Headlines

ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯತಿಯಲ್ಲಿ ಸಕಾಲದ ಮಾಹಿತಿಯ ಫಲಕ ಕಾಣೆ :

ಹೊಸನಗರ: ಇಲ್ಲಿನ ಸಮೀಪದ ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯತಿಯಲ್ಲಿ ಸಾಮಾನ್ಯ ಜನರಿಗೆ ಮಾಹಿತಿ ನೀಡುವ ಸಕಾಲ ದ ಫಲಕ ಕಾಣೆಯಾಗಿದೆ. ಸಾಮಾನ್ಯ ಜನರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಸಕಾಲ ದ ಫಲಕ ಹಾಕುವುದು ಕಡ್ಡಾಯವಾಗಿದೆ ಆದರೆ ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯತಿಯಲ್ಲಿ ಹೊಸ ಕಟ್ಟಡಕ್ಕೆ ಕಛೇರಿ ವರ್ಗಗೊಂಡಿದ್ದು ಹಳೆ ಪಂಚಾಯಿತಿಯನ್ನು ಸ್ವಚ್ಚ ಸಂಕೀರ್ಣ ಅಡಿಯಲ್ಲಿ ಸಿದ್ದಪಡಿಸಿದ್ದಾರೆ. ಆದರೆ ಸಾಮಾನ್ಯ ಜನರಿಗೆ ಅರಿವು ಮೂಡಿಸುವ ಸಲುವಾಗಿ ಹಾಕುವ ಸಕಾಲ ಫಲಕ ಇನ್ನೂ ಸ್ವಚ್ಚ ಸಂಕೀರ್ಣ…

Read More

ದೇವೇಗೌಡರು ಹಾಗೂ ಕುಮಾರಸ್ವಾಮಿ ಬೆಂಬಲ ಇರುವ ತನಕ ರಾಜ್ಯದಲ್ಲಿ ಬಿಜೆಪಿ ಸರ್ಕಾರ : ಬೇಳೂರು ಗೋಪಾಲಕೃಷ್ಣ

ರಿಪ್ಪನ್ ಪೇಟೆ : ರಾಜ್ಯದಲ್ಲಿ ನೂತನವಾಗಿ ರಚನೆಗೊಂಡಿರುವ ಬಸವರಾಜ್ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರಕಾರಕ್ಕೆ ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರ ಬೆಂಬಲ ಇರುವ ತನಕ ಮಾತ್ರ ಅಸ್ತಿತ್ವದಲ್ಲಿರುತ್ತದೆ ಎಂದು ಮಾಜಿ ಶಾಸಕ ಹಾಗೂ ಕಾಂಗ್ರೆಸ್ ವಕ್ತಾರ ಬೇಳೂರು ಗೋಪಾಲಕೃಷ್ಣ ಹೇಳಿದರು.  ಪಟ್ಟಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ನೂತನವಾಗಿ ರಚನೆಗೊಂಡಿರುವ ಬಸವರಾಜ್ ಬೊಮ್ಮಾಯಿ ಅವರ ಸರಕಾರಕ್ಕೆ ಅವರ ಪಕ್ಷದಿಂದಲೇ ಬಹಳಷ್ಟು ವಿರೋಧವಿದೆ. ಈಗಾಗಲೇ ಭಿನ್ನಮತೀಯರ ಚಟುವಟಿಕೆ ಹೆಚ್ಚಾಗಿದ್ದು ಕೆಲವೇ ದಿನಗಳಲ್ಲಿ ಕೆಲವು ಮಂತ್ರಿಗಳು ಹಾಗೂ ಶಾಸಕರು…

Read More

ಅವ್ಯವಸ್ಥೆಯ ಆಗರ,ನಿರ್ವಹಣೆ ಇಲ್ಲದೆ ಹಾಳು ಕೊಂಪೆಯಾದ ರಿಪ್ಪನ್ ಪೇಟೆ ಬಸ್ ಪ್ರಯಾಣಿಕರ ತಂಗುದಾಣ !!

  ರಿಪ್ಪನ್ ಪೇಟೆ : ತಾಲೂಕಿನಲ್ಲೇ ಅತೀ ದೊಡ್ಡ ಗ್ರಾಮ ಪಂಚಾಯತ್, ಸ್ವಚ್ಚ ಭಾರತ್ ಅಭಿಯಾನದಲ್ಲಿ ಪ್ರಶಸ್ತಿ ಪಡೆದ ಪಂಚಾಯತಿ,ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಪಟ್ಟಣ ರಿಪ್ಪನ್ ಪೇಟೆ ಯಲ್ಲಿರುವ ಒಂದೇ ಒಂದು ಪ್ರಯಾಣಿಕರ ತಂಗುದಾಣ ಸರಿಯಾದ ನಿರ್ವಹಣೆ ಇಲ್ಲದೆ ಗಬ್ಬುನಾರುತ್ತಿದೆ. ರಿಪ್ಪನ್ ಪೇಟೆ ಜನತೆಯ ದಶಕದ ಬೇಡಿಕೆ ಬಸ್ ನಿಲ್ದಾಣ ರಾಜಕಾರಣಿ ಗಳ ಇಚ್ಚ ಶಕ್ತಿ ಕೊರತೆಯಿಂದ ಆಗದೆ ರಾಜಕಾರಣಿ ಗಳಿಗೆ ತಮ್ಮ ಎಲೆಕ್ಷನ್ ಸಮಯದ ಪ್ರಚಾರದ ಅಸ್ತ್ರಕ್ಕೆ ಸೀಮಿತ ವಾಗಿದೆ. ಸುಮಾರು ನಲವತ್ತು ಸಾವಿರಕ್ಕೂ ಹೆಚ್ಚು…

Read More

ಮಾಜಿ ಯೋಧರ ಕಲ್ಯಾಣ ಟ್ರಸ್ಟ್ ಸಾಗರ ಪ್ರಾಂತ್ಯ ವತಿಯಿಂದ ಭೂಮಿ ಮಂಜೂರಾತಿಗೆ ಆಗ್ರಹಿಸಿ ಮನವಿ:

ಸಾಗರ: ಸೈನಿಕರಾಗಿ ದೇಶದ ಗೌರವ ಪೂರ್ವಕ ಸೇವೆಯನ್ನು ನಿರ್ವಹಿಸಿ ಸೇನೆಯಿಂದ  ನಿವೃತ್ತಿಯಾದ ಮಾಜಿ ಯೋಧರಿಗೆ ವ್ಯವಸಾಯದ ಉದ್ದೇಶಕ್ಕೆ ಭೂ ಮಂಜೂರಾತಿ ಮಾಡಬೇಕೆಂದು ಆಗ್ರಹಿಸಿ ಮಾಜಿ ಯೋಧರ ಕಲ್ಯಾಣ ಟ್ರಸ್ಟ್ ವತಿಯಿಂದ ಸಾಗರ ಉಪ ವಿಭಾಗಾಧಿಕಾರಿಗಳ ಮುಖಾಂತರ  ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.      ಈ ಸಭೆಯ ನೇತೃತ್ವವನ್ನು ವಹಿಸಿದ ರಾಜ್ಯ ಮಾಜಿ ಸೈನಿಕರ ಸಂಘದ ರಾಜ್ಯ ಉಪಾಧ್ಯಕ್ಷರಾದ ಸುಭಾಷ್ ಚಂದ್ರ ತೇಜಸ್ವಿ ಮಾತನಾಡುತ್ತಾ ರಾಜ್ಯ ಸರ್ಕಾರದ ಆದೇಶವಿದ್ದರೂ ಭೂ ಮಂಜೂರಾತಿಗಾಗಿಅರ್ಜಿ ಸಲ್ಲಿಸಿದ ಸೈನಿಕರ ಅರ್ಜಿಗಳನ್ನು ಪುರಸ್ಕರಿಸದೆ ಕಾಲಹರಣ…

Read More

ಯಾರೇ ಆಗಲಿ ನಮಗೆ ಗೌರವ ಕೊಡದಿದ್ದರೆ ಅವರಿಗೆ ನಾವು ಗೌರವ ಕೊಡಲ್ಲ : ಆಯನೂರು ಮಂಜುನಾಥ್ ಗುಡುಗು

ಶಿವಮೊಗ್ಗ: ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಎದುರು ಅವರದ್ದೇ ಪಕ್ಷದ ಎಂಎಲ್ ಸಿ ಆಯನೂರ್ ಮಂಜುನಾಥ್ ಅಸಮಾಧಾನ ಹೊರಹಾಕಿದ ಘಟನೆ ಇಂದು ಜಿಲ್ಲಾಧಿಕಾರಿ ಕಚೇರಿ ಯಲ್ಲಿ ನಡೆದ ಕೋವಿಡ್ ಮತ್ತು ಪ್ರವಾಹ ಸಂಬಂದಿಸಿದ ಸಭೆಯಲ್ಲಿ ನಡೆದಿದೆ. ಘಟನೆಗೆ ಕಾರಣ ಏನು? ಶಿವಮೊಗ್ಗ ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿ ಯಲ್ಲಿ ತಾಲೂಕ್ ಅಧಿಕಾರಿಗಳ ಸಮ್ಮುಖದಲ್ಲಿ ಕೋವಿಡ್ ಮತ್ತು ಪ್ರವಾಹ ಸಂಬಂದಿಸಿದ ಸಭೆ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ಆಯನೂರ್ ಮಂಜುನಾಥ್ ತಮ್ಮ ಅಸಮಾಧಾನ ಹೊರ ಹಾಕಿದರು.. ನಮಗೇನು ಗೌರವ ಇಲ್ವಾ..?…

Read More

ತೀರ್ಥಹಳ್ಳಿ: ತಾಲೂಕು ಪಂಚಾಯತ್ ಅಧಿಕಾರವದಿ ಮುಕ್ತಾಯ,ವಿದಾಯ ಸಭೆ:

ತೀರ್ಥಹಳ್ಳಿ: 5 ವರ್ಷಗಳ ಕಾಲ  ಆಡಳಿತ ನಡೆಸಿ ತೀರ್ಥಹಳ್ಳಿ ತಾಲ್ಲೂಕು ಪಂಚಾಯಿತಿ ಇಂದು ತನ್ನ ಅವಧಿಯನ್ನು ಪೂರೈಸಿದೆ. ಜನಪ್ರತಿನಿಧಿಗಳಾಗಿ ಸೇವೆ ಸಲ್ಲಿಸಿದ 13 ಜನ ಸದಸ್ಯರುಗಳ ಅಂತಿಮ ವಿಧಾಯಸಭೆ ಇಂದು ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು  ತಾಲ್ಲೂಕು  ಅಧ್ಯಕ್ಷೆ ಶ್ರೀಮತಿ ನವಮಣಿ ರವಿಕುಮಾರವರು ಉಪಾಧ್ಯಕ್ಷೆ ಶ್ರೀಮತಿ ಯಶೋಧ ಮಂಜುನಾಥ .ಸದಸ್ಯರುಗಳಾದ ಸಾಲೆಕೊಪ್ಪ ರಾಮ ಚಂದ್ರ. ಕುಕ್ಕೆ ಪ್ರಶಾಂತ್ ,ಕೆಳಕೆರೆ ದಿವಾಕರ್ .ಶ್ರುತಿ ವೆಂಕಟೇಶ್.   ಲಕ್ಷ್ಮಿ ಉಮೇಶ್,  ಗೀತಾ ಸದಾನಂದ ಶೆಟ್ಟಿ,  ವೀಣಾ ಗಿರೀಷ್,ಸುಮಾ ಉದಯ . ಚಂದವಳ್ಳಿ ಸೋಮಶೇಖರ್. ಬೇಗುವಳ್ಳಿ…

Read More

ನನಗೆ ಝೀರೋ ಟ್ರಾಫಿಕ್ ವ್ಯವಸ್ಥೆ ಬೇಡ :ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು: ನನಗೆ ಝೀರೋ ಟ್ರಾಫಿಕ್ ವ್ಯವಸ್ಥೆ ಬೇಡ ಎಂದು ಪೊಲೀಸ್ ಅಧಿಕಾರಿಗಳಿಗೆ ನೂತನ ಗೃಹ ಸಚಿವ ಅರಗ ಜ್ಞಾನೇಂದ್ರ ಸೂಚನೆ ನೀಡಿದ್ದಾರೆ. ಎಲ್ಲರಂತೆ ನಾನೂ ಸಂಚರಿಸುತ್ತೇನೆ. ನನಗಾಗಿ ಯಾವುದೇ ವಿಶೇಷ ಸೌಲಭ್ಯ ಬೇಡ ಎಂದು ಹೇಳುವ ಮೂಲಕ ಮೆಚ್ಚುಗೆಗೆ ಪಾತ್ರವಾಗಿದ್ದಾರೆ. ರಾಜ್ಯದ ಮುಖ್ಯಮಂತ್ರಿಗಳು ಝೀರೋ ಟ್ರಾಫಿಕ್‍ನಲ್ಲಿ ಸಂಚರಿಸಲು ಅವಕಾಶವಿದೆ. ಆದರೆ ಮಂತ್ರಿಗಳಿಗೆ ಈ ವಿಶೇಷ ಸೌಲಭ್ಯವಿಲ್ಲ. ಅವಕಾಶ ಇಲ್ಲದೇ ಇದ್ದರೂ ಕೆಲ ಮಂತ್ರಿಗಳು ಪ್ರಭಾವ ಬಳಸಿ ಝೀರೋ ಟ್ರಾಫಿಕ್‍ನಲ್ಲಿ ಸಂಚರಿಸುತ್ತಾರೆ. ಇದರಿಂದಾಗಿ ಜನಸಾಮಾನ್ಯರಿಗೆ ತೊಂದರೆಯಾಗುತ್ತಿರುತ್ತದೆ. ಈ ಹಿಂದೆ…

Read More

ಕ್ಷುಲ್ಲಕ ಕಾರಣಕ್ಕೆ ಹಾಡಹಗಲೇ ಶಿವಮೊಗ್ಗದ ಯುವಕನ ಕೊಲೆ:

ಶಿವಮೊಗ್ಗ: ಕ್ಷುಲ್ಲಕ ಕಾರಣಕ್ಕೆ ನಗರದಲ್ಲಿ ಇಂದು ಹಾಡುಹಗಲೇ ಭೀಕರ ಕೊಲೆಯಾಗಿದೆ. ಚಾಕುವಿನಿಂದ ಇರಿದು ಈ ಕೊಲೆ ಮಾಡಲಾಗಿದ್ದು, ನಗರದ ಟ್ಯಾಂಕ್ ಮೊಹಲ್ಲಾದಲ್ಲಿ ಈ ಘಟನೆ ನಡೆದಿದೆ. ರಾಹಿಲ್(20) ಕೊಲೆಯಾದ ಯುವಕನಾಗಿದ್ದು, ಅಜ್ಗರ್(19) ಕೊಲೆಮಾಡಿರುವ ಯುವಕನಾಗಿದ್ದಾನೆ.ನಿನ್ನೆ ಸಂಜೆ ಕೊಲೆ ಆರೋಪಿ ಅಜ್ಗರ್ ತಂದೆಯು ಟ್ಯಾಂಕ್ ಮೊಹಲ್ಲಾ ರಸ್ತೆಯಲ್ಲಿ ಸೈಕಲ್ ನಲ್ಲಿ ಬರುತ್ತಿದ್ದ ವೇಳೆ, ರಾಹಿಲ್ ನ ಬೈಕ್ ಡಿಕ್ಕಿ ಹೊಡೆದಿತ್ತು. ಈ ವಿಚಾರದಲ್ಲಿ ತನ್ನ ತಂದೆಯ ಸೈಕಲ್ ರಿಪೇರಿ ಮಾಡಿಕೊಡುವಂತೆ ಅಜ್ಗರ್ ತಿಳಿಸಿದ್ದನಂತೆ. ಈ ವೇಳೆ ಮಾತಿಗೆ ಮಾತು…

Read More

ಶಿವಮೊಗ್ಗಜಿಲ್ಲೆಯ ನೂತನ ಮಂತ್ರಿಗಳಿಗೆ ಶ್ರೀ ರೇಣುಕಾನಂದ ಸ್ವಾಮೀಜಿಗಳಿಂದ ಅಭಿನಂದನೆ.

ರಿಪ್ಪನ್ ಪೇಟೆ : ರಾಜ್ಯದಲ್ಲಿ ನೂತನವಾಗಿ ರಚನೆಯಾಗಿರುವ ಬಸವರಾಜ್ ಬೊಮ್ಮಾಯಿ ಅವರ ಸರಕಾರದಲ್ಲಿ ಶಿವಮೊಗ್ಗ ಜಿಲ್ಲೆಯ ಕೆಎಸ್ ಈಶ್ವರಪ್ಪ ಹಾಗೂ ಆರಗ ಜ್ಞಾನೇಂದ್ರ ರವರನ್ನು ಸಚಿವರನ್ನಾಗಿ ಮಾಡಿದ್ದಕ್ಕೆ ನಿಟ್ಟೂರಿನ ಶ್ರೀನಾರಾಯಣಗುರು ಮಹಾಸಂಸ್ಥಾನ ಮಠದ ಶ್ರೀ ರೇಣುಕಾನಂದ ಸ್ವಾಮೀಜಿಗಳು ಅಭಿನಂದಿಸಿದ್ದಾರೆ.  ರಿಪ್ಪನ್ ಪೇಟೆ ಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಸರಳ ಸಜ್ಜನಿಕೆಯ ವ್ಯಕ್ತಿತ್ವ ಜನನಾಯಕ ಆರಗ ಜ್ಞಾನೇಂದ್ರ ರವರಿಗೆ ರಾಜ್ಯದ ಗೃಹ ಮಂತ್ರಿಯಾಗಿ ಕಾರ್ಯನಿರ್ವಹಿಸಲು ಅವಕಾಶ ಸಿಕ್ಕಿರುವುದು ಸಂತೋಷವಾಗಿದೆ. …

Read More

ಪೊಲೀಸ್ ಇಲಾಖೆಯಲ್ಲಿ ಮಹತ್ತರವಾದ ಬದಲಾವಣೆ ಮಾಡುತ್ತೇನೆ: ಆರಗ ಜ್ಞಾನೇಂದ್ರ

ತುಮಕೂರು: ಆರ್‌ಎಸ್‌ಎಸ್‌, ಬಿಎಸ್‌ವೈ, ಸಿಎಂ ನನ್ನ ಮೇಲೆ ಭರವಸೆ ಇಟ್ಟು ಹಿರಿಯರು ಗೃಹಖಾತೆ ಕೊಟ್ಟಿದ್ದಾರೆ ನನಗೆ ನೀಡಿರುವ ಸ್ಥಾನ ಮತ್ತು ಜವಾಬ್ದಾರಿಯನ್ನು ಬಳಸಿಕೊಂಡು ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ ಮಾಡುತ್ತೇನೆ ಎಂದು ತುಮಕೂರಿನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.  ನಾಳೆ ಗೃಹ ಇಲಾಖೆ ಅಧಿಕಾರಿಗಳ ಜೊತೆ ಮೊದಲ ಸಭೆ ನಡೆಸಲಿದ್ದೇನೆ. ಆ ಮೂಲಕ ಅಧಿಕೃತವಾಗಿ ಚಾರ್ಜ್ ವಹಿಸಿಕೊಳ್ಳಲಿದ್ದೇನೆ.ಅದಕ್ಕೂ ಮುಂಚೆ ಸಿದ್ದಗಂಗಾ ಮಠಕ್ಕೆ ಬಂದು ಆಶೀರ್ವಾದ ಪಡೆದಿದ್ದೇನೆ. ಪೊಲೀಸ್ ಇಲಾಖೆ ಸಶಕ್ತ ವಾಗಿ ಕೆಲಸ ಮಾಡುವ ಹಾಗೆ…

Read More