Headlines

ರಾಜಕೀಯ ನಾಯಕರು ಪಕ್ಷ ಕಟ್ಟೋ ಕೆಲಸ ಬಿಟ್ಟು – ಊರು ಕಟ್ಟೋ ಕೆಲಸ ಮಾಡಲಿ : ಜೆಡಿಎಸ್ ಯುವ ಮುಖಂಡ ಯಡೂರು ರಾಜಾರಾಮ್

ರಿಪ್ಪನ್‌ಪೇಟೆ: ರಾಜಕೀಯ ಎಂಬುದು ರಾಷ್ಟ್ರೀಯ ಪಕ್ಷಗಳಲ್ಲಿ ಕೇವಲ ವೈಟ್ ಕಾಲರ್ ನಾಯಕರಿಗೆ ಸೀಮಿತವಾಗಿದ್ದು, ಬರೀ ಪಕ್ಷ ಸಂಘಟನೆಯೇ ಇವರ ದ್ಯೇಯವಾಗಿದೆ. ಇದರಿಂದ ಊರು ಅಭಿವೃದ್ಧಿ ಕಾಣಲಿಲ್ಲ ಎಂದು ತೀರ್ಥಹಳ್ಳಿಯ ಮುಂದಿನ ವಿಧಾನ ಸಭಾ ಅಭ್ಯರ್ಥಿ ಎಂದು ಬಿಂಬಿತವಾಗಿರುವ ಜೆಡಿಎಸ್‌ ಯುವ ಮುಖಂಡ ಯಡೂರು ರಾಜಾರಾಮ್‌ ಅಸಮದಾನ ವ್ಯಕ್ತಪಡಿಸಿದರು. ಪಟ್ಟಣದಲ್ಲಿ ಕರೆದಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸಮಾಜವಾದದ ತವರು ಕ್ಷೇತ್ರ ತೀರ್ಥಹಳ್ಳಿಯಲ್ಲಿ ಸಮಾಜವಾದಿ ಚಿಂತಕ ಗೋಪಾಲಗೌಡ ರವರ ಹೆಸರು ದುರ್ಬಳಕೆ ಮಾಡಿಕೊಂಡು ಎಲ್ಲಾ ರಾಷ್ಟ್ರೀಯ ಪಕ್ಷದ ರಾಜಕಾರಣಿಗಳು ಅಧಿಕಾರದ…

Read More

ರಿಪ್ಪನ್ ಪೇಟೆ : ಪಟ್ಟಣದ ಹೃದಯ ಭಾಗದಲ್ಲಿ ಅನಾದಿ ಕಾಲದಿಂದ ಮೀಸಲಿಟ್ಟ ಜಾಗದಲ್ಲೆ ಬಸ್ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ :

ರಿಪ್ಪನ್ ಪೇಟೆ : ಪಟ್ಟಣದ ಬಹು ನಿರೀಕ್ಷಿತ ಬಸ್ ನಿಲ್ದಾಣಕ್ಕೆ ಸರ್ವೇ ನಂ  329 ರಲ್ಲಿ 1962 ರ ಸಾಲಿನಲ್ಲಿಯೇ ಮೀಸಲಿಟ್ಟು ಗ್ರಾಮ ಪಂಚಾಯತಿಯಲ್ಲಿ ನಿರ್ಣಯಿಸಲಾಗಿದೆ.ಬಸ್ ನಿಲ್ದಾಣದ ಸಂಬಂಧ ಅನೇಕ ಹೋರಾಟಗಳು ನಡೆದಿದ್ದು ಈ ಸಂಬಂಧ ಜಿಲ್ಲಾಧಿಕಾರಿಗಳಿಗೂ ಮನವಿ ಸಲ್ಲಿಸಲಾಗಿತ್ತು. ಈಗ ಗ್ರಾಮ ಪಂಚಾಯತ್ ಅನ್ಯ ಉದ್ದೇಶಗಳ ಬಳಕೆಗೆ ಈ ಸ್ಥಳದಲ್ಲಿ ಅವಕಾಶ ನೀಡದೇ ಪಟ್ಟಣದ ಹೃದಯ ಭಾಗದಲ್ಲೆ ಸುಸಜ್ಜಿತವಾದ ಬಸ್ ನಿಲ್ದಾಣ ನಿರ್ಮಾಣಕ್ಕೆ ಅನುವು ಮಾಡಿಕೊಡಬೇಕೆಂದು ಹೊಸನಗರ ತಾಲೂಕ್ ಜನಪರ ವೇದಿಕೆ ಅಧ್ಯಕ್ಷರಾದ ಆರ್ ಎನ್…

Read More

ಅಕ್ರಮ ಕಸಾಯಿಖಾನೆಯ ಮೇಲೆ ದಾಳಿ : 6 ಹಸುಗಳ ರಕ್ಷಣೆ

ಭದ್ರಾವತಿಯ ಬೊಮ್ಮನ್ ಕಟ್ಟೆಯ ತಿಮ್ಮಲಾಪುರ ರಸ್ತೆಯಲ್ಲಿರುವ ಕಸಾಯಿ ಖಾನೆ ಮೇಲೆ ಖಾಸಗಿ ಎನ್ ಜಿಒ(NGO) ಸ್ವಯಂ ಸೇವಕರೊಬ್ಬರು ದಾಳಿ ನಡೆಸಿದ್ದು ದಾಳಿಯಲ್ಲಿ 6 ಗೋವುಗಳನ್ನ ರಕ್ಷಿಸಲಾಗಿದೆ. ನಾಲ್ವರ ಮೇಲೆ ಎಫ್ಐಆರ್ ದಾಖಲಿಸಲಾಗಿದೆ. ಹಾಸನದ ಖಾಸಗಿ ಎನ್ ಜಿಒ(NGO) ದಲ್ಲಿ ಕೆಲಸ ಮಾಡುತ್ತಿರುವ ಸ್ವಯಂ ಸೇವಕ ತಿಮ್ಮರಾಜು ಎಂಬುವವರು ದಿಟ್ಟವಾಗಿ ಈ ಅಕ್ರಮ ಗೋ ಮಾಂಸ ಮಾರಾಟದ ಅಡ್ಡದ ಮೇಲೆ ದಾಳಿ ನಡೆಸಿ ಅಕ್ರಮವಾಗಿ ಗೋ ಮಾಂಸವನ್ನು ಮಾರಾಟ ಮಾಡುತಿದ್ದ ಮಳಿಗೆಯ ಮೇಲೆ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ…

Read More

ಬ್ಯಾಂಕ್–ಸರ್ಕಾರಿ ಕಚೇರಿಗಳಲ್ಲಿ ಕನ್ನಡ ಕಡ್ಡಾಯವಾಗಲಿ : ರೂಪೇಶ್ ರಾಜಣ್ಣ

ಬ್ಯಾಂಕ್–ಸರ್ಕಾರಿ ಕಚೇರಿಗಳಲ್ಲಿ ಕನ್ನಡ ಕಡ್ಡಾಯವಾಗಲಿ : ರೂಪೇಶ್ ರಾಜಣ್ಣ ಕಲಾ ಕೌಸ್ತುಭ ಕನ್ನಡ ರಾಜೋತ್ಸವದ ಸಮಾರೋಪ ಸಮಾರಂಭ ರಿಪ್ಪನ್‌ಪೇಟೆ: “ಕನ್ನಡ ನಮ್ಮ ಮಾತೃಭಾಷೆ ಮಾತ್ರವಲ್ಲ, ಭಾವನೆಗಳ ಅಭಿವ್ಯಕ್ತಿ. ಎರಡು ಸಾವಿರ ವರ್ಷಗಳ ಪಾರಂಪರ್ಯ ಹೊಂದಿರುವ ನಮ್ಮ ಕನ್ನಡ ಭಾಷೆ ಅತ್ಯಂತ ಪುರಾತನ,” ಎಂದು ರಾಜ್ಯ ಯುವ ಕರ್ನಾಟಕ ವೇದಿಕೆಯ ಸಂಸ್ಥಾಪಕ-ರಾಜ್ಯಾಧ್ಯಕ್ಷ ಹಾಗೂ ಕನ್ನಡಪರ ಹೋರಾಟಗಾರ, ಬಿಗ್ ಬಾಸ್ 9 ಫೈನಲಿಸ್ಟ್ ರೂಪೇಶ್ ರಾಜಣ್ಣ ಹೇಳಿದ್ದಾರೆ. ಕಲಾಕೌಸ್ತುಭ ಕನ್ನಡ ಸಂಘದ 32ನೇ ವಾರ್ಷಿಕೋತ್ಸವ ಹಾಗೂ 70ನೇ ಕನ್ನಡ ರಾಜ್ಯೋತ್ಸವ…

Read More

ಆಕ್ರಮ ಮರಳು ಸಾಗಾಟಕ್ಕೆ ದಿಟ್ಟ,ನಿರ್ದಾಕ್ಷಿಣ್ಯ ಕ್ರಮ:ವಿ ಎಸ್ ರಾಜೀವ್

ಹೊಸನಗರ :: ತಾಲ್ಲೂಕಿನಲ್ಲಿ ದಿನಂಪ್ರತಿ ಅಕ್ರಮ ಮರಳು ಸಾಗಾಟ ಹಾಗೂ ಆಕ್ರಮವಾಗಿ ಕಲ್ಲು ಕ್ವಾರಿಗಳ ಆರ್ಭಟ ಎಗ್ಗಿಲ್ಲದೆ ನಡೆಯುತ್ತಿದೆ. ಈ ಬಗ್ಗೆ ಸಾರ್ವಜನಿಕರು ದೂರುಗಳನ್ನು ನಮ್ಮ ಗಮನಕ್ಕೆ ತಂದಿದ್ದು,ಆಕ್ರಮಕ್ಕೆ ಕಡಿವಾಣ ಹಾಕುವ ಸಲುವಾಗಿ ಹೊಸನಗರ ತಾಲ್ಲೂಕಿನ ಹಲವು ಅಧಿಕಾರಿಗಳಿಗೆ ಅಕ್ರಮವಾಗಿ ಕಲ್ಲು,ಮರಳು ತುಂಬಿದ ವಾಹನಗಳನ್ನು ಪತ್ತೆಹಚ್ಚಿ ಪ್ರಕರಣ ದಾಖಲಿಸಲು ಹೊಸನಗರದ ತಹಶೀಲ್ದಾರ್ ವಿ.ಎಸ್ ರಾಜೀವ್‌ರವರು ತಾಲ್ಲೂಕಿನ ಅಧಿಕಾರಿಗಳಿಗೆ  ಸಂದೇಶ ರವಾನಿಸಿದ್ದಾರೆ. ಈ ಕುರಿತು ಹೊಸನಗರ ತಾಲೂಕು ಕಚೇರಿಯ ಸಭಾಂಗಣದಲ್ಲಿ ಮಾತನಾಡಿದ ತಹಶಿಲ್ದಾರವರು ಸಾರ್ವಜನಿಕರು ನಮ್ಮ ಅಧಿಕಾರಿಗಳ ಬಗ್ಗೆ…

Read More

ಸಂಸದರಿಗೆ ಸಹಕರಿಸುವ ಅಧಿಕಾರಿಗಳ ವರ್ಗಾವಣೆ – ಬಿಜೆಪಿ ಪರವಿರುವ ಅಧಿಕಾರಿಗಳೇ ನಮ್ಮ ಟಾರ್ಗೆಟ್ : ಶಾಸಕ ಬೇಳೂರು|smg

ಶಿವಮೊಗ್ಗ ನಗರದಲ್ಲಿ ನಡೆದ ನೂತನ ಸಚಿವ ಮಧು ಬಂಗಾರಪ್ಪರಿಗೆ ಸ್ವಾಗತ ಹಾಗೂ ಅಭಿನಂದನೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ರವರು ಜಿಲ್ಲೆಯಲ್ಲಿನ ಅಧಿಕಾರಿಗಳ ಪೈಕಿ ಕೆಲವರು ಬಿಜೆಪಿ ಮನಸ್ಥಿತಿಯವರು ಇದ್ದಾರೆ, ಅಂತವರನ್ನ ಕಿತ್ತುಹಾಕಬೇಕಿದೆ ಎಂದರು.  ಅಲ್ಲದೆ, ಜಿಲ್ಲೆಯಲ್ಲಿ ಸಂಸದರು ಹೇಳಿದ ಹಾಗೆ ಕೇಳುವ ಅವರಿಗೆ ಸಹಕಾರ ನೀಡುವ ಅಧಿಕಾರಿಗಳಿದ್ದು, ಈ ಹಿಂದೆ ಹಲವರು ಅವರ ಚೇಲಾಗಳ ರೀತಿಯಲ್ಲಿ ಕೆಲಸ ಮಾಡಿದ ಉದಾಹರಣೆಯಿದೆ, ಅಂತಹವರನ್ನ ವರ್ಗಾವಣೆ ಮಾಡಬೇಕಿದೆ ಎಂದರು.  ದರಿದ್ರ  ಬಿಜೆಪಿ ಸರ್ಕಾರವನ್ನು ಕಿತ್ತು…

Read More

ಆನಂದಪುರದ  ಕವನಾ ಡಬ್ಲುಎಚ್ಓ ವಿಜ್ಞಾನಿಯಾಗಿ ಆಯ್ಕೆ

ಆನಂದಪುರದ  ಕವನಾ ಡಬ್ಲುಎಚ್ಓ ವಿಜ್ಞಾನಿಯಾಗಿ ಆಯ್ಕೆ ಸಾಗರ : ತಾಲೂಕಿನ ಆನಂದಪುರ ಸಮೀಪದ ಹೊಸೂರು ಗ್ರಾಪಂ ವ್ಯಾಪ್ತಿಯ ನೇದರವಳ್ಳಿ ಗ್ರಾಮದ ಯುವ ವಿಜ್ಞಾನಿ ಕವನಶ್ರೀ ವಿಶ್ವ ಆರೋಗ್ಯ ಸಂಸ್ಥೆಯ (WHO) ವಿಜ್ಞಾನಿಯಾಗಿ ಆಯ್ಕೆಗೊಂಡಿದ್ದಾರೆ. ಕಳೆದ ಸೋಮವಾರ ಸ್ವಿಡರ್‌ಲೆಂಡ್‌ನ ಕೇಂದ್ರ ಕಚೇರಿಯಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಭಾರತದಿಂದ ಸ್ಪರ್ಧಾತ್ಮಕ ಪರೀಕ್ಷೆ ಬರೆದ 8 ಅಭ್ಯರ್ಥಿಗಳಲ್ಲಿ ಆಯ್ಕೆಯಾದ ಕವನಶ್ರೀ, ನೇದರವಳ್ಳಿಯ ಪ್ರಗತಿಪರ ಕೃಷಿಕ ಶುಂಠಿ ಮಂಜಪ್ಪ ಮತ್ತು ಜಯಲಕ್ಷ್ಮೀ ದಂಪತಿಗಳ ಪುತ್ರಿ.

Read More

Ripponpete | ಒಕ್ಕಲಿಗರ ಸಂಘದ ನಿರ್ದೇಶಕರ ಚುನಾವಣೆ – ಮತದಾರರಿಗೆ ಅಭಿನಂದನೆ

Ripponpete | ಒಕ್ಕಲಿಗರ ಸಂಘದ ನಿರ್ದೇಶಕರ ಚುನಾವಣೆ – ಮತದಾರರಿಗೆ ಅಭಿನಂದನೆ ಹೊಸನಗರ ತಾಲೂಕಿನ ಒಕ್ಕಲಿಗರ ಸಂಘದ ನಿರ್ದೇಶಕ ಸಂಘದ ಚುನಾವಣೆಯಲ್ಲಿ ಮತ ನೀಡಿ ಆಶೀರ್ವದಿಸಿ, ಹಾರೈಸಿದ ಎಲ್ಲಾ ಕುಲ ಭಾಂದವರಿಗೆ ಪರಾಜಿತ ಅಭ್ಯರ್ಥಿಗಳಾದ ರವೀಂದ್ರ ಕೆರೆಹಳ್ಳಿ ಹಾಗೂ ಹೆಚ್ ಎಸ್ ಕೃಷ್ಣಮೂರ್ತಿ ಹೃದಯಪೂರ್ವಕ ಧನ್ಯವಾದಗಳನ್ನು ತಿಳಿಸಿದ್ದಾರೆ. ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ ಮಾತನಾಡಿದ ಅವರು ಹೊಸನಗರ ತಾಲೂಕ್ ಒಕ್ಕಲಿಗರ ಸಂಘದ ಚುನಾವಣೆಯಲ್ಲಿ ಮತದಾರರು ಯಾವುದೇ ಹಣ ಹಾಗೂ ಬಾಡೂಟದ ಅಮಿಷಕ್ಕೆ ಒಳಗಾಗದೇ ಹೆಚ್ಚಿನ ಮತ ನೀಡುವ…

Read More

ಗೋಣಿ ಚೀಲದಲ್ಲಿ ಬಾಲಕಿಯ ಮೃತದೇಹ ಪತ್ತೆ | ಕೊಲೆಗೈದು ಚೀಲದಲ್ಲಿ ತುಂಬಿ ಕೆರೆಗೆ ಎಸೆದರಾ ಹಂತಕರು..!!??| dead body of the girl was found in a gunny bag

ಗೋಣಿ ಚೀಲದಲ್ಲಿ ಬಾಲಕಿಯ ಮೃತದೇಹ ಪತ್ತೆ | ಕೊಲೆಗೈದು ಚೀಲದಲ್ಲಿ ತುಂಬಿ ಕೆರೆಗೆ ಎಸೆದರಾ ಹಂತಕರು..!!?? ಬಾಲಕಿಯೊಬ್ಬಳ ಮೃತದೇಹವೊಂದು ಗೋಣಿಚೀಲದಲ್ಲಿ ಕಟ್ಟಿ ಬಿಸಾಕಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕಿನ ಕಲ್ಮನೆಯಲ್ಲಿ ನಡೆದಿದೆ. ಕಲ್ಮನೆ ಸಮೀಪದ ಕೊಪ್ಪದಕರೆಯಲ್ಲಿ ನಿನ್ನೆ ಸಂಜೆ ಅಂದರೆ ಭಾನುವಾರ ಸಾಯಂಕಾಲ ಈ ಘಟನೆ ಬೆಳಕಿಗೆ ಬಂದಿದೆ. ಕೊಲೆ ಮಾಡಿ ಬಾಲಕಿಯನ್ನು ಗೋಣಿಚೀಲದಲ್ಲಿ ತುಂಬಿ ಕೆರೆಗೆ ಎಸೆದಿರುವುವ ಸಾಧ್ಯತೆ ಇದೆ. ಪ್ರಕರಣ ಸೂಕ್ಷ್ಮವಾಗಿದ್ದು ಗಂಭೀರ ಸ್ವರೂಪ ಪಡೆದುಕೊ‍ಳ್ಳುವ ಸಾಧ್ಯತೆ ಇದೆ  ಇನ್ನೂ…

Read More

HOSANAGARA | ನಿಯಂತ್ರಣ ತಪ್ಪಿ ಧರೆಗೆ ಅಪ್ಪಳಿಸಿದ ಬೈಕ್ – ಓರ್ವ ಸಾವು

HOSANAGARA | ನಿಯಂತ್ರಣ ತಪ್ಪಿ ಧರೆಗೆ ಅಪ್ಪಳಿಸಿದ ಬೈಕ್ – ಓರ್ವ ಸಾವು ಹೊಸನಗರ ; ಸವಾರನ ನಿಯಂತ್ರಣ ತಪ್ಪಿ ಬೈಕಿನಿಂದ ಬಿದ್ದು ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಾಲೂಕಿನ ಸೊನಲೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೊಳಗಿ ಬಳಿ ಶನಿವಾರ ಸಂಭವಿಸಿದೆ. ಸೊನಲೆಯ ವಾಸಿ ಸುಮಂತ್ (30) ಸಾವನ್ನಪ್ಪಿದ ಯುವಕನಾಗಿದ್ದಾನೆ. ಸೊನಲೆಯಿಂದ ಹೊಸನಗರದ ಕಡೆಗೆ ಬರುತ್ತಿದ್ದ ವೇಳೆ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಧರೆಗೆ ಅಪ್ಪಳಿಸಿ ಈ ಘಟನೆ ನಡೆದಿದೆ. ಸುಮಂತ್ ನಾಗರಾಜ್ ಅವರ ಏಕಮಾತ್ರ…

Read More