ಸಾಗರದಲ್ಲಿ ಫೀಲ್ಡ್ ಗೆ ಇಳಿದ ನೂತನ ಎಎಸ್ಪಿ ರೋಹನ್ ಜಗದೀಶ್:: ಸಾಗರದಲ್ಲಿ ಗಾಂಜಾ ಮಾಫಿಯಾ ಸಂಪೂರ್ಣ ಫಿನಿಷ್ ಫಿನಿಷ್ !!
ನೂತನ ಸ್ಮಾರ್ಟ್ ಐಪಿಎಸ್ ಆಫೀಸರ್ ರೋಹನ್ ಜಗದೀಶ್ ಇದೀಗ ಸಾಗರಕ್ಕೆ ಬಂದದ್ದೇ ತಡ ಅಪರಾಧಗಳನ್ನು ತಡೆಯುವಲ್ಲಿ ಪ್ರಾಮಾಣಿಕವಾಗಿ ಕಾರ್ಯವನ್ನು ನಿರ್ವಹಿಸುತ್ತಿದ್ದಾರೆ. ಸಾಗರ ತಾಲ್ಲೂಕಿನಲ್ಲಿ ಇಂದು ಗಾಂಜಾ ಸೇವನೆ ಮಾಡುತ್ತಿದ್ದ 3 ಜನರನ್ನು ಹಾಗೂ ಮಾರಾಟ ಮಾಡುತ್ತಿದ್ದ ಇಬ್ಬರನ್ನು ನಗರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಾಗರದ ವಿವಿಧೆಡೆ ದಾಳಿ ನಡೆಸಿದ ಎಎಸ್ ಪಿ ತಂಡ 15000 ಸಾವಿರ ರೂ ಹಾಗೂ 250 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆದು ಎನ್ ಡಿ ಪಿ ಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ….