ಶಿವಮೊಗ್ಗ : ಟಿಪ್ಪು ನಗರದಲ್ಲಿ ಮಾರಾಮಾರಿ ಒಬ್ಬನ ಕೊಲೆ
ಶಿವಮೊಗ್ಗ: ನಗರದ ಟಿಪ್ಪುನಗರ ವಾಸಿಯಾದ ಟ್ವಿಸ್ಟ್ ಇಮ್ರಾನ್ ಎಂಬ ಯುವಕನ ಬರ್ಬರ ಹತ್ಯೆಯಾಗಿದೆ. ರಾತ್ರಿ 9-15 ರ ಸುಮಾರಿನಲ್ಲಿ ಕೆ.ಕೆ.ಶೆಡ್ ನ ಬಳಿ ಈ ಘಟನೆ ನಡೆದಿದೆ. ಕೊಲೆಯಾದ ಟ್ವಿಸ್ಟ್ ಇಮ್ರಾನ್ ನ ಶವ ಚರಂಡಿಯಲ್ಲಿ ದೊರಕಿದ್ದು ದೇಹದ ಎಡಭಾಗದ ಅಲ್ಲಲ್ಲಿ ಚೂರಿಯಿಂದ ಇರಿದ ಗಾಯಗಳೊಂದಿಗೆ ಮೃತದೇಹ ಪತ್ತೆಯಾಗಿದೆ. ಸ್ಥಳಕ್ಕೆ ಬಂದ ಪೊಲೀಸ್ ಅಧಿಕಾರಿಗಳು ಆರೋಪಿಗಳ ಜಾಡು ಹಿಡಿದು ಬಲೆ ಬೀಸಿದ್ದಾರೆ. ಶವವನ್ನು ಶಿವಮೊಗ್ಗ ನಗರದ ಮೆಗ್ಗಾನ್ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಗಾಂಜಾ ಘಾಟು ಗಾಂಜಾ ಪೆಡ್ಲರ್ ನನ್ನ…