ಶಿವಮೊಗ್ಗ : ಕೆರೆಯಲ್ಲಿ ಈಜಲು ಹೋದ ಅರಣ್ಯ ಇಲಾಖೆ ಸಿಬ್ಬಂದಿ ಸಾವು
ಶಿವಮೊಗ್ಗ : ಸ್ನಾನಕ್ಕೆ ತೆರಳಿದ್ದ ವೇಳೆ ನೀರಿನಲ್ಲಿ ಮುಳುಗಿ ಯುವಕನೋರ್ವ ಸಾವು ಕಂಡಿರುವ ಘಟನೆ ಹಾಯ್ ಹೊಳೆ ಕೆರೆಯಲ್ಲಿ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ಅರಣ್ಯ ಇಲಾಖೆಯಲ್ಲಿ ಎಫ್ ಡಿ ಎ ಕೆಲಸ ಮಾಡುತ್ತಿದ್ದ ಅಲ್ಲಾಭಕ್ಷಿ(30) ಅವರು ಶಿವಮೊಗ್ಗ ತಾಲೂಕಿನಲ್ಲಿರುವ ಸಂಬಂಧಿಕರ ಮನೆಗೆ ಕುಟುಂಬದೊಂದಿಗೆ ಬಂದಿದ್ದರು. ಹಾಯ್ ಹೊಳೆ ಕೆರೆಯ ನೀರಿನ ಆಳದ ಅರಿವಿಲ್ಲದೆ ಸ್ನಾನಕ್ಕಾಗಿ ನೀರಿಗೆ ಇಳಿದಿದ್ದರಿಂದ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಇಂದು ಬೆಳಿಗ್ಗೆ ತಮ್ಮ ಕಾರನ್ನು ಇದೇ ಹಾಯ್ ಹೊಳೆ ಕೆರೆಯಲ್ಲಿ…