Headlines

ಪಾಗಲ್ ಪ್ರೇಮಿಯೊಬ್ಬನ ಕಿರುಕುಳಕ್ಕೆ ಬೇಸತ್ತ ಅಂತಿಮ ಬಿಕಾಂ ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ :

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ವಸವೆ ಗ್ರಾಮದ ಕುಂಟಿಗೆ ವಾಸಿಯಾದ ವಿದ್ಯಾಶ್ರೀ (21) ಎಂಬ ವಿದ್ಯಾರ್ಥಿನಿ ಪಾಗಲ್ ಪ್ರೇಮಿಯೊಬ್ಬನ ಕಾಟಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ವಸವೆ ಗ್ರಾಮದ ವಿದ್ಯಾಶ್ರೀ ಹೊಸನಗರ ಪಟ್ಟಣದ ಕೊಡಚಾದ್ರಿ ಪ್ರಥಮ ದರ್ಜೆ ಕಾಲೇಜಿನ ಅಂತಿಮ ಬಿಕಾಂ ವ್ಯಾಸಂಗ ಮಾಡುತ್ತಿದ್ದಳು. ಅವಳ ನೆರೆಮನೆಯಾತ  ಶಶಾಂಕ್ ಎಂಬಾತನು ಪ್ರತಿದಿನ ಕಾಲೇಜಿಗೆ ಹೋಗಿ ಬರುವಾಗ ತನ್ನನ್ನು ಪ್ರೀತಿಸುವಂತೆ ಹಾಗೂ ಮದುವೆಯಾಗುವಂತೆ ಪೀಡಿಸುತ್ತಿದ್ದ ಹಾಗೂ ಬೆದರಿಕೆ ಹಾಕುತ್ತಿದ್ದನು ಈ ಹಿನ್ನಲೆಯಲ್ಲಿ ಮನನೊಂದ ವಿದ್ಯಾಶ್ರೀ ಕಳೆದ ತಿಂಗಳು ಏಪ್ರಿಲ್…

Read More

ಬಿಜು ಮಾರ್ಕೋಸ್ ಸ್ಮರಣಾರ್ಥ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಬಿಜು ಮಾರ್ಕೋಸ್ ಸ್ಮರಣಾರ್ಥ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿ ರಿಪ್ಪನ್‌ಪೇಟೆಯಲ್ಲಿತಾಲ್ಲೂಕ್ ಮಟ್ಟದ ಸೈಕಲ್ ಪಂದ್ಯಾವಳಿ ರಿಪ್ಪನ್‌ಪೇಟೆ;- ಇಲ್ಲಿನ ಕಲಾಕೌಸ್ತೂಭ ಕನ್ನಡ ಸಂಘದವರ ೩೧ ನೇ ವರ್ಷದ ವಾರ್ಷೀಕೋತ್ಸವ ಮತ್ತು 69 ನೇ ರಾಜ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ಆಯೋಜಿಸಲಾದ ದಿ.ಬಿಜು ಮಾರ್ಕೋಸ್ ಸ್ಮರಣಾರ್ಥ ಜಿಲ್ಲಾ ಮಟ್ಟದ ಅಹ್ವಾನಿತ ತಂಡಗಳ ವಾಲಿಬಾಲ್ ಪಂದ್ಯಾವಳಿ ಜರುಗಿತು. ಹಿರಿಯ ವಾಲಿಬಾಲ್ಅಟಗಾರರಾದ ಜಿ.ಎಸ್.ಶ್ರೀನಿವಾಸ ಮತ್ತು ಪ್ರಕಾಶ್ ರವರು ವಾಲಿಬಾಲ್ ಪಂದ್ಯಾವಳಿಯಲ್ಲಿ ಬಾಲ್ಎಸೆಯುವ ಮೂಲಕ ಚಾಲನೆ ನೀಡಿದರು. ಈ ಟೂರ್ನಿಯಲ್ಲಿ ರಿಪ್ಪನ್‌ಪೇಟೆ ಸಿದ್ದಿವಿನಾಯಕ ತಂಡ ಪ್ರಥಮ…

Read More

Ripponpete | ಸರ್ಕಾರಿ ಶಾಲೆ ಉಳಿಸಿ, ಬೆಳೆಸುವ ಆಂದೋಲನ ಅಗತ್ಯ

Ripponpete | ಸರ್ಕಾರಿ ಶಾಲೆ ಉಳಿಸಿ, ಬೆಳೆಸುವ ಆಂದೋಲನ ಅಗತ್ಯ ಸರ್ಕಾರಿ ಶಾಲೆಗಳ ಸ್ಥಿತಿ ಅತ್ಯಂತ ದಯನೀಯ ಪರಿಸ್ಥಿತಿಯಲ್ಲಿದೆ. ಈ ಶಾಲೆಗಳನ್ನು ಉಳಿಸುವುದರೊಂದಿಗೆ, ಸಮಗ್ರ ಅಭಿವೃದ್ಧಿಗೆ ಚಿಂತನೆ ನಡೆಸುವ ಅಗತ್ಯವಿದೆ ಎಂದು ಸಿವಿಲ್ ಇಂಜಿನಿಯರ್ ರಾಘವೇಂದ್ರ ಅಭಿಪ್ರಾಯ ವ್ಯಕ್ತಪಡಿಸಿದರು. ಹೊಸನಗರ ತಾಲೂಕಿನ ನೇರಲಮನೆ ಸರ್ಕಾರಿ ಶಾಲೆಯಲ್ಲಿ ಪೋಸ್ಟ್ ಮ್ಯಾನ್ ಸುದ್ದಿ ಬಳಗದ ವತಿಯಿಂದ ಆಯೋಜಿಸಲಾಗಿದ್ದ ಕನ್ನಡ ಶಾಲೆಯ ಅಭಿಮಾನ,  ಸುಣ್ಣ ಬಣ್ಣದ ಅಭಿಯಾನ  ಕಾರ್ಯಕ್ರಮಕ್ಕೆ ಗೋಡೆಗೆ ಬಣ್ಣ ಹೊಡೆಯುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು ಇಂದಿನ…

Read More

ಅವೈಜ್ಞಾನಿಕ ಚರಂಡಿ ಕಾಮಗಾರಿ: ನಾಲ್ಕು ರಸ್ತೆಯ ನೀರು,ಹೊಟೇಲ್ ತ್ಯಾಜ್ಯ ರೈತರ ಜಮೀನಿಗೆ::

ರಿಪ್ಪನ್ ಪೇಟೆ :ಅವೈಜ್ಞಾನಿಕ ಚರಂಡಿಯಿಂದ ಪಟ್ಟಣ ದ ನಾಲ್ಕು ರಸ್ತೆಯ ನೀರು,ಹೋಟೆಲ್ ನ ತ್ಯಾಜ್ಯಗಳು ಹೊಸನಗರ ರಸ್ತೆಯಲ್ಲಿರುವ ಚಿಪ್ಪಿಗರ ಕೆರೆಯ ಎದುರಿನ ರೈತರ ಜಮೀನಿಗೆ ಹೋಗುತ್ತಿದೆ.ಸ್ಥಳೀಯ ನಿವಾಸಿಗಳು ಹಾಗೂ ರೈತರು ಹಲವಾರು ಬಾರಿ ದೂರು ಸಲ್ಲಿಸಿದ್ದರೂ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಇಚ್ಛಾಶಕ್ತಿ ಕೊರತೆಯಿಂದ ಪರದಾಡುವಂತಾಗಿದೆ. ಚರಂಡಿಯಿಂದ ಹರಿಯುತ್ತಿರುವ, ಮಳೆ ನೀರು,ಹೋಟೆಲ್ ಗಳ ತ್ಯಾಜ್ಯ, ಮಧ್ಯದ ಬಾಟಲಿಗಳು ಸಂಪೂರ್ಣವಾಗಿ ಕೃಷಿ ಭೂಮಿ ಸೇರುತ್ತಿವೆ.ರಿಪ್ಪನ್ ಪೇಟೆ ಹೊಸನಗರ ರಸ್ತೆಯ ಕೂಗಳತೆ ದೂರದಲ್ಲಿ ಇರುವ ಚಿಪ್ಪಿಗರ ಕೆರೆಯ ಸಮೀಪ ಈ ಚರಂಡಿಯ…

Read More
Exit mobile version