Headlines

ಕನ್ನಡದ ಧ್ವಜಕ್ಕೆ ಬೆಂಕಿ ಇಟ್ಟ ಎಂಇಎಸ್ ಕೃತ್ಯ ಖಂಡಿಸಿ ರಿಪ್ಪನ್ ಪೇಟೆಯಲ್ಲಿ ಪ್ರತಿಭಟನೆ :

ರಿಪ್ಪನ್ ಪೇಟೆ : ಕನ್ನಡ ಧ್ವಜ ಸುಟ್ಟುಹಾಕಿರುವ ಎಂಇಎಸ್ ಸಂಘಟನೆಯನ್ನು ನಿಷೇಧಿಸಬೇಕೆಂದು ಒತ್ತಾಯಿಸಿ ಕಸ್ತೂರಿ ಕನ್ನಡ ಸಂಘದ ವತಿಯಿಂದ ವಿನಾಯಕ ವೃತ್ತದಲ್ಲಿ ಪ್ರತಿಭಟನೆ ನಡೆಸಿ ನಂತರ ನಾಡಕಛೇರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.  ಪ್ರತಿಭಟನೆಯ ವೇಳೆ ಮಾತನಾಡಿದ ಕಸ್ತೂರಿ ಕನ್ನಡ ಸಂಘದ ಅಧ್ಯಕ್ಷರಾದ ಅರ್ ಎ ಚಾಬುಸಾಬ್ ಎಂಇಎಸ್‌ ಪುಂಡರು ಕನ್ನಡ ಧ್ವಜಕ್ಕೆ ಅಪಮಾನ ಮಾಡಿರುವ ಘಟನೆ ಅತ್ಯಂತ ಹೇಯ. ಧ್ವಜವನ್ನು ಸುಟ್ಟು ವಿಕೃತಿ ಮೆರೆದಿರುವುದು ನೀಚ ಕೃತ್ಯ. ಅಖಂಡ ಕರ್ನಾಟಕದ ಆಸ್ಮಿತೆ ಸಾರುವ ನಮ್ಮ ಧ್ವಜದ…

Read More

ಸಾಗರ ಸಮೀಪದ ಉಳ್ಳೂರು ಗ್ರಾಪಂ ವ್ಯಾಪ್ತಿಯಲ್ಲಿ ಗುಂಪು ಗುಂಪಾಗಿ ಕಾಣಿಸಿಕೊಂಡ ಕಾಡು ಕೋಣಗಳು – ಭಯ ಭೀತರಾದ ಸ್ಥಳೀಯರು|wild corner

ಜನನಿಬಿಡ ಸ್ಥಳಗಳಲ್ಲಿ ಗುಂಪು ಗುಂಪಾಗಿ ಕಾಡುಕೋಣ ಕಾಣಿಸಿಕೊಂಡ ಪರಿಣಾಮ ಸ್ಥಳೀಯರು ಭಯಭೀತರಾದ ಘಟನೆ ಶಿವಮೊಗ್ಗ ಜಿಲ್ಲೆಯ ಉಳ್ಳೂರು ಗ್ರಾಪಂ ವ್ಯಾಪ್ತಿಯಲ್ಲಿ ನಡೆದಿದೆ. ಕಲ್ಲುಕೊಪ್ಪದ ಗ್ರಾಮದ ಭಾಗದಲ್ಲಿ ಹಿಂಡು‌ಹಿಂಡು ಕಾಡುಕೋಣಗಳು ಪ್ರತ್ಯಕ್ಷವಾಗಿದ್ದು ಗ್ರಾಮಸ್ಥರಲ್ಲಿ ಅಧಿಕ ಭಯ ಹುಟ್ಟಿಸಿವೆ. ಏಕಾಏಕಿ 16 ಕಾಡುಕೋಣಗಳು ಪ್ರತ್ಯಕ್ಷವಾಗಿರುವುದು ಗ್ರಾಮಸ್ಥರ ಆತಂಕವನ್ನು ದುಪ್ಪಟ್ಟುಗೊಳಿಸಿವೆ.  ಕಾಡುಕೋಣಗಳು ಚಿರತೆ ಹುಲಿಯಷ್ಟು ಅಪಾಯಕಾರಿಯಾಗದೆ ಇದ್ದರೂ ರೈತರು ಬೆಳೆದ ಬೆಳೆಗಳನ್ನು ನಾಶ ಮಾಡಿರುವ ಉದಾಹರಣೆಗಳಿದೆ. ಕಾಡುಕೋಣಗಳು ಗುಂಪು ಗುಂಪಾಗಿ ರಾಜರೋಷವಾಗಿ ಸುತ್ತಾಡುತ್ತಿರುವುದನ್ನು ಕಂಡು ಸ್ಥಳೀಯರು ಭಯಭೀತರಾಗಿ ಅರಣ್ಯ ಇಲಾಖೆಯ ಗಮನಕ್ಕೆ…

Read More

ಆತ್ಮ ಶುದ್ಧೀಕರಣಕ್ಕಾಗಿ ಇರುವುದೇ ಧರ್ಮ – ವಿಧಾನ ಪರಿಷತ್ ಸದಸ್ಯೆ ಬಲ್ಕೀಸ್ ಭಾನು

ಆತ್ಮ ಶುದ್ಧೀಕರಣಕ್ಕಾಗಿ ಇರುವುದೇ ಧರ್ಮ – ವಿಧಾನ ಪರಿಷತ್ ಸದಸ್ಯೆ ಬಲ್ಕೀಸ್ ಭಾನು ರಿಪ್ಪನ್‌ಪೇಟೆ : ನಮ್ಮ ಆತ್ಮ ಶುದ್ದೀಕರಣವಿದ್ದರೆ ಮಾತ್ರ ಅದು ಧರ್ಮವಾಗಿರುತ್ತದೆ, ಆಯಾ ಧರ್ಮದ ಸಾರವನ್ನು ಅರ್ಥ ಮಾಡಿಕೊಂಡು ಆ ಪ್ರಕಾರ ಜೀವನ ನಡೆಸಿದಲ್ಲಿ ಎಲ್ಲರೂ ಸಂತಸದಿಂದ ಬದುಕಿ ಬಾಳಬಹುದು ಎಂದು ವಿಧಾನ ಪರಿಷತ್ ಸದಸ್ಯೆ ಬಲ್ಕೀಸ್ ಭಾನು ಹೇಳಿದರು. ಪಟ್ಟಣದಲ್ಲಿ ಈದ್ ಮಿಲಾದ್ ಅಂಗವಾಗಿ ಮೊಹಿಯುದ್ದೀನ್ ಜುಮ್ಮಾ ಮಸೀದಿಯ ವತಿಯಿಂದ ಆಯೋಜಿಸಿದ್ದ ಸೌಹಾರ್ಧ ಸಂಗಮ ಹಾಗೂ ಶಾಸಕರುಗಳಿಗೆ ಸನ್ಮಾನ ಕಾರ್ಯಕ್ರಮವನ್ನುದೇಶಿಸಿ ಅವರು ಮಾತನಾಡಿ…

Read More

HOSANAGARA | ಪಟಗುಪ್ಪ ಸೇತುವೆ ಬಳಿ ವ್ಯಕ್ತಿಯ ಶವ ಪತ್ತೆ

HOSANAGARA | ಪಟಗುಪ್ಪ ಸೇತುವೆ ಬಳಿ ವ್ಯಕ್ತಿಯ ಶವ ಪತ್ತೆ ಹೊಸನಗರ ತಾಲ್ಲೂಕಿನ ಗಡಿ ಭಾಗವಾದ ಸಾಗರ ತಾಲೂಕಿಗೆ ಹೊಂದಿಕೊಂಡಿರುವ ಪಟಗುಪ್ಪ ಸೇತುವೆ ಬಳಿ ಹಿನ್ನೀರಿನಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಮೃತರನ್ನು ಶಿಕಾರಿಪುರ ಮೂಲದ ಶಿವರಾಜ್ (29) ಎಂದು ಗುರುತಿಸಲಾಗಿದೆ. ಮೃತ ವ್ಯಕ್ತಿ ಶಿಕಾರಿಪುರ ತಾಲ್ಲೂಕಿನ ಬಿಳಕಿ ಗ್ರಾಮದವರು ಎಂದು ತಿಳಿದುಬಂದಿದ್ದು , ಶಿವರಾಜ್‌ಗೆ ಮದ್ಯಪಾನ ವ್ಯಸನವಿದ್ದು, ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗುತ್ತಿದೆ. ಸಂಬಂಧಪಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಅಪಘಾತದಲ್ಲಿ ಯುವಕ ಸಾವು – ಇದು ಅಪಘಾತವಲ್ಲ ಕೊಲೆ ಎಂದ ಕುಟುಂಬಸ್ಥರು

ಅಪಘಾತದಲ್ಲಿ ಯುವಕ ಸಾವು – ಇದು ಅಪಘಾತವಲ್ಲ ಕೊಲೆ ಎಂದ ಕುಟುಂಬಸ್ಥರು ಶಿವಮೊಗ್ಗ: ಮರಕ್ಕೆ ಬೈಕ್‌  ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಯುವಕ  ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮೃತನನ್ನು ರಾಜು (27) ಎಂದು ಗುರುತಿಸಲಾಗಿದೆ. ಸಾಗರ ರಸ್ತೆಯ ವಾಜಪೇಯಿ ಬಡಾವಣೆ ಬಳಿ ಬೈಕ್‌  ಮರಕ್ಕೆ ಡಿಕ್ಕಿಯಾಗಿದೆ. ನಂತರ ಬೈಕ್‌ ಸಹಿತ ಸವಾರ ರಾಜು ಚರಂಡಿಗೆ ಬಿದಿದ್ದಾನೆ. ಗಂಭೀರ ಗಾಯಗೊಂಡು ಅಲ್ಲಿಯೇ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ. ಸಿದ್ದರಹಳ್ಳಿಯ ರಾಜು ಕೂಲಿ ಕೆಲಸ ಮಾಡಿಕೊಂಡಿದ್ದು 6 ತಿಂಗಳ ಹಿಂದೆ ಮದುವೆಯಾಗಿದ್ದ. ನಿನ್ನೆ…

Read More

ಶ್ರದ್ದಾ ಭಕ್ತಿಯಿಂದ ನೆರವೇರಿದ ಸಂಭ್ರಮದ ಗೋಪೂಜೆ

ರಿಪ್ಪನ್‌ಪೇಟೆ : ಇಂದು ಬಲಿಪಾಡ್ಯಮಿಯ ಅಂಗವಾಗಿ ರಿಪ್ಪನ್‌ಪೇಟೆಯ ವಿವಿದಢೆಯ ದೇವಸ್ಥಾನಗಳಲ್ಲಿ ಗೋಪೂಜೆಯನ್ನು ಶ್ರದ್ದಾಭಕ್ತಿಯಿಂದ ನೆರವೇರಿಸಲಾಯಿತು. ಪಟ್ಟಣದ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಗೋವುಗಳನ್ನು ಶೃಂಗರಿಸಿ ದೇವಸ್ಥಾನದ ಪ್ರದಾನ ಅರ್ಚಕ ವೇ.ಚಂದ್ರಶೇಖರ ಭಟ್ ಮತ್ತು ಗುರುರಾಜ್ ಭಟ್ ನೇತೃತ್ವದಲ್ಲಿ ಗೋ ಮಾತೆಗೆ ಬೆಲ್ಲ ಅಕ್ಕಿ ಬಾಳೆಹಣ್ಣು ನೀಡಿ ವಿಶೇಷ ಪೂಜೆ ಸಲ್ಲಿಸಲಾಯಿತು. ದೇವಸ್ಥಾನದ ಧರ್ಮದರ್ಶಿ ಆರ್.ಈ.ಈಶ್ವರಶೆಟ್ಟಿ, ಎಂ.ಡಿ.ಇಂದ್ರಮ್ಮ,ಗಣೇಶ್ ಎನ್.ಕಾಮತ್, ಎನ್.ಸತೀಶ್,ಸುಧೀಂದ್ರ ಪೂಜಾರಿ,ಲಿಂಗಪ್ಪ ಕಗ್ಗಲಿ, ಮೋಹನ್,ಜಯಲಕ್ಷಿ, ಕೆ.ಆರ್.ಭೀಮರಾಜ್‌ಗೌಡರು, ವೈ.ಜೆ.ಕೃಷ್ಣ, ರಾಘವೇಂದ್ರ ಆರ್.ಸರಸ್ವತಿ ರಾಘವೇಂದ್ರ,ಇನ್ನಿತರರು ಹಾಜರಿದ್ದರು.

Read More

Crime News | ರಬ್ಬರ್ ತೋಟದಲ್ಲಿ ಕೇರಳ ಮೂಲದ ವ್ಯಕ್ತಿಯ ಕೊಲೆ – ಓರ್ವ ವಶಕ್ಕೆ

ರಬ್ಬರ್ ತೋಟದಲ್ಲಿ ಕೇರಳ ಮೂಲದ ವ್ಯಕ್ತಿಯ ಕೊಲೆ ಕಾರ್ಮಿಕರಿಬ್ಬರ ನಡುವಿನ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬದಲ್ಲಿ ನಡೆದಿದೆ. ಕೇರಳ ರಾಜ್ಯದ ಕಣ್ಣೂರು ಮೂಲದ ಶಿಜು(42) ಕೊಲೆಯಾದ ವ್ಯಕ್ತಿಯಾಗಿದ್ದಾನೆ. ಕೇರಳ ಮೂಲದ ವ್ಯಕ್ತಿಗಳು ರಬ್ಬರ್​ ತೋಟದಲ್ಲಿ ಕೆಲಸ ಮಾಡುತ್ತಿದ್ದರು.ಇವರ ನಡುವಿನ ಜಗಳ ಕೊಲೆಗೆ ಕಾರಣ ಎನ್ನಲಾಗುತ್ತಿದೆ.  ಘಟನೆ ಸಂಬಂಧ ಓರ್ವ ಆರೋಪಿಯನ್ನ ವಶಕ್ಕೆ ಪಡೆಯಲಾಗಿದೆ. ಘಟನೆಗೆ ವೈಯಕ್ತಿಕ ವಿಚಾರ ಕಾರಣವಾಗಿದೆ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ. ಸೊರಬ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More

Accident | ಜವರಾಯನಂತೆ ಅಡ್ಡ ಬಂದ ನಾಯಿ – ಕಾರು ಪಲ್ಟಿಯಾಗಿ ಯುವಕ ಸಾವು

Accident | ಜವರಾಯನಂತೆ ಅಡ್ಡ ಬಂದ ನಾಯಿ – ಕಾರು ಪಲ್ಟಿಯಾಗಿ ಯುವಕ ಸಾವು ಶಿವಮೊಗ್ಗ ಜಿಲ್ಲೆಯ ಸಕ್ರೆಬೈಲ್ ಬಳಿಯಲ್ಲಿ ಕಾರಿಗೆ ನಾಯಿ ಅಡ್ಡ ಬಂದು ಕಾರು ಪಲ್ಟಿಯಾಗಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ. ಶಿವಮೊಗ್ಗ ನಗರದ ಪ್ರಜ್ವಲ್ ವಾಲ್ಮಿಖಿ(23) ಮೃತಪಟ್ಟ ಯುವಕನಾಗಿದ್ದಾನೆ. ಮಂಡಗದ್ದೆಗೆ ಭಾನುವಾರದ ಜಾಲಿ ರೈಡ್ ಗೆ ಮುಂದಾಗಿದ್ದ ಶಿವಮೊಗ್ಗ ನಗರದ ಯುವಕರು ಎರಡು ಕಾರಿನಲ್ಲಿ  ತೆರಳಿದ್ದಾರೆ. ಮಂಡಗದ್ದೆಯಲ್ಲಿ ಊಟ ಮುಗಿಸಿ ವಾಪಾಸ್ ಶಿವಮೊಗ್ಗಕ್ಕೆ ಬರುವಾಗ ಕಾರಿಗೆ ನಾಯಿಯೊಂದು ಅಡ್ಡ ಬಂದಿದೆ….

Read More

ಬೆನವಳ್ಳಿ : ನರೇಗಾ ಕಾಮಗಾರಿಗೆ ತಡರಾತ್ರಿ ಟ್ರ್ಯಾಕ್ಟರ್ ಬಳಕೆ : ಗ್ರಾಮಸ್ಥರ ತಡೆ

ರಿಪ್ಪನ್‌ಪೇಟೆ : ಅರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬೆನವಳ್ಳಿ ಸರ್ಕಾರಿ ಪಾಠಶಾಲೆಯ ಆಟದ ಮೈದಾನ ಸಮತಟ್ಟು ಕಾಮಗಾರಿಗೆ ಉದ್ಯೋಗ ಖಾತ್ರಿ ಯೋಜನೆಯಡಿ ಹಣ ಮಂಜಾರಾಗಿದ್ದು ಕಳೆದ ಒಂದು ತಿಂಗಳಿಂದ ಕೂಲಿಗಳ ಮೂಲಕ ಕಾಮಗಾರಿ ನಿರ್ವಹಿಸಲಾಗುತ್ತಿತ್ತು. ಆದರೆ ಸೋಮವಾರ ಮಧ್ಯರಾತ್ರಿಯಲ್ಲಿ ಏಕಾಏಕಿ ಟ್ರ್ಯಾಕ್ಟರ್ ತಂದು ನರೇಗ ಕಾಮಗಾರಿ ನಿರ್ವಹಿಸುವುದನ್ನು ಖಂಡಿಸಿ ಅಧಿಕಾರಿಗಳು ಬರುವವರೆಗೂ ಟ್ರ್ಯಾಕ್ಟರ್ ಹೊರ ಬಿಡದೇ ಪಟ್ಟು ಹಿಡಿದು ಬೆನವಳ್ಳಿಯ ನೂರಾರು ಗ್ರಾಮಸ್ಥರು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಸುಮಾರು 15 ರಿಂದ 20 ಜನ ಮಹಿಳಾ…

Read More

ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯನ್ನು ಅಡ್ಡಗಟ್ಟಿ ಚಾಕುವಿನಿಂದ ಇರಿದ ದುಷ್ಕರ್ಮಿ|crime news

ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯನ್ನು ಅಡ್ಡಗಟ್ಟಿ ಚಾಕುವಿನಿಂದ ಇರಿದ ದುಷ್ಕರ್ಮಿ ಶಿವಮೊಗ್ಗ : ರಸ್ತೆಯಲ್ಲಿ ನಡೆದುಕೊಂಡು ಹೋಗುತಿದ್ದ ಮಹಿಳೆಗೆ ದುಷ್ಕರ್ಮಿಯೊಬ್ಬ ಚಾಕು ಇರಿದ ಘಟನೆ ಕೆ.ಆರ್​.ಪುರಂ ರಸ್ತೆಗೆ ಹೊಂದಿಕೊಂಡಿರುವ ತಿಮ್ಮಪ್ಪನ ಕೊಪ್ಪಲು ರಸ್ತೆಯಲ್ಲಿ ನಡೆದಿದೆ. ವ್ಯಕ್ತಿಯೊಬ್ಬ ಮಹಿಳೆಯನ್ನ ಹಿಂಬಾಲಿಸಿ, ಆಂಜನೇಯ ಸ್ವಾಮಿ ದೇವಸ್ಥಾನದ ಬಳಿಯಲ್ಲಿ ಆಕೆಯ ಮೇಲೆ ದಾಳಿ ಮಾಡಿದ್ದಾನೆ. ಅಲ್ಲದೆ ಚಾಕುವಿನಿಂದ ಇರಿದಿದ್ದಾನೆ.  ಈ ವೇಳೆ ಅಲ್ಲಿದ್ದ ಸ್ಥಳೀಯರು ಕೂಗುತ್ತಾ ಹತ್ತಿರ ಬಂದ ಬೆನ್ನಲ್ಲೆ, ಆರೋಪಿ ಸ್ಥಳದಿಂದ ಪರಾರಿಯಾಗಿದ್ಧಾನೆ. ಇನ್ನೂ ಘಟನೆ ಸಂಬಂಧ ಸ್ಥಳಕ್ಕೆ ಪೊಲೀಸರು…

Read More