Headlines

ರಿಪ್ಪನ್ ಪೇಟೆ : 54 ನೇ ವರ್ಷದ ಗಣೇಶೋತ್ಸವದ ಪ್ರಯುಕ್ತ ಕೊರೋನಾ ಲಸಿಕಾ ಶಿಬಿರ

ರಿಪ್ಪನ್ ಪೇಟೆ : ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ಸಮಿತಿ ರಿಪ್ಪನ್ ಪೇಟೆ ವತಿಯಿಂದ  54 ನೇ ವರ್ಷದ ಗಣೇಶೋತ್ಸವದ ಪ್ರಯುಕ್ತ ಕೊರೋನಾ ಲಸಿಕಾ ಶಿಬಿರವನ್ನು  ನಡೆಸಲಾಯಿತು. ಇಂದು ಪಟ್ಟಣದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಸಭಾಭವನದ ಆವರಣ ದಲ್ಲಿ 18 ವರ್ಷ ಮೇಲ್ಪಟ್ಟವರಿಗೆ 250 ಲಸಿಕೆ  ವಿತರಿಸಲಾಯಿತು. ಈ ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯಾಧಿಕಾರಿ ಶ್ರೀ ಸುರೇಶ್, ರಿಪ್ಪನ್ ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರ ದ ಆರೋಗ್ಯಾಧಿಕಾರಿ ಶ್ರೀ ಅನಿಲ್ ಕುಮಾರ್, ರಿಪ್ಪನ್ ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರ…

Read More

ಹೊಸ ಶಿಕ್ಷಣ ನೀತಿಯನ್ನು ಸಾರ್ವಜನಿಕ ಚರ್ಚೆಗೆ ತಂದು ಜಾರಿಗೊಳಿಸಲಿ : ಕಿಮ್ಮನೆ ರತ್ನಾಕರ್

ಶಿವಮೊಗ್ಗ : ಕೇಂದ್ರ ಸರ್ಕಾರ ಜಾರಿಗೆ ತರುತ್ತಿರುವ ಹೊಸ ಶಿಕ್ಷಣ ನೀತಿಯನ್ನ ಸಾರ್ವಜನಿಕವಾಗಿ ಚರ್ಚಿಸಿ ನಂತರ ಜಾರಿಗೆ ತರಬೇಕೆಂದು ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ಆಗ್ರಹಿಸಿದ್ದಾರೆ. ಅವರು ಇಂದು ಶಿವಮೊಗ್ಗದ ಪ್ರೆಸ್ ಟ್ರಸ್ಟ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹೊಸ ಶಿಕ್ಷಣ ನೀತಿಯನ್ನ ಸಾರ್ವಜನಿಕವಾಗಿ ಚರ್ಚೆಗೆ ಬಿಟ್ಟು ಜಾರಿಗೊಳಿಸಬೇಕು ಇಲ್ಲವಾದಲ್ಲಿ ಇದು ಪ್ರಜಾಪ್ರಭುತ್ವ ವಿರೋಧಿ ನೀತಿ ಆಗಲಿದೆ ಎಂದರು. ಒಂದು ವರ್ಷ ತಡವಾಗಿಯಾದರೂ ಜಾರಿಗೆ ತಂದರೂ ಪರವಾಗಿಲ್ಲ. ಆದರೆ ಶಿಕ್ಷಣ ನೀತಿಯನ್ನ ಸಾರ್ವಜನಿಕ ಚರ್ಚೆಗೆ ತಂದು ಜಾರಿಗೊಳಿಸಬೇಕೆಂದು…

Read More

ಯಶಸ್ವಿನಿ ಯೋಜನೆಯನ್ನು ಮುಂದುವರಿಸುವಂತೆ ಮುಖ್ಯಮಂತ್ರಿಗಳಿಗೆ ರೈತ ಸಂಘದಿಂದ ಮನವಿ:

ಶಿವಮೊಗ್ಗ: ರಾಜ್ಯ ರೈತ ಸಂಘದ ಗೌರವಾಧ್ಯಕ್ಷರಾದ ಹೆಚ್.ಆರ್ ಬಸವರಾಜಪ್ಪರವರು ಇಂದು ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಯಿಯವರನ್ನು ‌ಭೇಟಿ ಮಾಡಿ ಗಾಂಧಿ ಕಥನ ಪುಸ್ತಕವನ್ನು ನೀಡಿ ಅಭಿನಂದಿಸಿದರು. ಈ ಸಂಧರ್ಭದಲ್ಲಿ ರೈತರ ಆಶಾಕಿರಣವಾದ ಯಶಸ್ವಿನಿ ಯೋಜನೆಯಿಂದ ಸಾಕಷ್ಟು ಬಡ ರೈತರಿಗೆ ಅನುಕೂಲವಾಗಿತ್ತು. ಆದ್ದರಿಂದ ಯಶಸ್ವಿನಿ ಯೋಜನೆಯನ್ನು ಮುಂದುವರಿಸವಂತೆ ಹಾಗೂ ಭದ್ರಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿದಂತೆ ಭದ್ರಾ ನದಿಯಿಂದ 12.5TMC ತುಂಗಾ ನದಿಯಿಂದ 17.4TMC ನೀರೆತ್ತಿ ಕೊಡಲು DPR ಆಗಿ ಕಾಮಗಾರಿ ಪ್ರಗತಿಯಲ್ಲಿದೆ, ಆದರೆ ಭದ್ರಾ ಅಣೆಕಟ್ಟು…

Read More

ತೀರ್ಥಹಳ್ಳಿ: ನವವಿವಾಹಿತೆಯನ್ನು ಬಲಿ ತೆಗೆದುಕೊಂಡ ನಾಯಿ ಚೈನ್…! ವಾಕಿಂಗ್ ವೇಳೆ ಆಕಸ್ಮಿಕವಾಗಿ ಕೆರೆಗೆ ಬಿದ್ದು ಸಾವು

ತೀರ್ಥಹಳ್ಳಿ: ಸಾಕುನಾಯಿಯನ್ನು ಕರೆದುಕೊಂಡು ವಾಯುವಿಹಾರಕ್ಕೆ ಹೋಗಿದ್ದ ವೇಳೆ ಆಕಸ್ಮಿಕವಾಗಿ ನವ ವಿವಾಹಿತೆಯೊಬ್ಬಳು ಕೆರೆಗೆ  ಬಿದ್ದು ಸಾವನ್ನಪ್ಪಿದ ಘಟನೆ ತೀರ್ಥಹಳ್ಳಿ ತಾಲೂಕು ಕೈಮರದಲ್ಲಿ ನಡೆದಿದೆ. ನಿಶ್ಮಿತಾ(26) ಮೃತ ವಿವಾಹಿತೆ.ತೀರ್ಥಹಳ್ಳಿಯ ಕೈಮರದ ನಾಗಪ್ಪ ಗೌಡ ಅವರ ಪುತ್ರ ಮಂಜುನಾಥ್ ಅವರ ಪತ್ನಿ ನಿಶ್ಮಿತಾ ಮೂಲತಃ ಹೊಸನಗರ ತಾಲೂಕು ಹುಲಿಕಲ್ ಗ್ರಾಮದವರು. ಕಳೆದ 3 ತಿಂಗಳ ಹಿಂದಷ್ಟೇ ಮದುವೆಯಾಗಿದ್ದರು. ಶನಿವಾರ ಬೆಳಿಗ್ಗೆ ಸಾಕುನಾಯಿಯನ್ನು ಕರೆದುಕೊಂಡು ವಾಯು ವಿಹಾರಕ್ಕೆ ಹೋಗಿದ್ದಾಳೆ. ಈ ವೇಳೆ ಕರೆದಂಡೆ ಮೇಲೆ ಹೋಗುವಾಗ ನಾಯಿ ಚೈನ್ ಎಳೆದು ಓಡಿದೆ….

Read More

ಶಿವಮೊಗ್ಗ: ಅಕ್ರಮ ಗಾಂಜಾ ಮಾರಾಟ ಜಾಲ ಪತ್ತೆ,ಮೂವರು ಆರೋಪಿಗಳು ವಶಕ್ಕೆ :

ಶಿವಮೊಗ್ಗ: ಕಾರಿನಲ್ಲಿ ಗಾಂಜಾ ತಂದು ಮಾರಾಟ ಮಾಡುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಆರೋಪಿಗಳಿಂದ ಭಾರಿ ಮೊತ್ತದ ಗಾಂಜಾ ವಶಕ್ಕೆ ಪಡೆಯಲಾಗಿದೆ.ಕಾರ್ಯಾಚರಣೆಯಲ್ಲಿ ಮೂವರು ಅರೆಸ್ಟ್ ಆಗಿದ್ದು, ನಾಲ್ವರು ನಾಪತ್ತೆಯಾಗಿದ್ದಾರೆ. ಶಿವಮೊಗ್ಗದ ಕಲ್ಲೂರು ಗ್ರಾಮದ ಚಾನಲ್ ಬಳಿ ಈ ಘಟನೆ ಸಂಭವಿಸಿದೆ.  ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ತುಂಗಾ ನಗರ ಪೊಲೀಸರು  ಗಾಂಜಾ ಮಾರಾಟಗಾರರನ್ನು ಬಂಧಿಸಿದ್ದಾರೆ. ಕಲ್ಲೂರು ಗ್ರಾಮದ ಚಾನಲ್ ಬಳಿ ಗಾಂಜಾ ಮಾರಾಟಗಾರರು ಪ್ರತಿದಿನ ಬರುತ್ತಿದ್ದರು. ಕಾರಿನಲ್ಲಿ ಗಾಂಜಾ ತಂದು ಮಾರಾಟ ಮಾಡುತ್ತಿದ್ದರು. ಈ ಬಗ್ಗೆ…

Read More

ಶಿವಮೊಗ್ಗದಿಂದ ಐದು ಮಾರ್ಗದಲ್ಲಿ ವಿಮಾನ ಹಾರಾಟಕ್ಕೆ ನಿರ್ಧರಿಸಲಾಗಿದೆ : ಬಿ ವೈ ರಾಘವೇಂದ್ರ

ಶಿವಮೊಗ್ಗ : ನಗರದ ವಿಮಾನ ನಿಲ್ದಾಣದಿಂದ ಐದು ಮಾರ್ಗಗಳಲ್ಲಿ ವಿಮಾನ ಹಾರಾಟ ನಡೆಸಲು ನಿರ್ಧರಿಸಲಾಗಿದೆ.  ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಅಂತಿಮ ಪ್ರಸ್ತಾವನೆ ಸಲ್ಲಿಸುವ ಕುರಿತು ಸಿದ್ಧತೆ ನಡೆಯುತ್ತಿದೆ. ಶಿವಮೊಗ್ಗದ ಸಾಗರ ರಸ್ತೆ ಕೈಗಾರಿಕಾ ವಸಾಹತು ಪ್ರದೇಶದಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿಗೆ ಚಾಲನೆ ನೀಡಿದ ಬಳಿಕ ಮಾತನಾಡಿ ಸಂಸದ ಬಿ.ವೈ.ರಾಘವೇಂದ್ರ, ಶಿವಮೊಗ್ಗದಿಂದ ಐದು ಮಾರ್ಗದಲ್ಲಿ ವಿಮಾನ ಹಾರಟಕ್ಕೆ ನಿರ್ಧರಿಸಲಾಗಿದೆ ಎಂದರು. ಶಿವಮೊಗ್ಗದಿಂದ ಬೆಂಗಳೂರು, ಚೆನ್ನೈ, ಮುಂಬೈ ಸೇರಿ ಐದು ಮಾರ್ಗಗಳಲ್ಲಿ ವಿಮಾನ ಹಾರಾಟಕ್ಕೆ ನಿರ್ಧರಿಸಲಾಗಿದೆ….

Read More

ಕೋಣಂದೂರಿನ ರಾಷ್ಟ್ರೀಯ ವಸತಿ ಶಾಲೆಯ ಪ್ರಾಂಶುಪಾಲರಾದ ಗಣೇಶ್ ಮೂರ್ತಿ ನಿಧನ :

ಕೋಣಂದೂರು : ಇಲ್ಲಿನ ರಾಷ್ಟ್ರೀಯ ವಸತಿ ಶಾಲೆಯ ಪ್ರಾಂಶುಪಾಲರಾದ ಗಣೇಶ್ ಮೂರ್ತಿ ರವರು ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ. ಇಂದು ಕಾರ್ಯನಿಮಿತ್ತ ಕಾರ್ ನಲ್ಲಿ ಶಿವಮೊಗ್ಗಕ್ಕೆ ತೆರಳಿ ವಾಪಾಸ್ ಗರ್ತಿಕೆರೆಯ ನಿವಾಸಕ್ಕೆ ಹಿಂದಿರುಗುವಾಗ ಆಯನೂರ್ ಬಳಿ ಹಠಾತ್ ಎದೆ ನೋವು ಕಾಣಿಸಿಕೊಂಡಿದೆ.ತಕ್ಷಣ ಕಾರಿನ ಚಾಲಕ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.ಆದರೆ ಅಷ್ಟರಲ್ಲೆ ಅವರ ಪ್ರಾಣಪಕ್ಷಿ ಹಾರಿಹೋಗಿದೆ.ಮೃತದೇಹವನ್ನು ಆಂಬುಲೆನ್ಸ್ ಮೂಲಕ ಗರ್ತಿಕೆರೆಯ ಸ್ವ ಗೃಹಕ್ಕೆ ತರಲಾಗುತ್ತಿದೆ. ಕೋಣಂದೂರು ಶಿಕ್ಷಣ ಕ್ಷೇತ್ರಗಳಲ್ಲಿ ಕ್ರಾಂತಿ ಮೂಡಿಸಿದ್ದ ಗಣೇಶ್ ಮೂರ್ತಿಯವರ ಅಗಲಿಕೆ ಅವರ ಅಸಂಖ್ಯಾತ…

Read More

ಸಾಗರ : ನೂತನ ಸಚಿವರಾದ ಸಾಗರದ ಅಳಿಯಂದರಿಗೆ ತಾಲೂಕ್ ಬಿಜೆಪಿ ಯಿಂದ ಸನ್ಮಾನ

ಸಾಗರ : ನಗರದ ಗಾಂಧಿ ಮೈದಾನದಲ್ಲಿ ಸಾಗರ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ವತಿಯಿಂದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಂಪುಟದ ನೂತನ ಸಚಿವರು ಹಾಗೂ ಸಾಗರದ ಅಳಿಯಂದಿರುಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಶಾಸಕ ಹರತಾಳು ಹಾಲಪ್ಪ ನವರ ನೇತ್ರತ್ವದಲ್ಲಿ ನಡೆದ ಸಚಿವರಿಗೆ ಅಭಿನಂದನಾ ಕಾರ್ಯಕ್ರವು ಒಂದು ಭಾವಪೂರ್ಣ ಸಮಾರಂಭವಾಗಿತ್ತು. ಚೌತಿ ಹಬ್ಬಕ್ಕೆ ತವರಿಗೆ ಬಂದಿದ್ದ ಹೆಣ್ಣು ಮಕ್ಕಳು ಜತೆಗೆ ತಮ್ಮ ಪತಿಯಂದಿರನ್ನೂ ಕರೆದುಕೊಂಡು ಬಂದು ಉಡಿತುಂಬಿಸಿಕೊಂಡರು. ಊರಿನ ಅಳಿಯಂದಿರು ಸುಮ್ಮನೆ ಮಾವನ ಮನೆಗೆ ಬಂದು ಊರಿನ…

Read More

ಮೂಲಭೂತ ಸೌಕರ್ಯವನ್ನು ಕಲ್ಪಿಸುವುದು ಜನ ಪ್ರತಿನಿಧಿಗಳಾದ ನಮ್ಮ ಕರ್ತವ್ಯ: ಬಿ ವೈ ರಾಘವೇಂದ್ರ

ಶಿವಮೊಗ್ಗ : ಜಿಲ್ಲೆಯ ವಿವಿಧ ಹಳೆಯ ಕೈಗಾರಿಕೆಗಳು ಕೆಲವು ಕಾರಣಕ್ಕೆ ಮುಚ್ಚುವ ಸ್ಥಿತಿ ಬಂದಿದೆ ಆದರೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ನಮ್ಮ ಜಿಲ್ಲೆಯಿಂದ ಕೈಗಾರಿಕಾ ಉದ್ಯಮಿಗಳ ಸಹಕಾರದಿಂದ ಉತ್ಪನ್ನಗಳು ತಲುಪುತ್ತಿದೆ, ಇಲ್ಲಿನ ಉದ್ಯಮಿಗಳಿಗೆ ಮೂಲಭೂತ ಸೌಕರ್ಯವನ್ನು ಕಲ್ಪಿಸುವುದು ಜನ ಪ್ರತಿನಿಧಿಗಳಾದ ನಮ್ಮ ಕರ್ತವ್ಯವಾಗಿದೆ ಆದ್ದರಿಂದ ನಮ್ಮ ಸೇವೆ ಮತ್ತು ಕೆಲಸಗಳು ಉತ್ತಮ ಗುಣಮಟ್ಟದಾಗಿರಲಿ ಎಂದು ಸಂಸದರಾದ ಬಿ.ವೈ ರಾಘವೇಂದ್ರ ಅವರು ತಿಳಿಸಿದರು. ಶಿವಮೊಗ್ಗ ಮಹಾನಗರ ಪಾಲಿಕೆ ಮತ್ತು ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ…

Read More

ಹುಂಚಾ : ಕುಪ್ಪಟಹಳ್ಳಿ ಗ್ರಾಮದ ಸಮುದಾಯ ಭವನ ಉದ್ಘಾಟನೆ

ಹುಂಚಾ : ಇಲ್ಲಿನ ಸಮೀಪದ ಕುಪ್ಪಟಹಳ್ಳಿ ಗ್ರಾಮದ ಸಮುದಾಯ ಭವನವನ್ನು ಮಾಜಿ ತಾಪಂ ಅಧ್ಯಕ್ಷರಾದ ವೀರೇಶ್ ಆಲುವಳ್ಳಿ ಯವರು ಗ್ರಾಮಸ್ಥರ ಒತ್ತಾಯದ ಮೇರೆಗೆ ಉದ್ಘಾಟಿಸಿದರು. ಈ ಹಿಂದೆ ಗ್ರಾಮಸ್ಥರ ಮನವಿ ಮೇರೆಗೆ ಕುಪ್ಪಟಹಳ್ಳಿ ಗ್ರಾಮದಲ್ಲಿ ಗಣೇಶನ ಪ್ರತಿಷ್ಠಾಪನೆ ಮಾಡಲು ಹಾಗೂ ಸಭೆ ನಡೆಸಲು ಅನುಕೂಲವಾಗುವಂತೆ ತಾಪಂ ಅಧ್ಯಕ್ಷರಾಗಿದ್ದ ವೀರೇಶ್ ಆಲವಳ್ಳಿ ರವರು ತಾಪಂ  ಅನುದಾನದಲ್ಲಿ ಸಮುದಾಯ ಭವನ ನಿರ್ಮಿಸಿಕೊಟ್ಟಿದ್ದರು.ಆದರೆ ಕರೋನಾ ಕಾರಣದಿಂದ ಉದ್ಘಾಟನೆ ಮಾಡಲು ಆಗಿರಲಿಲ್ಲಾ ಗ್ರಾಮಸ್ಥರ ಒತ್ತಾಯದ ಮೇರೆಗೆ ಇಂದು ವೀರೇಶ್ ಆಲುವಳ್ಳಿ ರವರು ಸಮುದಾಯ…

Read More