ಹರಿದ್ರಾವತಿ ಸರ್ಕಾರಿ ವೈದ್ಯರನ್ನು ಬದಲಾಯಿಸುವಂತೆ ಬೃಹತ್ ಪ್ರತಿಭಟನೆ : ಪ್ರತಿಭಟನೆಗೆ ಮಣಿದ ತಾಲ್ಲೂಕು ಆರೋಗ್ಯಧಿಕಾರಿ
ಹರಿದ್ರಾವತಿ : ಇಲ್ಲಿನ ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿ ಕಳೆದ ಎರಡು ತಿಂಗಳಿನಿಂದ ನಿರಂತರ ಗೈರಾಗಿರುವ ವೈದ್ಯಧಿಕಾರಿಗಳ ಬದಲಿಗೆ ಬೇರೆ ವೈದ್ಯರನ್ನು ನೇಮಿಸುವಂತೆ ಒತ್ತಾಯಿಸಿ ವಿವಿಧ ಸಂಘಟನೆಗಳಿಂದ ನಡೆದ ಪ್ರತಿಭಟನೆಗೆ ಸ್ಪಂದಿಸಿರುವ ತಾಲ್ಲೂಕು ವೈದ್ಯಾಧಿಕಾರಿಗಳು ಸೋಮವಾರದಿಂದಲೇ ಬದಲಿ ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದರು. ಇಂದು ಹರಿದ್ರಾವತಿ ಪ್ರಾಥಮಿಕ ಅರೋಗ್ಯ ಕೇಂದ್ರದ ಎದುರು ಕರ್ನಾಟಕ ರಕ್ಷಣಾ ವೇದಿಕೆ, ನಮ್ಮ ಹಳ್ಳಿ ಬಟ್ಟೆಮಲ್ಲಪ್ಪ -ಆಲಗೇರಿಮಂಡ್ರಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮನವಿ ಸ್ವೀಕರಿಸಿ ಮಾತನಾಡಿದ ಡಾ. ಸುರೇಶ್…


