ಕರ್ನಾಟಕದ ನೂತನ ಉಪ ಮುಖ್ಯಮಂತ್ರಿಗಳಾಗಿ ಆರ್ ಅಶೋಕ್,ಗೋವಿಂದ ಕಾರಜೋಳ, ಶ್ರೀರಾಮುಲು ಆಯ್ಕೆ:
ಬೆಂಗಳೂರು: ಮುಖ್ಯಮಂತ್ರಿ ಘೋಷಣೆ ಬಳಿಕ ಮೂವರು ಉಪಮುಖ್ಯಮಂತ್ರಿಗಳ ಹೆಸರು ಘೋಷಣೆ ಮಾಡಲಾಗಿದೆ. ಈ ಮೊದಲು ಕಂದಾಯ ಸಚಿವರಾಗಿದ್ದ ಹಾಗೂ ಯಡಿಯೂರಪ್ಪ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಆರ್. ಅಶೋಕ್, ಗೋವಿಂದ ಕಾರಜೋಳ ಮತ್ತು ಬಿ. ಶ್ರೀರಾಮುಲು ಉಪಮುಖ್ಯಮಂತ್ರಿಗಳಾಗಿ ನೇಮಕಗೊಂಡಿದ್ದಾರೆ. ಒಕ್ಕಲಿಗ, ದಲಿತ ಮತ್ತು ವಾಲ್ಮೀಕಿ ಸಮುದಾಯಕ್ಕೆ ಸೇರಿದ ನಾಯಕರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡಲಾಗಿದೆ. ನೂತನ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದಾರೆ. ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಅಧಿಕೃತ ಘೋಷಣೆ ಮಾಡಲಾಗಿದೆ. ಹೆಸರು ಘೋಷಣೆ ಬಳಿಕ ಬಸವರಾಜ ಬೊಮ್ಮಾಯಿ…