ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ದಿವ್ಯ ನಿರ್ಲಕ್ಷ್ಯ: ಕಾಡಿನಂತಾಗಿದೆ ಸಾಗರದ ಪೊಲೀಸ್ ವಸತಿ ಗೃಹಗಳು:
ಸಾಗರ: ಮಲೆನಾಡಿನ ಮಡಿಲಾದ ಶಿವಮೊಗ್ಗ ಜಿಲ್ಲೆ ಸಾಗರದಲ್ಲಿ ಪೋಲಿಸ್ ಸಿಬ್ಬಂದಿಗಳಿಗೆ ಕೋಟ್ಯಾಂತರ ರೂ ವೆಚ್ಚ ಮಾಡಿ ಸರ್ಕಾರ ಪೊಲೀಸ್ ವಸತಿಗೃಹಗಳನ್ನು ನಿರ್ಮಿಸಿತ್ತು.ಆದರೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯದಿಂದ ಕೋಟ್ಯಂತರ ರೂ ಬೆಲೆಬಾಳುವ ಪೊಲೀಸ್ ವಸತಿ ಗೃಹಗಳು ಇದೀಗ ಕಾಡಿನ ಮಧ್ಯೆ ಇದೆ ಎಂಬಂತಾಗಿದೆ ಕಾರಣ ಸುತ್ತಮುತ್ತಲು ಕಾಡಿನಂತೆ ವಸತಿಗೃಹದ ಅರ್ಧಮಟ್ಟಿಗೆ ಬೆಳೆದಿರುವ ಗಿಡಗಂಟಿಗಳು. ಅಧಿಕಾರಿಗಳು ಗಿಡಗಂಟಿಗಳನ್ನು ಸ್ವಚ್ಛಗೊಳಿಸದೆ ಇರುವುದರಿಂದ ಈ ವಸತಿಗೃಹಗಳ ಸೌಂದರ್ಯವೇ ಇದೀಗ ಪಾಳು ಬಿದ್ದಂತಿದೆ. ಸಾಗರದ ಹೃದಯ ಭಾಗದಲ್ಲಿ ಇರುವ ಈ ಪೊಲೀಸ್…