Headlines

ಯಕ್ಷಗಾನ ಕಲೆಗೆ ಸಾವಿರ ವರ್ಷದ ಇತಿಹಾಸವಿದೆ : ಶ್ವೇತ ಶ್ರೀಧರ್

ಹೊಸನಗರ : ಯಕ್ಷಗಾನ ಕಲೆಗೆ ಸಾವಿರಾರು ವರ್ಷಗಳ ಇತಿಹಾಸ ವಿದೆ.ಕಲಾವಿದರು ತಮ್ಮ ಪ್ರತಿಭೆ ಯನ್ನು ಯಾವುದೇ ತಯಾರಿ ಇಲ್ಲದೆ ಕ್ಷಣ ಕ್ಷಣಕ್ಕೂ ಪ್ರದರ್ಶನ ನೀಡಿ..ಭಾಗವತರ ಪದ್ಯಕ್ಕೆ ಹೆಜ್ಜೆ ಹಾಕಿ ಅರ್ಥ ಹೇಳುವ ಸ್ಪಷ್ಟ ಕನ್ನಡ ಉಚ್ಚಾರಣೆ ಮಾಡುವ ಕಲೆ…ಸಾಂಪ್ರದಾಯಿಕ, ಸಾಂಸ್ಕೃತಿಕ, ಕಲೆ ಯಕ್ಷಗಾನವಾಗಿದೆ ಎಂದು ಶಿವಮೊಗ್ಗ ಜಿಲ್ಲಾ ಬಿಜೆಪಿ ಮಹಿಳಾ ರ್ಮೋಚಾ ಕಾರ್ಯದರ್ಶಿ ಮಹಿಳಾ ಸಂಘಟನೆಯ ಮುಖ್ಯಸ್ಥೆ ಶ್ವೇತ ಶ್ರೀಧರ್ ಹೇಳಿದರು. ಶುಕ್ರವಾರ  ಬೆಂಗಳೂರು ರವಿಂದ್ರ ಕಲಾ ಕ್ಷೇತ್ರದಲ್ಲಿ ಯಕ್ಷ ಮಿತ್ರ ಬಳಗ ಬೆಂಗಳೂರು ಹಾಗೂ ಕನ್ನಡ…

Read More

ಫೆ. 16ರ ವರೆಗೆ ರಾಜ್ಯಾದ್ಯಂತ ಕಾಲೇಜುಗಳಿಗೆ ರಜೆ ವಿಸ್ತರಣೆ :

ಸಮವಸ್ತ್ರ ವಿವಾದದ ಹಿನ್ನೆಲೆ ರಾಜ್ಯದ ಎಲ್ಲಾ ಪಿಯುಸಿ, ಪದವಿ, ಪಿಜಿ  ತರಗತಿಗಳಿಗೆ ಫೆ.16 ವರೆಗೆ ರಜೆ ವಿಸ್ತರಿಸಿ ಉನ್ನತ ಶಿಕ್ಷಣ ಇಲಾಖೆ ಆದೇಶ  ಹೊರಡಿಸಿದೆ. ಹೌದು, ರಾಜ್ಯದ ಸಮವಸ್ತ್ರ ವಿವಾದ ಭುಗಿಲೆದ್ದ ಹಿನ್ನೆಲೆ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ ತರಗತಿಗಳನ್ನು ಫೆ.16 ವರೆಗೆ ಬಂದ್ ಮಾಡಲು ತೀರ್ಮಾನಿಸಲಾಗಿದೆ. ಫೆಬ್ರವರಿ 16ರ ವರೆಗೆ ರಾಜ್ಯಾದ್ಯಂತ ಕಾಲೇಜುಗಳಿಗೆ ರಜೆ ವಿಸ್ತರಣೆ ಮಾಡಲಾಗಿದೆ. ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ರಜೆ ಮುಂದುವರಿಕೆ…

Read More

ದೂರು ನೀಡಲು ಬಂದ ಪತ್ನಿಯನ್ನು ಎಸ್ಪಿ ಕಛೇರಿ ಮುಂಭಾಗದಲ್ಲೇ ಚೂರಿ ಇರಿದು ಹತ್ಯೆಗೈದ ಪೊಲೀಸ್ ಕಾನ್ಸ್ ಟೇಬಲ್ | crime news

ದೂರು ನೀಡಲು ಬಂದ ಪತ್ನಿಯನ್ನು ಎಸ್ಪಿ ಕಛೇರಿ ಮುಂಭಾಗದಲ್ಲೇ ಚೂರಿ ಇರಿದು ಹತ್ಯೆಗೈದ ಪೊಲೀಸ್ ಕಾನ್ಸ್ ಟೇಬಲ್ | crime news ಎಸ್ಪಿ ಕಚೇರಿ ಆವರಣದಲ್ಲೇ ಪತ್ನಿಯನ್ನು ಕೊಂದು ಪೊಲೀಸ್ ಕಾನ್ಸ್ ಟೇಬಲ್ ಕ್ರೌರ್ಯ ಮೆರೆದಿರುವ ಘಟನೆ ಹಾಸನದಲ್ಲಿ ನಡೆದಿದೆ. ತನ್ನ ವಿರುದ್ದ ಕಂಪ್ಲೆಂಟ್ ಕೊಡಲು ಎಸ್ಪಿ ಕಚೇರಿ ಗೆ ಬಂದ ತನ್ನ ಪತ್ನಿಯನ್ನು ಚಾಕುವಿನಿಂದ ಇರಿದು ಪತ್ನಿಯನ್ನು ಕೊಲೆ ಮಾಡಿದ್ದಾನೆ. ಲೋಕನಾಥ್ ಪತ್ನಿ ಮಮತಾಗೆ ಚಾಕುವಿನಿಂದ ಇರಿದ ಪೊಲೀಸ್ ಕಾನ್ಸ್ ಟೇಬಲ್ ಆಗಿದ್ದು, ಶಾಂತಿಗ್ರಾಮ ಸರ್ಕಲ್…

Read More

ರಿಪ್ಪನ್‌ಪೇಟೆ ಪಟ್ಟಣದಾದ್ಯಂತ ಕೈ ಕೊಟ್ಟ ಏರ್‌ಟೆಲ್ ನೆಟ್‌ವರ್ಕ್, ಪರದಾಡಿದ ಗ್ರಾಹಕ | Rpet

ರಿಪ್ಪನ್‌ಪೇಟೆ : ಕೈ ಕೊಟ್ಟ ಏರ್‌ಟೆಲ್ ನೆಟ್‌ವರ್ಕ್, ಪರದಾಡಿದ ಗ್ರಾಹಕ ರಿಪ್ಪನ್‌ಪೇಟೆ : ಪಟ್ಟಣದಲ್ಲಿ ಸೋಮವಾರ ಬೆಳಿಗ್ಗೆಯಿಂದಲೇ ಏರ್ ಟೆಲ್ ನೆಟ್ ವರ್ಕ್ ಕೈಕೊಟ್ಟಿತ್ತು. ಜನರು ತಮ್ಮ ತಮ್ಮವರಿಗೆ ಕರೆ ಮಾಡಲು ಮೊಬೈಲ್ ಕೈಯಲ್ಲಿ ಹಿಡಿದರೆ ನೆಟ್ ವರ್ಕ್ ಇಲ್ಲದೆ ಪರದಾಡಬೇಕಾಯಿತು. ಅಂಗ್ಯೆಯಲ್ಲಿ ವಿಶ್ವ ಎನ್ನುವ ಪ್ರಧಾನಿ‌ ಮೋದಿಯವರ ಪರಿಕಲ್ಪನೆಯನ್ನು ಗ್ರಾಮೀಣ ಪ್ರದೇಶಗಳಲ್ಲಿ ನುಚ್ಚುನೂರು ಮಾಡುತ್ತಿದೆ ಏರ್ಟೆಲ್ ನೆಟ್ವರ್ಕ್… ಮಧ್ಯಾಹ್ನದವರೆಗೂ ಏರ್ ಟೆಲ್ ಕಂಪನಿಯ ಮೊಬೈಲ್ ಗಳ ಸಿಗ್ನಲ್ ಸಿಗಲಿಲ್ಲ. ಇದರಿಂದ ಸಾಕಷ್ಟು ಸಂಖ್ಯೆಯಲ್ಲಿ ಜನರು ರಸ್ತೆಯ…

Read More

ರಿಪ್ಪನ್ ಪೇಟೆ: ಗುರುವಾರದಂದು ಕಾಂಗ್ರೆಸ್ ಕಾರ್ಯಕರ್ತರ ಸಭೆ:

ರಿಪ್ಪನ್ ಪೇಟೆ : ದಿನಾಂಕ 21ರ ಗುರುವಾರ,ಸಮಯ ಸಂಜೆ 5:00 ಗಂಟೆಗೆ ರಿಪ್ಪನ್ ಪೇಟೆ ಗ್ರಾಮ ಪಂಚಾಯತ್ ಸಭಾಭವನ ದಲ್ಲಿ ಕಾಂಗ್ರೆಸ್ ಪಕ್ಷದ  ಕಾರ್ಯಕರ್ತರ ಸಭೆಯನ್ನು ಕರೆಯಲಾಗಿದೆ ಎಂದು ಕಾಂಗ್ರೆಸ್ ರಿಪ್ಪನ್ ಪೇಟೆ ಘಟಕದ ಅಧ್ಯಕ್ಷರಾದ ಆಸೀಪ್ ಭಾಷಾಸಾಬ್ ಪತ್ರೀಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಸಭೆಯಲ್ಲಿ ಹೊಸನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ, ಬಿ,ಜಿ, ನಾಗರಾಜ್, ತಾಲ್ಲೂಕು ವೀಕ್ಷಕರಾದ  ಮಲ್ಲಿಕಾರ್ಜುನ್ ಹಕ್ರೆ,ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಕಲಗೋಡ್ ರತ್ನಕರ್,ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ, ಬಿ ಪಿ ರಾಮಚಂದ್ರ,ಜಿಲ್ಲಾ ಪಂಚಾಯತ್…

Read More

ರಿಪ್ಪನ್‌ಪೇಟೆ : ಸರ್ಕಾರಿ ಶಾಲೆಯ ಇಬ್ಬರು ವಿದ್ಯಾರ್ಥಿಗಳು ವಾಲಿಬಾಲ್ ಪಂದ್ಯಾವಳಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ|volleyball

ರಿಪ್ಪನ್‌ಪೇಟೆ : ಬೆಂಗಳೂರಿನಲ್ಲಿ ನಡೆದ 14 ವರ್ಷದ ಒಳಗಿನ ಪ್ರಾಥಮಿಕ ಶಾಲಾ ಕ್ರೀಡಾಕೂಟದ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ವಿಜೇತರಾಗಿ ರಾಷ್ಟ್ರ ಮಟ್ಟದ ಕ್ರೀಡಾಕೂಟಕ್ಕೆ ಪಟ್ಟಣದ ಶಿವಮೊಗ್ಗ ರಸ್ತೆಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಾದ ಪ್ರೀತಮ್ ಮತ್ತು ಗಣೇಶ್ ಕೆ ಎನ್ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ನಾಗಸಂದ್ರದಲ್ಲಿ ನಡೆದ ರಾಜ್ಯಮಟ್ಟದ 14 ವರ್ಷದೊಳಗಿನ ವಾಲಿಬಾಲ್ ಪಂದ್ಯಾವಳಿಯಲ್ಲಿ ಅತ್ಯದ್ಭುತ ಪ್ರದರ್ಶನ ತೋರಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ತಂಡದಲ್ಲಿ ಸ್ಥಾನ ಗಳಿಸಿದ್ದಾರೆ. ಪಟ್ಟಣದ ದೊಡ್ಡಿನಕೊಪ್ಪ ನಿವಾಸಿ ಭೀಮರಾಜ್ ಮತ್ತು ರೇಣುಕಾ ದಂಪತಿಗಳ…

Read More

ಸಾಲಭಾದೆಗೆ ತತ್ತರಿಸಿ ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆ|sucide

ಸಾಲಭಾದೆಗೆ ಹೆದರಿ ಶಿವಮೊಗ್ಗ ದ ಮಿಳಘಟ್ಟದಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಪರಂದಯ್ಯ(70), ದಾನಮ್ಮ (60)ಮತ್ತು ಮಂಜುನಾಥ್(25) ಮನೆಯಲ್ಲಿ ವಿಷ ಸೇವಿಸಿ ಸಾವನ್ನಪ್ಪಿದ್ದಾರೆ. ಶಿವಮೊಗ್ಗದ ಮಿಳಘಟ್ಟ ಮೊದಲನೇ ತಿರುವಿನಲ್ಲಿ ಪರಂದಯ್ಯ, ದಾನಮ್ಮ, ಮಂಜುನಾಥ್ ನಿನ್ನೆ ಸಾಲಕ್ಕೆ ಬೆದರಿ ವಿಷ ಸೇವಿಸಿದ್ದರು. ವೃದ್ಧರಿಬ್ಬರೂ ನಿನ್ನೆನೇ ಸಾವನ್ನಪ್ಪಿದರು.  ಶಿವಮೊಗ್ಗದ ಆನಂದರಾವ್ ಬಡಾವಣೆ   ಹತ್ತಿರದ ಮಿಳಗಟ್ಟ ಕೆರೆಅಂಗಳದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಪರಂದಯ್ಯ ಕೂಲಿ ಕೆಲಸ ಮಾಡಿಕೊಂಡಿದ್ದು, ದಾನಮ್ಮ ಕಲ್ಲೂರು ಮಂಡ್ಲಿ ಪೇಪರ್ ಫ್ಯಾಕ್ಟರಿಯಲ್ಲಿ ಕೆಲಸಕ್ಕೆ ಹೋಗುತಿದ್ದರು. ಅವರಿಗೆ ಮಕ್ಕಳಿರಲಿಲ್ಲ…

Read More

ರಿಪ್ಪನ್ ಪೇಟೆ : ಸಿದ್ದಪ್ಪನಗುಡಿಯ ಕಂತೆ ಸಿದ್ದೇಶ್ವರ ದೇವಸ್ಥಾನದಲ್ಲಿ ಅದ್ದೂರಿ ಮಹಾ ಶಿವರಾತ್ರಿ ವೈಭವ

ರಿಪ್ಪನ್‌ಪೇಟೆ :ಇಲ್ಲಿನ ಸಮೀಪದ ಸಿದ್ದಪ್ಪನಗುಡಿಯ ಇತಿಹಾಸ ಪ್ರಸಿದ್ದ  ಶ್ರೀ ಕಂತೆ ಸಿದ್ದೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶಿವರಾತ್ರಿಯ ಅಂಗವಾಗಿ ಇಂದು ಬೆಳಿಗ್ಗೆ ದೇವರಿಗೆ ರುದ್ರಾಭಿಷೇಕ, ಅಭಿಷೇಕ, ಪೂಜಾ ಕೈಂಕರ್ಯಗಳು ಸಂಭ್ರಮದೊಂದಿಗೆ ಜರುಗಿತು. ಪಟ್ಟಣದ ಹೊರವಲಯದಲ್ಲಿರುವ ಸಿದ್ದಪನಗುಡಿ ಕಂತೆ ಸಿದ್ದೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ರುದ್ರಾಭಿಷೇಕ ಮತ್ತು ಅಭಿಷೇಕ ಅಲಂಕಾರ ಪೂಜೆ ಅತ್ಯಂತ ವಿಜೃಂಭಣೆಯಿಂದ ನೆರವೇರಿತು.ನಂತರ ಮಹಾಮಂಗಳಾರತಿಯೊಂದಿಗೆ ಸಾರ್ವಜನಿಕರಿಗೆ ಸಾಮೂಹಿಕ ಅನ್ನಸಂತರ್ಪಣೆ ನೆರವೇರಿತು. ಸುಮಾರು ಎರಡೂ ಸಾವಿರಕ್ಕೂ ಹೆಚ್ಚು ಭಕ್ತಾಧಿಗಳು ಸ್ವಾಮಿಯ ದರ್ಶನ ಪಡೆದು ಪ್ರಸಾದ ಸ್ವೀಕರಿಸಿ ಪುನೀತರಾದರು. ದೇವಸ್ಥಾನದ…

Read More

ಸೊರಬ:ವಿದ್ಯುತ್ ತಗುಲಿ ಮಹಿಳೆ ಸಾವು ಪ್ರಕರಣ,ಕುಟುಂಬಕ್ಕೆ ಸಾಂತ್ವಾನ

ಸೊರಬ: ಆಕಸ್ಮಿಕವಾಗಿ ವಿದ್ಯುತ್ ತಗುಲಿ ಮಹಿಳೆ ಮೃತಪಟ್ಟ ಘಟನೆ ಮಂಗಳವಾರ ಸಂಜೆ ಸಮೀಪದ ಕತ್ವಾಯಿ ಗ್ರಾಮದಲ್ಲಿ ನಡೆದಿತ್ತು.ಇಂದು ಅವರ ಮನೆಗೆ ಬಿಜೆಪಿ ಮುಖಂಡ ಕಡಸೂರು ಶಿವಕುಮಾರ್ ಭೇಟಿ ನೀಡಿ ಸಾಂತ್ವಾನ ಹೇಳಿದರು. ಕುಟುಂಬದವರಿಗೆ ಸಾಂತ್ವಾನ ಹೇಳಿ ಅವರ ಸಮಸ್ಯೆಗಳಿಗೆ ಸ್ಪಂದಿಸಿದ ಅವರು ಕುಟುಂಬದವರಲ್ಲಿ ಮುಂದಿನ ದಿನಗಳಲ್ಲಿ ಜೊತೆಯಲ್ಲಿರುತ್ತೇವೆ ಎಂದು ಧೈರ್ಯ ತುಂಬಿದರು.  ಈ ಸಂದರ್ಭದಲ್ಲಿ ಪಂಚಾಯಿತಿ ಸದಸ್ಯರಾದ ಸಲೀಂ, ಮುಖಂಡರಾದ ದಿನೇಶ್ ಹೆಚ್ ನಾಯ್ಕ, ಕನದಾಸ ಕಲ್ಲಂಬಿ, ಪಕ್ಕೀರಪ್ಪ ದ್ಯಾಮಪ್ಪ ಆನಂದಣ್ಣ ಮತ್ತಿತರರು ಇದ್ದರು. ಮಂಗಳವಾರ ನಡೆದಿತ್ತು…

Read More

ಸಿಗಂದೂರು ದೇವಸ್ಥಾನಕ್ಕೆ ತೆರಳುತಿದ್ದವರ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ | Accident

ಸಿಗಂದೂರು ದೇವಸ್ಥಾನಕ್ಕೆ ತೆರಳುತಿದ್ದವರ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ | Accident ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿರುವ ಘಟನೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಚಿಕ್ಕಜೇನಿ ಗ್ರಾಮದ ತಿರುವಿನಲ್ಲಿ ನಡೆದಿದೆ. ಮಾರುತಿ ಸ್ವಿಫ್ಟ್ ಕಾರಿನಲ್ಲಿ ತುಮಕೂರು ಮೂಲದ ನಾಲ್ವರು ಸಿಗಂದೂರು ದೇವಸ್ಥಾನಕ್ಕೆ ದರ್ಶನಕ್ಕೆಂದು ತೆರಳುತಿದ್ದಾಗ ಮಾರ್ಗ ಮಧ್ಯದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಅದೃಷ್ಟವಶಾತ್ ಯಾರಿಗೂ ಯಾವುದೇ ಗಂಭೀರ ಗಾಯಗಳಾಗಿರುವುದಿಲ್ಲ ಎಂದು ತಿಳಿದುಬಂದಿದೆ. ತುಂಬಾ ಅಪಾಯಕಾರಿಯಾದ ಈ ತಿರುವಿನಲ್ಲಿ ಕಾರು ಚಾಲಕ…

Read More
Exit mobile version