ರಿಪ್ಪನ್‌ಪೇಟೆ ಪಟ್ಟಣದ ಸಮಗ್ರ ಅಭಿವೃದ್ಧಿಗೆ ಆದ್ಯತೆ – ಶಾಸಕ ಬೇಳೂರು ಗೋಪಾಲಕೃಷ್ಣ

ರಿಪ್ಪನ್‌ಪೇಟೆ ಪಟ್ಟಣದ ಸಮಗ್ರ ಅಭಿವೃದ್ಧಿಗೆ ಆದ್ಯತೆ – ಶಾಸಕ ಬೇಳೂರು ಗೋಪಾಲಕೃಷ್ಣ ರಸ್ತೆ ಅಗಲೀಕರಣ ಕಾಮಗಾರಿ ವೀಕ್ಷಿಸಿದ ಶಾಸಕರು ರಿಪ್ಪನ್‌ಪೇಟೆ : ಪಟ್ಟಣದ ಸಮಗ್ರ ಅಭಿವೃದ್ಧಿಗೆ ಹಲವಾರು ಮಹತ್ವದ ಯೋಜನೆಗಳನ್ನು ಸಿದ್ದಪಡಿಸಲಾಗಿದ್ದು ಮುಂದಿನ ದಿನಗಳಲ್ಲಿ ಪಟ್ಟಣವನ್ನು ಸುಂದರವನ್ನಾಗಿಸಲು ತಾನು ಬದ್ದನಾಗಿದ್ದೇನೆ ಎಂದು ಶಾಸಕ ಹಾಗೂ ಕರ್ನಾಟಕ ರಾಜ್ಯ ಕೈಗಾರಿಕಾ ನಿಗಮದ ಅಧ್ಯಕ್ಷರಾದ ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣದ ಮುಖ್ಯ ರಸ್ತೆ ಅಗಲೀಕರಣ ಕಾಮಗಾರಿಯನ್ನು ವೀಕ್ಷಿಸಿ ನಂತರ ಮಾತನಾಡಿದ ಶಾಸಕರು ಸಾಗರ ಹಾಗೂ ತೀರ್ಥಹಳ್ಳಿ ರಸ್ತೆ ಅಗಲೀಕರಣ ಕಾಮಗಾರಿಗೆ…

Read More

ರೈಲ್ವೆ ಲೆವೆಲ್ ಕ್ರಾಸಿಂಗ್ ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗ:…!

ಶಿವಮೊಗ್ಗ: ಮೂರು ಕಡೆ ರೈಲ್ವೆ ಲೆವೆಲ್ ಕ್ರಾಸಿಂಗ್ ಕಾಮಗಾರಿ ನಡೆಯುತ್ತಿದ್ದು, ವಾಹನ ಸವಾರರು ಈ ಕೆಳಕಂಡ ಪರ್ಯಾಯ ಮಾರ್ಗವನ್ನು ಅನುಸರಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ. ಶಿವಮೊಗ್ಗ ನಗರ-ಕುಂಸಿ ಸ್ಟೇಷನ್ ಮಧ್ಯೆ ಬರುವ ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್ ನಂ.49, 50 ಮತ್ತು 79 ರ ಲೆವೆಲ್ ಕ್ರಾಸಿಂಗ್‍ನಲ್ಲಿ ತಾಂತ್ರಿಕ ಪರಿಶೀಲನೆ ಮಾಡುವುದಕ್ಕಾಗಿ ಗೇಟ್‍ಗಳನ್ನು ಮುಚ್ಚಿ ಪರ್ಯಾಯ ಮಾರ್ಗಗಳಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಂಡಲಾಗಿದೆ. ಎಲ್‍ಸಿ ನಂ 50,ಶಿವಮೊಗ್ಗ – ಸವಳಂಗಮಾರ್ಗ ಡಿ.06 ರ ರಾತ್ರಿ 10.30…

Read More

ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಹೊಸನಗರ ತಾಲೂಕು ಘಟಕ ಅಸ್ತಿತ್ವಕ್ಕೆ |SJKPS

ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಹೊಸನಗರ ತಾಲೂಕು ಘಟಕ ಇಂದು ಅಸ್ತಿತ್ವಕ್ಕೆ ಬಂದಿದೆ. ಹೊಸನಗರ ಪಟ್ಟಣದ ಪ್ರವಾಸಿ ಮಂದಿರದಲ್ಲಿಂದು ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಗೋಪಾಲ್ ಯಡಗೆರೆಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನ ಘಟಕ ಅಸ್ತಿತ್ವಕ್ಕೆ ಬಂದಿತು. ನೂತನ ಅಧ್ಯಕ್ಷರಾಗಿ ವೆಂಕಟೇಶ್ ಮೂರ್ತಿ,ಉಪಾಧ್ಯಕ್ಷರಾಗಿ ನಾರಾಯಣ್ ಕಾಮತ್ ಮತ್ತು ರಫಿ ರಿಪ್ಪನ್‌ಪೇಟೆ ಪ್ರಧಾನ ಕಾರ್ಯದರ್ಶಿಯಾಗಿ ರಿ.ರಾ. ರವಿಶಂಕರ್ ಕಾರ್ಯದರ್ಶಿಯಾಗಿ ಹೆಚ್ ಎಸ್ ನಾಗರಾಜ್ ಕೋಶಾಧಿಕಾರಿಯಾಗಿ ರವಿರಾಜ್ ಎಂ.ಜಿ. ಭಟ್ ಮತ್ತು ಸಂಘಟನಾ ಕಾರ್ಯದರ್ಶಿಯಾಗಿ ದೀಪಕ್ ಸ್ವರೂಪ್…

Read More

ತೀರ್ಥಹಳ್ಳಿಯಲ್ಲಿ ಮಾನಸಿಕ ವ್ಯಕ್ತಿಯಿಂದ ಸಾರ್ವಜನಿಕರಿಗೆ ಕಿರಿಕಿರಿ ! ನಿಮಾನ್ಸ್ ಆಸ್ಪತ್ರೆಗೆ ರವಾನೆ !! | Thirthahalli

ತೀರ್ಥಹಳ್ಳಿಯಲ್ಲಿ ಮಾನಸಿಕ ವ್ಯಕ್ತಿಯ ಹುಚ್ಚಾಟ ! ನಿಮಾನ್ಸ್ ಆಸ್ಪತ್ರೆಗೆ ರವಾನೆ! ತೀರ್ಥಹಳ್ಳಿ:  ಪಟ್ಟಣದಲ್ಲಿ ಹುಚ್ಚನೊಬ್ಬ ರಸ್ತೆಯಲ್ಲಿ ಓಡಾಡುವ ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದ್ದು ಹುಚ್ಚಾಟ ಮೆರೆಯುತ್ತಿದ್ದ ಹಿನ್ನಲೆಯಲ್ಲಿ ಸ್ಥಳೀಯ ಪ್ರಮುಖರು, ಪೊಲೀಸ್ ಇಲಾಖೆ ನೆರವಿನೊಂದಿಗೆ ಆತನನ್ನು ನಿಮಾನ್ಸ್ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ. ಆತ ರಸ್ತೆಯಲ್ಲಿ ಸಿಕ್ಕ ಸಿಕ್ಕವರಿಗೆ ಕಿರಿಕಿರಿ ಮಾಡುತ್ತಿದ್ದಾನೆ. ಇದರಿಂದ ಪಟ್ಟಣದಲ್ಲಿ ಓಡಾಡಲು ಜನರು ಸಂಕಷ್ಟ  ಅನುಭವಿಸುವಂತಾಗಿದೆ. ರಸ್ತೆ ಮಧ್ಯ ನಿಂತು ಕೂಗಾಡುತ್ತಾ ಇನ್ನು ಯುವತಿಯರಿಗೆ ಕೂಡ ಕೀಟಲೆ ನೀಡುತ್ತಿದ್ದು, ಇದರಿಂದ ಯುವತಿಯರಿಗೆ ರಸ್ತೆಯಲ್ಲಿ ಓಡಾಡಲು ಆಗುತ್ತಿಲ್ಲ. ಈತನ ಅಸಭ್ಯ…

Read More

Thirthahalli | ಬೈಕ್ ಶೋ ರೂಮ್ ನಲ್ಲಿ ಆಕಸ್ಮಿಕ ಬೆಂಕಿ – ಎರಡು ಬೈಕ್ ಸಂಪೂರ್ಣ ಸುಟ್ಟು ಭಸ್ಮ

Thirthahalli | ಬೈಕ್ ಶೋ ರೂಮ್ ನಲ್ಲಿ ಆಕಸ್ಮಿಕ ಬೆಂಕಿ – ಎರಡು ಬೈಕ್ ಸಂಪೂರ್ಣ ಸುಟ್ಟು ಭಸ್ಮ ತೀರ್ಥಹಳ್ಳಿ : ಪಟ್ಟಣದ ಆಗುಂಬೆ ಬಸ್ ನಿಲ್ದಾಣದಲ್ಲಿರುವ ಬೈಕ್ ಶೋ ರೂಮ್ ಖಂಡಿಲ್ ಮೋಟಾರ್ಸ್ ಗೆ ಭಾನುವಾರ ಮಧ್ಯಾಹ್ನ ಏಕಾಏಕಿ ಬೆಂಕಿ ಹತ್ತಿಕೊಂಡು ಶೋ ರೂಮ್ ಒಳಗಿದ್ದ 20 ಕ್ಕೂ ಹೆಚ್ಚು ಹೊಸ ಬೈಕ್ ಗಳಿಗೆ ಡ್ಯಾಮೇಜ್ ಆಗಿದೆ ಹಾಗೂ ಎರಡು ಬೈಕ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಭಾನುವಾರ ರಜಾ ದಿನವಾದ ಹಿನ್ನಲೆಯಲ್ಲಿ ಶೋ ರೂಮ್ ರಜೆ…

Read More

ಅಬಾಕಸ್ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ರಿಪ್ಪನ್‌ಪೇಟೆ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ

ಅಬಾಕಸ್ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ರಿಪ್ಪನ್‌ಪೇಟೆ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ ರಿಪ್ಪನ್‌ಪೇಟೆ : ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ರಾಷ್ಟ್ರ ಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಪಟ್ಟಣದ “ಐಡಿಯಲ್ ಪ್ಲೇ ಅಬಾಕಸ್ ” ಶಾಖೆಯ 17 ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಅನೇಕ ಬಹುಮಾನಗಳನ್ನು ಮುಡಿಗೇರಿಸಿಕೊಂಡಿದ್ದಾರೆ. 12- 01-2025 ರಂದು ಬೆಂಗಳೂರಿನ ವೈಟ್ ಫೆದರ್ ಹಾಲ್ ನಲ್ಲಿ ನಡೆದ ರಾಷ್ಟ್ರಮಟ್ಟದ ಅಬಾಕಸ್ ಕಾಂಪಿಟೇಶನ್ ನಲ್ಲಿ 15 ರಾಜ್ಯಗಳಿಂದ ಸುಮಾರು 3 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು. ರಿಪ್ಪನ್ ಪೇಟೆಯ…

Read More

ಅಕ್ರಮ ಜಾನುವಾರು ಸಾಗಾಟ – ಬಜರಂಗದಳ ಕಾರ್ಯಕರ್ತರಿಂದ ರಕ್ಷಣೆ |bajarangdal

ಮಾರಾಟದ ಉದ್ದೇಶಕ್ಕಾಗಿ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಜಾನುವಾರುಗಳನ್ನು ಬಜರಂಗದಳದ ಕಾರ್ಯಕರ್ತರು ರಕ್ಷಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಟ್ಟೆಮಲ್ಲಪ್ಪ ಗ್ರಾಮದಲ್ಲಿ ಇಂದು ನಡೆದಿದೆ.  ಹೊಸನಗರ ಕಡೆಯಿಂದ ಶಿರಾಳಕೊಪ್ಪದ ಕಡೆಗೆ ಅಶೋಕ್ ಲೈಲೆಂಡ್ ದೋಸ್ತ್ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಆರು ಎತ್ತಿನ ಹೋರಿ ಹಾಗೂ ಒಂದು ಎಮ್ಮೆ ಕರುವನ್ನು ಭಜರಂಗದಳದ ಕಾರ್ಯಕರ್ತರು ರಸ್ತೆಗೆ ಅಡ್ಡಗಟ್ಟಿ ವಶಪಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ. ಇಂದು ಬೆಳಿಗ್ಗೆ ಕೆಎ 17 ಎಎ 0196 ವಾಹನದಲ್ಲಿ ಸುಮಾರು ಆರು ಎತ್ತಿನಹೋರಿ ಹಾಗೂ ಒಂದು ಎಮ್ಮೆ…

Read More

ಮಳೆಹಾನಿ ಪ್ರದೇಶಗಳಿಗೆ ಇಂದು ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ

ಭಾರಿ ಗಾಳಿ ಮಳೆಗೆ ಮನೆ ಹಾನಿ – ಸ್ಥಳಕ್ಕೆ ತಹಶಿಲ್ದಾರ್ ಭೇಟಿ ಮಳೆಹಾನಿ ಪ್ರದೇಶಗಳಿಗೆ ಇಂದು ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ ಹೊಸನಗರ : ಪಟ್ಟಣದ ವ್ಯಾಪ್ತಿಯಲಿ ವಿವಿಧೆಡೆ ಭಾರಿ ಗಾಳಿ ಮಳೆಗೆ ಮರಗಳು ಧರೆಗುರುಳಿ ಅಪಾರ ಪ್ರಮಾಣದ  ಹಾನಿಯಾಗಿದ್ದು ಸದರಿ ಮಳೆಹಾನಿಯಾದ ಪ್ರದೇಶಗಳಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಇಂದು ಸಂಜೆ ಭೇಟಿ ನೀಡಿ ಪರಿಶೀಲಿಸಲಿದ್ದಾರೆ. ಪೂರ್ವ ನಿಗದಿತ ಕಾರ್ಯಕ್ರಮದ ಹಿನ್ನಲೆಯಲ್ಲಿ ಬೆಂಗಳೂರಿಗೆ ತೆರಳಿದ್ದ ಶಾಸಕರು ಬೆಂಗಳೂರಿನಿಂದ ಇಂದು ಮಧ್ಯಾಹ್ನ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದು ಅಲ್ಲಿಂದ…

Read More

ಹರತಾಳು ಗ್ರಾಮ ಪಂಚಾಯಿತಿ ಅಧ್ಯಕ್ಷ ಕಲ್ಲಿ ಯೋಗೇಂದ್ರ ವಿರುದ್ದ ಅವಿಶ್ವಾಸ ನಿರ್ಣಯ, ಅಧ್ಯಕ್ಷ ಸ್ಥಾನಕ್ಕೆ ಹಕ್ಕು ಚ್ಯುತಿ|Haratalu

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹರತಾಳು ಗ್ರಾಮ ಪಂಚಾಯಿತಿ ಹಾಲಿ‌ ಅಧ್ಯಕ್ಷರಾಗಿದ್ದ ಕಲ್ಲಿ ಯೋಗೇಂದ್ರ ಇವರನ್ನು ಗ್ರಾಮ ಪಂಚಾಯತಿ ಸದಸ್ಯರ ಅವಿಶ್ವಾಸ ನಿರ್ಣಯದಿಂದ ಅಧ್ಯಕ್ಷ ಸ್ಥಾನಕ್ಕೆ ಹಕ್ಕುಚ್ಯುತಿ ನಿರ್ಣಯ ಮಾಡಲಾಗಿದೆ. ಕಾಂಗ್ರೆಸ್‌ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಕಲ್ಲಿ ಯೋಗೇಂದ್ರ ಇತ್ತಿಚೆಗೆ ಬಿಜೆಪಿ ಸೇರ್ಪಡೆಯಾಗಿದ್ದರೆಂಬ ಕಾರಣವೇ ಅಧ್ಯಕ್ಷ ಸ್ಥಾನದ ಅವಿಶ್ವಾಸ ನಿರ್ಣಯಕ್ಕೆ ಕಾರಣ ಎಂದು ಹೇಳಲಾಗಿದೆ. ಅವಿಶ್ವಾಸ ನಿರ್ಣಯ ಪರವಾಗಿ ಸದಸ್ಯರಾದ ಸಾಕಮ್ಮ ಮನೋಹರ,ಕಣಕಿ ನಾರಾಯಣಪ್ಪ,  ನಾರಿ ರವಿ,ನಾಗರತ್ನ ವಾಸುದೇವ,ಸತ್ಯವತಿ ಚಂದ್ರಪ್ಪ,, ಶಿವಮೂರ್ತಿ ಮತ ಚಲಾಯಿಸಿದರು. 8 ಜನ ಸದಸ್ಯರಲ್ಲಿ…

Read More

ವಿದ್ಯುತ್ ಅವಘಡದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಪರಿಹಾರದ ಚೆಕ್ ವಿತರಿಸಿದ ಶಾಸಕ ಹರತಾಳು ಹಾಲಪ್ಪ|mescom

ರಿಪ್ಪನ್‌ಪೇಟೆ : ಇತ್ತೀಚೆಗೆ ಹರತಾಳು ಗ್ರಾ.ಪಂ ವ್ಯಾಪ್ತಿಯಲ್ಲಿ ವಿದ್ಯುತ್ ಅವಘಡದಿಂದ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ಧನವನ್ನು ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ವಿತರಿಸಿದರು. ಇತ್ತೀಚೆಗೆ ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಶೇಷಗಿರಿ ಬಿನ್ ಬಸವನಾಯ್ಕ ರವರು ಮೃತಪಟ್ಟಿದ್ದು, ಮೃತರ ವಾರಸುದಾರರಾದ ಸುಧಾರಾಣಿ ಶೇಷಗಿರಿಯವರಿಗೆ ಸಾಗರದಲ್ಲಿ 5 ಲಕ್ಷ ರೂ ಗಳ ಪರಿಹಾರ ಧನದ ಆದೇಶ ಪ್ರತಿ ಹಸ್ತಾಂತರಿಸಿ, ಸಾಂತ್ವನ ಹೇಳಿದರು. ಈ ಸಂಧರ್ಭದಲ್ಲಿ ಮೆಸ್ಕಾಂ AEE ಚಂದ್ರಶೇಖರ್, ಮೃತರ ಕುಟುಂಬಸ್ಥರು, ಪಕ್ಷದ ಮುಖಂಡರು…

Read More