Headlines

15 ದಿನಗಳ ಹಿಂದೆ ಕಾಣೆಯಾಗಿದ್ದ ವ್ಯಕ್ತಿ ರಸ್ತೆ ಬದಿಯಲ್ಲಿ ಶವವಾಗಿ ಪತ್ತೆ

ಕಾಣೆಯಾದ ವ್ಯಕ್ತಿ ಶವವಾಗಿ ಪತ್ತೆ ಸಾಗರ: ಹಲವು ದಿನಗಳಿಂದ ಕಾಣೆಯಾಗಿದ್ದ ವ್ಯಕ್ತಿಯೊಬ್ಬರ ಮೃತದೇಹ ರಸ್ತೆ ಪಕ್ಕದಲ್ಲಿ ಪತ್ತೆಯಾಗಿರುವ ದುರ್ಘಟನೆ ಬೆಳಕಿಗೆ ಬಂದಿದೆ. ಸಾಗರ ತಾಲೂಕಿನ ಯಲಗಳಲೆ ಗ್ರಾಮದ ಸಮೀಪ ರಸ್ತೆ ಬದಿಯಲ್ಲಿ ಪತ್ತೆಯಾದ ಶವವನ್ನು, ಜಂಬಗಾರು ಗ್ರಾಮದ ಹನುಮಂತಪ್ಪ (65) ಎಂದು ಗುರುತಿಸಲಾಗಿದೆ. ಹನುಮಂತಪ್ಪ ಅವರು ಖಿನ್ನತೆಯಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದ್ದು, 15 ದಿನಗಳ ಹಿಂದೆ ಕಾಣೆಯಾಗಿದ್ದಾರೆಂದು ಕುಟುಂಬದವರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ವೈದ್ಯರಿಲ್ಲದ ಜಗತ್ತು ಊಹಿಸಲು ಅಸಾಧ್ಯ – ಪಿಎಸ್‌ಐ ನಿಂಗರಾಜ್ ಕೆ ವೈ | Doctors day

ವೈದ್ಯರಿಲ್ಲದ ಜಗತ್ತು ಊಹಿಸಲು ಅಸಾಧ್ಯ – ಪಿಎಸ್‌ಐ ನಿಂಗರಾಜ್ ಕೆ ವೈ ವೈದ್ಯರು ಎಂದರೆ ಜೀವ ಉಳಿಸುವ ದೇವರಿದ್ದಂತೆ. ಸತತ ಪರಿಶ್ರಮ ಮತ್ತು ದಣಿವರಿಯದ ಕಾರ್ಯ ತತ್ಪರತೆಗೆ ಮತ್ತೊಂದು ಹೆಸರೇ ವೈದ್ಯರು. ಅವರಿಲ್ಲದ ಜಗತ್ತನ್ನು ಉಹಿಸಿಕೊಳ್ಳಲು ಅಸಾಧ್ಯ ಎಂದು ಪಿಎಸ್‌ಐ ನಿಂಗರಾಜ್ ಕೆ ವೈ ಹೇಳಿದರು. ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನ ಬಂಕಾಪುರ ಪಟ್ಟಣದ  ಆಲದಕಟ್ಟಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆಯಲ್ಲಿ ವೈದ್ಯರುಗಳಿಗೆ ಸನ್ಮಾನಿಸಿ ನಂತರ ಮಾತನಾಡಿ, ಪ್ರತಿ ವರ್ಷ ಜು.1ರಂದು ಹೆಸರಾಂತ ವೈದ್ಯ,…

Read More

ಮೇ 4ಕ್ಕೆ ಸಾಗರಕ್ಕೆ ಖ್ಯಾತ ಕ್ರಿಕೆಟಿಗ ಹರ್ಭಜನ್ ಸಿಂಗ್

ಮೇ 1 ರಿಂದಲೇ ಮಧ್ಯದಂಗಡಿ ಬಂದ್ ಮಾಡಿ ಅಧಿಕಾರಿಗಳ ಬದಲಾಯಿಸಿ – ಕೆ ದಿವಾಕರ್ ಮೇ 4 ಕ್ಕೆ ಸಾಗರಕ್ಕೆ ಆಮ್ ಆದ್ಮಿ ಪರ ಪ್ರಚಾರ ಸಭೆಗೆ ಖ್ಯಾತ ಕ್ರಿಕೆಟಿಗ ಹರ್ಭಜನ್ ಸಿಂಗ್ ರಿಪ್ಪನ್‌ಪೇಟೆ;- ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಆಭ್ಯರ್ಥಿ ಹರತಾಳು ಹಾಲಪ್ಪ ಆಧಿಕಾರ ಚಲಾಯಿಸಿ ಮಧ್ಯವನ್ನು ಹಂಚುವ ಹುನ್ನಾರದಲ್ಲಿದ್ದು ಆ ಕಾರಣ ಮೇ.1 ರಂದಲೇ ಕ್ಷೇತ್ರದ ವ್ಯಾಪ್ತಿಯಲ್ಲಿ ಮಧ್ಯಮಾರಾಟವನ್ನು ಬಂದ್ ಮಾಡುವುದು ಮತ್ತು ಚುನಾವಣಾ ಕರ್ತವ್ಯ ನಿರ್ವಹಿಸುತ್ತಿರುವ ಮತ್ತು ಚಕ್‌ಪೋಸ್ಟ್ಗಳಲ್ಲಿ ಯಾವುದೇ ವಾಹನವನ್ನು ತಪಾಸಣೆ…

Read More

ಹೊಸನಗರದ ಒಟ್ಟೂರ ಕೆರೆಯು ಸರ್ವ ಜನಾಂಗದ ಶಾಂತಿಯ ತೋಟವೆಂಬಂತ್ತೆ ಹಿಂದೂ,ಮುಸಲ್ಮಾನ್,ಕ್ರೈಸ್ತ ಸೇರಿದಂತೆ ವಿವಿಧ ಧರ್ಮಗಳನ್ನೊಳಗೊಂಡ ಕೆರೆಯಾಗಿದೆ : ಮೂಲೆಗದ್ದೇ ಶ್ರೀಗಳು

ಹೊಸನಗರ:- 03, ಇಂದು ಒಟ್ಟೂರು ಕೆರೆಯ ಅಭಿವೃದ್ಧಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಭಿವೃದ್ಧಿ ಯೋಜನೆ, ಮೂಲೆಗದ್ದೆ ಮಠದ ಶ್ರೀಗಳಿಂದ, ಮಸೀದಿಯ ಗುರುಗಳು ಚರ್ಚ್ ನ ಫಾದರ್, ಸಾ,ರ ಸಂಸ್ಥೆ, ಪಟ್ಟಣ ಪಂಚಾಯಿತಿ, ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದಿಂದ ಹೂಳೆತ್ತುವ ರ್ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.  ಚಾಲನೆ ನೀಡಿ ಮಾತನಾಡಿದ ತಾಲ್ಲೂಕಿನ ಮೂಲೆಗದ್ದೆ ಮಠದ ಶ್ರೀ ಮ,ನಿ,ಪ್ರಾ, ಚನ್ನಬಸವ ಮಹಾ ಸ್ವಾಮಿಗಳು ಮಾತನಾಡಿ. ಒಟ್ಟೂರ ಕೆರೆಯು ಸರ್ವ ಜನಾಂಗದ ಶಾಂತಿಯ ತೋಟವೆಂಬಂತ್ತೆ ಹಿಂದೂ, ಮುಸಲ್ಮಾನ್, ಕ್ರೈಸ್ತ ಸೇರಿದಂತೆ ವಿವಿಧ…

Read More

ಹೊಸನಗರ : ನಿಯಂತ್ರಣ ತಪ್ಪಿದ ಬೈಕ್‌ ಹಿನ್ನೀರಿಗೆ ಬಿದ್ದು ನಿವೃತ್ತ ಮುಖ್ಯ ಶಿಕ್ಷಕ ಸಾವು

A retired headmaster died after his bike lost control and fell into backwaters from a bridge near Nagar in Hosanagar taluk, Shivamogga. Police have registered a case. ಶಿವಮೊಗ್ಗ: ಸೇತುವೆ ಮೇಲೆ ಬೈಕ್ ಚಲಾಯಿಸುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಹಿನ್ನೀರಿಗೆ ಬಿದ್ದು ನಿವೃತ್ತ ಮುಖ್ಯ ಶಿಕ್ಷಕನೊಬ್ಬ ಸಾವನ್ನಪ್ಪಿದ ದುರ್ಘಟನೆ ಹೊಸನಗರ ತಾಲೂಕಿನ ನಗರ ಸಮೀಪದ ಸೋಮವಾರಪೇಟೆ ಪ್ರದೇಶದಲ್ಲಿ ಶನಿವಾರ ಬೆಳಗ್ಗೆ ನಡೆದಿದೆ. ಸಂಪೇಕಟ್ಟೆ ಸರ್ಕಾರಿ ಶಾಲೆಯ ಮುಖ್ಯ…

Read More

ಮೀಸಲಾತಿ ಹೆಸರಿನಲ್ಲಿ ಸಮಾಜದಲ್ಲಿ ಒಡಕು ಹುಟ್ಟು ಹಾಕುವ ಪ್ರಯತ್ನ ಸಹಿಸುವುದಿಲ್ಲ : ವೀರೇಶ್ ಆಲುವಳ್ಳಿ

ರಿಪ್ಪನ್‌ಪೇಟೆ: ಕೂಡಲ ಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಬಸವ ಜಯ ಮೃತ್ಯುಂಜಯ ಸ್ವಾಮೀಜಿಯವರು ಪಂಚಮಸಾಲಿ ಲಿಂಗಾಯಿತ ಜಾತಿಗೆ 2(ಎ) ಮೀಸಲಾತಿ ನೀಡುವಂತೆ ಒತ್ತಾಯಿಸಿ ಹೊಸನಗರ ತಾಲೂಕಿನ ವ್ಯಾಪ್ತಿಯಲ್ಲಿ ಜಾಗೃತ ಸಭೆ ನಡೆಸಿ ತಾಲೂಕಿನ ವ್ಯಾಪ್ತಿಯ ವೀರಶೈವ ಸಮಾಜದಲ್ಲಿ ಒಡಕು ಹುಟ್ಟುಹಾಕುವ ಪ್ರಯತ್ನ ನಡೆಸುತ್ತಿದ್ದಾರೆಂದು ಹೊಸನಗರ ತಾಲ್ಲೂಕು ವೀರಶೈವ ಜಾಗೃತಿ ವೇದಿಕೆಯ ಮುಖಂಡ,ತಾಲ್ಲೂಕು ಪಂಚಾಯ್ತಿ ಮಾಜಿ ಅಧ್ಯಕ್ಷ ವೀರೇಶ್ ಆಲವಳ್ಳಿ ಆರೋಪಿಸಿದ್ದಾರೆ.  ಪಟ್ಟಣದ ಗ್ರಾಪಂ ಸಭಾಭವನದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಸಮಾಜದ ಎಲ್ಲಾ ಬಾಂಧವರು ಹೊಂದಿಕೊಂಡು ಹೋಗಬೇಕಾಗಿದೆ.ವೀರಶೈವರು ಹಾಗೂ…

Read More

Anandapura | ಗೌತಮಪುರ ಮಾರಿಕಾಂಬಾ ಜಾತ್ರೆಯಲ್ಲಿ ಬಂದೋಬಸ್ತ್ ನಲ್ಲಿದ್ದ ಪೊಲೀಸರ ಮೇಲೆ ಯುವಕರಿಂದ ಹಲ್ಲೆ..!! ವೀಡಿಯೋ ವೈರಲ್

Anandapura | ಗೌತಮಪುರ ಮಾರಿಕಾಂಬಾ ಜಾತ್ರೆಯಲ್ಲಿ ಬಂದೋಬಸ್ತ್ ನಲ್ಲಿದ್ದ ಪೊಲೀಸರ ಮೇಲೆ ಯುವಕರಿಂದ ಹಲ್ಲೆ..!! ವೀಡಿಯೋ ವೈರಲ್ ಇತ್ತೀಚೆಗೆ ಜನಸಾಮಾನ್ಯರನ್ನು ರಕ್ಷಣೆ ಮಾಡುವ ಪೊಲೀಸರಿಗೆ ರಕ್ಷಣೆ ಇಲ್ಲದಂತಾಗಿದೆ. ಸದ್ಯ ಪೊಲೀಸರ ಮೇಲೆಯೇ ಕೆಲವು ಪುಂಡರು ಹಲ್ಲೆ ನಡೆಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ(sagara) ತಾಲೂಕಿನ ಆನಂದಪುರದ(Anandapura) ಗೌತಮಪುರ ಮಾರಿಕಾಂಬಾ ಜಾತ್ರೆಯಲ್ಲಿ ನಡೆದಿದೆ. ಜಾತ್ರೆಯಲ್ಲಿ ಅಂಗಡಿ ಮುಂಗಟ್ಟು ಬಳಿ ಗಲಾಟೆ ಮಾಡುತ್ತಿರುವುದನ್ನು ತಡೆಯಲು ಹೋದ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದಾರೆ. ಆನಂದಪುರ ಪೊಲೀಸ್ ಠಾಣೆ ಸಿಬ್ಬಂದಿ ಕಿರಣ್ ಎಂಬುವವರ…

Read More

ಸಾಗರದ ಬಿಜೆಪಿ ಮುಖಂಡ ಅನುಮಾನಾಸ್ಪದವಾಗಿ ಸಾವು

ಸಾಗರ: ಬಿಜೆಪಿ ಬೂತ್ ಕಮಿಟಿ ಅಧ್ಯಕ್ಷನೋರ್ವ ನೇಣು ಬಿಗಿದ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಮರತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ. ಶಿರೂರು ಆಲಳ್ಳಿ ವಾಸಿಯಾದ ಬಿಜೆಪಿ ಬೂತ್ ಕಮಿಟಿ ಅಧ್ಯಕ್ಷ ಅಣ್ಣಪ್ಪ ಅವರು ನಗರದ ಹೆಲಿಪ್ಯಾಡ್ ಬಳಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಈ ಸಾವಿನ ಹಿಂದೆ ಹತ್ತು ಹಲವಾರು ಅನುಮಾನಗಳು ಮೂಡಿದೆ. ಸಾಗರ ಉಪ ವಿಭಾಗದ ಎಎಸ್‌ಪಿ ರೋಹನ್ ಜಗದೀಶ್, ಸಾಗರ ಗ್ರಾಮಾಂತರ ಠಾಣೆಯ ಸಿಪಿಐ ಗಿರೀಶ್, ಅಪರಾಧ ವಿಭಾಗದ ಸುಜಾತ, ಶಿವಮೊಗ್ಗ…

Read More

ಲಾರಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಪುರುಷನ ಶವ ಪತ್ತೆ..!!|deadbody

ತೀರ್ಥಹಳ್ಳಿ : ಪಟ್ಟಣದ ಹೊಸ ಕೋರ್ಟ್ ಬಳಿ  ಲಾರಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಪುರುಷನ ಶವ ಪತ್ತೆಯಾಗಿದೆ. 4 ದಿನಗಳ ಹಿಂದೆಯೇ ಲಾರಿಯಲ್ಲೇ ಹೃದಯಾಘಾತದಿಂದ  ಸಾವನಪ್ಪಿರಬಹುದು ಎಂದು ಹೇಳಲಾಗುತ್ತಿದೆ. ನಾಲ್ಕು ದಿನಗಳ ಹಿಂದೆ ಹುಬ್ಬಳ್ಳಿಯಿಂದ ಲಾರಿಯಲ್ಲಿ ಲೋಡ್ ತುಂಬಿಸಿಕೊಂಡು ಬಂದು ತೀರ್ಥಹಳ್ಳಿಯಲ್ಲಿ ಇಳಿಸಿ ರಾತ್ರಿ ಊಟ ಮಾಡಿ ಲಾರಿಯಲ್ಲಿ ಮಲಗಿದ್ದಾಗ ಹೃದಯಘಾತವಾಗಿ ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ. ಅಂದಾಜು 50 ವರ್ಷದ ವ್ಯಕ್ತಿ ಎನ್ನಲಾಗುತಿದ್ದು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಜೆಸಿ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ.  ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಸಹಕಾರಿ ಸಂಸ್ಥೆಗಳಿಂದ ರೈತರ ಬದುಕು ಹಸನಾಗಿದೆ – ಹರತಾಳು ಹಾಲಪ್ಪ|inauguration

ಸಹಕಾರಿ ಸಂಸ್ಥೆಗಳಿಂದ ರೈತರ ಬದುಕು ಹಸನಾಗಿದೆ : ಹಾಲಪ್ಪ ರಿಪ್ಪನ್‌ಪೇಟೆ : ಸಹಕಾರಿ ಸಂಘ ಸಂಸ್ಥೆಗಳಿಂದ ಗ್ರಾಮೀಣ ಭಾಗದ ರೈತ ಕುಟುಂಬದ ಬದುಕು ಹಸನಾಗಿದೆ ಎಂದು ಎಂದು ಶಾಸಕ ಹಾಗೂ ಎಂಎಸ್‌ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು.  ಪಟ್ಟಣದ ಶಿವಮೊಗ್ಗ ರಸ್ತೆಯಲ್ಲಿ ಎರಡು ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಟ್ಟಡ ಹಾಗೂ ೮೫ ಲಕ್ಷದ ನಬಾರ್ಡ್ ಯೋಜನೆಯಲ್ಲಿ ನಿರ್ಮಿಸಿರುವ ಬಹುಸೇವಾ ವಾಣಿಜ್ಯ ಗೋದಾಮು ಹಾಗೂ ೪ನೇ ವರ್ಷದ ಜಿಲ್ಲಾ ಮಟ್ಟದ…

Read More