Headlines

ತೀರ್ಥಹಳ್ಳಿ:ವೈದ್ಯಕೀಯ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ್ದ ಅಬ್ದುಲ್ ಬಷೀರ್ ಸಾಹೇಬ್ ಇನ್ನಿಲ್ಲ

ತೀರ್ಥಹಳ್ಳಿ :  ವೈದ್ಯಕೀಯ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಅಬ್ದುಲ್ ಬಷೀರ್ ಇವರು ಇಂದು  ಧೀರ್ಘಕಾಲದ ಅನಾರೋಗ್ಯದಿಂದ ತಮ್ಮ ಸ್ವಗೃಹದಲ್ಲಿ ನಿಧನರಾದರು.ಅಬ್ದುಲ್ ಕರೀಂ ಸಾಹೇಬ್ ಹಾಗು  ಶ್ರೀಮತಿ ಹಾಜರಾಂಬಿ ದಂಪತಿಗಳ ಪುತ್ರರಾಗಿ 1940 ರಲ್ಲಿ ಜನಿಸಿದ ಅಬ್ದುಲ್ ಬಶೀರ್ ರವರು ತಮ್ಮ ಇಪ್ಪತಾರನೆಯ ವಯಸ್ಸಿನಲ್ಲಿ ( 1956) ಡಿ ದರ್ಜೆಯ ನೌಕರರಾಗಿ ತೀರ್ಥಹಳ್ಳಿಯ ಜೆ.ಸಿ ಆಸ್ಪತ್ರೆಯಲ್ಲಿ ಸೇವೆಗೆ ಸೇರಿದ ಇವರು ನಂತರದ ದಿನಗಳಲ್ಲಿ ತೀರ್ಥಹಳ್ಳಿಯ ವೈದ್ಯಕೀಯ ಕ್ಷೇತ್ರದ ಇತಿಹಾಸದಲ್ಲಿ ಅನುಪಮ ಸೇವೆ ಸಲ್ಲಿಸಿಸಿರುತ್ತಾರೆ. ತಮ್ಮ ಸೇವಾ ಅವದಿಯ…

Read More

ಸಕ್ರೆಬೈಲು ಆನೆ ಬಿಡಾರದಲ್ಲಿ ಪವರ್ ಸ್ಟಾರ್ ಪುನಿತ್ ರಾಜ್ ಕುಮಾರ್ : ಸೆಲ್ಪಿಗೆ ಮುಗಿಬಿದ್ದ ಅಭಿಮಾನಿಗಳು

ಶಿವಮೊಗ್ಗ: ಸಕ್ರೆಬೈಲು ಆನೆ ಬಿಡಾರಕ್ಕೆ ನಟ ಪುನಿತ್ ರಾಜ್ ಕುಮಾರ್ ಅವರು ಇವತ್ತು ಭೇಟಿ ನೀಡಿದ್ದಾರೆ. ಡಾಕ್ಯೂಮೆಂಟರಿ ಒಂದರ ಚಿತ್ರೀಕರಣಕ್ಕಾಗಿ ಅವರು ಬಿಡಾರಕ್ಕೆ ಬಂದಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆ ಪವರ್ ಸ್ಟಾರ್ ಅಭಿಮಾನಿಗಳು ಆನೆ ಬಿಡಾರದ ಬಳಿ ಸೇರಿದ್ದರು.ಮಧ್ಯಾಹ್ನ ಸಕ್ರೆಬೈಲು ಆನೆ ಬಿಡಾರಕ್ಕೆ ನಟ ಪುನಿತ್ ರಾಜ್ ಕುಮಾರ್ ಭೇಟಿ ನೀಡಿದ್ದಾರೆ. ಸಾಕ್ಷ್ಯಚಿತ್ರದ ಚಿತ್ರೀಕರಣದ ಸಲುವಾಗಿ ಅವರು ಬಿಡಾರಕ್ಕೆ ಬಂದಿದ್ದಾರೆ. ಬಿಡಾರದ ಕ್ರಾಲ್ ಪ್ರದೇಶದಲ್ಲಿ ಚಿತ್ರೀಕರಣ ಕಾರ್ಯ ನಡೆಸಲಾಯಿತು. ಚಿತ್ರೀಕರಣ ನಡೆಯುತ್ತಿದ್ದ ಕಾರಣಕ್ಕೆ ಕ್ರಾಲ್ ಪ್ರದೇಶಕ್ಕೆ ಸಾರ್ವಜನಿಕ ಪ್ರವೇಶವನ್ನು…

Read More

ಕುಂಸಿ : ಬಹಿರ್ದೆಸೆಗೆಂದು ಹೊರಹೋಗಿದ್ದ ನಾಲ್ಕು ವರ್ಷದ ಮಗು ಶವವಾಗಿ ಪತ್ತೆ:

ಕುಂಸಿ : ಬಹಿರ್ದೆಸೆಗೆ ತೆರಳಿದ್ದ ನಾಲ್ಕು ವರ್ಷದ ಮಗು ಸೋಮವಾರದಿಂದ ಕಾಣೆಯಾಗಿದ್ದು ಇಂದು ಬೆಳಿಗ್ಗೆ ಶವವಾಗಿ ಪತ್ತೆಯಾಗಿದೆ. ಈ ಪ್ರಕರಣದಲ್ಲಿ ಮಗುವಿನ ಕೊಲೆಯ ಬಗ್ಗೆ  ಶಂಕೆ ವ್ಯಕ್ತವಾಗಿದೆ. ಸೋಮವಾರದಂದು ಕಾಣೆಯಾಗಿದ್ದ ಮಗು ಇಂದು ಮುಂಜಾನೆ ಮನೆಯಿಂದ 1½ ಕಿಮಿ ದೂರದಲ್ಲಿ ಶವವಾಗಿ ಪತ್ತೆಯಾಗಿದೆ. ಜಿಲ್ಲೆಯ ಗಡಿಭಾಗದ ರಟ್ಟೆಹಳ್ಳಿಯಲ್ಲಿ ಆ.30 ರಂದು ಸಂಜು ಎಂಬ ನಾಲ್ಕು ವರ್ಷದ ಮಗು ಸಂಜು ಬಹಿರ್ದೆಸೆಗೆ ಹೋಗಿದ್ದವರು ಮನೆಗೆ ವಾಪಾಸಾಗಿರಲಿಲ್ಲ. ಸಂಜೆಯ ವರೆಗೆ ಹುಡುಕಿದ ಪೋಷಕರು ಕೊನೆಯಲ್ಲಿ ಕುಂಸಿ ಪೊಲೀಸ್ ಠಾಣೆಗೆ ದೂರು…

Read More

ಶಿವಮೊಗ್ಗ: ಪಿಇಎಸ್ ಶಿಕ್ಷಣ ಸಂಸ್ಥೆಗಳಿಗೆ ಸೇರಿದ ನಾಲ್ಕು ಬಸ್’ಗಳಿಂದ ರಾತ್ರೋರಾತ್ರಿ ಡಿಸೇಲ್ ಕಳ್ಳತನ!

ಶಿವಮೊಗ್ಗ: ನಗರದ ಪಿಇಎಸ್ ಶಿಕ್ಷಣ ಸಂಸ್ಥೆಗಳಿಗೆ ಸೇರಿದ ನಾಲ್ಕು ಬಸ್ ನಿಂದ ಡೀಸೆಲ್ ಕಳುವಾಗಿದೆ. ಶಿವಮೊಗ್ಗ ನಗರದ ಸೋಮಿನಕೊಪ್ಪದ ಮೈತ್ರಿ ಅಪಾರ್ಟ್‌ಮೆಂಟ್ ಬಳಿ ಶಿಕ್ಷಣ ಸಂಸ್ಥೆ ಆವರಣದಲ್ಲಿ ನಿಲ್ಲಿಸಿದ್ದ ಬಸ್ಗಳಿಂದ ಡೀಸೆಲ್ ಕದಿಯಲಾಗಿದ್ದು, ಎರಡು ದೊಡ್ಡ ಬಸ್ ಮತ್ತು ಎರಡು ಮಿನಿ ಬಸ್ಗಳಿಂದ ತಡರಾತ್ರಿ ವೇಳೆ ಡೀಸೆಲ್ ಕದಿಯಲಾಗಿದೆ. ಡೀಸೆಲ್ ಮತ್ತು ಪೆಟ್ರೋಲ್ ದರ ದಿನ ನಿತ್ಯ ಏರುತ್ತಿರುವುದರಿಂದ ಡಿಸೇಲ್ ಕಳ್ಳರ ಟಾರ್ಗೆಟ್ ಆಗಿದೆ.ನಾಲ್ಕು ಬಸ್ ಗಳನ್ನೂ ಶಿಕ್ಷಣ ಸಂಸ್ಥೆ ಬಳಿ ಸೆಕ್ಯೂರಿಟಿ ನಡುವೆಯೇ ನಿಲ್ಲಿಸಲಾಗಿದ್ದರೂ ಕಳ್ಳರು…

Read More

ಯಡೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವೈದ್ಯರ ನೇಮಕಕ್ಕೆ ಸಾರ್ವಜನಿಕರ ಆಗ್ರಹ :

ಹೊಸನಗರ : ಯಡೂರು ಸುಳುಗೋಡು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಎಂಬಿಬಿಎಸ್ ಡಾಕ್ಟರ್ ಇಲ್ಲ ನಮಗೆ ಡಾಕ್ಟರ್ ಬೇಕು ಎಂದು ಪ್ರತಿಭಟನೆ ನಡೆಸಲಾಯಿತು. ಇಲ್ಲಿ ಸದ್ಯ ಆರ್ಯುವೇದ ಬಗ್ಗೆ ತಿಳಿದಿರುವ ಡಾಕ್ಟರ್ ಇದ್ದು ನಮಗೆ  ಇಂಗ್ಲಿಷ್ ಮೆಡಿಸನ್ ಕೋಡುವ ಡಾಕ್ಟರ್ ಬೇಕು. ತೀರ್ಥಹಳ್ಳಿ ಅಥವಾ ಹೊಸನಗರಕ್ಕೆ ಆರೋಗ್ಯ ಸರಿ ಇಲ್ಲ ಎಂದು ಹೋಗುವುದಾದರೆ  30 ಕ್ಕು ಹೆಚ್ಚು ಕಿಲೋಮೀಟರ್ ಅಗುತ್ತದೆ. ದಯವಿಟ್ಟು ಸಂಬಂಧ ಪಟ್ಟ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಕೂಡಲೇ ಯಡೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವಾರದ 24…

Read More

ಹುಂಚಾ : ಗೃಹಮಂತ್ರಿಗಳ ಸ್ವಕ್ಷೇತ್ರದಲ್ಲಿ ಇಲ್ಲದವರ ಮೇಲೆ ಉಳ್ಳವರ ದರ್ಬಾರ್ : ಬಡ ವೃದ್ದೆಯ ಮೇಲೆ ದಬ್ಬಾಳಿಕೆ

ರಿಪ್ಪನ್‌ಪೇಟೆ: ಹೊಸನಗರ ತಾಲ್ಲೂಕಿನ ಹುಂಚ ಹೋಬಳಿ ವ್ಯಾಪ್ತಿಯ ಕರಿಗೆರಸು ಗ್ರಾಮದ ಸರ್ವೇ ನಂಬರ್ 37 ರಲ್ಲಿ ಜಮೀನಿನ ಖಾತೆದಾರನಿಗೆ ಹಕ್ಕು ಪತ್ರ ನೀಡಲಾಗಿದ್ದರೂ ಕೂಡಾ ಸದರಿ ಜಾಗದ ಪಕ್ಕದ ರೈತನೋರ್ವ ದುರುದ್ದೇಶದಿಂದ ಅಧಿಕಾರಿಗಳನ್ನು ಬಳಸಿಕೊಂಡು ಓಡಾಟಕ್ಕೆ ಜಾಗ ಬಿಡುವಂತೆ ಒತ್ತಾಯಿಸಿ ತೆರವುಗೊಳಿಸಿರುವ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ಸದರಿ ಗ್ರಾಮದ ಸರಿಯಾಗಿ ಕಣ್ಣು ಕಾಣಿಸದ ಮತ್ತು ಕಿವಿ ಕೇಳಿಸದ ಸುಮಾರು 75 ವರ್ಷದ ವೃದ್ಧೆ ಗೌರಮ್ಮ ಕೋಂ ಡಾಕಪ್ಪ ಎಂಬುವರಿಗೆ ಸರ್ವೇ ನಂಬರ್ 37 ರಲ್ಲಿ ಒಂದು…

Read More

ಪ್ರಿಯಕರನಿಂದ ಪ್ರೇಯಸಿಗೆ ಚೂರಿ ಇರಿತ : ತಾನೂ ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ : ಪ್ರೇಮಿಗಳು ಇಬ್ಬರು ಗಂಭೀರ…!

ಉಡುಪಿ : ನಗರದ ಅಂಬಾಗಿಲು ಸಂತೆಕಟ್ಟೆ ಪೆಟ್ರೋಲ್ ಪಂಪ್ ಬಳಿ ಯುವಕನೋರ್ವ ತನ್ನ ಪ್ರೇಯಸಿಗೆ ಚೂರಿ ಇರಿದು ನಂತರ ತಾನೂ ಚೂರಿ ಹಾಕಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು ಸಂಜೆ ನಡೆದಿದೆ. ಯುವ ಜೋಡಿಗಳು ಬೈಕಿನಲ್ಲಿ ಬಂದು ನಂತರ ಜಗಳವಾಡಿ ಚೂರಿಯಲ್ಲಿ ಇರಿದು ಕೊಂಡಿದ್ದಾರೆ ಎನ್ನಲಾಗಿದೆ. ಯುವತಿಯು ಸ್ಥಳೀಯ ಅಂಬಾಗಿಲು ಕಕ್ಕುಂಜೆ ನಿವಾಸಿ ಸೌಮ್ಯಶ್ರೀ ಎಂದು ತಿಳಿಯಲಾಗಿದೆ.ಯುವಕನು ಘಟನಾ ಸ್ಥಳಕ್ಕೆ ಬಂದ ಬೈಕ್ ಐಡಿಯಲ್ ಮೆಡಿಕಲ್ ರೇಫ್ ನದ್ದು ಎಂದು ತಿಳಿದು ಬಂದಿದೆ,ಯವಕನ ವಿವರಗಳು ಇನ್ನಷ್ಟು ತಿಳಿದುಬರಬೇಕಿದೆ….

Read More

ಶಿವಮೊಗ್ಗ: ಸ್ಮಾರ್ಟ್ ಸಿಟಿ ಕಾಮಗಾರಿ ವಿಳಂಬ: ಜಯ ಕರ್ನಾಟಕ ಮಹಿಳಾ ಘಟಕದ ವತಿಯಿಂದ ಪ್ರತಿಭಟನೆ

ಶಿವಮೊಗ್ಗ : ಸ್ಮಾರ್ಟ್ ಸಿಟಿಯ ಅವೈಜ್ಞಾನಿಕ ಮತ್ತು ಅಪೂರ್ಣ ಕಾಮಗಾರಿಯಿಂದ ಶನಿವಾರ ಆಗಸ್ಟ್ 28 ರಂದು ಅಮಾಯಕ ಶಿಕ್ಷಕರೊಬ್ಬರು ಜೀವ ಕಳೆದುಕೊಂಡಿದ್ದಾರೆ. ಈ ಮೊದಲಿನಿಂದಲು ನಾಗರಿಕರು ಸ್ಮಾರ್ಟ್ ಸಿಟಿಯ ನಿಧಾನಗತಿಯ ಮತ್ತು ಕಳಪೆ ಕಾಮಗಾರಿಯ ಬಗ್ಗೆ ಧ್ವನಿ ಎತ್ತುತ್ತಲೇ ಬಂದಿದ್ದಾರೆ ಆದರೆ ಇದರ ಬಗ್ಗೆ ಪಾಲಿಕೆಯಾಗಲೀ ಜಿಲ್ಲಾಡಳಿತವಾಗಲಿ ಉಸ್ತುವಾರಿ ಸಚಿವರಾಗಲಿ ಗಮನ ಹರಿಸಿದಿರುವುದು ನಿಜಕ್ಕೂ ವಿಷಾದನೀಯ,ಈಗಾಗಲೇ ನಗರದ ಮುಖ್ಯ ರಸ್ತೆಯನ್ನು ದ್ವಿಪಥ ರಸ್ತೆ 2 ವರ್ಷದಿಂದ ಅಗೆದು ಹಾಕಿ ಜನರಿಗೆ ತೊಂದರೆಯಾಗುವಂತೆ ಮಾಡಲಾಗಿದೆ ಎಂಜಿನಿಯರ್ ಮತ್ತು ಗುತ್ತಿಗೆದಾರರು…

Read More

ರಿಪ್ಪನ್ ಪೇಟೆ : ನೂತನ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಅನುದಾನ ಬಿಡುಗಡೆ:ಶಾಸಕ ಹರತಾಳು ಹಾಲಪ್ಪ

ರಿಪ್ಪನ್ ಪೇಟೆ: ಪಟ್ಟಣದ ಬಹುದಿನಗಳ ಬೇಡಿಕೆಯಾಗಿದ್ದ ಮೆಟ್ರಿಕ್ ಪೂರ್ವ ಬಾಲಕರ ವಿಧ್ಯಾರ್ಥಿ ನಿಲಯದ ನೂತನ ಕಟ್ಟಡಕ್ಕೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸುಮಾರು ನಾಲ್ಕು ಕೋಟಿ ಇಪ್ಪತ್ತಮೂರು ಲಕ್ಷ ರೂಪಾಯಿ ವೆಚ್ಚದಲ್ಲಿ ನೂತನ ಕಟ್ಟಡ ನಿರ್ಮಿಸಲಾಗುತ್ತದೆ ಎಂದು ಶಾಸಕರಾದ ಹರತಾಳು ಹಾಲಪ್ಪ ಇಂದಿಲ್ಲಿ ತಿಳಿಸಿದರು. ರಿಪ್ಪನ್ ಪೇಟೆ ಯಲ್ಲಿರುವ ಪ್ರಸ್ತುತ ಬಾಲಕರ ವಸತಿ ನಿಲಯವು ಶಿಥಿಲ ಅವಸ್ಥೆಯಲ್ಲಿರುವುದರಿಂದ ಬಹುದಿನದ ಬೇಡಿಕೆಯಾಗಿದ್ದ ವಸತಿ ನಿಲಯದ ಕಟ್ಟಡಕ್ಕೆ ಅನುಮೋದನೆ ಸಿಕ್ಕಿರುವುದರಿಂದ ಹರತಾಳು ಹಾಲಪ್ಪ ನವರು ಸ್ಥಳಕ್ಕೆ ಭೇಟಿ ನೀಡಿ ಕಟ್ಟಡದ…

Read More

ತೀರ್ಥಹಳ್ಳಿ: ನಾಡಿಗಾಗಿ ತ್ಯಾಗ ಮಾಡಿದ ಶರಾವತಿ ಸಂತ್ರಸ್ತರ ರೈತರ ಬದುಕು ರೂಪಿಸಲು ಗೃಹ ಸಚಿವರಿಗೆ ಮನವಿ

ತೀರ್ಥಹಳ್ಳಿ: ತಾಲೂಕಿನಲ್ಲಿ ಪುನರ್ವಸತಿ ಪಡೆದಿರುವ ಶರಾವತಿ ಮುಳುಗಡೆ ಸಂತ್ರಸ್ತರ ಬದುಕುವ ಹಕ್ಕನ್ನು ಪುನಶ್ಚೇತನಗೊಳಿಸಲು ವಾಸದ ಮನೆಗಳಿಗೆ ಹಾಗೂ ಸಾಗುವಳಿ ಭೂಮಿಗೆ ಹಕ್ಕುಪತ್ರ ನೀಡುವ ಕಾನೂನು ಪ್ರಕ್ರಿಯೆಯನ್ನು ಚುರುಕುಗೊಳಿಸಿ ನ್ಯಾಯ ಒದಗಿಸಿಕೊಡುವಂತೆ ಗೃಹ ಸಚಿವ ಆರಗ ಜ್ಞಾನೇಂದ್ರರವರಿಗೆ ಹಣಗೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಅರೆನಲ್ಲಿ, ಕರಕುಚ್ಚಿ, ಸಂಕ್ಲಾಪುರ, ಕೊಂಬಿನ ಕೈ ಮತ್ತು ದೆಂಬ್ಲಾಪುರ, ಕೋಣಂದೂರಿನ ಗ್ರಾಮಸ್ಥರು ಮತ್ತು ಶರಾವತಿ ಮುಳುಗಡೆ ಸಂತ್ರಸ್ತರು ಮತ್ತು ರೈತರು ಸೋಮವಾರ ಮನವಿ ನೀಡಿದರು.  ಕಳೆದ ಸುಮಾರು ಎಪ್ಪತ್ತು ವರ್ಷಗಳಿಂದ ಶರಾವತಿ ವಿದ್ಯುತ್ ಯೋಜನೆ…

Read More