ಸಮಾಜದಲ್ಲಿ ಶಾಂತಿ ಕದಡುವ ದುಷ್ಟ ಶಕ್ತಿಗಳ ವಿರುದ್ದ ಕಠಿಣ ಕಾನೂನು ಕ್ರಮ: ಆರಗ ಜ್ಞಾನೇಂದ್ರ
ರಿಪ್ಪನ್ ಪೇಟೆ: ಆರ್ಎಸ್ಎಸ್, ಬಿಎಸ್ವೈ, ಸಿಎಂ ನನ್ನ ಮೇಲೆ ಭರವಸೆ ಇಟ್ಟು ಗೃಹಖಾತೆ ಕೊಟ್ಟಿದ್ದಾರೆ ನನಗೆ ನೀಡಿರುವ ಸ್ಥಾನ ಮತ್ತು ಜವಾಬ್ದಾರಿಯನ್ನು ಬಳಸಿಕೊಂಡು ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ ಮಾಡುತ್ತೇನೆ ಎಂದು ನೂತನ ಗೃಹ ಸಚಿವರಾದ ಆರಗ ಜ್ಞಾನೇಂದ್ರ ಇಂದಿಲ್ಲಿ ಹೇಳಿದರು. ಅವರು ಇಂದು ಶಿಕಾರಿಪುರಕ್ಕೆ ತೆರಳುವ ಮಾರ್ಗದ ರಿಪ್ಪನ್ಪೇಟೆಯ ವಿನಾಯಕ ವೃತ್ತದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಶಾಂತಿ ಸೌಹಾರ್ದತೆಯಿಂದ ನಡೆದುಕೊಳ್ಳುವಂತೆ ಹೇಳಲಾಗಿದ್ದರೂ ಕೂಡಾ ಕೆಲವು ವ್ಯಕ್ತಿಗಳು ದೇಶದ್ರೋಹದ ಕೃತ್ಯದಲ್ಲಿ ತೊಡಗಿಕೊಂಡಿದ್ದು ಆಂತಹವರನ್ನು ಆರಂಭದಲ್ಲಿ ಚಿವುಟುವ ಕಾರ್ಯ…