ರಿಪ್ಪನ್ ಪೇಟೆ ಸುತ್ತಮುತ್ತ ನಿರಂತರ ಕಾಡಾನೆ ದಾಳಿ, ಕಣ್ಮುಚ್ಚಿ ಕುಳಿತ ಅರಣ್ಯ ಇಲಾಖೆ :
ರಿಪ್ಪನ್ಪೇಟೆ: ಕಳೆದ ಒಂದೂವರೆ ತಿಂಗಳಿನಿಂದ ಕಾಡಾನೆ ರೈತರ ಹೊಲಗದ್ದೆಗಳಿಗೆ ನಿರಂತರ ದಾಳಿ ನಡೆಸಿ ಬೆಳೆ ನಾಶಪಡಿಸುತ್ತಿದ್ದರೂ ಅರಣ್ಯ ಇಲಾಖೆ ಮಾತ್ರ ಕಣ್ಮುಚ್ಚಿಕುಳಿತಂತಿದೆ. ಅರಸಾಳು ಹಾಗೂ ಹೆದ್ದಾರಿಪುರ ಗ್ರಾಮ ಪಂಚಾಯತ್ನಿ ವ್ಯಾಪ್ತಿಯ ಕಾನಗೋಡು ತಮ್ಮಡಿಕೊಪ್ಪ ಹಾರಂಬಳ್ಳಿ ಬಾಳೆಕೊಡ್ಲು, ಕಾರೆಹೊಂಡ, ಕಗಚಿ, ತಳಲೆ, ಸುಳಕೋಡು ಗ್ರಾಮದ ರೈತರ ಜಮೀನಿಗೆ ನಿರಂತರ ದಾಳಿಯಿಡುತ್ತಿದೆ. ರೈತರು ಬೆಳೆದ ಅಡಿಕೆ, ತೆಂಗು, ಬಾಳೆ, ಕಬ್ಬು ಬೆಳೆಗಳನ್ನು ಮುರಿದು ತಿಂದು ನಷ್ಟಮಾಡುತ್ತಿದೆ. ಈ ಭಾಗದಲ್ಲಿ ಆನೆ ಬೀಡುಬಿಟ್ಟಿರುವ ಮಾಹಿತಿಯಿದ್ದರೂ ಅರಣ್ಯ ಇಲಾಖೆ ಮಾತ್ರ ರಾತ್ರಿ ಗಸ್ತು…


