Headlines

ಪೊಲೀಸರ ಮೇಲಿನ ಕೋಪಕ್ಕೆ ವಿಧಾನಸೌಧದ ಮುಂಭಾಗದಲ್ಲಿ ಬೈಕ್ ಗೆ ಬೆಂಕಿ ಹಚ್ಚಿದ ಯುವಕ

ಪೊಲೀಸರ ಮೇಲಿನ ಕೋಪಕ್ಕೆ ವಿಧಾನಸೌಧದ ಮುಂಭಾಗದಲ್ಲಿ ಬೈಕ್ ಗೆ ಬೆಂಕಿ ಹಚ್ಚಿದ ಯುವಕ ದೂರು ಸಲ್ಲಿಸಲು ತೆರಳಿದ್ದ ತನ್ನ ತಾಯಿಗೆ ಪೊಲೀಸರು ಬೈದಿದ್ದಾರೆ ಎಂಬ ಕೋಪಕ್ಕೆ ತನ್ನ ಬೈಕ್‌ಗೆ ಯುವಕನೊಬ್ಬ ಬೆಂಕಿ ಹಚ್ಚಿರುವ ಘಟನೆ ಬೆಂಗಳೂರಿನ ವಿಧಾನಸೌಧದ ಬಳಿ ನಡೆದಿದೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ಮೂಲದ ಪೃಥ್ವಿರಾಜ್ ಎಂಬಾತ ಕೃತ್ಯವೆಸಗಿದ್ದಾನೆ. ಬೆಂಗಳೂರಿನ ವಿಧಾನಸೌಧ ಹಾಗು ಹೈಕೋರ್ಟ್ ನಡುವಿನ ರಸ್ತೆಯಲ್ಲಿ ಬೈಕ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾನೆ. ಬೆಂಕಿ ಹಚ್ಚಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರೋ ಪೃಥ್ವಿರಾಜ್ ನಾನು…

Read More

ನಾಳೆ ಶಿವಮೊಗ್ಗ’ಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ: ಹೀಗಿದೆ ಕಾರ್ಯಕ್ರಮದ ವಿವರ..!!|MODI

ನಾಳೆ ಶಿವಮೊಗ್ಗ’ಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ: ಹೀಗಿದೆ ಕಾರ್ಯಕ್ರಮದ ವಿವರ..!! ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇದೇ 18ರಂದು ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಶಿವಮೊಗ್ಗದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ವಿಧಾನಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಅವರು, ಯುವಕರು, ಮಹಿಳೆಯರು, ರೈತರು ಸೇರಿ ಸುಮಾರು 2.5 ಲಕ್ಷಕ್ಕೂ ಹೆಚ್ಚು ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಬಿಜೆಪಿ ಮುಖಂಡರು ಮತ್ತು ಜೆಡಿಎಸ್ ಮುಖಂಡರು ಈ ಕಾರ್ಯಕ್ರಮದ…

Read More

ನಟ, ರಂಗಕರ್ಮಿ, ಸಮಾಜ ಸೇವಕ ಯೇಸುಪ್ರಕಾಶ್ (ಹೆಗ್ಗೋಡು ಪ್ರಕಾಶ್) ಇನ್ನಿಲ್ಲ !!! | Yesu Prakash

ನಟ, ರಂಗಕರ್ಮಿ, ಸಮಾಜ ಸೇವಕ ಯೇಸುಪ್ರಕಾಶ್ (ಹೆಗ್ಗೋಡು ಪ್ರಕಾಶ್) ಇನ್ನಿಲ್ಲ ! ಹೊಸನಗರ : ಸಿನಿಮಾ ರಂಗದಲ್ಲಿ ತಮ್ಮದೇ ಚಾಪು ಮೂಡಿಸಿ 35ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದ ನಟ, ರಂಗಕರ್ಮಿ, ಸಮಾಜ ಸೇವಕರಾಗಿ ತಮ್ಮ ಸೇವೆ ಮೂಲಕ ಜನ ಮಾನಸದಲ್ಲಿ ನೆಲೆಸಿದ್ದ, ಸಾರ ಸಂಸ್ಥೆಯ ಸಹಯೋಗದಲ್ಲಿ 20ಕ್ಕೂ ಹೆಚ್ಚು ಕೆರೆಗಳನ್ನು ನಿರ್ಮಿಸಿ ಆಧುನಿಕ ಭಗೀರಥ ಎನಿಸಿಕೊಂಡಿದ್ದ ಪುರಪ್ಪೆಮನೆ ಗ್ರಾಪಂ ವ್ಯಾಪ್ತಿಯ ಕಲ್ಲುಕೊಪ್ಪ ನಿವಾಸಿ ಯೇಸುಪ್ರಕಾಶ್ (58) ಇಂದು ಸಂಜೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಕಳೆದ…

Read More

ಮದುವೆ ವಿವಾದ – ಇಬ್ಬರು ಯುವಕರಿಗೆ ಚೂರಿ ಇರಿತ

ಮದುವೆ ವಿವಾದ – ಇಬ್ಬರು ಯುವಕರಿಗೆ ಚೂರಿ ಇರಿತ ಶಿವಮೊಗ್ಗ ನಗರದಲ್ಲಿನ ಊರುಗಡೂರು ಬಡಾವಣೆಯಲ್ಲಿ ನಡೆದ ವೈಯಕ್ತಿಕ ಗಲಾಟೆ ಎರಡು ಕುಟುಂಬಗಳ ನಡುವೆ ಭೀಕರ ರೂಪ ಪಡೆದು, ಇಬ್ಬರು ಯುವಕರು ಮಾರಕಾಸ್ತ್ರದ ಇರಿತಕ್ಕೊಳಗಾಗಿರುವ ಘಟನೆ ನಡೆದಿದೆ. ಗಾಯಗೊಂಡ ಶಬ್ಬೀರ್ ಹಾಗೂ ಶಹಬಾಜ್ ಎಂಬವರನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ. ಘಟನೆ ಕುರಿತು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ. ಮಿಥುನ್ ಕುಮಾರ್ ಮಾಧ್ಯಮಗಳಿಗೆ ವಾಟ್ಸಪ್ ಮೂಲಕ ಮಾಹಿತಿ ನೀಡಿ, “ಇದು ಸಂಪೂರ್ಣವಾಗಿ…

Read More

ಅಡಿಕೆ ಸಸಿಗಳನ್ನು ನಾಶಗೊಳಿಸಿದ ಅರಣ್ಯಾಧಿಕಾರಿಗಳು ,ರೈತರ ಆಕ್ರೋಶ – ಸ್ಥಳಕ್ಕೆ ಆರಗ ಜ್ಞಾನೇಂದ್ರ ಭೇಟಿ

ಹೆದ್ದಾರಿಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕೊಳವಳ್ಳಿ ಗ್ರಾಮದ ಸ.ನಂ. 30 ರಲ್ಲಿನ ಆರಣ್ಯ ಪ್ರದೇಶದಲ್ಲಿ ಸುಮಾರು 50-60 ವರ್ಷಗಳಿಂದ ಸ್ವಾದೀನಾನುಭವದಲ್ಲಿ ಜಮೀನು ಸಾಗುವಳಿ ಮಾಡುತ್ತಿರುವ ರೈತರ ಜಮೀನಿನಲ್ಲಿ ಅಡಿಕೆ ಸಸಿಗಳನ್ನು ತಿಳಿವಳಿಕೆ ನೀಡದೆ ಏಕಾಏಕಿ ನಾಶಗೊಳಿಸುವ ಮೂಲಕ ಅರಣ್ಯ ಇಲಾಖೆ ಅಧಿಕಾರಿಗಳು ಒಕ್ಕಲೆಬ್ಬಿಸುವ ಹುನ್ನಾರ ನಡೆಸಿದ್ದಾರೆಂದು ಶಾಸಕ ಅರಗ ಜ್ಞಾನೇಂದ್ರ ಆರೋಪಿಸಿದರು. ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಕೊಳವಳ್ಳಿ ಗ್ರಾಮದ ಸರ್ವೇ ನಂ 30 ರಲ್ಲಿ ಅರಣ್ಯ ಇಲಾಖೆಯವರು ಅಡಿಕೆ ಸಸಿಗಳನ್ನು ಕಿತ್ತು, ಕಡಿದು ಹಾಕಿದ ಸ್ಥಳಕ್ಕೆ ಭೇಟಿ…

Read More

ವೃಕ್ಷಮಾತೆ ತಿಮ್ಮಕ್ಕ ಸ್ಮರಣೆಗೆ ಶಿಗ್ಗಾವಿಯಲ್ಲಿ ಸಸಿ ನೆಡುವ ಮೂಲಕ ಗೌರವ

ಹಾವೇರಿ: ಜಿಲ್ಲೆಯ ಶಿಗ್ಗಾವಿಯಲ್ಲಿ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರ ನಿಧನದ ಸಂದರ್ಭದಲ್ಲಿ, ಶಿಗ್ಗಾವಿ ನಗರದಲ್ಲಿರುವ ಶಬರಿಗಿರಿ ವೈಷ್ಣವಿ ಉದ್ಯಾನವನದಲ್ಲಿ ಅವರ ಸ್ಮರಣಾರ್ಥವಾಗಿ ಸಸಿಗಳನ್ನು ನೆಡುವ ಮೂಲಕ ವಿಶೇಷ ಗೌರವ ಸಲ್ಲಿಸಲಾಯಿತು. ನಂತರ ಮೌನಾಚರಣೆ ನಡೆಸಿ ತಿಮ್ಮಕ್ಕ ಅವರ ಅಗಲಿಕೆಗೆ ಸಂತಾಪ ಸೂಚಿಸಲಾಯಿತು. ಕಾರ್ಯಕ್ರಮದಲ್ಲಿ ಶಬರಿಗಿರಿ ವೈಷ್ಣವಿ ಬಡಾವಣೆಯ ವೈ.ಎಸ್. ಪಾಟೀಲ್, ಮಲ್ಲಪ್ಪ ಚಕ್ರಸಾಲಿ, ಚನ್ನಪ್ಪ ನೆಲೋಗಲ್, ಶಿವಲಿಂಗಪ್ಪ ಹುರಳಿ, ಬಸವರಾಜ್ ಬಸರಿಕಟ್ಟಿ ಹಾಗೂ ರಾಜ್ ಡಾನ್ಸ್ ಸ್ಕೂಲಿನ ಮಕ್ಕಳು ಸೇರಿದಂತೆ ಅನೇಕರು ಭಾಗಿಯಾಗಿದ್ದರು. ವರದಿ : ನಿಂಗರಾಜ್…

Read More

ಹೊಸನಗರ : ಕ್ಷುಲ್ಲಕ ವಿಚಾರಕ್ಕೆ ಸ್ನೇಹಿತರ ನಡುವೆ ಜಗಳ – ಸ್ನೇಹಿತನ ತಲೆಗೆ ಬಿಯರ್ ಬಾಟಲ್ ನಿಂದ ಹಲ್ಲೆ :

ಹೊಸನಗರ : ಕ್ಷುಲ್ಲಕ ವಿಚಾರಕ್ಕೆ ಸ್ನೇಹಿತರು ಜಗಳವಾಡಿಕೊಂಡು ಒಬ್ಬನ ತಲೆಗೆ ಬಿಯರ್ ಬಾಟಲ್ ನಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ. ನಾಗರಾಜ್ ಎಂಬ ಯುವಕನ ಮೇಲೆ ಬಿಯರ್ ಬಾಟಲಿಯಿಂದ ಹೊಡೆದು ಹಲ್ಲೆ ನಡೆಸಲಾಗಿದೆ. ಕ್ಷುಲ್ಲಕ ಕಾರಣಕ್ಕೆ ತಮ್ಮ ತಮ್ಮಲ್ಲಿಯೇ ಜಗಳವಾಡಿಕೊಂಡು ಬಿಯರ್ ಬಾಟಲಿಯಿಂದ ಹಲ್ಲೆ ನಡೆಸಲಾಗಿದೆ.ಗಾಯಾಳುವನ್ನು ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಗರಾಜ್ ಹೊಸನಗರ ಬಸ್ ನಿಲ್ದಾಣದ ಬಳಿಯಿರುವ ಕೋರಿಯರ್ ಕಚೇರಿಯಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿರುತ್ತಾನೆ. ಆ. 24 ರಂದು ಹೊಸನಗರ ಟೌನ್…

Read More

ಅನೈತಿಕ ಸಂಬಂಧ – ಪತ್ನಿ ಹಾಗೂ ಪ್ರಿಯಕರನನ್ನು ಕೊಂದು ಪೊಲೀಸರಿಗೆ ಶರಣಾದ ಪತಿ

ಅನೈತಿಕ ಸಂಬಂಧ – ಪತ್ನಿ ಹಾಗೂ ಪ್ರಿಯಕರನನ್ನು ಕೊಂದು ಪೊಲೀಸರಿಗೆ ಶರಣಾದ ಪತಿ ಅನೈತಿಕ ಸಂಬಂಧ – ಪತ್ನಿ ಹಾಗೂ ಪ್ರಿಯಕರನನ್ನು ಕೊಂದು ಪೊಲೀಸರಿಗೆ ಶರಣಾದ ಪತಿ ವ್ಯಕ್ತಿಯೊಬ್ಬ ಅಕ್ರಮ ಸಂಬಂಧ ಹೊಂದಿರುವ ಶಂಕೆಯಿಂದ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಗುರುವಾರ ರಾತ್ರಿ ಕೊಲೆ ಮಾಡಿ ಪೊಲೀಸರಿಗೆ ಶರಣಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಮಾದನ ಹಿಪ್ಪರಗಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸೃಷ್ಟಿ ಶ್ರೀಮಂತ ಭಕರೆ (21), ಆಕೆಯ ಪ್ರಿಯಕರ ಖಾಜಪ್ಪ ದುರ್ಗಪ್ಪ ಗಾಡಿವಡ್ಡರ (23)…

Read More

ಅಧಿಕಾರಿಗಳು ಶಾಸಕರ ಕೈಗೊಂಬೆಯಾಗಿ ಕೆಲಸ ಮಾಡಿದರೆ ತಮ್ಮ ಕಛೇರಿ ಮುಂದೆ ಧರಣಿ ನಡೆಸಲಾಗುವುದು ; ಹರತಾಳು ಹಾಲಪ್ಪ ಎಚ್ಚರಿಕೆ

ಅಧಿಕಾರಿಗಳು ಶಾಸಕರ ಕೈಗೊಂಬೆಯಾಗಿ ಕೆಲಸ ಮಾಡಿದರೆ ತಮ್ಮ ಕಛೇರಿ ಮುಂದೆ ಧರಣಿ ನಡೆಸಲಾಗುವುದು ; ಹರತಾಳು ಹಾಲಪ್ಪ ಎಚ್ಚರಿಕೆ ಹೊಸನಗರ ; ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸ್ಥಾಪನೆಗೊಂಡ ಬಳಿಕ ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿಯ ವಿಷಯದಲ್ಲಿ ಸಂಪೂರ್ಣ ವೈಫಲ್ಯ ಕಂಡುಬಂದಿದೆ. ಅದು ಅಲ್ಲದೇ ಹೊಸನಗರ ತಾಲ್ಲೂಕಿನ ಅಧಿಕಾರಿಗಳು ಶಾಸಕರ ಮತ್ತು ಅವರ ಹಿಂಬಾಲಕರ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದು ಬಡವರಿಗೆ, ರೈತರಿಗೆ ಹಾಗೂ ಬಿಜೆಪಿ ಕಾರ್ಯಕರ್ತರಿಗೆ ಹಿಂಸೆ ನೀಡುತ್ತಿದ್ದಾರೆ. ಇನ್ಮುಂದೆ ಶಾಸಕರ ಹಾಗೂ ಅವರ ಹಿಂಬಾಲಕರ ಆಟ ನಡೆಯುವುದಿಲ್ಲ…

Read More

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ KSRTC ಬಸ್ ಸೇವೆ ಪ್ರಾರಂಭ

ಶಿವಮೊಗ್ಗ ವಿಮಾನ ನಿಲ್ದಾಣದಿಂದ ಆ.31 ರಿಂದ ವಿಮಾನ ಹಾರಾಟ ಪ್ರಾರಂಭವಾಗಿದ್ದು, ವಿಮಾನ ನಿಲ್ದಾಣಕ್ಕೆ ಸಾರ್ವಜನಿಕ ಪ್ರಯಾಣಿಕರು ಪ್ರಯಾಣಿಸಲು ಅನುಕೂಲವಾಗುವಂತೆ ಕ.ರಾ.ರ.ಸಾ.ನಿಗಮವು ಶಿವಮೊಗ್ಗ-ವಿಮಾನ ನಿಲ್ದಾಣ- ಕಾಚಿನಕಟ್ಟೆಗೆ ನೂತನ ಸಾರಿಗೆ ಕಾರ್ಯಾಚರಣೆಯ ಸಮಯದ ವಿವರವನ್ನು ನೀಡಲಾಗಿದೆ. ಶಿವಮೊಗ್ಗದಿಂದ ಬೆ.8.30 ರಿಂದ ಪ್ರತಿ ಅರ್ಧ ಗಂಟೆಗೊಮ್ಮೆ ಹಾಗೂ ಕಾಚಿನಕಟ್ಟೆಯಿಂದ ಬೆ.9.00 ರಿಂದ ಪ್ರತಿ ಅರ್ಧ ಗಂಟೆಗೊಮ್ಮೆ ಸಂಜೆ 6.30 ವರೆಗೆ ಬಸ್‍ಗಳ ಓಡಾಟವಿರುತ್ತದೆ. ಸಾರ್ವಜನಿಕರು ಈ ಸೌಲಭ್ಯದ ಉಪಯೋಗ ಪಡೆದುಕೊಳ್ಳುವಂತೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಸಾರಿಗೆ ನಿಗಮದ ಹವಾ…

Read More