ಆರ್ಯ ಈಡಿಗ ನೌಕರರ ಕ್ರಿಯಾವೇದಿಕೆಯಿಂದ ಮೃತ ವಿದ್ಯಾರ್ಥಿಯ ಕುಟುಂಬಕ್ಕೆ ಆರ್ಥಿಕ ನೆರವು :
ರಿಪ್ಪನ್ ಪೇಟೆ : ಕಳೆದ ಎರಡು ತಿಂಗಳ ಹಿಂದೆ ರಿಪ್ಪನ್ ಪೇಟೆ ಪಟ್ಟಣದ ಮೇರಿ ಮಾತಾ ಪ್ರೌಢಶಾಲೆಯಲ್ಲಿ 9ನೇ ತರಗತಿಯಲ್ಲಿ ಓದುತ್ತಿದ್ದ ಭರತ್ ಬೆಳ್ಳಿ (14)ಎಂಬ ವಿದ್ಯಾರ್ಥಿ ಆಕಸ್ಮಿಕವಾಗಿ ಕಾಲುಜಾರಿ ತಮ್ಮ ಮನೆಯ ಸಮೀಪದಲ್ಲಿರುವ ಹಳ್ಳಕ್ಕೆ ಬಿದ್ದು ಮೃತನಾಗಿದ್ದ. ಮೃತನ ತಂದೆ ವಾಸು ರವರು ರಿಪ್ಪನ್ ಪೇಟೆಯ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಗುಮಾಸ್ತರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಕುಟುಂಬಕ್ಕೆ ಹೊಸನಗರ ತಾಲೂಕು ಆರ್ಯ ಈಡಿಗ ನೌಕರರ ಕ್ರಿಯಾ ವೇದಿಕೆಯ ವತಿಯಿಂದ 31 ಸಾವಿರ ರೂಪಾಯಿಗಳ ಆರ್ಥಿಕ ನೆರವನ್ನು ನೀಡಿದರು. …