RIPPONPETE | ಈದ್ ಮಿಲಾದ್ ಕಾರ್ಯಕ್ರಮಕ್ಕೆ ಹೋಳಿಗೆ ವಿತರಿಸಿ ಸೌಹಾರ್ಧತೆ ಮೆರೆದ ಹಿಂದೂ ಮಹಾಸಭಾ ಸಮಿತಿ

RIPPONPETE | ಈದ್ ಮಿಲಾದ್ ಕಾರ್ಯಕ್ರಮಕ್ಕೆ ಹೋಳಿಗೆ ವಿತರಿಸಿ ಸೌಹಾರ್ಧತೆ ಮೆರೆದ ಹಿಂದೂ ಮಹಾಸಭಾ ಸಮಿತಿ ರಿಪ್ಪನ್‌ಪೇಟೆ : ಪಟ್ಟಣದಲ್ಲಿ ಪ್ರವಾದಿ ಮುಹಮ್ಮದ್ ಪೈಗಂಬರ್ ರವರ 1499ನೇ ಜನ್ಮ ದಿನಾಚರಣೆ ಅಂಗವಾಗಿ ನಡೆಯುತ್ತಿರುವ ಈದ್ ಮಿಲಾದ್ ಕಾರ್ಯಕ್ರಮಕ್ಕೆ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ಸಮಿತಿಯವರು ಹೋಳಿಗೆ ವಿತರಿಸುವ ಮೂಲಕ ಸೌಹಾರ್ಧತೆ ಮೆರೆದಿದ್ದಾರೆ. ಈದ್ ಮಿಲಾದ್ ಮೆರವಣಿಗೆ ವಿನಾಯಕ ವೃತ್ತದಿಂದ ಹೊಸನಗರ ರಸ್ತೆಯ ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಹಿಂಭಾಗದ ಕೂರ ತಂಝಲ್ ಸಭಾ ಭವನಕ್ಕೆ ತೆರಳಿದ ವೇಳೆಯಲ್ಲಿ…

Read More

ಪೊಲೀಸ್ ಕಾನ್ಸ್ ಟೇಬಲ್ ನ ಲವ್ ಮ್ಯಾರೇಜ್ ದೋಖಾ,ಕದ್ದು ಮುಚ್ಚಿ ಎರಡನೇ ಮದುವೆ – ಪತಿಗಾಗಿ ಪತ್ನಿಯ ಕಣ್ಣೀರು|SAG

ಪೊಲೀಸ್ ಕಾನ್ಸ್ ಟೇಬಲ್ ನ ಲವ್ ಮ್ಯಾರೇಜ್ ದೋಖಾ,ಕದ್ದು ಮುಚ್ಚಿ ಎರಡನೇ ಮದುವೆ – ಪತಿಗಾಗಿ ಪತ್ನಿಯ ಕಣ್ಣೀರು ಶಿವಮೊಗ್ಗ –  ಸಾಮಾಜಿಕ ಜಾಲತಾಣದಲ್ಲಿ ಪರಸ್ಪರ ಪರಿಚಯವಾಗಿ ಪ್ರೀತಿಸಿ ಮದುವೆಯಾಗಿ ಕೇವಲ ಏಳು ತಿಂಗಳಲ್ಲಿ ಯುವತಿಗೆ ಮೋಸ ಮಾಡಿ ಮತ್ತೊಂದು ಮದುವೆಯಾಗಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಖಾಸಗಿ ಶಾಲೆಯ ಶಿಕ್ಷಕಿಯಾಗಿರುವ ಯುವತಿ ಮತ್ತು ಬೆಂಗಳೂರಿನಲ್ಲಿ ಪೊಲೀಸ್ ಕಾನ್ಸಟೇಬಲ್ (Police Constable) ಆಗಿ ಕಾರ್ಯನಿರ್ವಹಿಸುತ್ತಿದ್ದ ಯುವಕನ ನಡುವೆ ಪ್ರೇಮಾಂಕುರವಾಗಿತ್ತು. ಈ ಇಬ್ಬರು ಲವ್ ಮಾಡಿ…

Read More

ಮೇ 12ಕ್ಕೆ ನಾಗರಹಳ್ಳಿ ನಾಗೇಂದ್ರಸ್ವಾಮಿಯ ಪ್ರತಿಷ್ಟಾಪನಾ ವರ್ಧಂತ್ಯುತ್ಸವ ಜಗದ್ಗುರು ಶಂಕರಾಚಾರ್ಯರ ಜಯಂತಿ

ಮೇ 12ಕ್ಕೆ ನಾಗರಹಳ್ಳಿ ನಾಗೇಂದ್ರಸ್ವಾಮಿಯ ಪ್ರತಿಷ್ಟಾಪನಾ ವರ್ಧಂತ್ಯುತ್ಸವ ಜಗದ್ಗುರು ಶಂಕರಾಚಾರ್ಯರ ಜಯಂತಿ  ರಿಪ್ಪನ್‌ಪೇಟೆ;-ಸಮೀಪದ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ 13 ನೇ ವರ್ಷದ ಪ್ರತಿಷ್ಟಾಪನಾ ವರ್ಧಂತ್ಯುತ್ಸವ ಕಾರ್ಯಕ್ರಮ ಮತ್ತು ಜಗದ್ಗುರು ಶ್ರೀಶಂಕರಾಚಾರ್ಯರ ಜಯಂತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ದೇವಸ್ಥಾನ ಸೇವಾ ಸಮಿತಿಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮೇ 12 ರಂದು ಭಾನುವಾರ ಬೆಳಗ್ಗೆ ಶ್ರೀ ನಾಗೇಂದ್ರಸ್ವಾಮಿಗೆ ಪ್ರತಿಷ್ಟಾವರ್ಧಂತಿ ಉತ್ಸವ ಅಂಗವಾಗಿ ಶ್ರೀಸ್ವಾಮಿಗೆ ಮೂಲಮಂತ್ರ ಹೋಮ,ಪಂಚವಿಂಶತಿ ಕಲಶಾಭಿಷೇಕ,ವಿಶೇಷ ಪೂಜೆ ಕೈಂಕರ್ಯಗಳು…

Read More

ಹೊಸನಗರ : 30 ಅಡಿ ಬಾವಿಗೆ ಬಿದ್ದ ಮಹಿಳೆಯನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ

ಆಕಸ್ಮಿಕವಾಗಿ 30 ಅಡಿ ಬಾವಿಗೆ ಬಿದ್ದ ಮಹಿಳೆಯನ್ನು ಅಗ್ನಿಶಾಮಕ ಸಿಬ್ಬಂದಿಗಳು ರಕ್ಷಣೆ ಮಾಡಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮಾವಿನಕೊಪ್ಪದಲ್ಲಿ ನಡೆದಿದೆ.  ಮಾವಿನಕೊಪ್ಪದ ನಿವಾಸಿಯಾದ ಯಶೋದಮ್ಮ (60) ಬಾವಿಗೆ ಬಿದ್ದ ಮಹಿಳೆ. ಮಾನಸಿಕವಾಗಿ ದುರ್ಬಲರಾಗಿದ್ದ ಯಶೋದಮ್ಮ, ತಮ್ಮ ಮನೆಯ ಹಿಂದಿನ ಬಾವಿಗೆ ಬಿದ್ದಿದ್ದಾರೆ. ಇನ್ನು ಮನೆಯಲ್ಲಿ ಅತ್ತೆ ಕಾಣದಿದ್ದಾಗ ಸೊಸೆ ಮನೆಯ ಸುತ್ತಮುತ್ತ ಹುಡುಕಾಟ ನಡೆಸಿದ್ದಾರೆ. ಬಳಿಕ ಮನೆ ಹಿಂಭಾಗದ ಬಾವಿಗೆ ಮುಚ್ಚಿದ ಕಬ್ಬಿಣದ ಗ್ರಿಲ್ ತೆರೆದಿದ್ದನ್ನು ಕಂಡ ಸೊಸೆ‌. ಅನುಮಾನದಿಂದ ಬಾವಿಯಲ್ಲಿ ನೋಡಿದ್ದಾರೆ.  ಅತ್ತೆ…

Read More

ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದ ಒಳರೋಗಿ ಆಸ್ಪತ್ರೆ ಆವರಣದಲ್ಲಿ ಸಾವು|meggan

ಶಿವಮೊಗ್ಗದ ಮೆಗ್ಗಾನ್ ಬೋಧನಾ ಜಿಲ್ಲಾಸ್ಪತ್ರೆಯಲ್ಲಿ ನಡೆದ ಒಂದು ಘಟನೆ ಸದ್ಯ ಎಲ್ಲ ರೋಗಿ, ರೋಗಿಗಳ ಸಂಬಂಧಿಕರನ್ನು ಬೆಚ್ಚಿ ಬೀಳಿಸಿದೆ. ಜಿಲ್ಲಾಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಯು ಮೃತಪಟ್ಟಿದ್ದಾನೆ.  ಆಸ್ಪತ್ರೆ ಒಳಗೆ ಮೃತಪಟ್ಟಿದ್ದರೆ ಯಾರಿಗೂ ಅಚ್ಚರಿ ಆಗುತ್ತಿರಲಿಲ್ಲ. ಹೌದು ಇಲ್ಲಿ ಒಳ ರೋಗಿಯು ಆಸ್ಪತ್ರೆಯ ಆವರಣದಲ್ಲಿ ಮೃತಪಟ್ಟಿದ್ದಾನೆ. ಹೀಗೆ ಮೃತಪಟ್ಟಿರುವ ವ್ಯಕ್ತಿಯ ಹೆಸರು. ಮಂಜುನಾಥ್(32) ದಾವಣಗೆರೆ ಜಿಲ್ಲೆಯ ಚನ್ನಗರಿ ಪಟ್ಟಣದ ನಿವಾಸಿ.  ಮೇ. 19 ರಂದು ಅನಾರೋಗ್ಯದಿಂದ ಬಳಲುತ್ತಿದ್ದ ಕಾರಣಕ್ಕೆ ಇತನನ್ನು ಕುಟುಂಬಸ್ಥರು ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು….

Read More

ಶಿವಮೊಗ್ಗ ಜಿಲ್ಲೆಯ ನಾಲ್ವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ :

ಶಿವಮೊಗ್ಗ : ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನ ಘೋಷಿಸಲಾಗಿದ್ದು, ಶಿವಮೊಗ್ಗ ಜಿಲ್ಲೆಗೆ ನಾಲ್ವರಿಗೆ ಈ ಪ್ರಶಸ್ತಿ ಲಭಿಸಿದೆ. ವಿವಿಧ ಕ್ಷೇತ್ರದಲ್ಲಿ ಎಲೆಮರೆಕಾಯಿಂತೆ ಕೆಲಸ ಮಾಡಿರುವ ಕಲಾವಿಧರನ್ನ ಗುರುತಿಸಿ ಅವರಿಗೆ ಪ್ರತಿ ವರ್ಷದಂತೆ ಸರ್ಕಾರ ಪ್ರಶಸ್ತಿ ನೀಡಲಾಗುತ್ತದೆ.  ಅದರಂತೆ ಈ ಬಾರಿಯೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಗೊಂಡಿದೆ. ಸೇವಾ ಸಿಂಧು ಮೂಲಕ ಸಾರ್ವಜನಿಕರು ಮಾಡಿದ ಶಿಫಾರಸುಗಳನ್ನ ಪರಿಶೀಲಿಸಿ ಮುಖ್ಯ ಮಂತ್ರಿಗಳ ನೇತೃತ್ವದಲ್ಲಿ ರಚಿತವಾಗಿರುವ ಪ್ರಶಸ್ತಿ ಆಯ್ಕೆ ಸಮಿತಿ ಮತ್ತು ಪ್ರಶಸ್ತಿ ಸಲಹಾ ಸಮಿತಿಯ ಮನ್ನಣೆ ನೀಡಿದ ಹೆಸರುಗಳನ್ನ ಆಯ್ಕೆ…

Read More

ಗ್ರಾಮ ಪಂಚಾಯತ್ ಜಾಗ ಒತ್ತುವರಿ ಆರೋಪ: ತೆರವು ಕಾರ್ಯಾಚರಣೆಯಲ್ಲಿ ಉದ್ವಿಗ್ನತೆ, ಮಾತಿನ ಚಕಮಕಿ

Tension erupted in Ripponpet as gram panchayat officials attempted to clear alleged encroachment on village site land, leading to a verbal clash and police case. ರಿಪ್ಪನ್ ಪೇಟೆ : ಪಟ್ಟಣದ ಹಳೆಯ ಸಂತೇ ಮಾರ್ಕೆಟ್ ಪ್ರದೇಶದಲ್ಲಿ ಇರುವ ಸರ್ವೆ ನಂ. 43 ರ ಗ್ರಾಮ ಪಂಚಾಯತ್ ಸುಪರ್ದಿಯ ಜಾಗದಲ್ಲಿ ಅಕ್ರಮ ಒತ್ತುವರಿ ಆರೋಪದ ಹಿನ್ನೆಲೆ ಗ್ರಾಮ ಪಂಚಾಯತ್ ವತಿಯಿಂದ ನಡೆಸಿದ ತೆರವು ಕಾರ್ಯಾಚರಣೆ ವೇಳೆ ಉದ್ವಿಗ್ನ ಪರಿಸ್ಥಿತಿ…

Read More

ಹಸಿರುಮಕ್ಕಿ ಸೇತುವೆ ಇನ್ನೂ ಮೂರು ತಿಂಗಳಲ್ಲಿ ಸಿಎಂ ಸಿದ್ದರಾಮಯ್ಯರಿಂದ ಉದ್ಘಾಟನೆ – ಶಾಸಕ ಬೇಳೂರು

ಹಸಿರುಮಕ್ಕಿ ಸೇತುವೆ ಇನ್ನೂ ಮೂರು ತಿಂಗಳಲ್ಲಿ ಸಿಎಂ ಸಿದ್ದರಾಮಯ್ಯರಿಂದ ಉದ್ಘಾಟನೆ – ಶಾಸಕ ಬೇಳೂರು ನಿಟ್ಟೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ | ನಿಟ್ಟೂರು : ಬಹುದಿನಗಳಿಂದ ಸ್ಥಳೀಯರ ನಿರೀಕ್ಷೆಯಲ್ಲಿದ್ದ ಹಸಿರುಮಕ್ಕಿ ಸೇತುವೆ ಕಾಮಗಾರಿ ಇನ್ನೇನು ಮೂರು ತಿಂಗಳಲ್ಲಿ ಪೂರ್ಣಗೊಳ್ಳಲಿದ್ದು, ಕರ್ನಾಟಕದ ಜನಪ್ರಿಯ ಮುಖ್ಯಮಂತ್ರಿ ಸಿದ್ದರಾಮಯ್ಯರ ಕೈಗಳಿಂದ ಸೇತುವೆ ಉದ್ಘಾಟನೆ ನಡೆಯಲಿದೆ ಎಂದು ಸಾಗರ–ಹೊಸನಗರ ಕ್ಷೇತ್ರದ ಶಾಸಕ ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ತಿಳಿಸಿದ್ದಾರೆ. ನಿಟ್ಟೂರು ಕಾಂಗ್ರೆಸ್ ಘಟಕದ ಕಾರ್ಯಕರ್ತರ…

Read More

ರಾಜ್ಯ ಮಹಿಳಾ ಕ್ರಿಕೆಟ್ ತಂಡಕ್ಕೆ ಮಲೆನಾಡಿನ ಪ್ರತಿಭೆ ಅದಿತಿ ರಾಜೇಶ್ ಆಯ್ಕೆ|cricket

ಶಿವಮೊಗ್ಗ : ಜಿಲ್ಲೆಯ ಪ್ರತಿಭಾನ್ವಿತ ಕ್ರಿಕೆಟ್‌ ಆಟಗಾರ್ತಿ ಅದಿತಿ ರಾಜೇಶ್ ಅವರು ಕರ್ನಾಟಕ ಮಹಿಳಾ ಕ್ರಿಕೆಟ್​ ತಂಡದಲ್ಲಿ ಅವಕಾಶ ಪಡೆದಿದ್ದಾರೆ. ಜನವರಿ 18ರಿಂದ 28ರವರೆಗೆ ಮುಂಬೈನಲ್ಲಿ ಟೂರ್ನಿ ನಡೆಯಲಿದೆ. ಭಾರತೀಯ ಮಹಿಳಾ ಕ್ರಿಕೆಟ್​ ತಂಡದ ಆಟಗಾರ್ತಿ ವೇದಾ ಕೃಷ್ಣಮೂರ್ತಿ ರಾಜ್ಯ ಹಿರಿಯ ಮಹಿಳಾ ತಂಡ ಮುನ್ನಡೆಸುತ್ತಿದ್ದು, ಅದಿತಿ ರಾಜೇಶ್‌ ಈ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಶಿವಮೊಗ್ಗದ ಸಹ್ಯಾದ್ರಿ ಕ್ರಿಕೆಟ್ ಕೋಚಿಂಗ್ ಸೆಂಟರ್​ನಲ್ಲಿ ಕೋಚ್ ನಾಗರಾಜ್ ಅವರಿಂದ ಅದಿತಿ ತರಬೇತಿ ಪಡೆದಿದ್ದಾರೆ. ಅದಿತಿ ರಾಜೇಶ್ ಅಂತಿಮ ವರ್ಷದ ಬಿ.ಕಾಂ…

Read More

ಹೊಸನಗರ ಎಪಿಎಂಸಿ ವಿಲೀನ ಪ್ರಕ್ರಿಯೆ ಕೈ ಬಿಡಲಾಗಿದೆ : ಶಾಸಕ ಹರತಾಳು ಹಾಲಪ್ಪ ಸ್ಪಷ್ಟನೆ

ಹೊಸನಗರ ಎಪಿಎಂಸಿ ಮಾರುಕಟ್ಟೆಯನ್ನು ಸಾಗರ ಎಪಿಎಂಸಿಯೊಂದಿಗೆ ಸಂಯೋಜಿಸಿರುವ ಪ್ರಕ್ರೀಯೆಯನ್ನು ಕೈ ಬಿಡಲಾಗಿದೆ ಎಂದು ಶಾಸಕ ಹರತಾಳು ಹಾಲಪ್ಪ ಸ್ಪಷ್ಟನೆ ನೀಡಿದ್ದಾರೆ. ಸಾಗರ – ಹೊಸನಗರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯನ್ನು ಒಟ್ಟುಗೂಡಿಸುವ ಕುರಿತು ಸಾರ್ವಜನಿಕರಿಂದ ಆಕ್ಷೇಪಣೆಗಳು ಬಂದ ಕಾರಣ  ಸರ್ಕಾರದೊಂದಿಗೆ ಚರ್ಚಿಸಿ ಪ್ರಸ್ತಾವನೆಯನ್ನು ಕೈಬಿಡುವಂತೆ ಕೋರಲಾಗಿತ್ತು ಈ ಹಿನ್ನಲೆಯಲ್ಲಿ ಸದರಿ ಪ್ರಸ್ತಾವನೆಯನ್ನು ಕೈಬಿಡಲು ಸರ್ಕಾರದಿಂದ ಸಮ್ಮತಿ ದೊರೆತಿದ್ದು, ಈ ಹಿಂದಿನಂತೆಯೆ ಸಾಗರ ಮತ್ತು ಹೊಸನಗರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳು ಕರ್ತವ್ಯ ನಿರ್ವಹಿಸುತ್ತವೆ ಹಾಗು ಕೃಷಿ ಉತ್ಪನ್ನ…

Read More