Headlines

ಕಾಡಾನೆಗಳ ಸೆರೆಗೆ ಮುಂದಾದ ಅರಣ್ಯ ಇಲಾಖೆ

ಕಾಡಾನೆಗಳ ಸೆರೆಗೆ ಮುಂದಾದ ಅರಣ್ಯ ಇಲಾಖೆ ಮಲೆನಾಡು ಭಾಗದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದೆ. ಫಸಲಿಗೆ ಬಂದ ಬೆಳೆಗಳನ್ನು ಕಾಡಾನೆಗಳು ಹಾಳು ಮಾಡುತ್ತಿವೆ. ಇದೀಗ ಅರಣ್ಯ ಇಲಾಖೆಯು ಕಾಡಾನೆಗಳ ಸೆರೆಗೆ ಮುಂದಾಗಿದೆ. ಸಕ್ರೈಬೈಲು ಆನೆ ಬಿಡಾರದಿಂದ ಕಾಡಾನೆ ಸೆರೆಗೆ ಆನೆಗಳು ಬಂದಿವೆ. ಎರಡು ಆನೆಗಳ ಮೂಲಕ ಅರಣ್ಯ ಇಲಾಖೆ ಕಾಡಾನೆ ಸೆರೆಗೆ ಮುಂದಾಗಿದೆ. ಶಿವಮೊಗ್ಗ ಪುರದಾಳು, ಸಿರಿಗೇರೆ ಭಾಗದಲ್ಲಿ ಕಾಡಾನೆಗಳು ಬೆಳೆ ಹಾನಿ ಮಾಡಿದ್ದವು. ಕಾಡಾನೆ ಹಾವಳಿ ಖಂಡಿಸಿ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದರು. ಸ್ಥಳೀಯರ ಆಕ್ರೋಶದ ಹಿನ್ನಲೆ ಕಾಡಾನೆ…

Read More

3ನೇ ತರಗತಿ ವಿದ್ಯಾರ್ಥಿನಿಗೆ ಹೃದಯಾಘಾತ! ಏಕಾಏಕಿ ಕುಸಿದು ಬಿದ್ದು ಬಾಲಕಿ ಸಾವು

3ನೇ ತರಗತಿ ವಿದ್ಯಾರ್ಥಿನಿಗೆ ಹೃದಯಾಘಾತ! ಏಕಾಏಕಿ ಕುಸಿದು ಬಿದ್ದು ಬಾಲಕಿ ಸಾವು ಚಾಮರಾಜನಗರ | ಲೋಬಿಪಿ ಹಾಗೂ ಹೃದಯಾಘಾತದಿಂದ 3 ನೇ ತರಗತಿಯ 8 ವರ್ಷದ ಬಾಲಕಿ ತೇಜಸ್ಬಿನಿ ಅಂಬ ಪುಟ್ಟ ಬಾಲಕಿ ಅಸ್ವಸ್ಥಗೊಂಡು ಶಾಲಾ ಆವರಣದಲ್ಲಿ ಮೃತಳಾಗಿದ್ದಾಳೆ. ಚಾಮರಾಜನಗರ ತಾಲೂಕಿನ ಬದನಗುಪ್ಪೆ ಗ್ರಾಮದ ಲಿಂಗರಾಜು ಹಾಗೂ ಶೃತಿ ದಂಪತಿಯ ಪುಟ್ಟ ಮಗಳು8 ವರ್ಷದ ತೇಜಸ್ವಿನಿ ಶಾಲೆಯ ತರಗತಿಯಲ್ಲಿಯೇ ಹೃದಯಾಘಾತದಿಂದ ಸಾವನ್ನಪ್ಪಿದ ದುರ್ಘಟನೆ ನಡೆದಿದೆ. ಚಾಮರಾಜನಗರ ಪಟ್ಟಣದ ಸೆಂಟ್ ಪ್ರಾನ್ಸಿಸ್ ಶಾಲೆಯ ಮೂರನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ…

Read More

ಮೃತದೇಹ ಸಾಗಿಸುತಿದ್ದ ಆಂಬ್ಯುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ

ಮೃತದೇಹವನ್ನು ಸಾಗಿಸುತ್ತಿದ್ದ ಅಂಬ್ಯುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ಆಗುಂಬೆ ಸಮೀಪದಲ್ಲಿ ನಡೆದಿದೆ. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದ ತರೀಕೆರೆ ನಿವಾಸಿಯೊಬ್ಬರ ಮೃತದೇಹವನ್ನು ಕರೆತರುತಿದ್ದಾಗ ಆಗುಂಬೆ ಸಮೀಪದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಆಂಬ್ಯುಲೆನ್ಸ್ ಪಲ್ಟಿಯಾಗಿರುವ ಘಟನೆ ನಡೆದಿದೆ. ಅಪಘಾತದಲ್ಲಿ ಮೃತ ವ್ಯಕ್ತಿಯ ಮಗನಿಗೆ ಪೆಟ್ಟಾಗಿದ್ದು ತೀರ್ಥಹಳ್ಳಿಯ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ. ಆಗುಂಬೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More

ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ಶಾಖವಳ್ಳಿ ಶಾಲೆಯ ಮುಖ್ಯ ಶಿಕ್ಷಕ ಹರೀಶ್

ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ಶಾಖವಳ್ಳಿ ಶಾಲೆಯ ಮುಖ್ಯ ಶಿಕ್ಷಕ ಹರೀಶ್ ಹೊಸನಗರ ತಾಲ್ಲೂಕಿನ ಕೋಡೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಶಾಖವಳ್ಳಿ ಸರ್ಕಾರಿ ಕಿರಿಯ ಪ್ರಾರ್ಥಮಿಕ ಪಾಠ ಶಾಲೆ ಮುಖ್ಯ ಶಿಕ್ಷಕ ಹರೀಶ್ ಪಿ. ರವರಿಗೆ 2024-2025ನೇ ಸಾಲಿನ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಹೊಸನಗರದಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ದಿನದಂದು ಪ್ರದಾನ ಮಾಡಲಾಯಿತು. 2007ರ ಫೆಬ್ರವರಿ 2 ರಂದು ಹೊಸನಗರ ತಾಲ್ಲೂಕಿನ ಸ.ಕಿ.ಪ್ರಾ ಶಾಲೆ ಬಾಳೆಕೊಪ್ಪದಲ್ಲಿ ತನ್ನ ವೃತ್ತಿ ಜೀವನ ಪ್ರಾರಂಭಿಸಿದ ಇವರು 2016ರ…

Read More

ಪುನೀತ್ ರಾಜ್‍ಕುಮಾರ್ ನಾಮಫಲಕಕ್ಕೆ ಬಣ್ಣ ಬಳಿದ ಪ್ರಕರಣ : ಕಿಡಿಗೇಡಿಗಳ ಬಂಧಿಸುವಂತೆ ಒತ್ತಾಯಿಸಿ ಕರವೇ ಪ್ರತಿಭಟನೆ

ರಿಪ್ಪನ್ ಪೇಟೆ : ಕರ್ನಾಟಕದ ಮೇರುನಟ ಕರ್ನಾಟಕರತ್ನ ಪುನೀತ್ ರಾಜ್ ಕುಮಾರ್ ರವರ ನಾಮಫಲಕಕ್ಕೆ ಬಣ್ಣ ಬಳಿದ ಕಿಡಿಗೇಡಿಗಳನ್ನು ಬಂಧಿಸುವಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವ ಪೊಲೀಸ್ ಇಲಾಖೆ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ  ಪ್ರತಿಭಟನೆ ನಡೆಯಿತು. ಪಟ್ಟಣದ ವಿನಾಯಕ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಪ್ರತಿಭಟನಕಾರರು ಪುನೀತ್ ರಾಜ್ ಕುಮಾರ್ ರವರ ನಾಮಫಲಕಕ್ಕೆ ಬಣ್ಣ ಬಳಿದ  ಕಿಡಿಗೇಡಿಗಳನ್ನು ಬಂಧಿಸುವಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವ ಪೊಲೀಸ್ ಇಲಾಖೆಯ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ…

Read More

ಸೇತುವೆ ಉದ್ಘಾಟನೆಯ ನಂತರದ ಮೊದಲ ಜಾತ್ರೆಗೆ ಸಿಗಂದೂರು ಸಿದ್ಧ – ಯಾವಾಗ ಗೊತ್ತಾ!!? ಈ ಸುದ್ದಿ ನೋಡಿ

marking the first celebration after the inauguration of the Siganduru Chowdeshwari Bridge. With early-morning rituals, sacred homas, grand processions, cultural programmes and a popular night drama, the two-day event is expected to draw a massive gathering of devotees. Faith, tradition and festivity will come together once again at Siganduru. ಸೇತುವೆ ಉದ್ಘಾಟನೆಯ ನಂತರದ ಮೊದಲ ಜಾತ್ರೆಗೆ ಸಿಗಂದೂರು…

Read More

ಶಿವಮೊಗ್ಗ: ತಲೆ ಮೇಲೆ ಕಲ್ಲು ಎತ್ತಿಹಾಕಿ ರಿಯಲ್ ಎಸ್ಟೇಟ್ ಉದ್ಯಮಿ ಸಾದಿಕ್ ಕೊಲೆ!

ಶಿವಮೊಗ್ಗ: ನಗರದ ಕಲ್ಲೂರು ಮಂಡ್ಲಿಯ ಸಮೀಪ ಉದ್ಯಮಿಯೊಬ್ಬರನ್ನು ದುಷ್ಕರ್ಮಿಗಳು ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದಾರೆ. ಇಲಿಯಾಸ್ ನಗರದ ಸೈಯದ್ ಸಾದಿಕ್ (40) ಮೃತ ದುರ್ದೈವಿ. ಕಲ್ಲೂರು ಮಂಡ್ಲಿಯ ತೋಟದಲ್ಲಿ  ಕೊಲೆ ನಡೆದಿರುವ ಸಾಧ್ಯತೆಯಿದೆ. ಸಾದಿಕ್ ಅವರು ರಿಯಲ್ ಎಸ್ಟೇಟ್ ಉದ್ಯಮ ನಡೆಸುತ್ತಿದ್ದು, ಈ ವ್ಯವಹಾರಕ್ಕೆ ಸಂಬಂದಿಸಿದಂತೆಯೇ ಕೊಲೆಯಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ.  ತುಂಗಾನಗರ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ಸ್ಥಳಕ್ಕೆ ತೆರಳಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ಬರಬೇಕಿದೆ.  

Read More

ತೀರ್ಥಹಳ್ಳಿಯಲ್ಲಿ ಕೆನ್ನಾಯಿ (ಕೆಂಪು ನಾಯಿ)ಗುಂಪು ಪ್ರತ್ಯಕ್ಷ!!!|red dog

ತೀರ್ಥಹಳ್ಳಿಯಲ್ಲಿ ಕೆನ್ನಾಯಿ (ಕೆಂಪು ನಾಯಿ)ಗುಂಪು ಪ್ರತ್ಯಕ್ಷ! ತೀರ್ಥಹಳ್ಳಿ : ತಾಲೂಕಿನ ಹೊದಲಾದಲ್ಲಿ ಅಪರೂಪದ ಕೆನ್ನಾಯಿಯ ಗುಂಪು ಪತ್ತೆಯಾಗಿದ್ದು  ಮಾರೀಕೆರೆ ಅರಣ್ಯದ ಬಳಿ ಅತಿ ವಿರಳವಾದ ಕೆನ್ನಾಯಿಯ ಗುಂಪೊಂದು ಕಂಡುಬಂದಿದೆ. ಅರಣ್ಯ ವೀಕ್ಷಕರಾದ ಪ್ರಜ್ವಲ್ HG ಇವರು ಕರ್ತವ್ಯ ದಲ್ಲಿದ್ದ ಸಂದರ್ಭದಲ್ಲಿ ತಮ್ಮ ಕುಟುಂಬದ ಗುಂಪಿನಲ್ಲಿ ಮಾರಿಕೆರೆ ದಡದಿಂದ ಕಾಡಿನತ್ತ ಹಾದು ಹೋಗುತ್ತಿರುವುದನ್ನು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದ್ದಾರೆ. ನಾಗರಹೊಳೆ ಅಭಯಾರಣ್ಯದಲ್ಲಿ ಮಾತ್ರ ಕಂಡುಬರುವ ಇವುಗಳು ತೀರ್ಥಹಳ್ಳಿಯ ಹೊದಲದಲ್ಲಿ ಕಂಡುಬಂದಿದ್ದು ಯಾವ ಕಾರಣಕ್ಕೆ ಬಂದಿದೆ ಎಂಬುದು ಮಾತ್ರ…

Read More

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ – ಮೂವರು ಸ್ಥಳದಲ್ಲೇ ಸಾವು

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ – ಮೂವರು ಸ್ಥಳದಲ್ಲೇ ಸಾವು ಶಿವಮೊಗ್ಗ: ನಗರದ ಹೊರವಲಯದ ಗೋಂಧಿ ಚಟ್ನಹಳ್ಳಿ ಗ್ರಾಮದ ಬಳಿ ಇಂದು (ಗುರುವಾರ) ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ದುರ್ಮರಣ ಹೊಂದಿದ್ದಾರೆ. ಶಿವಮೊಗ್ಗದಿಂದ ಹೊನ್ನಾಳಿ ಕಡೆಗೆ ತೆರಳುತ್ತಿದ್ದ ಅಶೋಕ್ ಲೇಲ್ಯಾಂಡ್ ಗೂಡ್ಸ್ ವಾಹನವು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ, ವಾಹನದಲ್ಲಿದ್ದ ನಾಲ್ವರಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ದುರ್ಘಟನೆ ಇಂದು ಬೆಳಿಗ್ಗೆ ಸುಮಾರು 5.30ರ…

Read More

Ripponpet | ಗೋಪೂಜೆ ಹಬ್ಬದಂದು ಗೋರಕ್ಷಕನಿಗೆ ಸನ್ಮಾನ

Ripponpet | ಗೋಪೂಜೆ ಹಬ್ಬದಂದು ಗೋರಕ್ಷಕನಿಗೆ ಸನ್ಮಾನ ರಿಪ್ಪನ್‌ಪೇಟೆ : ಇಂದು ಬಲಿಪಾಡ್ಯಮಿಯ ಅಂಗವಾಗಿ ರಿಪ್ಪನ್‌ಪೇಟೆಯ ವಿವಿದಢೆಯಲ್ಲಿ ಕಡೆಗಳಲ್ಲಿ ಗೋಪೂಜೆಯನ್ನು ಶ್ರದ್ದಾಭಕ್ತಿಯಿಂದ ಆಚರಿಸಲಾಯಿತು. ಪಟ್ಟಣದ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಗೋ ಮಾತೆಗೆ ಬೆಲ್ಲ ಅಕ್ಕಿ ಬಾಳೆಹಣ್ಣು ನೀಡಿ ವಿಶೇಷವಾಗಿ ಗೋಪೂಜೆಯನ್ನು ನೆರವೇರಿಸಲಾಯಿತು. ಇದೇ ಸಂಧರ್ಭದಲ್ಲಿ ಪಟ್ಟಣದ ಗೋರಕ್ಷಕ ದೇವರಾಜ್ ಕೆರೆಹಳ್ಳಿ ರವರ ಗೋಸೇವೆಯನ್ನು ಗುರುತಿಸಿ ಹಿಂದೂ ಜಾಗರಣ ವೇದಿಕೆಯ ವತಿಯಿಂದ ದೇವರಾಜ್ ಕೆರೆಹಳ್ಳಿ ದಂಪತಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು. ಈ ಸಂಧರ್ಭದಲ್ಲಿ ಸಿದ್ದಿವಿನಾಯಕ…

Read More