ಹಿಜಾಬ್ ಧರಿಸಲು ಅವಕಾಶ ನಿರಾಕರಿಸಿದ್ದಕ್ಕೆ ಪರೀಕ್ಷೆಯನ್ನೆ ಬಹಿಷ್ಕರಿಸಿದ ವಿದ್ಯಾರ್ಥಿಗಳು :

ಶಿವಮೊಗ್ಗದಲ್ಲಿ ತಾರಕಕ್ಕರೇರಿದ ಹಿಜಾಬ್ ವಿವಾದ.ಶಾಲೆಯಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನೇ ಬಹಿಷ್ಕರಿಸಿ ವಿದ್ಯಾರ್ಥಿನಿಯರು ಹೊರನಡೆದಿದ್ದಾರೆ. ಇಂದು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದಲ್ಲಿ  ಎಸ್ ಎಸ್ ಎಲ್ ಸಿ ಪೂರ್ವಸಿದ್ಧತಾ ಪರೀಕ್ಷೆ ನಡೆಯುತ್ತಿದ್ದು  ಪರೀಕ್ಷೆ ವೇಳೆ ಹಿಜಾಬ್ ಧರಿಸಲು ಬಿಡಲಿಲ್ಲ ಎಂಬ ಕಾರಣಕ್ಕೆ 13 ವಿದ್ಯಾರ್ಥಿ ನಿಯರಿಂದ ಪರೀಕ್ಷೆ ಬಹಿಷ್ಕಾರಿಸಿದ್ದಾರೆ. ಅದರಂತೆ ತುಂಗನಗರ ಶಾಲೆಯಲ್ಲಿ ವಿದ್ಯಾರ್ಥಿಯೊಬ್ಬಳು ಹಿಜಬ್ ತೆಗೆದು ತರಗತಿಯಲ್ಲಿ ಕೂರಲು ಸಾಧ್ಯವಿಲ್ಲವೆಂದು ತರಗತಿ ಬಹಿಷ್ಕರಿಸಿ ಹೊರನಡೆದಿದ್ದಾಳೆ, ಶಿಕಾರಿಪುರ ಮತ್ತು ಸಾಗರದಲ್ಲಿಯೂ ಇದೇ…

Read More

ಮೂಲಭೂತ ಸೌಕರ್ಯವನ್ನು ಕಲ್ಪಿಸುವುದು ಜನ ಪ್ರತಿನಿಧಿಗಳಾದ ನಮ್ಮ ಕರ್ತವ್ಯ: ಬಿ ವೈ ರಾಘವೇಂದ್ರ

ಶಿವಮೊಗ್ಗ : ಜಿಲ್ಲೆಯ ವಿವಿಧ ಹಳೆಯ ಕೈಗಾರಿಕೆಗಳು ಕೆಲವು ಕಾರಣಕ್ಕೆ ಮುಚ್ಚುವ ಸ್ಥಿತಿ ಬಂದಿದೆ ಆದರೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ನಮ್ಮ ಜಿಲ್ಲೆಯಿಂದ ಕೈಗಾರಿಕಾ ಉದ್ಯಮಿಗಳ ಸಹಕಾರದಿಂದ ಉತ್ಪನ್ನಗಳು ತಲುಪುತ್ತಿದೆ, ಇಲ್ಲಿನ ಉದ್ಯಮಿಗಳಿಗೆ ಮೂಲಭೂತ ಸೌಕರ್ಯವನ್ನು ಕಲ್ಪಿಸುವುದು ಜನ ಪ್ರತಿನಿಧಿಗಳಾದ ನಮ್ಮ ಕರ್ತವ್ಯವಾಗಿದೆ ಆದ್ದರಿಂದ ನಮ್ಮ ಸೇವೆ ಮತ್ತು ಕೆಲಸಗಳು ಉತ್ತಮ ಗುಣಮಟ್ಟದಾಗಿರಲಿ ಎಂದು ಸಂಸದರಾದ ಬಿ.ವೈ ರಾಘವೇಂದ್ರ ಅವರು ತಿಳಿಸಿದರು. ಶಿವಮೊಗ್ಗ ಮಹಾನಗರ ಪಾಲಿಕೆ ಮತ್ತು ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ…

Read More

ಬೇಳೂರು ಗೋಪಾಲಕೃಷ್ಣ ಬಿಜೆಪಿ ಸರ್ಕಾರ ಪತನದ ಬಗ್ಗೆ ಹಗಲುಕನಸು ಕಾಣುತ್ತಿದ್ದಾರೆ : ಸಚಿವ ಶಿವರಾಂ ಹೆಬ್ಬಾರ್

ಶಿರಸಿ : ಬೇಳೂರು ಗೋಪಾಲಕೃಷ್ಣ ಅವರಿಗೆ ಸರ್ಕಾರ ಬೀಳುವ ಕುರಿತು ಸ್ವಪ್ನ ಬಿದ್ದಿರಬೇಕು. ಆದರೆ ಯಾವುದೇ ಕಾರಣಕ್ಕೂ ಒಂದು ದಿನ ಮುಂಚಿತವಾಗಿಯೂ ಸರ್ಕಾರ ಪತನವಾಗಲ್ಲ.ಬಿಜೆಪಿ ಸರ್ಕಾರ ಅವಧಿ ಪೂರೈಸಲಿದೆ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಹೇಳಿದರು.‌ ಶಿರಸಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋಪಾಲಕೃಷ್ಣ ಅವರಿಗೆ ಅಧಿಕಾರ ಇಲ್ಲದೇ ಇರುವುದರಿಂದ ಶೀಘ್ರದಲ್ಲಿ ಚುನಾವಣೆಗೆ ಹೋಗಬೇಕಾಗಿದೆ. ಆದ ಕಾರಣ ಹತಾಶರಾಗಿ ಈ ರೀತಿಯಾಗಿ ಹೇಳಿಕೆ ನೀಡುತ್ತಿದ್ದಾರೆ ಎಂದು ಬೇಳೂರು ಗೋಪಾಲಕೃಷ್ಣ ಅವರ ಸರ್ಕಾರ ಪತನ ಹೇಳಿಕೆಗೆ ತಿರುಗೇಟು ನೀಡಿದರು….

Read More

ರಾಜ್ಯದ ಗಮನ ಸೆಳೆದ ಹೊಸನಗರ ವಸತಿ ಶಾಲೆಯ ಪ್ರಾಂಶುಪಾಲ ಯೋಗೇಶ್

ರಾಜ್ಯದ ಗಮನ ಸೆಳೆದ ಹೊಸನಗರ ವಸತಿ ಶಾಲೆಯ ಪ್ರಾಂಶುಪಾಲ ಯೋಗೇಶ್ ವಿದ್ಯಾರ್ಥಿಗಳ ಮುಖ ನೋಡದೆ ಅವರ ಧ್ವನಿಯ ಮೂಲಕ ಹೆಸರನ್ನು ಗುರುತಿಸುವ ಕೇರಳದ ಶಿಕ್ಷಕನ ವಿಡಿಯೋ ವೈರಲ್ ಆದ ಬೆನ್ನಲ್ಲೇ ರಾಜ್ಯದ ಶಿಕ್ಷಕನೋರ್ವ ಅದೇ ಮಾದರಿಯಲ್ಲಿ ಗಮನ ಸೆಳೆದಿದ್ದಾರೆ. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಗೇರುಪುರ ಇಂದಿರಾ ಗಾಂಧಿ ವಸತಿ ಶಾಲೆಯ ಪ್ರಾಂಶುಪಾಲ ಯೋಗೇಶ್ ಹೆಬ್ಬಳಗೆರೆ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ 250 ವಿದ್ಯಾರ್ಥಿಗಳು ಇದ್ದು, ಮೊದಲಿಗೆ ಎಸ್‌ಎಸ್‌ಎಲ್‌ಸಿ…

Read More

hombuja | ಶ್ರೀ ರಾಮ ನಾಮ ಸ್ಮರಣೆ ವಿಶ್ವ ಶಾಂತಿ ಪ್ರೇರಕ ಶಕ್ತಿ ; ಹೊಂಬುಜ ಶ್ರೀಗಳು

hombuja | ಶ್ರೀ ರಾಮ ನಾಮ ಸ್ಮರಣೆ ವಿಶ್ವ ಶಾಂತಿ ಪ್ರೇರಕ ಶಕ್ತಿ ; ಹೊಂಬುಜ ಶ್ರೀಗಳು ಜೈನ ಮಠದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು ಸೋಮವಾರದಂದು ಅಯೋಧ್ಯೆಯಲ್ಲಿ ನೂತನ ಭವ್ಯ ಶ್ರೀರಾಮ ಮಂದಿರದಲ್ಲಿ ಶ್ರೀರಾಮ ವಿಗ್ರಹದ ಪ್ರಾಣ ಪ್ರತಿಷ್ಠೆ ಮಾಡಿದ ನಿಮಿತ್ತ ಹೊಂಬುಜ ಜೈನ ಮಠದಲ್ಲಿ ಸಂಜೆ ದೀಪೋತ್ಸವ ನೆರವೇರಿಸಿದರು. ಗುರುವಿಗೆ ಶಿಷ್ಯನಾಗಿ, ಪಿತೃವಾಕ್ಯ ಪರಿಪಾಲಕನಾಗಿ, ಸತಿಗೆ ತಕ್ಕ ಪತಿಯಾಗಿ ಅಯೋಧ್ಯೆಯ ಎಲ್ಲಾ ಜನರ ಪ್ರೀತಿ ಪಾತ್ರರಾಗಿ ಸಭ್ಯ ಸಮಾಜದ ಮರ್ಯಾದಾ…

Read More

ರಿಪ್ಪನ್ ಪೇಟೆ : ಸಿಡಿಲಿನ ಆರ್ಭಟಕ್ಕೆ ಜಾನುವಾರುಗಳು ಸಾವು

ರಿಪ್ಪನ್ ಪೇಟೆ : ಪಟ್ಟಣದ  ಸುತ್ತಮುತ್ತ ಇಂದು ಗುಡುಗು ಸಹಿತ ಭಾರೀ ಗಾಳಿ ಮಳೆಯಾಗಿದ್ದು ಹಲವು ಅನಾಹುತಗಳಿಗೆ ಎಡೆ ಮಾಡಿಕೊಟ್ಟಿದೆ. ಇಂದು ಸಂಜೆ ಸುರಿದ ಭಾರೀ ಮಳೆಗೆ ಹಾಲುಗುಡ್ಡೆ ಗ್ರಾಮದ ಚಂದ್ರಶೇಖರ್ ಎಂಬುವರಿಗೆ ಸೇರಿದ 2 ಹಸುಗಳು ಸಿಡಿಲಿನ ಆರ್ಭಟಕ್ಕೆ ಬಲಿಯಾಗಿವೆ. ಚಂದ್ರಶೇಖರ್ ರವರ ಮನೆಯ ಮುಂದೆ ಮರದ ಆಸರೆಯಲ್ಲಿ ನಿಂತಿದ್ದ ಹಸುಗಳು ಏಕಾಏಕಿ ಸಿಡಿಲು ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿವೆ.ಹಸುಗಳ ಸಾವಿನಿಂದ ಇದರಿಂದಲೇ ಜೀವನ ಸಾಗಿಸುತ್ತಿದ್ದ ಬಡ ಕುಟುಂಬಕ್ಕೆ ದಿಕ್ಕು ತೋಚದಂತಾಗಿದೆ.  ಘಟನಾ ಸ್ಥಳಕ್ಕೆ ಕಂದಾಯ…

Read More

ಸಾಗರದ ಗುಡ್ಡೆಕೌತಿ ಬಳಿ ಮೈಸೂರು-ತಾಳಗುಪ್ಪ ರೈಲಿಗೆ ಸಿಲುಕಿ ಯುವತಿ ಸಾವು.!! ಇದು ಆತ್ಮಹತ್ಯೆಯೋ ?ಅಪಘಾತವೋ?

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಗುಡ್ಡೆಕೌತಿ ಬಳಿ ಮಧ್ಯಾಹ್ನ 12:30 ರ ವೇಳೆಗೆ ಮೈಸೂರು- ತಾಳಗುಪ್ಪ ರೈಲಿಗೆ ಅಂದಾಜು 18 ವರ್ಷದ ಯುವತಿ ರೈಲಿಗೆ  ಸಿಲುಕಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಇನ್ನ ಸ್ಥಳದಲ್ಲಿ ರೈಲ್ವೆ ಇಲಾಖೆಯ ಪೋಲಿಸ್ ಅಧಿಕಾರಿಗಳು ಸಿಬ್ಬಂದಿಗಳು ಹಾಗೂ ಸಾಗರ ಗ್ರಾಮಾಂತರ ಪೊಲೀಸರು ಧಾವಿಸಿದ್ದಾರೆ. ಇನ್ನೂ ಯುವತಿಯ ಬಗ್ಗೆ ಮಾಹಿತಿ ತಿಳಿದಿಲ್ಲ ಇದು ಆತ್ಮಹತ್ಯೆಯೋ ಅಥವಾ ಅಪಘಾತವೋ ಎಂಬ ಪ್ರಶ್ನೆಗೆ ತನಿಖೆಯಿಂದ ಉತ್ತರ ದೊರೆಯಬೇಕಾಗಿದೆ. ಮೈಸೂರು to ತಾಳಗುಪ್ಪ ಗಾಡಿ ಸಂಖ್ಯೆ 16206 ರೈಲು Runover…

Read More

ಭೀಕರ ಅಪಘಾತ ; ಓರ್ವ ಸಾವು, 8 ಮಂದಿಗೆ ಗಂಭೀರ ಗಾಯ !

ಭೀಕರ ಅಪಘಾತ ; ಓರ್ವ ಸಾವು, 8 ಮಂದಿಗೆ ಗಂಭೀರ ಗಾಯ ! ಓಮ್ನಿ ಕಾರು ಮತ್ತು ಪಿಕಪ್ ವಾಹನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿ 08 ಮಂದಿ ಗಂಭೀರ ಗಾಯಗೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ತಾಳಗುಪ್ಪ ಸಮೀಪದ ಬಲೆಗಾರು ತಿರುವಿನಲ್ಲಿ ಇಂದು ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಎನ್‌.ಆರ್‌.ಪುರ ತಾಲ್ಲೂಕಿನ ಶೆಟ್ಟಿಕೊಪ್ಪ ಗ್ರಾಮದ 09 ಜನರು ಜೋಗ ನೋಡಲು ಹೋಗುತ್ತಿದ್ದಾಗ ತಾಳಗುಪ್ಪದಿಂದ ಸಾಗರಕ್ಕೆ ಬರುತ್ತಿದ್ದ ಪಿಕಪ್ ವಾಹನ ನಡುವೆ ಮುಖಾಮುಖಿ…

Read More

Ripponpete | ರಸ್ತೆ ಸುರಕ್ಷತಾ ನಿಯಮ ಪಾಲಿಸಿ : ವೀರೇಶ್

ರಸ್ತೆ ಸುರಕ್ಷತಾ ನಿಯಮ ಪಾಲಿಸಿ :  ವೀರೇಶ್  ರಿಪ್ಪನ್‌ಪೇಟೆ : ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲನೆಯಿಂದ ಅಪಘಾತಗಳು ಕಡಿಮೆಯಾಗಿ ಅಮೂಲ್ಯ ಜೀವಗಳು ಉಳಿಯಲಿವೆ ಎಂದು ಸಾಗರ ARTO ವೀರೇಶ್ ಹೇಳಿದರು. ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಪತ್ರಿಕಾ ದಿನಾಚರಣೆ ಅಂಗವಾಗಿ ಪತ್ರಕರ್ತ ಬಳಗ, ಎನ್‌ಎಸ್‌ಎಸ್ ಘಟಕ, ಪೊಲೀಸ್ ಠಾಣೆ ರಿಪ್ಪನ್‌ಪೇಟೆ ಹಾಗೂ ಪ್ರಾದೇಶಿಕ ಸಾರಿಗೆ ಇಲಾಖೆ ಸಾಗರ ಇವರ ಸಂಯುಕ್ತಾಶ್ರಯದಲ್ಲಿ ‘ವಾಹನ ಚಾಲನಾ ಪರವಾನಗಿ ಅರಿವು’ ಮತ್ತು ಎಲ್‌ಎಲ್‌ಆರ್ ನೋಂದಣಿ ಕಾರ್ಯಕ್ರಮದಲ್ಲಿ ಮಾತನಾಡಿ ಸುರಕ್ಷತಾ…

Read More

ರೈಲಿಗೆ ಸಿಲುಕಿ ಯುವಕ ಸಾವು | A young man died after being hit by a train

ರೈಲಿಗೆ ಸಿಲುಕಿ ಯುವಕ ಸಾವು | A young man died after being hit by a train ಶಿವಮೊಗ್ಗ : ಟ್ರೈನ್ ಗೆ ಸಿಲುಕಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ  ಸೋಮಿನಕೊಪ್ಪದಲ್ಲಿ ನಡೆದಿದೆ. ಭಾನುವಾರ ರಾತ್ರಿ ತಾಳಗುಪ್ಪ-ಬೆಂಗಳೂರು ಇಂಟರ್‌ ಸಿಟಿ ಟ್ರೈನ್‌ಗೆ ಸಿಲುಕಿ ಶಿವಮೊಗ್ಗ ನಗರದ ನಿವಾಸಿ ಹೇಮಂತ್(24) ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ. ಸೋಮಿನಕೊಪ್ಪ ಬಳಿ ಪಶುವೈದ್ಯಕೀಯ ಕಾಲೇಜಿನ ಸಮೀಪ ಸಿಗುವ ರೈಲ್ವೆ ಬ್ರಿಡ್ಜ್‌ ಸಮೀಪದಲ್ಲಿ ಸ್ನೇಹಿತರು ಕಳೆದುಕೊಂಡ ಮೊಬೈಲ್‌ ಹುಡುಕುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು…

Read More