ರೈತರ ಬದುಕು ಹಸನಾಗಿಸುವ ಕಾರ್ಯವನ್ನು ಕೃಷಿ ಇಲಾಖೆ ನಡೆಸಬೇಕು : ಶಾಸಕ ಹೆಚ್ ಹರತಾಳು ಹಾಲಪ್ಪ .
ಸಾಗರ: ರೈತರ ಬದುಕನ್ನು ಹಸನು ಗೊಳಿಸುವಂತಹ ಕಾರ್ಯವನ್ನು ಕೃಷಿ ಇಲಾಖೆಯ ಅಧಿಕಾರಿಗಳು ಹಾಗೂ ವಿಜ್ಞಾನಿಗಳು ನಡೆಸಬೇಕು.ಕೃಷಿ ಇಲಾಖೆಯ ಯೋಜನೆಗಳು ಕೇವಲ ಬಳಕೆಯಾಗದೆ ರೈತರಿಗೆ ಸದ್ಬಳಕೆಯಾಗುವಂತೆ ನೋಡಿಕೊಳ್ಳಬೇಕು ಎಂದು ಶಾಸಕರಾದ ಹರತಾಳು ಹಾಲಪ್ಪ ಹೇಳಿದರು. ಅವರು ಶಿವಮೊಗ್ಗ ಜಿಲ್ಲೆ ಸಾಗರದಲ್ಲಿ ಪ್ರಸಕ್ತ ವರ್ಷದ ಕೃಷಿ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ನಮ್ಮ ದೇಶದಲ್ಲಿ ರೈತ ದಿನದ ಹನ್ನೆರಡು ಗಂಟೆ ಕೆಲಸ ಮಾಡುತ್ತಾನೆ ಆದ್ದರಿಂದಲೇ ಭಾರತ ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬಿ ದೇಶವಾಗಿ ನೆರೆ ದೇಶಕ್ಕೆ ಆಹಾರ ಸಾಮಗ್ರಿಗಳನ್ನು ರಫ್ತು…