Headlines

ರಿಪ್ಪನ್‌ಪೇಟೆ : 396 ನೇ ಶಿವಾಜಿ ಜಯಂತಿ ಆಚರಣೆ

ರಿಪ್ಪನ್‌ಪೇಟೆ : ಛತ್ರಪತಿ ಶಿವಾಜಿ ಮಹಾರಾಜರ ವ್ಯಕ್ತಿತ್ವ ಭಾರತಕ್ಕೆ ಮಾತ್ರವಲ್ಲ ಇಡೀ ವಿಶ್ವಕ್ಕೆ ಮಾದರಿ. ಭಾರತೀಯರ ಕಣ ಕಣದಲ್ಲೂ ಶಿವಾಜಿಯ ಆದರ್ಶ ಗುಣಗಳು ಕರಗತವಾಗಬೇಕು. ಸಂಸ್ಕಾರಯುತ ಸಮಾಜದ ನಿರ್ಮಾಣದಲ್ಲಿ ಶಿವಾಜಿಯ ಹೋರಾಟದೊಂದಿಗೆ ಆತನಿಗೆ ಸ್ಫೂರ್ತಿ ನೀಡಿದ್ದ ತಾಯಿ ಜೀಜಾಬಾಯಿಯ ಕೊಡುಗೆಯೂ ಸ್ಮರಣೀಯ ಎಂದು ರಿಪ್ಪನ್‌ಪೇಟೆ ಮರಾಠ ಸಮಾಜದ ಅಧ್ಯಕ್ಷ ನಾಗೇಶ್ ಹೊಸಮನೆ ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಇಂದು ಪಟ್ಟಣದ ಸಾಗರ ರಸ್ತೆಯ ಶಿವಾಜಿ ಸರ್ಕಲ್  ನಡೆದ ಶಿವಾಜಿ ಜಯಂತಿ ಆಚರಣೆಯಲ್ಲಿ ಮಾತನಾಡಿ ಪರಕೀಯರ ಅಟ್ಟಹಾಸದಿಂದ ಭಾರತವನ್ನು ರಕ್ಷಿಸುವಲ್ಲಿ…

Read More

ರಿಪ್ಪನ್‌ಪೇಟೆಯ ಗವಟೂರಿನಲ್ಲಿ ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಮೆಗ್ಗಾನ್ ಗೆ ದಾಖಲು|ಸಮಯ ಪ್ರಜ್ಞೆ ಮೆರೆದ ರಿಪ್ಪನ್‌ಪೇಟೆ ಪಿಎಸ್‌ಐ|accident

ರಿಪ್ಪನ್‌ಪೇಟೆಯ ಗವಟೂರಿನಲ್ಲಿ ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಮೆಗ್ಗಾನ್ ಗೆ ದಾಖಲು|ಸಮಯ ಪ್ರಜ್ಞೆ ಮೆರೆದ ರಿಪ್ಪನ್‌ಪೇಟೆ ಪಿಎಸ್‌ಐ ಬೈಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಯುವಕನೊಬ್ಬ ಗಂಭೀರ ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯಲ್ಲಿ ನಡೆದಿದೆ. ಪಟ್ಟಣದ ಹೊಸನಗರ ರಸ್ತೆಯ ಶರ್ಮಣ್ಯಾವತಿ ನದಿಯ ಸೇತುವೆ ಬಳಿಯಲ್ಲಿ ರಿಪ್ಪನ್‌ಪೇಟೆ ಕಡೆಯಿಂದ ಹೊಸನಗರದ ಕಡೆಗೆ ತೆರಳುತಿದ್ದ  ಬೈಕ್ ಹಾಗೂ ಹೊಸನಗರ ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಬರುತಿದ್ದ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ….

Read More

ಸಹಜ ಸ್ಥಿತಿಯತ್ತ ಶಿವಮೊಗ್ಗ : 7 ಡ್ರೋಣ್ ಕ್ಯಾಮೆರಾ ಬಳಕೆ,ಬಿಗಿ ಪೊಲೀಸ್ ಭದ್ರತೆ :

ಕಳೆದ ನಾಲ್ಕು ದಿನಗಳಿಂದ ಉದ್ವಿಗ್ನಗೊಂಡಿದ್ದ ಶಿವಮೊಗ್ಗ ಶಾಂತವಾಗಿದ್ದು, ನಿಧಾನವಾಗಿ ಸಹಜಸ್ಥಿತಿಯತ್ತ ಮರಳುತ್ತಿದೆ.ಯುವಕ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದಲ್ಲಿ ಕಳೆದ ನಾಲ್ಕು ದಿನಗಳಿಂದಲೂ ಗಲಭೆ, ಗಲಾಟೆ, ವಾಹನಗಳಿಗೆ ಬೆಂಕಿ ಹಚ್ಚುವುದು, ಆಸ್ತಿಪಾಸ್ತಿ ನಷ್ಟ,ರಾಜಕೀಯ ಹೇಳಿಕೆಗಳಿಂದ ಹೈರಾಣಗೊಂಡಿದ್ದ ನಗರದ ಪರಿಸ್ಥಿತಿ ಈಗ ಹತೋಟಿಗೆ ಬಂದಿದೆ. ಆದರೂ ಕೂಡ ಕರ್ಫ್ಯೂವನ್ನು ಮತ್ತೆರಡು ದಿನಗಳ ಕಾಲ ಮುಂದುವರೆಸಿದ್ದು ಪೊಲೀಸ್ ಬಿಗಿಬಂದೋಬಸ್ತ್ ಹೆಚ್ಚಿಸಲಾಗಿದೆ. ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.ಕರ್ಫ್ಯೂ ವಿಧಿಸಿದ್ದರಿಂದ ಇಡೀ ಶಿವಮೊಗ್ಗ ನಗರದಲ್ಲಿ ವ್ಯಾಪಾರ ವಹಿವಾಟುಗಳುಸ್ಥಗಿತಗೊಂಡಿದ್ದವು. ಮೆಡಿಕಲ್ ಶಾಪ್,…

Read More

RIPPONPETE | ಚಾಲಕನ ನಿಯಂತ್ರಣ ತಪ್ಪಿ ಬೈಕ್ ಅಪಘಾತ – ಓರ್ವ ಸ್ಥಳದಲ್ಲಿಯೇ ಸಾವು

RIPPONPETE | ಚಾಲಕನ ನಿಯಂತ್ರಣ ತಪ್ಪಿ ಬೈಕ್ ಅಪಘಾತ – ಓರ್ವ ಸ್ಥಳದಲ್ಲಿಯೇ ಸಾವು ರಿಪ್ಪನ್ ಪೇಟೆ : ಕರು ತಪ್ಪಿಸಲು ಹೋಗಿ ಬೈಕ್ ಚಾಲಕನ ನಿಯಂತ್ರಣ ತಪ್ಪಿ ಲೈಟ್ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ರಿಪ್ಪನ್ ಪೇಟೆ ಸಮೀಪದ ಮೂಗೂಡ್ತಿಯಲ್ಲಿ ನಡೆದಿದೆ. ಮೂಗೂಡ್ತಿ ನಿವಾಸಿ ಅರುಣ್(38) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಮೂಗೂಡ್ತಿ ಅರಣ್ಯ ಇಲಾಖೆಯ ಕಛೇರಿ ಮುಂಭಾಗದಲ್ಲಿ ಎದುರಿಗೆ ಬಂದ ಕರುವನ್ನು ತಪ್ಪಿಸಲು ಹೋಗಿ ನಿಯಂತ್ರಣ ಕಳೆದುಕೊಂಡು ಲೈಟ್ ಕಂಬಕ್ಕೆ ಡಿಕ್ಕಿಯಾದ…

Read More

ಕೂರಂಬಳ್ಳಿ ಗ್ರಾಮದ ಅಬಕಾರಿ ನಿರೀಕ್ಷಕ ಗಿರೀಶ್ ರವರಿಗೆ ಮಾತೃವಿಯೋಗ :

ರಿಪ್ಪನ್ ಪೇಟೆ : ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂರಂಬಳ್ಳಿ ಗ್ರಾಮದ ಸೀತಮ್ಮ(64) ಇಂದು ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಪತಿ ಚೂಡಪ್ಪ ಮಕ್ಕಳಾದ ಕೆ ಸಿ ಗಿರೀಶ್ , ಅಬಕಾರಿ ನಿರೀಕ್ಷಕರು ಉಡುಪಿ. ಮತ್ತೋರ್ವ ಮಗ ಪ್ರಕಾಶ್ ಪುತ್ರಿ ಚೇತನಾ ಹಾಗೂ ಸಹೋದರ ಸಹೋದರಿಯರನ್ನು ಬಿಟ್ಟು ಅಗಲಿದ್ದಾರೆ  ಮೃತರ ಅಂತ್ಯಕ್ರಿಯೆಯು ನಾಳೆ ಬೆಳಿಗ್ಗೆ ಹನ್ನೊಂದು ಗಂಟೆಗೆ ಕೂರಂಬಳ್ಳಿ ಗ್ರಾಮದ ಸ್ವಗೃಹದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿದ್ದಾರೆ.

Read More

ತೀರ್ಥಹಳ್ಳಿ ತಾಲ್ಲೂಕಿನ ದರಲಗೋಡು “ನೆಸ್ಟ್ ಹೋಂ ಸ್ಟೇ” ಮೇಲೆ ದಾಳಿ : 9 ಜನರ ವಿರುದ್ಧ ಎಫ್ಐಆರ್‌ ದಾಖಲು !

ತೀರ್ಥಹಳ್ಳಿ : ತಾಲೂಕಿನ ದರಲಗೋಡಿನಲ್ಲಿರುವ  ನೆಸ್ಟ್ ಹೋಮ್ ಸ್ಟೇ‌ಯಲ್ಲಿ ಜೂಜಾಡುತ್ತಿದ್ದವರ ಮೇಲೆ ತೀರ್ಥಹಳ್ಳಿ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿ‌ಯಲ್ಲಿ 9 ಜನರಿದ್ದು ಅವರ ಮೊಬೈಲ್ ಮತ್ತು ಇಸ್ಪೀಟ್ ಆಟಕ್ಕೆ ಪಣವಾಗಿಟ್ಟಿದ್ದ 30,270 ರೂ. ಹಣವನ್ನ ವಶಕ್ಕೆ ತೆಗೆದುಕೊಳ್ಳಲಾಗಿದೆ.  ದರಲಗೋಡಿನ ನೆಸ್ಟ್ ಹೋಮ್ ಸ್ಟೇಯಲ್ಲಿ ಇಸ್ಪೀಟ್ ಆಟವಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ  ತೀರ್ಥಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ಸುಷ್ಮ ಅವರ ನೇತೃತ್ವದಲ್ಲಿ ಭಾನುವಾರ ಸಂಜೆ ದಾಳಿ ನಡೆಸಲಾಗಿದೆ. ಪರವಾನಗಿ ಇಲ್ಲದೆ ಇಸ್ಪೀಟ್ ಆಟವಾಡಲು ಅವಕಾಶ ಮಾಡಿಕೊಟ್ಟ ಕಾರಣ…

Read More

ಭಾರತ್ ಜೋಡೋ ಯಾತ್ರೆಯಲ್ಲಿ ಮೃತಪಟ್ಟಿದ್ದ ಸಾಗರದ ಕಾರ್ಯಕರ್ತನ ಮನೆಗೆ ಡಿ ಕೆ ಶಿವಕುಮಾರ್ ಭೇಟಿ – 10 ಲಕ್ಷ ನೆರವಿನ ಚೆಕ್ ವಿತರಣೆ|KPCC

ಭಾರತ್ ಜೋಡೋ ಯಾತ್ರೆಗೆ ತೆರಳಿದ್ದ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ತ್ಯಾಗರ್ತಿಯ ಕಾಂಗ್ರೆಸ್ ಕಾರ್ಯಕರ್ತನೊಬ್ಬ ಅಪಘಾತದಲ್ಲಿ ಮೃತಪಟ್ಟಿದ್ದರು.ಆ ಕಾರ್ಯಕರ್ತನ ಮನೆಗೆ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭೇಟಿ ನೀಡಿ, 10 ಲಕ್ಷ ನೆರವಿನ ಚೆಕ್ ವಿತರಿಸಿದರು. ಭಾರತ್ ಜೋಡೋ ಯಾತ್ರೆ ವೇಳೆ ಹಿರಿಯೂರು ಬಳಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ಕಾಂಗ್ರೆಸ್ ಕಾರ್ಯಕರ್ತ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ತ್ಯಾಗರ್ತಿ ಹೋಬಳಿ ಹುತ್ತದಿಂಬ ಗ್ರಾಮದ ರಮೇಶ್ ಅವರ ನಿವಾಸಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು…

Read More

ಜುಲೈ 19 ರಂದು ರಿಪ್ಪನ್ ಪೇಟೆ ರೋಟರಿ ಕ್ಲಬ್ ನ ಪದಗ್ರಹಣ ಸಮಾರಂಭ

ಜುಲೈ 19 ರಂದು ರಿಪ್ಪನ್ ಪೇಟೆ ರೋಟರಿ ಕ್ಲಬ್ ನ ಪದಗ್ರಹಣ ಸಮಾರಂಭ ಅಧ್ಯಕ್ಷರಾಗಿ A M ಕೃಷ್ಣರಾಜು ಕಾರ್ಯದರ್ಶಿಯಾಗಿ ರವೀಂದ್ರ ಬಲ್ಲಾಳ್ ಪದವಿ ಸ್ವೀಕಾರ ರಿಪ್ಪನ್‌ಪೇಟೆ ;-ಜುಲೈ ೧೯ ರಂದು ಶನಿವಾರ ಸಂಜೆ   ಪಟ್ಟಣದ ವಿಶ್ವಮಾನವ ಸಭಾಭವನದಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ.ಹಾಗೂ ಪದವಿ ಕಾಲೇಜ್‌ನಲ್ಲಿ ವ್ಯಾಸಂಗ ಮಾಡಿಅತಿ ಹೆಚ್ಚು ಆಂಕಗಳಿಸಿ ತೇರ್ಗಡೆಯಾದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾಪುರಸ್ಕಾರ ಹಾಗೂ ೨೦೨೫-೨೬ ನೇ ಸಾಲಿನ ನೂತನರೋಟರಿಕ್ಲಬ್ ಪದವಿ ಸ್ವೀಕಾರ ಸಮಾರಂಭವನ್ನು ಏರ್ಪಡಿಸಲಾಗಿದೆ ಎಂದು ನೂತನ ಅಧ್ಯಕ್ಷ.ಎ.ಎಂ.ಕೃಷ್ಣರಾಜು ತಿಳಿಸಿದರು. ಪಟ್ಟಣದ…

Read More

ಖಾತೆ ಬದಲಾವಣೆಗೆ 25 ಸಾವಿರ ರೂ ಲಂಚ ಪಡೆಯುತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಿಗ (VA)

ಖಾತೆ ಬದಲಾವಣೆಗೆ 25 ಸಾವಿರ ರೂ ಲಂಚ ಪಡೆಯುತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಿಗ (VA) 25 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಗ್ರಾಮಲೆಕ್ಕಿಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಶಿವಮೊಗ್ಗ ಕಸಬಾ ಹೋಬಳಿ ಗ್ರಾಮ ಲೆಕ್ಕಿಗ ಸಂಜಯ್ ಮೋಹಿತೆ ಬಲೆಗೆ ಬಿದ್ದವರು. ಪೌತಿ ಖಾತೆ ಮಾಡಿಕೊಡಲು ಕಿರಣ್ ಎಂಬುವರಿಂದ 25 ಸಾವಿರ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ. ಕಿರಣ್ ಅವರ ಅಜ್ಜ ಮರಣ ಹೊಂದಿದ್ದು, ಅವರ ಹೆಸರಿನಲ್ಲಿರುವ 2 ಎಕರೆ…

Read More

ಮಟ್ಕಾ ಅಡ್ಡೆಗಳ ಮೇಲೆ ಪೊಲೀಸ್‌ ದಾಳಿ – ಇಬ್ಬರ ಬಂಧನ

ಮಟ್ಕಾ ಅಡ್ಡೆಗಳ ಮೇಲೆ ಪೊಲೀಸ್‌ ದಾಳಿ – ಇಬ್ಬರ ಬಂಧನ ಶಿವಮೊಗ್ಗ : ಜಿಲ್ಲೆಯ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಪಟ್ಟಣದಲ್ಲಿ ಅಕ್ರಮ ಮಟ್ಕಾ ದಂಧೆ ನಡೆಸುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಮಟ್ಕಾ ಅಡ್ಡೆಗಳ ಮೇಲೆ ದಾಳಿ ಶಿರಾಳಕೊಪ್ಪ ಪೊಲೀಸರು ಕಳೆದ ರಾತ್ರಿ ಹೆಚ್‌.ಕೆ. ರಸ್ತೆಯ ಹಳೆ ಪೆಟ್ರೋಲ್ ಬಂಕ್ ಸರ್ಕಲ್ ಹಾಗೂ ಆಂಜನೇಯ ಸ್ವಾಮಿ ದೇವಸ್ಥಾನ ಸರ್ಕಲ್ ಪ್ರದೇಶಗಳಲ್ಲಿ ದಾಳಿ ನಡೆಸಿದರು. ಈ ಸ್ಥಳಗಳಲ್ಲಿ ಮಟ್ಕಾ ಬರವಣಿಗೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಈ ಕಾರ್ಯಾಚರಣೆ…

Read More
Exit mobile version