Headlines

ವಾಲ್ಮೀಕಿ ನಿಗಮ ಹಗರಣ | ರಾಜ್ಯದ ಸಂಸದ, ಶಾಸಕರ ಮನೆ ಸೇರಿ ಎಂಟು ಕಡೆ ಇ.ಡಿ ದಾಳಿ

ವಾಲ್ಮೀಕಿ ನಿಗಮ ಹಗರಣ | ರಾಜ್ಯದ ಸಂಸದ, ಶಾಸಕರ ಮನೆ ಸೇರಿ ಎಂಟು ಕಡೆ ಇ.ಡಿ ದಾಳಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅನುದಾನ ದುರ್ಬಳಕೆ ಆರೋಪ ಹಿನ್ನೆಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಬುಧವಾರ ಬೆಳಿಗ್ಗೆ ದಾಳಿ ನಡೆಸಿದ್ದಾರೆ. ಬಳ್ಳಾರಿ ಸಂಸದ ಇ.ತುಕಾರಾಮ್, ನಾಗೇಂದ್ರ ಪಿಎ ಗೋವರ್ಧನ್, ಶಾಸಕ ಭರತ್ ರೆಡ್ಡಿ, ಕೂಡ್ಲಗಿ ಶಾಸಕ ಎನ್.ಟಿ.ಶ್ರೀನಿವಾಸ್ ಮತ್ತು ಕಂಪ್ಲಿ ಗಣೇಶ್ ನಿವಾಸದ ಮೇಲೆ ಇಡಿ ರೇಡ್ ಮಾಡಲಾಗಿದೆ. ಈ ದಾಳಿ ಲೋಕಸಭಾ…

Read More

ದಿಗ್ವಿಜಯ ನ್ಯೂಸ್​ ನ ಸುದ್ದಿ ಸಂಪಾದಕ ಪ್ರಶಾಂತ್​ ರಿಪ್ಪನ್ ಪೇಟೆ ರವರಿಗೆ “ಆರೂಢ ಶ್ರೀ” ಪ್ರಶಸ್ತಿ ಪ್ರದಾನ :

  ಖಾನಾಪುರ ತಾಲೂಕಿನ ಚಿಕ್ಕಮುನವಳ್ಳಿ ಗ್ರಾಮದ ಶ್ರೀ ಆರೂಢ ಮಠದ ಶ್ರೋ ಬ್ರ ಬೃಹ್ಮಲೀನ ಸದ್ಗುರು ಶ್ರೀ ಸದಾಶಿವಾನಂದ ಮಹಾಸ್ವಾಮಿಗಳವರ 12ನೇ ವರ್ಷದ ಪುಣ್ಯಸ್ಮರಣೆ ಹಾಗೂ 42ನೇ ಅಖಿಲ ಕರ್ನಾಟಕ ವೇದಾಂತ ಪರಿಷತ್ ಸಮಾರಂಭದಲ್ಲಿ ದಿಗ್ವಿಜಯ ವಾಹಿನಿಯ ನಿರೂಪಕ , ನಿರ್ಮಾಪಕರಾದ ಪ್ರಶಾಂತ್ ರಿಪ್ಪನ್ ಪೇಟೆ ಅವರಿಗೆ ‘ ಆರೂಢ ಶ್ರೀ ಪ್ರಶಸ್ತಿ’ ಪ್ರದಾನ ಮಾಡಲಾಯಿತು. ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ ಶ್ರೀ ಷ ಬ್ರ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು ಮಾತನಾಡಿ ಪ್ರಶಾಂತ ರಿಪ್ಪನ್ ಪೇಟೆ ಅವರಿಗೆ…

Read More

ಅಧಿಕಾರಿಗಳ ದಿಡೀರ್ ದಾಳಿ – 60 ಮೆಟ್ರಿಕ್ ಟನ್ ಮರಳು ವಶಕ್ಕೆ

ಅಧಿಕಾರಿಗಳ ದಿಡೀರ್ ದಾಳಿ – 60 ಮೆಟ್ರಿಕ್ ಟನ್ ಮರಳು ವಶಕ್ಕೆ ಶಿವಮೊಗ್ಗ: ತಾಲೂಕಿನ ಹಾಡೋನಹಳ್ಳಿಯಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದ ವಿಷಯ ತಿಳಿದು ಬರುತ್ತಿದ್ದಂತೆ, ತಹಶೀಲ್ದಾರ್ ರಾಜೀವ್, ಶಿವಮೊಗ್ಗ ಗ್ರಾಮಾಂತರ ಪೊಲೀಸರು ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಪ್ರಿಯಾ ನೇತೃತ್ವದಲ್ಲಿ ದಾಳಿ ನಡೆಸಿ 60 ಮೆಟ್ರಿಕ್ ಟನ್ ಮರಳು ವಶಪಡಿಸಿಕೊಂಡಿರುವ ಘಟನೆ ನಡೆದಿದೆ. ಹಲವು ದಿನಗಳ ಹಿಂದೆ ಹಾಡೋನಹಳ್ಳಿಯಲ್ಲಿ ಅಕ್ರಮ ಮರಳು ದಂಧೆ ನಡೆಯುತ್ತಿದೆ ಎಂಬ ಮಾಹಿತಿ ತಿಳಿಯುತ್ತಿದ್ದಂತೆ ದಾಳಿ ನಡೆಸಿದ ಗಣಿ ಮತ್ತು ಭೂ…

Read More

Shivamogga | ಮಾರಕಾಸ್ತ್ರ, ಖಾರದಪುಡಿಯೊಂದಿಗೆ ದರೋಡೆಗೆ ಹೊಂಚು – ನಾಲ್ವರ ಬಂಧನ

ಮಾರಕಾಸ್ತ್ರ, ಖಾರದಪುಡಿಯೊಂದಿಗೆ ದರೋಡೆಗೆ ಹೊಂಚು ಹಾಕಿದ್ದ ಆರೋಪ : ನಾಲ್ವರ ಬಂಧನ ಶಿವಮೊಗ್ಗ : ಮಾರಕಾಸ್ತ್ರ, ಖಾರದ ಪುಡಿ ಹಿಡಿದುಕೊಂಡು ದರೋಡೆಗೆ ಹೊಂಚು ಹಾಕಿದ್ದ ಗ್ಯಾಂಗ್ ವೊಂದನ್ನು ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗದ KSRTC ಬಸ್ ಡಿಪೋ ಪಕ್ಕದ ಎಗ್ಸಿಬಿಷನ್ ಗ್ರೌಂಡ್‌ನಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.ಒಬ್ಬಾತ ಪರಾರಿಯಾಗಿದ್ದಾನೆ ಎಂದು ಎನ್ನಲಾಗಿದೆ. ಕೆಎಸ್ಸಾರ್ಟಿಸಿ ಬಸ್ ಡಿಪೋ ಪಕ್ಕದ ಭಾಗದಲ್ಲಿ ಓಡಾಡುವವರನ್ನು ಅಡ್ಡಗಟ್ಟಿ ಮಾರಕಾಸ್ತ್ರ ತೋರಿಸಿ, ಖಾರದ ಪುಡಿ ಎರಚಿ ಚಿನ್ನಾಭರಣ, ನಗದು ದರೋಡೆಗೆ ಹೊಂಚು ಹಾಕಿದ್ದರು…

Read More

ಹೊಂಬುಜ ಸ್ವಸ್ತಿಶ್ರೀಗಳವರ ವಿದೇಶ ವಿಹಾರ|hombuja

ಹೊಂಬುಜ : ಅಮೇರಿಕಾದ ಕೆನಡಾದ ಟೊರಂಟೋ ನಗರದ ಜಿನಮಂದಿರದಲ್ಲಿ 24 ತೀರ್ಥಂಕರರ ಭವ್ಯ ಪಂಚಕಲ್ಯಾಣ ಪ್ರತಿಷ್ಠಾ ಮಹೋತ್ಸವದ ಧಾರ್ಮಿಕ ವಿಧಿ-ವಿಧಾನಗಳ ನೇತೃತ್ವ, ದಿವ್ಯ ಮಾರ್ಗದರ್ಶನ ನೀಡಲು ಹೊಂಬುಜ ಅತಿಶಯ ಶ್ರೀಕ್ಷೇತ್ರ ಜೈನ ಮಠದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಗಳವರು ವಿದೇಶ ವಿಹಾರಕ್ಕಾಗಿ ತೆರಳಿದರು.  ಪಟ್ಟಾಭಿಷಿಕ್ತರಾಗಿ 11 ವರ್ಷದ ಬಳಿಕ ಶ್ರೀಗಳವರು ಪ್ರಥಮ ಬಾರಿಗೆ ವಿದೇಶದಲ್ಲಿ ಜಿನಧರ್ಮ ಪ್ರಭಾವನೆಯ ಪ್ರವಚನಗಳನ್ನು ನೀಡಲಿರುವರು. ಜೂ. 24 ರಿಂದ 28ರವರೆಗೆ ಟೊರಂಟೋ ಜಿನಮಂದಿರದ ಪಂಚಕಲ್ಯಾಣ ವಿಧಾನಗಳಿವೆ. ಹೊಂಬುಜ…

Read More

ಕೋಣಂದೂರು : ಹಸು ರಕ್ಷಿಸಲು ಹೋಗಿ ಕೂಲಿ ಕಾರ್ಮಿಕ ಸಾವು

ಕೋಣಂದೂರು : ಹಸು ರಕ್ಷಿಸಲು ಹೋಗಿ ಕೂಲಿ ಕಾರ್ಮಿಕ ಸಾವು ಕೋಣಂದೂರು ಸಮೀಪದ ಕಾರಕೊಡ್ಲು ಎಂಬಲ್ಲಿ  ಬಾವಿಗೆ ಬಿದ್ದಿದ್ದ  ಹಸುವನ್ನು  ಮೇಲೆತ್ತಲು ಇಳಿದಿದ್ದ ವ್ಯಕ್ತಿ ‌ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಕೂಲಿ ಕಾರ್ಮಿಕ, ಕೇರಳದ ಸತೀಶ (45) ಮೃತಪಟ್ಟವನು. ಕಾರ್ಕೊಡ್ಲುವಿನಲ್ಲಿ ರಾಘು ಎಂಬುವವರು ಇತ್ತೀಚೆಗೆ ರಿಂಗ್ ಬಾವಿ ನಿರ್ಮಿಸಿದ್ದರು. ಅದಕ್ಕೆ ಮಂಗಳವಾರ ಹಸುವೊಂದು ಆಕಸ್ಮಿಕವಾಗಿ ಬಿದ್ದಿತ್ತು. ಅದನ್ನು ರಕ್ಷಿಸಲು ಸತೀಶ್ ಬಾವಿಗೆಇಳಿದಿದ್ದಾಗ ಈ ದುರ್ಘಟನೆ ನಡೆದಿದೆ. ಸತೀಶ್ ಮತ್ತು ಹಸುವಿನ ಮೃತದೇಹವನ್ನು ಅಗ್ನಿಶಾಮಕ ದಳದವರು ಬುಧವಾರ ಬಾವಿಯಿಂದ…

Read More

15 ದಿನಗಳ ಹಿಂದೆ ಕಾಣೆಯಾಗಿದ್ದ ವ್ಯಕ್ತಿ ರಸ್ತೆ ಬದಿಯಲ್ಲಿ ಶವವಾಗಿ ಪತ್ತೆ

ಕಾಣೆಯಾದ ವ್ಯಕ್ತಿ ಶವವಾಗಿ ಪತ್ತೆ ಸಾಗರ: ಹಲವು ದಿನಗಳಿಂದ ಕಾಣೆಯಾಗಿದ್ದ ವ್ಯಕ್ತಿಯೊಬ್ಬರ ಮೃತದೇಹ ರಸ್ತೆ ಪಕ್ಕದಲ್ಲಿ ಪತ್ತೆಯಾಗಿರುವ ದುರ್ಘಟನೆ ಬೆಳಕಿಗೆ ಬಂದಿದೆ. ಸಾಗರ ತಾಲೂಕಿನ ಯಲಗಳಲೆ ಗ್ರಾಮದ ಸಮೀಪ ರಸ್ತೆ ಬದಿಯಲ್ಲಿ ಪತ್ತೆಯಾದ ಶವವನ್ನು, ಜಂಬಗಾರು ಗ್ರಾಮದ ಹನುಮಂತಪ್ಪ (65) ಎಂದು ಗುರುತಿಸಲಾಗಿದೆ. ಹನುಮಂತಪ್ಪ ಅವರು ಖಿನ್ನತೆಯಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದ್ದು, 15 ದಿನಗಳ ಹಿಂದೆ ಕಾಣೆಯಾಗಿದ್ದಾರೆಂದು ಕುಟುಂಬದವರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮನೆ ಕಳ್ಳತನ ಆರೋಪಿ ಬಂಧನ:ಸುಮಾರು 15 ಲಕ್ಷ ಮೌಲ್ಯದ ಚಿನ್ನಾಭರಣ ವಶ:

ಭದ್ರಾವತಿ: ಹೊರ ಜಿಲ್ಲೆಗಳಲ್ಲಿ ಬೀಗ ಹಾಕಿದ್ದ ಮನೆಗೆ ನುಗ್ಗಿ ಚಿನ್ನ ಹಾಗೂ ನಗದು ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು  ಪಟ್ಟಣದ ಪೊಲೀಸರು ಬಂಧಿಸಿ ಕಳವು ಮಾಡಿದ್ದ ಚಿನ್ನವನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಲಕ್ಷ್ಮಿ ಪ್ರಸಾದ್ ಮತ್ತು ಮಾನ್ಯ ಹೆಚ್ಚುವರಿ ಅಧೀಕ್ಷಕರಾದ ಶೇಖರ್ ಹೆಚ್ ಟಿ ರವರ ಮಾರ್ಗದರ್ಶನದಲ್ಲಿ ಭದ್ರಾವತಿ ಉಪವಿಭಾಗದ ಎಎಸ್ಪಿ ಯವರಾದ ಸಾಹಿಲ್ ಬಾಗ್ಲಾ ರವರ ನೇತೃತ್ವದ ಪೊಲೀಸ್ ತಂಡ ಹೊರ ಜಿಲ್ಲೆಯಲ್ಲಿ ಬೀಗ ಹಾಕಿದ ಮನೆ ಕಳ್ಳತನ ಮಾಡುತ್ತಿದ್ದ ಭದ್ರಾವತಿ ಸತ್ಯಸಾಯಿ…

Read More

Ripponpete | ಕಾಂಗ್ರೆಸ್ ಅಭ್ಯರ್ಥಿಯ ರೋಡ್ ಷೋಗೆ ಹರಿದು ಬಂದ ಜನಸಾಗರ

Ripponpete | ಕಾಂಗ್ರೆಸ್ ಅಭ್ಯರ್ಥಿಯ ರೋಡ್ ಷೋಗೆ ಹರಿದು ಬಂದ ಜನಸಾಗರ ಮೋದಿ ಹೆಸರಿನಲ್ಲಿ ಮತ ಕೇಳುವ ಸಂಸದರಿಗೆ ನಾಚಿಕೆಯಾಗಬೇಕು – ಶಾಸಕ ಬೇಳೂರು ರಿಪ್ಪನ್‌ಪೇಟೆ : ಕಳೆದ 10 ವರ್ಷಗಳಿಂದ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕೇಂದ್ರದಿಂದ ಯಾವುದೇ ಅನುದಾನವನ್ನು ತರದೇ ಅಭಿವೃದ್ದಿಯನ್ನು ಮಾಡದೇ ನಿರ್ಲಕ್ಷö್ಯ ವಹಿಸಿರುವ ಬಿ.ವೈ.ರಾಘವೇಂದ್ರ ಈ ಭಾರಿಯ ಚುನಾವಣೆಯಲ್ಲಿ ಮತದಾರರ ಬಳಿ ಮತ ಕೇಳಲು ಹೋದರೆ ಮುಖಕ್ಕೆ ಮಂಗಳಾರತಿ ಮಾಡುತ್ತಾರೆಂಬ ಭಯದಿಂದ ಮೋದಿ ಮುಖ ತೋರಿಸಿ ಮತ ಕೇಳುತ್ತಿದ್ದಾರೆ, ನಾಚಿಕೆಯಾಗಬೇಕು ಇವರಿಗೆ ಎಂದು…

Read More

ಬಾವಿಯಲ್ಲಿ ಪೌರಕಾರ್ಮಿಕನ ಮೃತದೇಹ ಪತ್ತೆ|dead body found in

ಬಾವಿಯಲ್ಲಿ ಶವವೊಂದು ಪತ್ತೆಯಾಗಿರುವ ಘಟನೆ ನಡೆದಿದೆ. ಶಿವಮೊಗ್ಗದ KSRTC ಬಸ್ ನಿಲ್ದಾಣದ ಪಕ್ಕವಿರುವ ಬಿಎಂವಿ ಪಾರ್ಕಿಂಗ್ ಮತ್ತು ಎಸ್ ಡಿಪಿ ಪಾರ್ಕಿಂಗ್ ಮಧ್ಯ ಇರುವ ಬಾವಿಯಲ್ಲಿ ಮೃತದೇಹವೊಂದು ಪತ್ತೆಯಾಗಿದೆ. ಬಾವಿಯಲ್ಲಿ ಪತ್ತೆಯಾದ ಮೃತ ದೇಹವನ್ನ ಮಾರ್ನಮಿಬೈಲು ನಿವಾಸಿ ದಿಬ್ಬಯ್ಯ (52) ಎಂದು ಗುರುತಿಸಲಾಗಿದೆ. ಬಾವಿಗೆ ಬಿದ್ದ ದಿಬ್ಬಯ್ಯ ಕಳೆದ ಐದು ದಿನಗಳಿಂದ ಮನೆಗೆ ಹೋಗಿರಲಿಲ್ಲ ಎಂದು ಕುಟುಂಬ ತಿಳಿಸಿದೆ. ನಾಪತ್ತೆಯಾಗಿದ್ದ ಮನೆಯವರೂ ಹುಡುಕಾಡುತ್ತಿದ್ದರು. ಆದರೆ ಪಾರ್ಕಿಂಗ್ ಸ್ಥಳದಲ್ಲಿರುವ ಬಾವಿಯಲ್ಲಿ ಆತನ ಮೃತ ದೇಹ ಪತ್ತೆಯಾಗಿದೆ. ಪಾರ್ಕಿಂಗ್ ನೋಡಿಕೊಳ್ಳುವ…

Read More