೆಯಲ್ಲಿ ವಿದ್ಯುತ್ ವ್ಯತ್ಯಯವುಂಟಾಗಿದೆ….

Read More

ಕೋಡೂರು ಸಮೀಪ ಜಾನುವಾರು ಮೇಲೆ ಹುಲಿ ದಾಳಿ ಶಂಕೆ -ಸ್ಥಳೀಯರಲ್ಲಿ ಆತಂಕ!!

ಕೋಡೂರು ಸಮೀಪ ಜಾನುವಾರು ಮೇಲೆ ಹುಲಿ ದಾಳಿ ಶಂಕೆ –ಸ್ಥಳೀಯರಲ್ಲಿ ಆತಂಕ!! Suspected tiger attack on cattle near Kodur – locals worried!! ಕೋಡೂರು ಸಮೀಪ ಜಾನುವಾರು ಮೇಲೆ ಹುಲಿ ದಾಳಿ ಶಂಕೆ –ಸ್ಥಳೀಯರಲ್ಲಿ ಆತಂಕ!! Suspected tiger attack on cattle near Kodur – locals worried!! ರಿಪ್ಪನ್ ಪೇಟೆ : ಇಲ್ಲಿನ ಕೋಡೂರು ಸಮೀಪದ ಕೀಳಂಬಿ ಗ್ರಾಮದಲ್ಲಿ ಜಾನುವಾರುವೊಂದರ ಮೇಲೆ ಕಾಡುಪ್ರಾಣಿಯೊಂದು ದಾಳಿ ನಡೆಸಿ ಕೊಂದಿರುವ ಘಟನೆ ವರದಿಯಾಗಿದ್ದು, ಇದು…

Read More

ಸಾಗರ : ಲಾಡ್ಜ್‌ನಲ್ಲಿ ನೇಣು ಬಿಗಿದುಕೊಂಡು ಇಬ್ಬರು ಯುವಕರ ಆತ್ಮಹತ್ಯೆ :

ಸಾಗರ: ಇಲ್ಲಿನ ಜೋಗ ಬಸ್ ನಿಲ್ದಾಣದ ಸಮೀಪದ ಖಾಸಗಿ ಲಾಡ್ಜ್‌ವೊಂದರಲ್ಲಿ ಇಬ್ಬರು ಯುವಕರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ಬೆಳಕಿಗೆ ಬಂದಿದೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಬನಹಟ್ಟಿ ಗ್ರಾಮದ ಸಂತೋಷ್ (23) ಮತ್ತು ಹನುಮಂತ (28) ಜೀವತೆತ್ತ ಯುವಕರು. ಸಂತೋಷ್ ಮತ್ತು ಹನುಮಂತ ಅವರು ಸೆ. 24ರ ತಡರಾತ್ರಿ ಲಾಡ್ಜ್‌ಗೆ ಬಂದು ಡಬ್ಬಲ್ ಬೆಡ್‌ರೂಂ ಬಾಡಿಗೆಗೆ ಪಡೆದಿದ್ದರು. ಶನಿವಾರ ಮಧ್ಯಾಹ್ನ ಇಬ್ಬರೂ ಹೊರಗೆ ಬಂದು ಊಟ ತೆಗೆದುಕೊಂಡು ರೂಮ್ ಸೇರಿಕೊಂಡಿದ್ದರು ಎನ್ನಲಾಗಿದೆ. ಶನಿವಾರ…

Read More