Headlines

ಚಲಿಸುತ್ತಿದ್ದ ಪ್ಯಾಸೇಂಜರ್ ಆಟೋದಿಂದ ಬಿದ್ದು ಬಾಲಕ ಸಾವು :

 ಸೊರಬ : ತಾಲೂಕಿನ ಶಿಡ್ಡಿಹಳ್ಳಿ ಗ್ರಾಮದಿಂದ ಹಸ್ವೀ ಗ್ರಾಮಕ್ಕೆ ಪ್ಯಾಸೆಂಜರ್ ಆಟೋದಲ್ಲಿ ತೆರಳುವಾಗ 9 ವರ್ಷದ ಬಾಲಕ ಆಟೋದಿಂದ ಬಿದ್ದು ಸಾವನ್ನಪ್ಪಿರುವ ಘಟನೆ ಆನವಟ್ಟಿ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ನಡೆದಿದೆ. ಮಾಲತೇಶ್ ಎಂಬ 9 ವರ್ಷದ ಬಾಲಕ ಪ್ಯಾಸೆಂಜರ್ ಆಟೋದ ಹಿಂಬದಿಯ ಫುಟ್ ಬೋರ್ಡ್ ನಲ್ಲಿ ನಿಂತಿದ್ದು, ಆಟೋವನ್ನು ಅರುಣ್ ಎಂಬ ಚಾಲಕ ಅಜಾಗರೂಕತೆ ಮತ್ತು ನಿರ್ಲಕ್ಷದಿಂದ ಚಲಾಯಿಸಿದ ಪರಿಣಾಮ ಮಾಲತೇಶ್ ಶಿಡ್ಡಿಹಳ್ಳಿ ಗ್ರಾಮದ ಈಶ್ವರ ದೇವಸ್ಥಾನದ ತಿರುವಿನ ಬಳಿ ಬಿದ್ದಿದ್ದಾನೆ. ಎದೆ ಹಾಗೂ ಎಡಕಣ್ಣಿಗೆ ತೀವ್ರವಾಗಿ ಹೊಡೆತ…

Read More

ಬಂಗಾರಪ್ಪ ಮನೆಯಲ್ಲಿ ಸಿದ್ದರಾಮಯ್ಯ ವಾಸ್ತವ್ಯ: ಮಧು ಬಂಗಾರಪ್ಪ ಜೊತೆ ವಾಕಿಂಗ್​..ಟಾಕಿಂಗ್

ಸೊರಬ : ತಾಲೂಕಿನ ಕುಬಟೂರಿನ ಮಾಜಿ ಸಿಎಂ ಎಸ್.ಬಂಗಾರಪ್ಪ ಅವರ ಮನೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ವಾಸ್ತವ್ಯ ಹೂಡಿದ್ದಾರೆ. ಹಾನಗಲ್ ಚುನಾವಣಾ ಪ್ರಚಾರಕ್ಕೆ ಆಗಮಿಸಿದ್ದ ಸಿದ್ದರಾಮಯ್ಯ ನಿನ್ನೆ ರಾತ್ರಿ ಬಂಗಾರಪ್ಪ ಮನೆಯಲ್ಲಿ ತಂಗಿದ್ದರು. ಇಂದು ಬೆಳಗ್ಗೆ ಕುಬಟೂರಿನ ಮನೆಯ ಆವರಣದಲ್ಲಿ ಮಧು ಬಂಗಾರಪ್ಪ ಜೊತೆ ಸಿದ್ದರಾಮಯ್ಯ ವಾಕಿಂಗ್​ ಮಾಡಿದ್ದಾರೆ. ಬಳಿಕ ಮಧು ಬಂಗಾರಪ್ಪ ಹಾಗೂ ಇತರ ನಾಯಕರ ಜೊತೆ ಚರ್ಚೆ ನಡೆಸಿದ ಸಿದ್ದರಾಮಯ್ಯ ಪಕ್ಷ ಸಂಘಟನೆ ಮತ್ತು ರಾಜಕೀಯ ಬೆಳವಣಿಗೆ ಬಗ್ಗೆ ಸ್ಥಳೀಯ ಮುಖಂಡರ ಜೊತೆ ಚರ್ಚೆ…

Read More

ಲಂಚ ಪಡೆಯುತ್ತಿದ್ದ ವೇಳೆ ಗ್ರಾಪಂ ಅಧ್ಯಕ್ಷೆ ಮೇಲೆ ಎಸಿಬಿ ದಾಳಿ

ಶಿವಮೊಗ್ಗ : ಕಾಮಗಾರಿಯ ಬಿಲ್ ಮೊತ್ತವನ್ನು ಮಂಜೂರು ಮಾಡಿಕೊಡಲು ಲಂಚ ಪಡೆಯುತ್ತಿದ್ದ ಗ್ರಾಮ ಪಂಚಾಯತ್‌ ಅಧ್ಯಕ್ಷೆಯೊಬ್ಬರ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಿವಮೊಗ್ಗದ ಮುದ್ದಿನಕೊಪ್ಪ ಗ್ರಾಪಂ ಅಧ್ಯಕ್ಷೆ ವೇಣಿ ಕಣ್ಣನ್ (47) ಎಸಿಬಿ ಬಲೆಗೆ ಬಿದ್ದವರು. ಮುದ್ದಿನಕೊಪ್ಪ ಗ್ರಾಮದ ನಿವಾಸಿಯೊಬ್ಬರು ಗುತ್ತಿಗೆದಾರರೊಬ್ಬರ ಪರವಾಗಿ ಕಟ್ಟಡ ಕಾಮಗಾರಿಯೊಂದನ್ನು ಪೂರ್ಣಗೊಳಿಸಿದ್ದರು. 2020ರ ಜನವರಿಯಲ್ಲೇ ಕಾಮಗಾರಿ ಮುಕ್ತಾಯವಾಗಿತ್ತು. ಬಿಲ್ ಮೊತ್ತವನ್ನು ಮಂಜೂರು ಮಾಡಿಕೊಡಲು 50 ಸಾವಿರ ರೂ. ಕೊಡುವಂತೆ ಗ್ರಾಪಂ ಅಧ್ಯಕ್ಷೆ ವೇಣಿ ಕಣ್ಣನ್ ಬೇಡಿಕೆ…

Read More

ಸೀರೆ ಉಟ್ಟರೆ ನಳಿನ್​ ಕುಮಾರ್​ ಕಟೀಲ್​ ಹೆಣ್ಣೋ.. ಗಂಡೋ ಅಂತಾ ಗೊತ್ತಾಗಲ್ಲ : ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ

ಶಿವಮೊಗ್ಗ : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್​ ಕಟೀಲ್​​ ಅವರು ಸೀರೆ ಉಟ್ಟುಕೊಂಡ್ರೆ, ಗಂಡೋ -ಹೆಣ್ಣೋ ಎಂದು ತಿಳಿಯುದಿಲ್ಲ ಎಂದು ಕೆಪಿಸಿಸಿ ವಕ್ತಾರ, ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನಳಿನ್ ಕುಮಾರ್ ಕಟೀಲ್ ಅವರು ಮಂಗಳೂರಿಗೆ ಬೆಂಕಿ ಹಚ್ಚಲು ಹೋದವರು. ಅವರು ಸೀರೆ ಉಟ್ಟುಕೊಂಡ್ರೆ, ಗಂಡೋ- ಹೆಣ್ಣೋ ತಿಳಿಯುವುದಿಲ್ಲ. ಕಟೀಲ್​ ಅವರು ತಮ್ಮ ಪಕ್ಷದ ಹುಳುಕನ್ನು ತಾವು ಮುಚ್ಚಿಕೊಂಡ್ರೆ ಸಾಕು, ನಮ್ಮ ಪಕ್ಷದ ಬಗ್ಗೆ ಮಾತನಾಡುವುದು ಸರಿಯಲ್ಲ ಎಂದು…

Read More

ಕಾಂಗ್ರೆಸ್ಸಿಗರು ಹತಾಶರಾಗಿ‌ ಮನಸ್ಸಿಗೆ ಬಂದಂತೆ ಮಾತನಾಡುತ್ತಿದ್ದಾರೆ : ಸಚಿವ ಆರಗ ಜ್ಞಾನೇಂದ್ರ

ಶಿವಮೊಗ್ಗ : ರಾಜ್ಯದ ಎರಡೂ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ. ಇದನ್ನು ಅರಿತಿರುವ ಕಾಂಗ್ರೆಸ್ಸಿಗರು ಹತಾಶರಾಗಿ ಮನಸ್ಸಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಲಿನ ಭೀತಿಯಿಂದಾಗಿ ಕಾಂಗ್ರೆಸ್ ನಾಯಕರು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಕಾಂಗ್ರೆಸ್​ ನಾಯಕರ ಅಪ ಪ್ರಚಾರ ಇಲ್ಲದಿದ್ದರೆ ಕೋವಿಡ್ 2ನೇ ಡೋಸ್​ ನೀಡಿಕೆಯಲ್ಲಿ ಇನ್ನಷ್ಟು ಪ್ರಗತಿ ಆಗುತ್ತಿತ್ತು. ಆದಾಗ್ಯೂ, ಇಡೀ ವಿಶ್ವವೇ ಮೆಚ್ಚುವಂತಹ ರೀತಿ ಕೊರೊನಾ ಲಸಿಕೆ…

Read More

ಹೊಸನಗರ ಪೊಲೀಸರ ಭರ್ಜರಿ ಭೇಟೆ : ಮೀನು ಗಾಡಿಯಲ್ಲಿ ಗಾಂಜಾ ಸಾಗಿಸುತ್ತಿದ್ದ ಆರೋಪಿಯ ಬಂಧನ :

ಹೊಸನಗರ: ಇಲ್ಲಿನ ಸಮೀಪದ ಮಾವಿನಕೊಪ್ಪ ಬಳಿ ಇಂದು ಬೆಳಗಿನ ಜಾವ ಮೀನು ತುಂಬಿದ್ದ ಗೂಡ್ಸ್ ಗಾಡಿಯಲ್ಲಿ ಸುಮಾರು ಒಂದು ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.  ಸಬ್ ಇನ್ಸ್‌ಪೆಕ್ಟರ್ ರಾಜೇಂದ್ರ ನಾಯ್ಕ್ ರವರ ನೇತೃತ್ವದ ತಂಡ ಇಂದು ಬೆಳಗಿನಜಾವ ಮಿಂಚಿನ ದಾಳಿ ನಡೆಸಿ ಒಂದು ಕೆ.ಜಿ ಗಾಂಜಾ ಹಾಗೂ ಆರೋಪಿ ಸಹಿತ ಒಂದು ಗೂಡ್ಸ್ ಆಟೋವನ್ನು ವಶಪಡಿಸಿಕೊಂಡಿದ್ದಾರೆ. ಡಿ.ವೈ.ಎಸ್.ಪಿಯವರ ಆದೇಶದ ಮೇರೆಗೆ ಸರ್ಕಲ್ ಇನ್ಸ್‌ಪೆಕ್ಟರ್ ಮಧುಸೂಧನ್‌ರವರ ಮಾರ್ಗದರ್ಶನದಲ್ಲಿ ಈ ಕಾರ್ಯಚರಣೆ ನಡೆಸಲಾಗಿದ್ದು ಬಟ್ಟೆಮಲ್ಲಪ್ಪದಿಂದ ಬರುತ್ತಿದ್ದ ಮೀನು ತುಂಬಿದ್ದ ಗೂಡ್ಸ್ ಆಟೋದಲ್ಲಿ…

Read More

ರಿಪ್ಪನ್ ಪೇಟೆ : ಕೃಷಿ ಹೊಂಡದಲ್ಲಿ ಬಿದ್ದು ವಿದ್ಯಾರ್ಥಿ ಸಾವು

 ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಹಾರಂಬಳ್ಳಿಯಲ್ಲಿ  ಮನೆಯ ಸಮೀಪದಲ್ಲಿದ್ದ ಕೃಷಿ ಹೊಂಡದಲ್ಲಿ ಬಿದ್ದು ವಿದ್ಯಾರ್ಥಿಯೋರ್ವ ಸಾವನ್ನಪ್ಪಿದ್ದಾನೆ. ವಾಸು ಎಂಬುವರ ಪುತ್ರ  ಭರತ್ ರಾಜ್ (15) ಸಾವನ್ನಪ್ಪಿದ ದುರ್ಧೈವಿ. ಈತ ರಿಪ್ಪನ್ ಪೇಟೆಯ ಮೇರಿ ಮಾತ ಪ್ರೌಢಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದು,ಈತನ ತಂದೆ ವಾಸು ಇದೇ ಶಾಲೆಯಲ್ಲಿ ಕಚೇರಿ ಸಹಾಯಕರಾಗಿ  ಕಾರ್ಯನಿರ್ವಹಿಸುತ್ತಿದ್ದರು. ಭರತ್ ರಾಜ್ ಶಾಲೆ ಮುಗಿಸಿಕೊಂಡು ಮನೆಯ ಬಳಿ ಆಟವಾಡಲು ತೆರಳಿದ್ದ ಸಮಯದಲ್ಲಿ ಕಾಲುಜಾರಿ ಕೃಷಿ ಹೊಂಡದಲ್ಲಿ ಬಿದ್ದಿದ್ದಾನೆ ಎನ್ನಲಾಗಿದೆ. ರಿಪ್ಪನ್ ಪೇಟೆ ಪೋಲೀಸ್ ಠಾಣಾ…

Read More

ಶಿವಮೊಗ್ಗ : ಶೌಚಾಲಯದ ಗುಂಡಿಯಲ್ಲಿ ಹಸುಗೂಸಿನ ಶವ ಪತ್ತೆ :

ಶಿವಮೊಗ್ಗ : ಶೌಚ ಗುಂಡಿಯಲ್ಲಿ ನವಜಾತ ಶಿಶುವಿನ‌ ಮೃತದೇಹವೊಂದು ಪತ್ತೆಯಾಗಿರುವ ಘಟನೆ ಹೊಳೆಹೊನ್ನೂರಿನ ಸಿದ್ದರ ಕಾಲೋನಿಯಲ್ಲಿ ನಡೆದಿದೆ. ಸಿದ್ದರ ಕಾಲೋನಿಯ ಮಹದೇವ ಎಂಬುವ ವ್ಯಕ್ತಿ ಮನೆಯ ಹಿಂಬದಿಯಲ್ಲಿ  ಶೌಚಾಲಯದ ಉದ್ದೇಶಕ್ಕಾಗಿ ಗುಂಡಿ ತೆಗೆಯಿಸಲಾಗಿತ್ತು.ಮಳೆ ಬಂದ ಹಿನ್ನಲೆಯಲ್ಲಿ ಗುಂಡಿಯಲ್ಲಿ ನೀರು ತುಂಬಿಕೊಂಡಿತ್ತು. ಇಂದು ಈ ಗುಂಡಿಯ ನೀರಿನಲ್ಲಿ ನವಜಾತ ಶಿಶುವಿನ‌ ಮೃತದೇಹವೊಂದು ತೇಲುತ್ತಿರುವುದು ಮಹದೇವ ಎನ್ನುವವರಿಗೆ ಕಾಣಿಸಿದೆ. ಮಗುವಿನ ಜನನವನ್ನ ಮುಚ್ಚಿಡಲು ಈ ಕೃತ್ಯವೆಸಗಲಾಗಿದೆ ಎನ್ನಲಾಗಿದೆ.  ಮಗು ಜೀವಂತವಾಗಿರುವಾಗಲೇ ಗುಂಡಿಗೆ ಎಸೆಯಲಾಗಿದೆಯೋ ಅಥವ ಸಾಯಿಸಿ ಎಸೆಯಲಾಗಿದೆಯೋ ಎಂದು ಇನ್ನಷ್ಟೆ…

Read More

ರಿಪ್ಪನ್ ಪೇಟೆಯ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಜೆ ಎನ್ ಷಣ್ಮುಖಪ್ಪ ಗೌಡ ನಿಧನ :

ರಿಪ್ಪನ್ ಪೇಟೆ : ಪಟ್ಟಣದ ಹಿರಿಯ ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಜಯದೇವ ರೈಸ್ ಮಿಲ್ ನ ಮಾಲೀಕರಾದ ಜೆ ಎನ್ ಷಣ್ಮುಖಪ್ಪ ಗೌಡರು(99) ಇಂದು ರಿಪ್ಪನ್ ಪೇಟೆಯ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಇವರು ಇಂದು ಮಧ್ಯಾಹ್ನ ತಮ್ಮ ರಿಪ್ಪನ್ ಪೇಟೆಯ ನಿವಾಸದಲ್ಲಿ ನಿಧನರಾಗಿದ್ದಾರೆ. ಮೃತರು ಏಳು ಪುತ್ರರು,ಮೂವರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.ಮೃತರ ಅಂತ್ಯಕ್ರಿಯೆಯನ್ನು ಶುಕ್ರವಾರ ಬೆಳಿಗ್ಗೆ ನಡೆಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಸ್ವಾತಂತ್ರ್ಯ ಹೋರಾಟಗಾರ ಜೆ ಎನ್…

Read More

ಮತಾಂತರ ನಿಷೇಧ ಮಸೂದೆ ಜಾರಿಗೆ ತರಲು ಆಗ್ರಹಿಸಿ ಮನವಿ ಸಲ್ಲಿಸಿದ ತೀರ್ಥಹಳ್ಳಿ ಭಜರಂಗದಳದ ಕಾರ್ಯಕರ್ತರು

ತೀರ್ಥಹಳ್ಳಿ : ರಾಜ್ಯದಲ್ಲಿ ಬಲವಂತದ ಮತಾಂತರ ನಡೆಯುತ್ತಿದೆ. ಹಲವಾರು ಕಡೆ ಜನರ ಬಡತನ, ಅನಾರೋಗ್ಯವನ್ನೇ ದುರುಪಯೋಗಪಡಿಸಿ, ಜನರ ಭಾವನೆಯೊಂದಿಗೆ ಆಟವಾಡಿ, ಆಸೆ ಆಮಿಷಗಳನೊಡ್ಡಿ `ಮತಾಂತರದಿಂದ ನಿಮ್ಮ ಮೋಸದ ಪ್ರಚಾರ,ಮಾತಿನ ಮೋಡಿಗಳಿಂದ ಭ್ರಮೆಗೊಳಪಟ್ಟು ಸಮಸ್ಯೆಗಳು ನೀಗುತ್ತವೆ ಎಂದು ಮತಾಂತರಗೊಳಿಸಿ “ಸ್ವಇಚ್ಚೆಯ ಮತಾಂತರ” ಎಂದು ಬಿಂಬಿಸಲಾಗುತ್ತಿದೆ.  ಇದರಿಂದ ಸಮಾಜದಲ್ಲಿ ಮತೀಯ ಸಾಮರಸ್ಯಕ್ಕೆ ಧಕ್ಕೆಯಾಗುತ್ತಿದೆ. ಕುಟುಂಬದಲ್ಲಿ ಒಬ್ಬರು ಮತಾಂತರಗೊಂಡರೆ ಕುಟುಂಬದ ಇತರ ವ್ಯಕ್ತಿಗಳ ಧಾರ್ಮಿಕ ಹಕ್ಕಿಗೆ ಧಕ್ಕೆ ಬಂದು ಮನೆಯ ಸದಸ್ಯರು ತೀವ್ರ ಮಾನಸಿಕ ಆಘಾತಕ್ಕೊಳಗಾಗುತ್ತಿರುವುದು ಕಂಡು ಬರುತ್ತಿದ್ದು ಅವರ ಮಾನಸಿಕ…

Read More
Exit mobile version