ದೈವದ ಬಗ್ಗೆ ಕೀಳಾಗಿ ಮಾತನಾಡಿರುವ ಆರಗ ಜ್ಞಾನೇಂದ್ರರನ್ನು ದೈವವೇ ನೋಡಿಕೊಳ್ಳುತ್ತದೆ – ಕಿಮ್ಮನೆ ರತ್ನಾಕರ್|Kimmane

ಶಿವಮೊಗ್ಗ : ಕರಾವಳಿಯ ದೈವರಾಧನೆ ವಿರುದ್ಧ ಗೃಹ ಸಚಿವ ಆರಗ ಜ್ಞಾನೇಂದ್ರ ಜಾಪಾಳ್ ಮಾತ್ರೆಗೆ ಹೋಲಿಸಿದ್ದು ಇದರ ವಿರುದ್ಧ ಕಿಮ್ಮನೆ ಗರಂ ಆಗಿ ಅವರನ್ನು ದೈವವೇ ನೋಡಿಕೊಳ್ಳಲಿದೆ ಎಂದು ಪ್ರತಿಭಟನೆಯಲ್ಲೇ ಶಾಪ ಹಾಕಿದ್ದಾರೆ. ತೀರ್ಥಹಳ್ಳಿ ತಾಲೂಕಿನ ಮೇಲಿನ ಕುರುವಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರಿಗೆ ಹೊಡೆದಿರುವುದನ್ನ ಖಂಡಿಸಿ ಗುರುವಾರ ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ಅವರ ನೇತೃತ್ವದಲ್ಲಿ ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದ್ದು ಅಲ್ಲಿ ಮಾತನಾಡಿದ ಅವರು ಮೇಲಿನ ಕುರುವಳ್ಳಿಯ ಗ್ರಾಪಂ ನಲ್ಲಿ…

Read More

ತರಕಾರಿ ಸಾಗಾಣಿಕೆ ವಾಹನ ಬೈಕ್ ಗೆ ಢಿಕ್ಕಿ: ಇಬ್ಬರು ಸಾವು

ಸೊರಬ: ತರಕಾರಿ ಸಾಗಾಣಿಕೆ ವಾಹನ ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ಕರ್ಜಿಕೊಪ್ಪ ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದೆ. ಶಿಕಾರಿಪುರ ತಾಲೂಕಿನ ಕರ್ನಲ್ಲಿ ಗ್ರಾಮದ ರುದ್ರಗೌಡ ಮಲ್ಲೇಶಗೌಡ(50) ಹಾಗೂ ಭರಮಗೌಡ ಚಂದ್ರಪ್ಪ ( 35) ಮೃತ ದುರ್ದೈವಿಗಳು. ಶಿರಾಳಕೊಪ್ಪ ಮಾರ್ಗವಾಗಿ ಸಾಗರದೆಡೆಗೆ ತೆರಳಿತ್ತಿದ್ದ ತರಕಾರಿ ಸಾಗಾಣಿಕೆ ವಾಹನ ಎದುರಿಗೆ ಬರದುತ್ತಿದ್ದ ಬೈಕಿಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸೊರಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ…

Read More

ಆಗುಂಬೆ ಘಾಟಿಯಲ್ಲಿ ಮತ್ತೇ ರಸ್ತೆಗೆ ಅಡ್ಡಲಾಗಿ ಉರುಳಿಬಿದ್ದ ಮರಗಳು: ಸಂಚಾರ ಸಂಪೂರ್ಣ ಅಸ್ತವ್ಯಸ್ತ

ಆಗುಂಬೆ : ಶಿವಮೊಗ್ಗ ಜಿಲ್ಲೆಯ ಗಡಿ ಭಾಗವಾದ ಆಗುಂಬೆ ಘಾಟಿಯಲ್ಲಿ ಮತ್ತೆ ಬೃಹತ್ ಗಾತ್ರದ ಮರಗಳು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದೂ, ಸಂಚಾರ ಅಸ್ತವ್ಯಸ್ತವಾಗಿದೆ. ಇತ್ತೀಚೆಗೆ ಆಗುಂಬೆ ಘಾಟಿಯಲ್ಲಿ ಗುಡ್ಡ ಕುಸಿದ ಪರಿಣಾಮ ವಾಹನ ಸಂಚಾರವನ್ನು ಬಂದ್ ಮಾಡಲಾಗಿತ್ತು ಹಾಗೂ ನೆನ್ನೆಯಿಂದ ಲಘ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿತ್ತು. ಮರ ಬಿದ್ದು ಗಂಟೆಗಳಾದರೂ ಇನ್ನೂ ತೆರವು ಕಾರ್ಯಾಚರಣೆ ಪ್ರಾರಂಭವಾಗಿಲ್ಲ,ಸುಮಾರು 4 ರಿಂದ 5 ಕಿಮೀ ರಸ್ತೆಯಲ್ಲಿ ಲಘು ವಾಹನಗಳಿದ್ದು ಸಂಬಂಧಪಟ್ಟ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಹಿಡಿಶಾಪ ಹಾಕುತಿದ್ದಾರೆ. ರೋಗಿಗಳನ್ನು…

Read More

Ripponpete | ಆಹಾರ ಸುರಕ್ಷತಾ ಅಧಿಕಾರಿಗಳ ದಿಡೀರ್ ದಾಳಿ – ಹಲವು ಮಳಿಗೆಗಳಿಗೆ ನೋಟೀಸ್ ಜಾರಿ

Ripponpete | ಆಹಾರ ಸುರಕ್ಷತಾ ಅಧಿಕಾರಿಗಳ ದಿಡೀರ್ ದಾಳಿ – ಹಲವು ಮಳಿಗೆಗಳಿಗೆ ನೋಟೀಸ್ ಜಾರಿ ರಿಪ್ಪನ್‌ಪೇಟೆ : ಪಟ್ಟಣದ ಅಂಗಡಿ ಹಾಗೂ ಹೊಟೇಲ್ ಗಳಲ್ಲಿ ಹಲವಾರು ಆಹಾರ ಸುರಕ್ಷತಾ ಮಾನದಂಡಗಳನ್ನು ಉಲ್ಲಂಘಿಸುತ್ತಿರುವುದು ಕಂಡುಬಂದಿರುವ ಹಿನ್ನಲೆಯಲ್ಲಿ ಆಹಾರ ಸುರಕ್ಷ ತಾ ಹಾಗೂ ಗುಣಮಟ್ಟ ಇಲಾಖೆ(fssai) ಅಧಿಕಾರಿಗಳ ತಂಡ ಪಟ್ಟಣದ ಹಲವು ಅಂಗಡಿಗಳ , ಬೇಕರಿಗಳ ಮೇಲೆ ದಿಢೀರ್‌ ದಾಳಿ ನಡೆಸಿರುವ ಘಟನೆ ನಡೆದಿದೆ. ಪಟ್ಟಣದ ಹಲವಾರು ಅಂಗಡಿ , ಬೇಕರಿ ಮತ್ತು ಮಾಲ್ ಗಳಲ್ಲಿ ಅವಧಿ ಮೀರಿದ…

Read More

ಆಲುವಳ್ಳಿ ಗ್ರಾಮದಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ|Aluvalli

ರಿಪ್ಪನ್‌ಪೇಟೆ: ಇಲ್ಲಿನ ಸಮೀಪದ ಆಲುವಳ್ಳಿ ಗ್ರಾಮದಲ್ಲಿ  67ನೇ ಕರ್ನಾಟಕ  ರಾಜ್ಯೋತ್ಸವದ ಅದ್ಧೂರಿಯಾಗಿ ನಡೆಯಿತು. ಆಲುವಳ್ಳಿ ಗ್ರಾಮದ ವೃತ್ತದಲ್ಲಿ ಕನ್ನಡ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.ಪ್ರಮುಖ ಬೀದಿಗಳಲ್ಲಿ ತಾಯಿ ಭುವನೇಶ್ವರಿ ದೇವಿಯ ಭವ್ಯ ಶೋಭಾ ಯಾತ್ರೆ ಮತ್ತು  ಮೆರವಣಿಗೆ ನಡೆಯಿತು. ಮಕ್ಕಳು ವಿವಿಧ ವೇಷಭೂಷಣ ಧರಿಸಿ ಮೆರವಣಿಗೆಯಲ್ಲಿ ಪಾಲ್ಗೊಂಡು ಎಲ್ಲಾರ ಗಮನ ಸೆಳೆದರು. ಕಾರ್ಯಕ್ರಮದ ಧ್ವಜಾರೋಹಣ ಕಾರ್ಯಕ್ರಮವನ್ನು ಕನ್ನಡ ಸಂಘದ ಅಧ್ಯಕ್ಷರಾದ ಟೀಕೇಶಪ್ಪ ಗೌಡ ನೆರವೇರಿಸಿದರು ಈ ಸಂಧರ್ಭದಲ್ಲಿ ಗ್ರಾಮದ ಹೈಮಾಸ್ಕ್ ಬೀದಿ ದೀಪವನ್ನು ಹೊಸನಗರ ತಾಪಂ ಮಾಜಿ ಅಧ್ಯಕ್ಷ…

Read More

ಕರ್ತವ್ಯದ ನಡುವೆಯೂ ಮಾನವೀಯತೆ ಮೆರೆದ ಕಾರ್ಗಲ್ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ತಿರುಮಲೇಶ್ ನಾಯ್ಕ್…

ಸಾಗರ: ಇಂದು ಬೆಳಗ್ಗೆ ಸಾಗರ ಹೊರವಲಯದ ಗ್ರಾಮಾಂತರ ವ್ಯಾಪ್ತಿಯ ಜೋಗ ರಸ್ತೆಯ ಕಾನ್ಲೆ ತಿರುವಿನ ಬಳಿ ಸಾಗರದಿಂದ ಜೋಗ ಕಡೆಗೆ  ಯುವಕ ಯುವತಿ ಒಂದೇ  ಹೋಗುತ್ತಿದ್ದ ಒಂದೇ  ಬೈಕ್ ನಲ್ಲಿ ಹೋಗುತ್ತಿದ್ದ ಸಂದರ್ಭ ಎದುರಿನಿಂದ ಹೋಗುತ್ತಿದ್ದ ಬಸ್ಸನ್ನು  ಹಿಂದಿಕ್ಕಿ ಓವರ್ ಟೇಕ್ ಮಾಡುವ ಸಂದರ್ಭದಲ್ಲಿ ಬೈಕ್ ಚಾಲಕನ ನಿಯಂತ್ರಣ ತಪ್ಪಿ  ಎದುರಿನಿಂದ ಬರುತ್ತಿದ್ದ ಕಾರ್ ಗೆ ತಗುಲಿ ಯುವಕನಿಗೆ ಅಲ್ಪ ಸ್ವಲ್ಪ ಹಾಗೂ ಯುವತಿಗೆ ಗಂಭೀರ ಸ್ವರೂಪದ ಗಾಯಗಳಾಗಿ ರಕ್ತದ ಮಡುವಿನಲ್ಲಿ  ಬಿದ್ದಿದ್ದರು.  ಈ ಸಂದರ್ಭದಲ್ಲಿ ಕರ್ತವ್ಯಕ್ಕೆಂದು ಅದೇ…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ಹೊಸನಗರ ಉಪ ವಿಭಾಗದ ರಿಪ್ಪನ್ ಪೇಟೆ ಶಾಖೆಯಲ್ಲಿ ತುರ್ತು ನಿರ್ವಹಣೆ ಇರುವುದರಿಂದ ನಾಳೆ (20-07-2022) ವಿದ್ಯುತ್ ವ್ಯತ್ಯಯವಿರುತ್ತದೆ ಎಂದು ಮೆಸ್ಕಾಂ ಇಲಾಖೆ ತಿಳಿಸಿದೆ. ರಿಪ್ಪನ್‌ಪೇಟೆ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಹಳ್ಳಿಗಳಾದ ಕೆಂಚನಾಲ,ಬೆಳ್ಳೂರು,ಗರ್ತಿಕೆರೆ,ಅರಸಾಳು,ಕೋಡೂರು ಮತ್ತು ಚಿಕ್ಕ ಜೇನಿ ಗ್ರಾಮಗಳಲ್ಲಿ ನಾಳೆ ಬೆಳಿಗ್ಗೆ  9-30 ರಿಂದ ಸಂಜೆ 6 ರವರೆಗೆ  ವಿದ್ಯುತ್ ವ್ಯತ್ಯಯ ಇರುತ್ತದೆ ಎಂದು ಮೆಸ್ಕಾಂ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

Read More

SHIVAMOGGA | ಮಹಿಳಾ ಮತ್ತು ಮಕ್ಕಳ ರಕ್ಷಣೆಗೆ “ಅಕ್ಕ ಪಡೆ”ಗೆ ಅಧಿಕೃತ ಚಾಲನೆ

ಶಿವಮೊಗ್ಗ ಜಿಲ್ಲೆಯಲ್ಲಿ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗಾಗಿ ಅಕ್ಕ ಪಡೆಗೆ ಚಾಲನೆ ನೀಡಲಾಗಿದೆ. 112, 1098 ಸಹಾಯವಾಣಿ ಜಾಗೃತಿ, ಶಾಲಾ–ಕಾಲೇಜುಗಳ ಬಳಿ ಗಸ್ತು ಕಾರ್ಯಾಚರಣೆ ಮುಖ್ಯ ಗುರಿ. SHIVAMOGGA | ಮಹಿಳಾ ಮತ್ತು ಮಕ್ಕಳ ರಕ್ಷಣೆಗೆ “ಅಕ್ಕ ಪಡೆ”ಗೆ ಅಧಿಕೃತ ಚಾಲನೆ ಶಿವಮೊಗ್ಗ : ಜಿಲ್ಲೆಯಲ್ಲಿ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗಾಗಿ ವಿಶೇಷವಾಗಿ “ಅಕ್ಕ ಪಡೆ”ಯನ್ನು ರಚಿಸಲಾಗಿದ್ದು, ಸಮಾಜಘಾತುಕ ಶಕ್ತಿಗಳಿಂದ ನಡೆಯುವ ಯಾವುದೇ ರೀತಿಯ ಕಿರುಕುಳ, ದೌರ್ಜನ್ಯ ಹಾಗೂ ಅಸಭ್ಯ ವರ್ತನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು…

Read More

ರಿಪ್ಪನ್ ಪೇಟೆ ಸಮೀಪದಲ್ಲಿ ಟಿಪ್ಪರ್ ಲಾರಿ ಅಪಘಾತ : ತಪ್ಪಿದ ಭಾರೀ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಲಾರಿಯೊಂದು ಅಪಘಾತವಾದ ಘಟನೆ ರಿಪ್ಪನ್ ಪೇಟೆ ಸಮೀಪದ ಶೆಟ್ಟಿಬೀಡು ಗ್ರಾಮದಲ್ಲಿ ನಡೆದಿದೆ. ಹೊಸನಗರದಿಂದ ರಿಪ್ಪನ್ ಪೇಟೆಗೆ ತೆರಳುತ್ತಿದ್ದ KA55 3809 ಟಿಪ್ಪರ್ ಲಾರಿಯು ಶೆಟ್ಟಿಬೀಡು ಸಮೀಪದಲ್ಲಿ ಬ್ರೇಕ್ ಜಾಮ್ ಆಗಿ ವಾಹನ ಚಾಲಕನ ನಿಯಂತ್ರಣ ತಪ್ಪಿ ಪಕ್ಕದ  ಧರೆಗೆ ಡಿಕ್ಕಿ ಹೊಡೆದ ಪರಿಣಾಮ ಟಿಪ್ಪರ್ ನ ಮುಂಭಾಗ ನಜ್ಜುಗುಜ್ಜಾಗಿದೆ.ಅದೃಷ್ಟವಶಾತ್ ಚಾಲಕನಿಗೆ ಯಾವುದೇ  ಗಂಭೀರ ಗಾಯಗಳಾಗಿಲ್ಲ. ಶೆಟ್ಟಿಬೀಡು ಕ್ರಾಸ್ ನಲ್ಲಿ ಬ್ರೇಕ್ ಜಾಮ್ ಆದ ಕಾರಣ ಚಾಲಕನ ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯು…

Read More

ಬಂಕಾಪುರದ ಮೂಲಸೌಕರ್ಯ ಸಮಸ್ಯೆಗಳ ಕುರಿತು ಜನರ ಧ್ವನಿ ಆಲಿಸಿದ ಶಾಸಕ

ಬಂಕಾಪುರದ ಮೂಲಸೌಕರ್ಯ ಸಮಸ್ಯೆಗಳ ಕುರಿತು ಜನರ ಧ್ವನಿ ಆಲಿಸಿದ ಶಾಸಕ ಬಂಕಾಪುರ: ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರ ಪಟ್ಟಣದ ಶಿಥಿಲಾವಸ್ಥೆಯಲ್ಲಿರುವ ನಾಡಕಚೇರಿ ವೀಕ್ಷಣೆಗೆ ಭೇಟಿ ನೀಡಿದ ಶಾಸಕ ಯಾಸೀರ್ ಅಹಮದ್ ಖಾನ್ ಪಠಾಣ್ ಅವರಿಗೆ ಸಾರ್ವಜನಿಕರು ಪಟ್ಟಣದ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದ ಹಲವು ಸಮಸ್ಯೆಗಳ ಕುರಿತು ಮನವಿ ಸಲ್ಲಿಸಿದರು. ನಾಡಕಚೇರಿ ಕಟ್ಟಡ ಸಂಪೂರ್ಣ ಶಿಥಿಲಾವಸ್ಥೆಯಲ್ಲಿದ್ದು, ಅದನ್ನು ನವೀಕರಿಸಿ ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಉಪ ತಹಸೀಲ್ದಾರ್ ಕಚೇರಿಯನ್ನು ಇದೇ ಕಟ್ಟಡದಲ್ಲಿ ಮುಂದುವರಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದರು. ಇದರಿಂದ…

Read More