Headlines

ಶಿವಮೊಗ್ಗ ಲೋಕಸಭಾ ಚುನಾವಣೆಯ ಕೈ ಅಭ್ಯರ್ಥಿಯಾಗ್ತಾರ ಬಿಜೆಪಿಯ ಮಾಜಿ ಶಾಸಕ..?|ಯಡಿಯೂರಪ್ಪ ಪುತ್ರನನ್ನು ಖೆಡ್ಡಾಕ್ಕೆ ಕೆಡವಲು ಕಾಂಗ್ರೆಸ್ ರಣತಂತ್ರ???

ಶಿವಮೊಗ್ಗ: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ  ಪುತ್ರ ಸಂಸದ ಬಿವೈ ರಾಘವೇಂದ್ರ ಅವರನ್ನು ಸೋಲಿಸಲು ಕಾಂಗ್ರೆಸ್  ರಣತಂತ್ರ ರಚಿಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಕೈ ನಾಯಕರು ಚಿಂತನೆ ನಡೆಸಿದ್ದಾರೆ. ಹಾಗಾಗಿ ಹಿರಿಯ ನಾಯಕರಾದ ಕಾಗೋಡು ತಿಮ್ಮಪ್ಪ  ಮೂಲಕ ಆಪರೇಷನ್ ಕಾಂಗ್ರೆಸ್​ಗೆ  ಮುಂದಾಗಿದೆಯಂತೆ. ಒಂದು ವೇಳೆ ಆಪರೇಷನ್ ಕಾಂಗ್ರೆಸ್ ಯಶಸ್ವಿಯಾದ್ರೆ ಶಿವಮೊಗ್ಗ ಕ್ಷೇತ್ರದಲ್ಲಿ ದೊಡ್ಡ ಪ್ರಮಾಣದಲ್ಲಿ ಸದ್ದು ಮಾಡುವ ಸಾಧ್ಯತೆಗಳಿವೆ. ಹೌದು, ಕಾಗೋಡು ತಿಮ್ಮಪ್ಪ ಅವರ ಮೂಲಕ ಮಾಜಿ ಶಾಸಕ…

Read More

ಮಕ್ಕಳನ್ನು ದೇಶಕ್ಕೆ ಉತ್ತಮ ಪ್ರಜೆಗಳಾಗಿ ರೂಪಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ ; ಶಾಸಕ ಆರಗ ಜ್ಞಾನೇಂದ್ರ

ಮಕ್ಕಳನ್ನು ದೇಶಕ್ಕೆ ಉತ್ತಮ ಪ್ರಜೆಗಳಾಗಿ ರೂಪಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ ; ಶಾಸಕ ಆರಗ ಜ್ಞಾನೇಂದ್ರ | ಹಿಂಡ್ಲೆಮನೆ ಶಾಲಾ ಸುವರ್ಣ ಮಹೋತ್ಸವ ಸಂಭ್ರಮ ರಿಪ್ಪನ್‌ಪೇಟೆ ; ಮಕ್ಕಳ ಮನಸ್ಥಿತಿಯರಿತು ಶಿಕ್ಷಕ, ಪೋಷಕವರ್ಗ ಶಿಕ್ಷಣ ನೀಡಿದಾಗ ಮಾತ್ರ ಮಕ್ಕಳ ಉತ್ತಮ ಪ್ರಜೆಗಳಾಗಿ ರೂಪಿಸಲು ಸಾಧ್ಯ. ಸಾಕಷ್ಟು ಪ್ರತಿಭಾವಂತ ಮಕ್ಕಳು ಇದ್ದಾರೆ. ಅವರು ಅವಕಾಶ ವಂಚಿತರಾಗದಂತೆ ನೋಡಿಕೊಳ್ಳುವ ಗುರುತರ ಜವಾಬ್ದಾರಿ ಶಿಕ್ಷಕರದಾಗಬೇಕೆಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು. ಕೋಡೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹಿಂಡ್ಲೆಮನೆ ಸರ್ಕಾರಿ ಕಿರಿಯ ಪ್ರಾಥಮಿಕ…

Read More

ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಆರ್ ಎಂ ಮಂಜುನಾಥ್ ಗೌಡ|RMM

ಶಿವಮೊಗ್ಗ ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಮುಂದುವರಿಯುವಂತೆ ರಾಜ್ಯ ರಿಜಿಸ್ಟರ್ ಕೋರ್ಟ್ ಹೈ ಕೋರ್ಟ್ ಅದೇಶಿಸಿದೆ.  ಈ ಮೂಲಕ ಸಹಕಾರಿ ನಾಯಕ ಆರ್. ಎಂ. ಮಂಜುನಾಥ ಗೌಡ ಮತ್ತೆ ನಿರ್ದೇಶಕರಾಗಿ ಮುಂದುವರಿಯಲಿದ್ದಾರೆಯೇ ಎಂಬ ಚರ್ಚೆ ಶುರುವಾಗಿದೆ. ಅನರ್ಹತೆ ಅನ್ಯಾಯ ವಿರುದ್ಧ ಕಾನೂನು ಹೋರಾಟ ಮುಂದುವರಿಸಿದ್ದ ಮಂಜುನಾಥ ಗೌಡರಿಗೆ ಇದೀಗ ನ್ಯಾಯ ಸಿಕ್ಕಿದೆ.  2020ರಲ್ಲಿ ಚುನಾವಣೆ ನಡೆದು 2025ರವರೆಗೆ ಸೇವಾ ಅವಧಿ ಇತ್ತು. ರಾಜಕೀಯ ದುರುದ್ದೇಶದಿಂದ ಮಾಡಿರುವ ಅನ್ಯಾಯಕ್ಕೆ ಈಗ ಜಯ ಸಿಕ್ಕಿದೆ.ಮುಂದೆ ಕೋರ್ಟ್ ಆದೇಶದಂತೆ ಸೇವೆ ಸಲ್ಲಿಸುತ್ತೇನೆ. ಸಹಕಾರ…

Read More

ಜೈನ ಮುನಿವರ್ಯರ ತತ್ವ ಪಾಲನೆ ಇಂದಿನ ಯುವಸಮೂಹಕ್ಕೆ ಸ್ಪೂರ್ತಿದಾಯಕವಾಗಿರಲಿ – ಡಾ. ಡಿ ವೀರೇಂದ್ರ ಹೆಗ್ಗಡೆ|hombuja

ಅಹಿಂಸಾ ತತ್ವವನ್ನು ಬೋಧನೆ ಮಾಡಿ ಅಹಿಂಸಾ ತತ್ವದಲ್ಲೇ ಧರ್ಮವನ್ನು ಕಟ್ಟಿ ಇಡೀ ಪ್ರಪಂಚಕ್ಕೆ ಸಾತ್ವಿಕ ತತ್ವ ಉಪದೇಶಗಳನ್ನು ನೀಡಿದ ಕೀರ್ತಿ ಜೈನ ಧರ್ಮಕ್ಕಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ಡಿ. ವೀರೇಂದ್ರ ಹೆಗ್ಗಡೆ ಹೇಳಿದರು. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೊಂಬುಜ ಜೈನ ಮಠದಲ್ಲಿ ಪಂಚಕಲ್ಯಾಣ ಪ್ರತಿಷ್ಠಾ ಮಹೋತ್ಸವದ ನಾಲ್ಕನೇ ದಿನವಾದ ಬುಧವಾರ  ಜಿನ ದತ್ತರಾಯ ಸಭಾ ಮಂಟಪ ಅರ್ಹದ್ದಾಸ ವೇದಿಕೆಯಲ್ಲಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಶ್ರೀ ಪೂಜ್ಯರು ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು. 12…

Read More

ಮೂರನೇ ಬಾರಿ ಪ್ರಧಾನಿಯಾಗಿ ಮೋದಿ ಪ್ರಮಾಣವಚನ – ರಿಪ್ಪನ್‌ಪೇಟೆಯಲ್ಲಿ ಪಟಾಕಿ ಸಿಡಿಸಿ ,ಸಿಹಿ ಹಂಚಿ ಸಂಭ್ರಮಾಚರಣೆ | Ripponpete

ಮೂರನೇ ಬಾರಿ ಪ್ರಧಾನಿಯಾಗಿ ಮೋದಿ ಪ್ರಮಾಣವಚನ – ರಿಪ್ಪನ್‌ಪೇಟೆಯಲ್ಲಿ ಪಟಾಕಿ ಸಿಡಿಸಿ ,ಸಿಹಿ ಹಂಚಿ ಸಂಭ್ರಮಾಚರಣೆ | Ripponpete  ರಿಪ್ಪನ್‌ಪೇಟೆ : ದೇಶದ ಪ್ರಧಾನಿಯಾಗಿ ಮೂರನೇ ಭಾರಿಗೆ ನರೇಂದ್ರ ಮೋದಿಜಿ ಅವರು ಪ್ರಮಾಣ ವಚನ ಸ್ವಿಕರಿಸುತ್ತಿದ್ದಂತೆ ಪಟ್ಟಣದಲ್ಲಿ ಮೈತ್ರಿ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಪಟಾಕಿ ಸಿಡಿಸಿ, ಸಿಹಿ ವಿತರಿಸಿ ಸಂಭ್ರಮಾಚರಣೆ ಮಾಡಿದರು. ಪಟ್ಟಣದ ವಿನಾಯಕ ವೃತ್ತದಲ್ಲಿ ಜಮಾವಣೆಗೊಂಡ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು, ಅಭಿಮಾನಿಗಳು ಪಟಾಕಿ ಸಿಡಿಸುವದರೊಂದಿಗೆ , ಸಿಹಿ ಹಂಚಿ ಸಂಭ್ರಮಿಸಿದರು.ಈ ವೇಳೆಯಲ್ಲಿ ಪ್ರಧಾನಿ ಮೋದಿ…

Read More

ಬೈಕ್ ಮತ್ತು ಕಾರಿನ ನಡುವೆ ಅಪಘಾತದಲ್ಲಿ ಬೈಕ್ ಸವಾರ ಸಾವು – ಅಪಘಾತವಲ್ಲ ವ್ಯವಸ್ಥಿತ ಕೊಲೆ ಎಂದು ಕುಟುಂಬದವರ ಆರೋಪ|accident

ಬೈಕ್ ಮತ್ತು ಕಾರಿನ ನಡುವೆ ಅಪಘಾತದಲ್ಲಿ ಬೈಕ್ ಸವಾರ ಸಾವು – ಅಪಘಾತವಲ್ಲ ವ್ಯವಸ್ಥಿತ ಕೊಲೆ ಎಂದು ಕುಟುಂಬದವರ ಆರೋಪ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಕುಂಭತ್ತಿ ಗ್ರಾಮದಲ್ಲಿ ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಉಂಟಾಗಿದ್ದು ಟಿವಿಎಸ್ ವಾಹನದಲ್ಲಿ ಬರುತ್ತಿದ್ದ ವ್ಯಕ್ತಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಕಾರಿನಲ್ಲಿದ್ದವರು ಪರಾರಿಯಾಗಿದ್ದಾರೆ. ಮೇಲ್ನೋಟಕ್ಕೆ ಇದು ರಸ್ತೆ ಅಪಘಾತ ಎಂದು ಕಂಡು ಬಂದರು ಇದೊಂದು ವ್ಯವಸ್ಥಿತವಾಗಿ ನಡೆದ ಕೊಲೆ ಎಂದು ಮೃತನ ಕುಟುಂಬ ಆರೋಪಿಸಿದೆ. ಕುಟುಂಬದಲ್ಲಿದ್ದ ಜಮೀನು ವಿವಾದದ ಹಿನ್ನಲೆಯಲ್ಲಿ…

Read More

ಶಿವಮೊಗ್ಗ ಜಿಲ್ಲಾ ಪಂಚಾಯತ್ ಸಿಇಒ ಬಂಧನಕ್ಕೆ ಕೋರ್ಟ್ ಆದೇಶ | CEO

ಶಿವಮೊಗ್ಗ ಜಿಲ್ಲಾ ಪಂಚಾಯತ್ ಸಿಇಒ ಬಂಧನಕ್ಕೆ ಕೋರ್ಟ್ ಆದೇಶ ಅಕ್ರಮವಾಗಿ ಮಣ್ಣು ತೆಗೆದು ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟುಮಾಡಿದ ಆರೋಪ ಸಂಬಂಧ ವರದಿ ಕೇಳಿದರೂ, ವರದಿ ನೀಡುವಲ್ಲಿ ಶಿವಮೊಗ್ಗ ಜಿಲ್ಲಾ ಪಂಚಾಯತಿ ಸಿಇಒ ಸ್ನೇಹಲ್‌ ಲೇಖಂಡೆ ಸುಧಾಕರ್ ವಿಳಂಬ ಮಾಡಿದ್ದಾರೆ ಎಂದು ಅವರನ್ನು ಬಂಧಿಸುವಂತೆ ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯ ಆದೇಶಿಸಿದೆ. ಮುದ್ದಣ್ಣನ ಕೆರೆಯಿಂದ 500 ಲೋಡು ಮಣ್ಣು ತೆಗೆಯಲು ಅನುಮತಿ ನೀಡಲಾಗಿತ್ತು. ಆದರೆ, ಕಾನೂನು ಬಾಹಿರವಾಗಿ 15,004 ಲೋಡ್ ಮಣ್ಣನ್ನು ತೆಗೆಯಲಾಗಿದೆ. ಇದರಿಂದ…

Read More

ಹೊಯ್ಸಳ – ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

ಹೊಯ್ಸಳ – ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ ಮಕ್ಕಳ ದಿನಾಚರಣೆ-2024 ರ ಪ್ರಯುಕ್ತ, ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣದ ರಕ್ಷಣೆಗಾಗಿ ಧೈರ್ಯ ಸಾಹಸ ಪ್ರದರ್ಶಿಸಿದ 6 ರಿಂದ 18 ವರ್ಷಗೊಳಗಿನ ಬಾಲಕರಿಗೆ ‘ಹೊಯ್ಸಳ’ ಮತ್ತು ಬಾಲಕಿಯರಿಗೆ ‘ಕೆಳದಿ ಚೆನ್ನಮ್ಮ’ ಶೌರ್ಯ ಪ್ರಶಸ್ತಿಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ವತಿಯಿಂದ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಸಾಹಸ ಪ್ರಕರಣವು ದಿ: 01-08-2023 ರಿಂದ 31-07-2024 ರೊಳಗೆ ನಡೆದಿರಬೇಕು. ದಿ:…

Read More

ರಿಪ್ಪನ್‌ಪೇಟೆ : ಕಲಾ ಕೌಸ್ತುಭ ಕನ್ನಡ ಸಂಘದ ವತಿಯಿಂದ ಸಾವಿರಾರು ಹೆರಿಗೆ ಮಾಡಿಸಿರುವ ಸೂಲಗಿತ್ತಿ ಜಯಮ್ಮ ರವರಿಗೆ ಸನ್ಮಾನ|Ripponpet

ರಿಪ್ಪನ್‌ಪೇಟೆ : ಇಲ್ಲಿನ ಕಲಾ ಕೌಸ್ತುಭ ಕನ್ನಡ ಸಂಘ ಆಯೋಜಿಸಿದ್ದ 67ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಸಾವಿರಾರು ಹೆರಿಗೆ ಮಾಡಿಸುವ ಮೂಲಕ ಮಲೆನಾಡಿನಲ್ಲಿ ಮನೆಮಾತಾಗಿರುವ ಸೂಲಗಿತ್ತಿ ಜಯಮ್ಮ ರವರಿಗೆಸನ್ಮಾನಿಸಿ ಗೌರವಿಸಲಾಯಿತು. ಶನಿವಾರ ಸಂಜೆ ಪಟ್ಟಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಹಲವಾರು ವರ್ಷಗಳಿಂದ ಸೂಲಗಿತ್ತಿ ಸೇವೆ ಮಾಡಿಕೊಂಡು ಎಲೆಮರೆ ಕಾಯಿಯಂತೆ ಕಾರ್ಯ ನಿರ್ವಹಿಸುತಿದ್ದ ಜಯಮ್ಮ ರವರಿಗೆ ಸನ್ಮಾನಿಸಿ ಗೌರವಿಸಲಾಯಿತು. ಜಯಲಕ್ಷ್ಮಿ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದ ಹೊಸನಗರ ರಸ್ತೆಯ ಶ್ರೀರಾಮನಗರದ ನಿವಾಸಿ….

Read More

ಹೊಸನಗರದ ಮಾವಿನಕೊಪ್ಪ ಸರ್ಕಲ್ ನಲ್ಲಿ ಕಾರು ಡಿವೈಡರ್ ಗೆ ಡಿಕ್ಕಿ – ಇಬ್ಬರು ಗಂಭೀರ|accident

ಸಿಗಂದೂರಿನಿಂದ ಭೀಮಸಮುದ್ರಕ್ಕೆ ತೆರಳುತ್ತಿದ್ದ ಕಾರು ಡಿವೈಡರ್ ಡಿಕ್ಕಿ ಹೊಡೆದು ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ಪಟ್ಟಣದಲ್ಲಿ ತಡರಾತ್ರಿ ನಡೆದಿದೆ.  ಪಟ್ಟಣದ ಮಾವಿನಕೊಪ್ಪ ಸರ್ಕಲ್ ನಲ್ಲಿ ಖಾಸಗಿ ಪ್ರವಾಸಿ ಬಸ್‌ನಿಂದ ಇಳಿದ ವ್ಯಕ್ತಿಯೊಬ್ಬ ಅಡ್ಡ ಬಂದ ಕಾರಣ, ಕಾರು ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರು ಚಾಲಕನ ಸಹಿತ ಅಡ್ಡ ಬಂದ ವ್ಯಕ್ತಿಗೆ ಗಂಭೀರ ಗಾಯಗಳಾಗಿವೆ. ತಾಲೂಕಿನ ಕಸಬಾ ಹೋಬಳಿ ಮಳವಳ್ಳಿ ವಾಸಿ ಶೇಖರ(45) ಕಾರಿಗೆ ಅಡ್ಡ ಬಂದ ವ್ಯಕ್ತಿ….

Read More