ಪರಿಷತ್ ಚುನಾವಣೆ | ಶಿಕ್ಷಕರೇ ಹಣ ಹೆಂಡಕ್ಕೆ ಮತ ಮಾರಿಕೊಂಡು ಭ್ರಷ್ಟರಾಗಿ, ಸ್ವಾರ್ಥಿಯಾಗಿ, ನೈತಿಕವಾಗಿ ದಿವಾಳಿಯಾದರೆ ಈ ಜಗವ ಕಾಯುವವರಾರು..!!?? | VOTE FOR SALE

ಪರಿಷತ್ ಚುನಾವಣೆ | ಶಿಕ್ಷಕರೇ ಹಣ ಹೆಂಡಕ್ಕೆ ಮತ ಮಾರಿಕೊಂಡು ಭ್ರಷ್ಟರಾಗಿ, ಸ್ವಾರ್ಥಿಯಾಗಿ, ನೈತಿಕವಾಗಿ ದಿವಾಳಿಯಾದರೆ ಈ ಜಗವ ಕಾಯುವವರಾರು..!!?? ಒಂದು ರಾಷ್ಟ್ರದ ಗುಣಮಟ್ಟ ಅಲ್ಲಿನ ನಾಗರಿಕರ ಗುಣಮಟ್ಟದ ಮೇಲೆ ನಿರ್ಧಾರವಾದರೇ ನಾಗರಿಕರ ಗುಣಮಟ್ಟ ಶಿಕ್ಷಣದ ಗುಣಮಟ್ಟದ ಮೇಲೆ ಅವಲಂಬಿತವಾಗಿರುತ್ತದೆ. ಶಿಕ್ಷಣದ ಗುಣಮಟ್ಟ ಶಿಕ್ಷಕರ ಮೇಲೆ ಅವಲಂಬಿತವಾಗಿರುತ್ತದೆ. ಆದ್ದರಿಂದಲೇ ಶಿಕ್ಷಕರನ್ನು ‘ರಾಷ್ಟ್ರನಿರ್ಮಾಪಕರು ಎನ್ನಲಾಗುತ್ತದೆ. ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ಶಿಕ್ಷಕನಿಗೆ ದೇವರ ಸ್ಥಾನವನ್ನು (‘ಆಚಾರ್ಯ ದೇವೋ ಭವ’) ನೀಡಲಾಗಿದೆ. ಹಿಂದೂ ಶಾಸ್ತ್ರಗ್ರಂಥಗಳಲ್ಲಿ ಶಿಕ್ಷಕನು ವಿದ್ಯಾರ್ಥಿಗೆ ಎರಡನೇ ಜನ್ಮ ಕೊಡುತ್ತಾನೆಂಬ…

Read More

ಆರಗ ಜ್ಞಾನೇಂದ್ರ ರವರ ಮೇಲೆ ಪೊಲೀಸರು ಸುಮೋಟೋ ಕೇಸ್ ದಾಖಲಿಸಲಿ – ಆರ್ ಎಂ ಮಂಜುನಾಥ್ ಗೌಡ|RMM

ಆರಗ ಜ್ಞಾನೇಂದ್ರ ರವರ ಮೇಲೆ ಪೊಲೀಸರು ಸುಮೋಟೋ ಕೇಸ್ ದಾಖಲಿಸಲಿ – ಆರ್ ಎಂ ಮಂಜುನಾಥ್ ಗೌಡ ತೀರ್ಥಹಳ್ಳಿ : ಶಾಸಕರಾಗಿ ಅಥವಾ ಸಚಿವರಾದ ನಂತರ ಸಂವಿಧಾನದ ವಿಧಿ ವಿಧಾನಗಳಿಗೆ ಬದ್ಧವಾಗಿ ನಡೆದುಕೊಳ್ಳುತ್ತೇವೆ ಎಂದು ಪ್ರಮಾಣ ಮಾಡುತ್ತೇವೆ. ಆದರೆ ಇವರು ಸಂವಿಧಾನದ ವಿರುದ್ಧವಾಗಿ ಮಾತನಾಡಿದ್ದಾರೆ. ಎಲ್ಲವನ್ನು ಗೃಹ ಸಚಿವರಾದ ನಂತರ ಪ್ರಾರಂಭ ಮಾಡಿದ್ದರು. ಗೃಹ ಸಚಿವರಾದ ಸ್ವಲ್ಪ ದಿನದಲ್ಲೇ ಮೈಸೂರಿನ ಮಹಿಳೆಯೊಬ್ಬರ ಬಗ್ಗೆ ಮಾತನಾಡಿದ್ದರು. ಈಗ ರಾಷ್ಟ್ರ ಕಂಡಂತಹ ಎತ್ತರದ ಮನುಷ್ಯನ ಬಗ್ಗೆ  ವೈಯಕ್ತಿಕವಾಗಿ ನಿಂದನೆ ಮಾಡಿದ್ದಾರೆ…

Read More

ವಿಟಮಿನ್ ಎ ಡ್ರಾಪ್‌ನಿಂದ ಅಸ್ವಸ್ಥರಾಗಿದ್ದ 13 ಮಕ್ಕಳು ಚೇತರಿಕೆಯತ್ತ 

ವಿಟಮಿನ್ ಎ ಡ್ರಾಪ್‌ನಿಂದ ಅಸ್ವಸ್ಥರಾಗಿದ್ದ 13 ಮಕ್ಕಳು ಚೇತರಿಕೆಯತ್ತ  ಶಿವಮೊಗ್ಗ:  ವಿಟಮಿನ್ ಎ ಡ್ರಾಪ್ ಪಡೆದು ಅಸ್ವಸ್ಥರಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿರುವ ಹಿರೆಸಾನಿಯ ಅಂಗನವಾಡಿಯ ಎಲ್ಲಾ ೧೩ ಮಕ್ಕಳು ಚೇತರಿಸಿಕೊಂಡಿದ್ದು, ನಾಳೆ ಬಿಡುಗಡೆ ಆಗುವ ಸಾಧ್ಯತೆ ಇದೆ. ರಿಪ್ಪನ್‌ಪೇಟೆ ಸಮೀಪದ ಬೆಳ್ಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಹಿರೇಸಾನಿ ಗ್ರಾಮದ ೧೩ ಮಕ್ಕಳಿಗೆ ಗುರುವಾರ ಮಧ್ಯಾಹ್ನ ಇರುಳುಗಣ್ಣು ಮುಂಜಾಗ್ರತಾ ಕ್ರಮವಾಗಿ ವಿಟಮಿನ್ ಎ ಡ್ರಾಪ್ ಹಾಕಲಾಗಿತ್ತು. ನಂತರ ಸಂಜೆಯಿಂದ ೧೩ ಮಕ್ಕಳಲ್ಲಿ ಹೊಟ್ಟೆ ನೋವು, ವಾಂತಿ ಕಾಣಿಸಿಕೊಂಡಿದೆ. ಈ…

Read More

ವಿದ್ಯುತ್ ಪ್ರವಹಿಸಿ ಕಟ್ಟಡ ಕಾರ್ಮಿಕ ಸಾವು

ವಿದ್ಯುತ್ ಪ್ರವಹಿಸಿ ಕಟ್ಟಡ ಕಾರ್ಮಿಕ ಸಾವು ಆನಂದಪುರ ಸಮೀಪದ ಮಲಂದೂರಿನಲ್ಲಿ ಕಟ್ಟಡದ ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ವಿದ್ಯುತ್ ತಗುಲಿ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಶಿವಮೊಗ್ಗ ಪಟ್ಟಣದ ನಿವಾಸಿ ಕೃಷ್ಣಮೂರ್ತಿ (46) ಸಾವಿಗೀಡಾದವರು. ಮಲ್ಲಂದೂರಿನ ಸಂತೋಷ್ ಅಗ್ರೋ ಕಂಪನಿಯ ಕಟ್ಟಡ ನಿರ್ಮಾಣ ಕಾರ್ಯ ನಡೆಸುತಿದ್ದಾಗ ಏಕಾಏಕಿ ವಿದ್ಯುತ್ ಪ್ರವಹಿಸಿದೆ ತಕ್ಷಣ ಕಾರ್ಮಿಕರು ಅವರನ್ನು ಆನಂದಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಅಸುನೀಗಿದ್ದಾರೆ ಎಂದು ತಿಳಿದುಬಂದಿದೆ. ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More

ಹೊಸ ಶಿಕ್ಷಣ ನೀತಿಯನ್ನು ಸಾರ್ವಜನಿಕ ಚರ್ಚೆಗೆ ತಂದು ಜಾರಿಗೊಳಿಸಲಿ : ಕಿಮ್ಮನೆ ರತ್ನಾಕರ್

ಶಿವಮೊಗ್ಗ : ಕೇಂದ್ರ ಸರ್ಕಾರ ಜಾರಿಗೆ ತರುತ್ತಿರುವ ಹೊಸ ಶಿಕ್ಷಣ ನೀತಿಯನ್ನ ಸಾರ್ವಜನಿಕವಾಗಿ ಚರ್ಚಿಸಿ ನಂತರ ಜಾರಿಗೆ ತರಬೇಕೆಂದು ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ಆಗ್ರಹಿಸಿದ್ದಾರೆ. ಅವರು ಇಂದು ಶಿವಮೊಗ್ಗದ ಪ್ರೆಸ್ ಟ್ರಸ್ಟ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹೊಸ ಶಿಕ್ಷಣ ನೀತಿಯನ್ನ ಸಾರ್ವಜನಿಕವಾಗಿ ಚರ್ಚೆಗೆ ಬಿಟ್ಟು ಜಾರಿಗೊಳಿಸಬೇಕು ಇಲ್ಲವಾದಲ್ಲಿ ಇದು ಪ್ರಜಾಪ್ರಭುತ್ವ ವಿರೋಧಿ ನೀತಿ ಆಗಲಿದೆ ಎಂದರು. ಒಂದು ವರ್ಷ ತಡವಾಗಿಯಾದರೂ ಜಾರಿಗೆ ತಂದರೂ ಪರವಾಗಿಲ್ಲ. ಆದರೆ ಶಿಕ್ಷಣ ನೀತಿಯನ್ನ ಸಾರ್ವಜನಿಕ ಚರ್ಚೆಗೆ ತಂದು ಜಾರಿಗೊಳಿಸಬೇಕೆಂದು…

Read More

Ripponpete | ಭಾರಿ ಗಾಳಿ ಮಳೆಗೆ ಕೊಟ್ಟಿಗೆ ಕುಸಿದು ಎಮ್ಮೆ ಸಾವು

Ripponpete | ಭಾರಿ ಗಾಳಿ ಮಳೆಗೆ ಕೊಟ್ಟಿಗೆ ಕುಸಿದು ಎಮ್ಮೆ ಸಾವು  ಭಾರಿ ಮಳೆ ಮತ್ತು ಗಾಳಿಗೆ ಜಾನುವಾರು ಕೊಟ್ಟಿಗೆ ಕುಸಿದು ಬಿದ್ದು ಒಂದು ಎಮ್ಮೆ ಸಾವನ್ನಪ್ಪಿ ಇನ್ನೆರಡು ಎಮ್ಮೆಗಳಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯ ಕೆರೆಹಳ್ಳಿಯಲ್ಲಿ ನಡೆದಿದೆ.  ಕೆರೆಹಳ್ಳಿ ಗ್ರಾಮದ ಶಿವಾಜಿರಾವ್ ಎಂಬುವವರ ಮನೆಯ ಹಿಂಭಾಗದ ಕೊಟ್ಟಿಗೆ ಭಾರಿ ಮಳೆ ಗಾಳಿಗೆ ಕುಸಿದು ಬಿದ್ದು ಎಮ್ಮೆಯೊಂದು ಸಾವನ್ನಪೊಇರುವ ಘಟನೆ ನಡೆದಿದೆ.  ಶನಿವಾರ ಬೆಳಗಿನಜಾವ ನಾಲ್ಕು ಗಂಟೆಗೆ ಈ ಘಟನೆ ಸಂಭವಿಸಿದ್ದು…

Read More

ರಿಪ್ಪನ್‌ಪೇಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಯೋಗ ಚಾಂಪಿಯನ್ ಗರಿ| Yoga – champion

ರಿಪ್ಪನ್ ಪೇಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಯೋಗ ಚಾಂಪಿಯನ್ ರಿಪ್ಪನ್ ಪೇಟೆ : ಶಿವಮೊಗ್ಗ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಬಾಪೂಜಿನಗರ ಇವರ ಸಹಯೋಗದಲ್ಲಿ ನಡೆದ ಯೋಗ ಪಂದ್ಯಾವಳಿಯಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರಿಪ್ಪನ್‌ಪೇಟೆಯ ಯೋಗ ಪಟುಗಳು ಪುರುಷರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಮಹಿಳೆಯರ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಪಡೆದು, ಕಾಲೇಜಿಗೆ ಕೀರ್ತಿ ತಂದಿರುತ್ತಾರೆ.  ಪುರುಷರ ವಿಭಾಗದಲ್ಲಿ ತೃತೀಯ ಬಿಕಾಂ ತರಗತಿಯ ಆಕಾಶ್. ಕೆ. ಆರ್, ಮೊಹ್ಮದ್ ಮುಸ್ತಾಫ, ನಂದನ್‌ಕುಮಾರ್. ಇ, ಅಭಿಷೇಕ್. ಎನ್,…

Read More

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಸ್ಥಳದಲ್ಲಿಯೇ ಸಾವು,ಇಬ್ಬರು ಗಂಭೀರ |accident

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಸ್ಥಳದಲ್ಲಿಯೇ ಸಾವು,ಇಬ್ಬರು ಗಂಭೀರ |accident (Sagara-anandapura) ಸಾಗರ – ಆನಂದಪುರದ ಹೆದ್ದಾರಿಯಲ್ಲಿ ಮಾರುತಿ ಓಮ್ನಿ(omini) ಹಾಗೂ ಟಾಟಾ ಇಂಡಿಕಾ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಭದ್ರಾವತಿ ಗ್ರಾಮದ ಅಜಯ್ (21) ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಧೈವಿಯಾಗಿದ್ದಾರೆ.  ಉಳ್ಳೂರು ಸಮೀಪದ ಮಂಚಾಲೆ ಗ್ರಾಮದ ಸಮೀಪದಲ್ಲಿ ಈ ದುರ್ಘಟನೆ ನಡೆದಿದ್ದು ಸಾಗರದ ಟೌನ್ ನಿವಾಸಿ ಸೈಯದ್ ನೂರುಲ್ಲಾ ಎಂಬುವವನು ಉಳ್ಳೂರು ಗ್ರಾಮದ…

Read More

ರಿಪ್ಪನ್‌ಪೇಟೆ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಟ್ರಾಕ್ಟರ್ ಕಳ್ಳತನದ ಇಬ್ಬರು ಆರೋಪಿಗಳ ಬಂಧನ

ರಿಪ್ಪನ್‌ಪೇಟೆ :ಟ್ರ್ಯಾಕ್ಟರ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ರಿಪ್ಪನ್ ಪೇಟೆ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಮಂಗಳವಾರ ರಾತ್ರಿ ಇಬ್ಬರು ಅರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.  ಬಂಧಿತ ಅರೋಪಿಗಳು ಆನಂದಪುರದ ದಾಸನಕೊಪ್ಪ ವಾಸಿ ಸಂದೀಪ (30) ಹಾಗೂ ಟ್ರ್ಯಾಕ್ಟರ್‌ ಚಾಲಕ ಹಾವೇರಿ ಜಿಲ್ಲೆಯ ಗುಡ್ಡಪ್ಪ (28) ಎನ್ನಲಾಗಿದೆ.  ಶನಿವಾರದಂದು ಸಾಗರ ರಸ್ತೆಯ ವಡಗೆರೆಯ ವೆಂಕಪ್ಪ ಶೆಟ್ಟಿ ಅವರ ಮನೆಯ ಆವರಣದಲ್ಲಿ ನಿಲ್ಲಿಸಿದ್ದ ಟ್ರ್ಯಾಕ್ಟರ್ ಕಳ್ಳತನವಾಗಿತ್ತು.  ಈ ಪ್ರಕರಣದ ಪ್ರಮುಖ ಆರೋಪಿ ವಡಗೆರೆ –ಚಂದಾಳದಿಂಬದ ವಾಸಿ ಪ್ರತಾಪ್‌ಸಿಂಗ್‌ ಮಂಗಳವಾರ…

Read More

ರಿಪ್ಪನ್ ಪೇಟೆಯಲ್ಲಿ ವರಮಹಾಲಕ್ಷ್ಮಿ ಹಬ್ಬ ಸಂಭ್ರಮದಿಂದ ಆಚರಣೆ :

ರಿಪ್ಪನ್ ಪೇಟೆ : ಪಟ್ಟಣ ಸೇರಿದಂತೆ ಸುತ್ತಮುತ್ತ ಗ್ರಾಮಗಳಲ್ಲಿ ಇಂದು  ವರಮಹಾಲಕ್ಷ್ಮೀ ಹಬ್ಬವನ್ನು ಬಹಳ ಸಂಭ್ರಮದಿಂದ ಆಚರಿಸಲಾಯಿತು. ಭಾರಿ ಮಳೆ ಸುರಿಯುತ್ತಿದ್ದರು ಮಹಿಳೆಯರು ಬೆಳಿಗ್ಗೆಯಿಂದಲೇ  ದೇವಾಲಯಗಳಲ್ಲಿ ನಡೆದ ವಿಶೇಷ ಪೂಜೆಯಲ್ಲಿ ಭಾಗವಹಿಸಿದ್ದರು.  ಪಟ್ಟಣದ ಶ್ರೀ ಸಿದ್ಧಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ಮುಜರಾಯಿ ಇಲಾಖೆಯ ಆದೇಶದ ಅನ್ವಯ ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಬೆಳಿಗ್ಗೆ 10 ಗಂಟೆಯಿಂದ 11:30ರ ತನಕ ಮುತ್ತೈದೆಯರಿಗೆ ಅರಿಶಿನ–ಕುಂಕುಮ ನೀಡಲಾಯಿತು. ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇

Read More