Headlines

ರಿಪ್ಪನ್‌ಪೇಟೆ – ಸಿ.ಟಿ. ರವಿ ವಿವಾದಿತ ಹೇಳಿಕೆಗೆ ಸವಿತಾ ಸಮಾಜದ ಆಕ್ರೋಶ | ಕ್ಷಮೆಯಾಚಿಸದಿದ್ದರೆ ರಾಜ್ಯವ್ಯಾಪಿ ಉಗ್ರ ಪ್ರತಿಭಟನೆಯ ಎಚ್ಚರಿಕೆ

ಸಿ.ಟಿ. ರವಿ ವಿವಾದಿತ ಹೇಳಿಕೆಗೆ ಸವಿತಾ ಸಮಾಜದ ಆಕ್ರೋಶ ಕ್ಷಮೆಯಾಚಿಸದಿದ್ದರೆ ರಾಜ್ಯವ್ಯಾಪಿ ಉಗ್ರ ಪ್ರತಿಭಟನೆ ಎಚ್ಚರಿಕೆ ರಿಪ್ಪನ್‌ಪೇಟೆ : ಮಾಜಿ ಸಚಿವ ಸಿ.ಟಿ. ರವಿ ರವರು ಸವಿತಾ ಸಮಾಜದ ಬಗ್ಗೆ ಅವಹೇಳನಕಾರಿ ಪದ ಬಳಸಿ ಮಾತನಾಡಿದ ಆರೋಪದ ಹಿನ್ನೆಲೆ, ರಿಪ್ಪನ್‌ಪೇಟೆ ಸವಿತಾ ಸಮಾಜ ಘಟಕದಿಂದ ಅವರ ವಿರುದ್ಧ ತೀವ್ರ ಖಂಡನೆ ವ್ಯಕ್ತವಾಗಿದೆ. ಸಮಾಜದ ಸದಸ್ಯರು ನಾಡ ಕಚೇರಿ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿ, ಸಿ.ಟಿ. ರವಿರವರು ತಕ್ಷಣವೇ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದ್ದಾರೆ. ಇಲ್ಲದಿದ್ದರೆ ರಾಜ್ಯದಾದ್ಯಂತ ಸಮಾಜದ ಬಾಂಧವರು…

Read More

ವಿದ್ಯಾರ್ಥಿಗಳು ಬಜೆಟ್ ವಿಶ್ಲೇಷಣೆ ಮಾಡುವ ಕೌಶಲ್ಯವನ್ನು ಬೆಳೆಸಿಕೊಳ್ಳಬೇಕು : ಪ್ರೋ.ಚಂದ್ರಶೇಖರ್.ಟಿ

ರಿಪ್ಪನ್ ಪೇಟೆ : ಇಲ್ಲಿನ  ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾಣಿಜ್ಯ ಶಾಸ್ತ್ರ ವಿಭಾಗ, ನಿರ್ವಹಣಾ ಶಾಸ್ತ್ರ ವಿಭಾಗ ಮತ್ತು ಅರ್ಥಶಾಸ್ತ್ರ ವಿಭಾಗದ ವತಿಯಿಂದ ಕರ್ನಾಟಕ ರಾಜ್ಯ ಅಯವ್ಯಯ -2022 ದ ನೇರವಿಕ್ಷಣೆ ಮತ್ತು ವಿಶ್ಲೇಷಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪ್ರಾಂಶುಪಾಲರಾದ ಶ್ರೀ ಚಂದ್ರಶೇಖರ.ಟಿ ರವರು ವಿದ್ಯಾರ್ಥಿಗಳು ಬಜೆಟ್ ವಿಶ್ಲೇಷಣೆ ಮಾಡುವ ಕೌಶಲ್ಯವನ್ನು ಬೆಳೆಸಿಕೊಂಡರೆ ರಾಜ್ಯದ ವಸ್ತು ಸ್ಥಿತಿಯನ್ನು ಅರ್ಥಮಾಡಿಕೊಳ್ಳುವ ಸಾಮಾರ್ಥ್ಯವನ್ನು ಪಡೆದುಕೊಳ್ಳುತ್ತಾರೆ ಎಂದು ಹೇಳಿದರು. ರಾಜ್ಯ ಬಜೆಟ್ ನ ಗಾತ್ರ, ವಿಭಾಗವಾರು ಹಂಚಿಕೆ,ಹೊಸ ಕಾರ್ಯಕ್ರಮಗಳ ಘೋಷಣೆ,…

Read More

Ripponpete | ಸರ್ಕಾರಿ ಶಾಲೆಯ ಜೀರ್ಣೋದ್ಧಾರಕ್ಕಾಗಿ ಸಮವಸ್ತ್ರ ಕಳಚಿ ಶ್ರಮದಾನಕ್ಕೆ ಮುಂದಾದ ಪೊಲೀಸರು

Ripponpete | ಸರ್ಕಾರಿ ಶಾಲೆಯ ಜೀರ್ಣೋದ್ಧಾರಕ್ಕಾಗಿ ಸಮವಸ್ತ್ರ ಕಳಚಿ ಶ್ರಮದಾನಕ್ಕೆ ಮುಂದಾದ ಪೊಲೀಸರು ರಿಪ್ಪನ್‌ಪೇಟೆ : ಪಟ್ಟಣದ ಬರುವೆ ಸರ್ಕಾರಿ ಶಾಲಾ ಆವರಣದಲ್ಲಿ ಇಂದು ನಡೆದ ಸುಣ್ಣಬಣ್ಣ ಅಭಿಯಾನವು ಐತಿಹಾಸಿಕ ಘಟನೆಗಳಿಗೆ ಸಾಕ್ಷಿಯಾಗಿದೆ. ಹೌದು… ಕಾನೂನು ಸುವ್ಯವಸ್ಥೆಗಾಗಿ ಹಗಲಿರುಳು ಶ್ರಮಿಸುತ್ತಿರುವ ಪಟ್ಟಣದ ಪೊಲೀಸ್ ಸಿಬ್ಬಂದಿಗಳು ಇಂದು ಬೆಳಿಗ್ಗೆ ಠಾಣೆಯಲ್ಲಿ ಗಣರಾಜ್ಯೋತ್ಸವ ನಿಮಿತ್ತ ಧ್ವಜಾರೋಹಣ ನೆರವೇರಿಸಿ ಸಮವಸ್ತ್ರ ಕಳಚಿಟ್ಟು ಏಳು ದಶಕಗಳ ಇತಿಹಾಸವಿರುವ ಸರ್ಕಾರಿ ಶಾಲೆಯ ಪುನರ್ ನವೀಕರಣಕ್ಕಾಗಿ ಶ್ರಮದಾನ ಮಾಡುವ ಮೂಲಕ ಸಾರ್ವಜನಿಕರ ಪ್ರಶಂಸೆಗೆ ಭಾಜನರಾಗಿದ್ದಾರೆ. ಪಟ್ಟಣದ…

Read More

ಸಹಜ ಸ್ಥಿತಿಯತ್ತ ಶಿವಮೊಗ್ಗ : 7 ಡ್ರೋಣ್ ಕ್ಯಾಮೆರಾ ಬಳಕೆ,ಬಿಗಿ ಪೊಲೀಸ್ ಭದ್ರತೆ :

ಕಳೆದ ನಾಲ್ಕು ದಿನಗಳಿಂದ ಉದ್ವಿಗ್ನಗೊಂಡಿದ್ದ ಶಿವಮೊಗ್ಗ ಶಾಂತವಾಗಿದ್ದು, ನಿಧಾನವಾಗಿ ಸಹಜಸ್ಥಿತಿಯತ್ತ ಮರಳುತ್ತಿದೆ.ಯುವಕ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದಲ್ಲಿ ಕಳೆದ ನಾಲ್ಕು ದಿನಗಳಿಂದಲೂ ಗಲಭೆ, ಗಲಾಟೆ, ವಾಹನಗಳಿಗೆ ಬೆಂಕಿ ಹಚ್ಚುವುದು, ಆಸ್ತಿಪಾಸ್ತಿ ನಷ್ಟ,ರಾಜಕೀಯ ಹೇಳಿಕೆಗಳಿಂದ ಹೈರಾಣಗೊಂಡಿದ್ದ ನಗರದ ಪರಿಸ್ಥಿತಿ ಈಗ ಹತೋಟಿಗೆ ಬಂದಿದೆ. ಆದರೂ ಕೂಡ ಕರ್ಫ್ಯೂವನ್ನು ಮತ್ತೆರಡು ದಿನಗಳ ಕಾಲ ಮುಂದುವರೆಸಿದ್ದು ಪೊಲೀಸ್ ಬಿಗಿಬಂದೋಬಸ್ತ್ ಹೆಚ್ಚಿಸಲಾಗಿದೆ. ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.ಕರ್ಫ್ಯೂ ವಿಧಿಸಿದ್ದರಿಂದ ಇಡೀ ಶಿವಮೊಗ್ಗ ನಗರದಲ್ಲಿ ವ್ಯಾಪಾರ ವಹಿವಾಟುಗಳುಸ್ಥಗಿತಗೊಂಡಿದ್ದವು. ಮೆಡಿಕಲ್ ಶಾಪ್,…

Read More

ಬೀದಿ ನಾಯಿಯನ್ನು ಕ್ರೂರವಾಗಿ ಕೊಂದು ಆಟೋದಲ್ಲಿ ಎಳೆದೊಯ್ದ ವ್ಯಕ್ತಿ – ಕೆಂಚನಾಲದಲ್ಲಿ ನಡೆದ ಪ್ರಕರಣಕ್ಕೆ ಮೇನಕಾ ಗಾಂಧಿ ಎಂಟ್ರಿ | ಆರೋಪಿ ವಶಕ್ಕೆ

ಬೀದಿ ನಾಯಿಯನ್ನು ಕ್ರೂರವಾಗಿ ಕೊಂದು ಆಟೋದಲ್ಲಿ ಎಳೆದೊಯ್ದ ವ್ಯಕ್ತಿ – ಕೆಂಚನಾಲದಲ್ಲಿ ನಡೆದ ಪ್ರಕರಣಕ್ಕೆ ಮೇನಕಾ ಗಾಂಧಿ ಎಂಟ್ರಿ | ಆರೋಪಿ ವಶಕ್ಕೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಕೆಂಚನಾಲ ಗ್ರಾಮ ಒಂದಿಲ್ಲೊಂದು ಸುದ್ದಿಯಿಂದ ರಾಜ್ಯಾದ್ಯಂತ ಸುದ್ದಿಯಾಗುತ್ತಿರುವುದು ತಿಳಿದಿರುವ ಸಂಗತಿಯಾಗಿದೆ ಇದೀಗ ಈ ಪುಟ್ಟ ಗ್ರಾಮದಲ್ಲಿ ನಡೆದ ಒಂದು ಘಟನೆಗೆ ಮಾಜಿ ಕೇಂದ್ರ ಸಚಿವೆ ಹಾಗೂ ಪ್ರಾಣಿ ದಯಾ ಸಂಘದ ರಾಷ್ಟ್ರೀಯ ಕಾರ್ಯಕರ್ತೆ ಮೇನಕಾ ಗಾಂಧಿ ಮಧ್ಯ ಪ್ರವೇಶಿಸಿ ಕ್ರೂರ ಸ್ವಭಾವದ ವ್ಯಕ್ತಿಯೊಬ್ಬರ ಮೇಲೆ…

Read More

EXIT POLL | ರಾಜ್ಯದಲ್ಲಿ ಅತಂತ್ರ ಫಲಿತಾಂಶದ ಬಗ್ಗೆ ಭವಿಷ್ಯ ನುಡಿದ ನಾಲ್ಕು ಸಮೀಕ್ಷೆಗಳು – ಐದು ಸಮೀಕ್ಷೆಗಳಲ್ಲಿ ಯಾವ ಪಾರ್ಟಿಗೆ ಎಷ್ಟು ಸ್ಥಾನ??? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

ಕರ್ನಾಟಕ ಅತಂತ್ರ ಅಸೆಂಬ್ಲಿಯತ್ತ ಸಾಗುತ್ತಿದೆ ಎಂದು ಐದು ಎಕ್ಸಿಟ್ ಪೋಲ್‌ಗಳಲ್ಲಿ 4 ಭವಿಷ್ಯ ನುಡಿದಿವೆ ಮತ್ತು ಅವುಗಳಲ್ಲಿ ಬಹುಪಾಲು ಕಾಂಗ್ರೆಸ್‌ಗೆ ಸ್ವಲ್ಪಮಟ್ಟಿನ ಲಾಭವಿರುವ ಕುರಿತು ಭವಿಷ್ಯ ನುಡಿದಿವೆ. ಎಚ್‌ಡಿ ಕುಮಾರಸ್ವಾಮಿ ಅವರ ಜನತಾ ದಳ ಸೆಕ್ಯುಲರ್ ಕಿಂಗ್‌ಮೇಕರ್ ಆಗುವ ಸಾಧ್ಯತೆಯಿದೆ ಎಂದು ಹೇಳಿವೆ. 224 ಸ್ಥಾನಗಳ ವಿಧಾನಸಭೆಯಲ್ಲಿ ಬಹುಮತಕ್ಕೆ 113 ಸ್ಥಾನಗಳನ್ನು ಪಟೆಯಬೇಕಿದೆ.ಕೇವಲ ಒಂದು ಎಕ್ಸಿಟ್ ಪೋಲ್ – ಝೀ ನ್ಯೂಸ್ ಮ್ಯಾಟ್ರಿಜ್ ಏಜೆನ್ಸಿ – ಕಾಂಗ್ರೆಸ್‌ಗೆ ಗರಿಷ್ಠ ಮಿತಿ 118 ಎಂದು ಭವಿಷ್ಯ ನುಡಿದಿದೆ. ಇನ್ನೆರಡು…

Read More

31 ವರ್ಷಗಳ ಸುದೀರ್ಘ ಸೇವೆಯ ಬಳಿಕ ಶಿಕ್ಷಕ ಡಿ. ಕೃಷ್ಣಪ್ಪ ರವರಿಗೆ ಆತ್ಮೀಯ ಬೀಳ್ಕೊಡುಗೆ

31 ವರ್ಷಗಳ ಸೇವೆಯ ಬಳಿಕ ಶಿಕ್ಷಕ ಡಿ. ಕೃಷ್ಣಪ್ಪ ರವರಿಗೆ ಆತ್ಮೀಯ ಬೀಳ್ಕೊಡುಗೆ ರಿಪ್ಪನ್ ಪೇಟೆ : ಶಿಕ್ಷಕ ವೃತ್ತಿಯನ್ನು ತ್ಯಾಗ, ಸೇವೆ ಮತ್ತು ನಿಸ್ವಾರ್ಥತೆಯ ಪ್ರತೀಕವೆಂದು ಕರೆಯಲಾಗುತ್ತದೆ. ಅದಕ್ಕೆ ಸಾಕ್ಷಿಯಾಗಿ, ಹೊಸನಗರ ತಾಲೂಕಿನ ಅರಸಾಳು ಗ್ರಾಮಪಂಚಾಯತ್ ವ್ಯಾಪ್ತಿಯ ಬೆನವಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಹಿರಿಯ ಶಿಕ್ಷಕರಾದ ಡಿ. ಕೃಷ್ಣಪ್ಪ ಅವರು 31 ವರ್ಷಗಳ ಕಾಲ ಶಿಕ್ಷಣ ಕ್ಷೇತ್ರದಲ್ಲಿ ಅವಿರತ ಸೇವೆ ಸಲ್ಲಿಸಿ, ಇದೀಗ ನಿವೃತ್ತಿ ಹೊಂದಿದ್ದಾರೆ. ಈ ಹಿನ್ನಲೆಯಲ್ಲಿ ಶಾಲೆಯ ಎಸ್.ಡಿ.ಎಂ.ಸಿ , ವಿನಾಯಕ…

Read More

ಆರೋಗ್ಯ ಸಂಸ್ಥೆಗಳಲ್ಲಿ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಹುದ್ದೆಗಳಿಗೆ ಅರ್ಜಿ ಆಹ್ವಾನ

ಆರೋಗ್ಯ ಸಂಸ್ಥೆಗಳಲ್ಲಿ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಹುದ್ದೆಗಳಿಗೆ ಅರ್ಜಿ ಆಹ್ವಾನ 2024-25ನೇ ಸಾಲಿನ ರಾಷ್ಟ್ರೀಯ ಆರೋಗ್ಯ ಅಭಿಯಾನ (ಎನ್.ಹೆಚ್.ಎಂ) ದಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಶಿವಮೊಗ್ಗ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಆರೋಗ್ಯ ಸಂಸ್ಥೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಮತ್ತು ಅರೆವೈದ್ಯಕೀಯ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅ. 09 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30 ರ ವರೆಗೆ ಅರ್ಜಿ ನಮೂನೆಯನ್ನು ಎನ್.ಹೆಚ್.ಎಂ ವಿಭಾಗ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ…

Read More

ತುಮರಿ ಸೇತುವೆಯು ನಾಡಿಗೆ ಬೆಳಕು ನೀಡಲು ಸರ್ವಸ್ವವನ್ನು ಕಳೆದುಕೊಂಡ ಜನರ ಬದುಕಿನ ಸಂಪರ್ಕ ಸೇತು – ಶಾಸಕ ಬೇಳೂರು | GKB

ತುಮರಿ ಸೇತುವೆಯು ನಾಡಿಗೆ ಬೆಳಕು ನೀಡಲು ಸರ್ವಸ್ವವನ್ನು ಕಳೆದುಕೊಂಡ ಜನರ ಬದುಕಿನ ಸಂಪರ್ಕ ಸೇತು – ಶಾಸಕ ಬೇಳೂರು ತುಮರಿ ಮತ್ತು ಹಸಿರುಮಕ್ಕಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಸೇತುವೆ ಕೇವಲ ಸೇತುವೆಯಲ್ಲ. ನಾಡಿಗೆ ಬೆಳಕು ನೀಡಲು ಸರ್ವಸ್ವವನ್ನು ಕಳೆದುಕೊಂಡ ಜನರ ಬದುಕಿನ ಸಂಪರ್ಕ ಸೇತು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದ್ದಾರೆ. ಸಾಗರ ತಾಲೂಕಿನ ಅಂಬಾರಗೋಡ್ಲು ದಡದಲ್ಲಿ ಅಂಬಾರಗೋಡ್ಲುವಿನಿಂದ ಕಳಸವಳ್ಳಿಗೆ ಸಂಪರ್ಕಿಸುವ ಲಾಂಚ್ ಮಾರ್ಗದ ರ‍್ಯಾಂಪ್ ಕಾಮಗಾರಿ ಸ್ಥಳ ಪರಿಶೀಲನೆ ನಡೆಸಿ ಅವರು ಮಾತನಾಡಿ, ತುಮರಿ ಸೇತುವೆ ನಿರ್ಮಾಣ ಜನರ…

Read More

ಹೊಸನಗರ : ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಗೆ ಹೊತ್ತಿ ಉರಿದ ಮನೆ – ಉಟ್ಟ ಬಟ್ಟೆಯಲ್ಲಿಯೇ ಬೀದಿಗೆ ಬಿದ್ದ ಬಡ ಕುಟುಂಬ|Fire

ಹೊಸನಗರ ತಾಲೂಕಿನ ಮಾರುತಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಬ್ಬಿಗ ಗ್ರಾಮದ ಕೂಡ್ಲಿಕೊಪ್ಪ ಸ್ವಾಮಿ ಎಂಬುವವರ ಮನೆಗೆ ತಡರಾತ್ರಿ ವಿದ್ಯುತ್ ಶಾರ್ಟ್ ಸರ್ಕ್ಯುಟ್ ಸಂಭವಿಸಿದ್ದು ಮನೆ ಸಂಪೂರ್ಣ ಸುಟ್ಟು ಹೋಗಿದೆ. ತಡರಾತ್ರಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹತ್ತಿಕೊಂಡಿದ್ದು ಕೂಡಲೇ ಮನೆಯಲ್ಲಿದ್ದವರೆಲ್ಲಾ ಹೊರಗೆ ಬಂದಿದ್ದಾರೆ. ನೋಡನೋಡುತ್ತಿದ್ದಂತೆ ಮನೆ ಬೆಂಕಿಯ ಕೆನ್ನಾಲಿಗೆ ಮನೆಯನ್ನೆಲ್ಲಾ ಆವರಿಸಿ ಸಂಪೂರ್ಣವಾಗಿ ಹೊತ್ತಿ ಉರಿದಿದೆ‌ ವಿಷಯ ತಿಳಿಯುತ್ತಿದಂತೆ ಸ್ಥಳಕ್ಕೆ ಆಗಮಿಸಿದ ಹೊಸನಗರ ಅಗ್ನಿ ಶಾಮಕ ಸಿಬ್ಬಂದಿಗಳು ಅಳಿದುಳಿದ ಬೆಂಕಿಯನ್ನು ಆರಿಸಲು ಪ್ರಯತ್ನ ಪಟ್ಟಿದ್ದಾರೆ. ಕೂಡ್ಲಿಕೊಪ್ಪ…

Read More