ಗಣಪತಿ ತರಲು ಹೊರಟ ವಾಹನ ಪಲ್ಟಿ – ಇಬ್ಬರು ಯುವಕರು ಸಾವು , ಇನ್ನಿಬ್ಬರು ಗಂಭೀರ

ಗಣಪತಿ ತರಲು ಹೊರಟ ವಾಹನ ಪಲ್ಟಿ – ಇಬ್ಬರು ಯುವಕರು ಸಾವು , ಇನ್ನಿಬ್ಬರು ಗಂಭೀರ ಗಣಪತಿ ತರಲು ಹೊರಟ  ವಾಹನವೊಂದು ಪಲ್ಟಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತರಿಕೆರೆ ತಾಲೂಕಿನಲ್ಲಿ ನಡೆದಿದೆ. ಗಣಪತಿ ಮೂರ್ತಿಯನ್ನು ತರಲು ಟಾಟಾ ಏಸ್ ವಾಹನದಲ್ಲಿ ಹೋಗುತ್ತಿದ್ದ ವೇಳೆ ವಾಹನ ಪಲ್ಟಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಾಪ್ಪಿದ್ದಾರೆ,ಗಾಯಗೊಂಡ ಇನ್ನಿಬ್ಬರು ಯುವಕರು ಶಿವಮೊಗ್ಗ ಮೆಗ್ಗಾನ್ ಗೆ ದಾಖಲಾಗಿದ್ದಾರೆ. ಇಂದು ಬೆಳಿಗ್ಗೆ ತರೀಕೆರೆ ತಾಲೂಕಿನ ಭೈರಾಪುರ ಗೇಟ್ ಬಳಿ ಈ ಘಟನೆ ನಡೆದಿದೆ….

Read More

ತೀರ್ಥಹಳ್ಳಿಯ ತುಂಗಾ ಸೇತುವೆಯ ಕೆಳಗೆ ವೃದ್ದೆಯ ಮೃತದೇಹ ಪತ್ತೆ|dead-body-found

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದ ತುಂಗಾ ಸೇತುವೆ ಕೆಳ ಭಾಗದಲ್ಲಿ ವೃದ್ದೆಯೊಬ್ಬರ ಮೃತದೇಹ ಪತ್ತೆಯಾಗಿದೆ. ವೃದ್ದೆಯು ಕಾಲು ಜಾರಿ ಕೆಳಗೆ ಬಿದ್ದು ಮೃತಪಟ್ಟಿರಬಹುದು ಎಂದು ಅಂದಾಜಿಸಲಾಗಿದೆ. ಡಾಕಮ್ಮ (80 ವರ್ಷ) ತಮ್ಮ ಮಗಳ ಮನೆಗೆ ಬಂದಿದ್ದರು ಎನ್ನಲಾಗುತ್ತಿದೆ. ತುಂಗಾ ಸೇತುವೆ ಸಮೀಪ ವೃದ್ದೆ ಯಾಕೆ ಬಂದರು ಎಂದು ತಿಳಿದು ಬಂದಿಲ್ಲ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ.ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕೊಟ್ಟಿಗೆಯಲ್ಲಿ ಅವಿತು ಕುಳಿತಿದ್ದ  12 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

ಕೊಟ್ಟಿಗೆಯಲ್ಲಿ ಅವಿತು ಕುಳಿತಿದ್ದ  12 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ ಹೊಸನಗರ : ರಾಮಚಂದ್ರಾಪುರ ಮತ್ತು ವಾರಂಬಳ್ಳಿ ಗ್ರಾಮದ ನಗರ ಅರಣ್ಯ ವ್ಯಾಪ್ತಿಯಲ್ಲಿ ಕೊಟ್ಟಿಗೆಯಲ್ಲಿ ಅಡಗಿದ್ದ 12 ಅಡಿ ಉದ್ದದ ಕಾಳಿಂಗ ಸರ್ಪವನ್ನು ಅರಣ್ಯ ಇಲಾಖೆಯವರು ಸೆರೆಹಿಡಿದು ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ. ಎರಡು ದಿನಗಳಿಂದ ವಾರಂಬಳ್ಳಿ ಗ್ರಾಮದ  ಈಶ್ವರಪ್ಪ ಎಂಬುವವರ ಮನೆಯಲ್ಲಿ ಕಾಳಿಂಗ ಸರ್ಪ ಇತ್ತು.  ಈ ಹಿನ್ನೆಲೆ ಈಶ್ವರಪ್ಪ ಕಾಳಿಂಗ ಸರ್ಪವನ್ನು ಹಿಡಿಯಲು ಉರಗ ತಜ್ಞ ಅಜಯ್​ಗಿರಿಯವರಿಗೆ ಕರೆ ಮಾಡಿದ್ದಾರೆ. ನಂತರ  ಅವರ ನೇತೃತ್ವದಲ್ಲಿ…

Read More

ಎಂಎಲ್ಸಿ ಚುನಾವಣೆ :: ಸಾರ್ವತ್ರಿಕ ಚುನಾವಣೆ ಮಾದರಿಯಲ್ಲಿ ನೀತಿ ಸಂಹಿತೆ ಕಟ್ಟುನಿಟ್ಟಿನಿಂದ ಜಾರಿ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

ಶಿವಮೊಗ್ಗ : ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್ ಸದಸ್ಯರ ದ್ವೈ ವಾರ್ಷಿಕ ಚುನಾವಣೆಯಲ್ಲಿ ಸಾರ್ವತ್ರಿಕ ಮತದಾನ ರೀತಿಯಲ್ಲಿ ಮಾದರಿ ನೀತಿ ಸಂಹಿತೆ ಅನ್ವಯವಾಗಲಿದ್ದು, ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಸೂಚನೆ ನೀಡಿದರು. ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಚುನಾವಣೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ ನೀತಿ ಸಂಹಿತೆ ತಕ್ಷಣದಿಂದ ಜಾರಿಗೆ ಬಂದಿದ್ದು, ಡಿಸೆಂಬರ್ 16ರವರೆಗೆ ಜಾರಿಯಲ್ಲಿರುತ್ತದೆ ಎಂದು ಹೇಳಿದರು. ಮಾದರಿ ನೀತಿ ಸಂಹಿತೆ ಜನಪ್ರತಿನಿಧಿಗಳಿಗೆ ಮಾತ್ರವಲ್ಲದೆ ಅಧಿಕಾರಿಗಳು ಸೇರಿದಂತೆ ಪ್ರತಿಯೊಬ್ಬರಿಗೂ ಅನ್ವಯವಾಗುತ್ತದೆ. ನೀತಿ ಸಂಹಿತೆಗೆ…

Read More

ಸಾಗರದಿಂದ ನಾಪತ್ತೆಯಾಗಿದ್ದ ಯುವಕ ರಿಪ್ಪನ್‌ಪೇಟೆಯಲ್ಲಿ ಪತ್ತೆ

ಸಾಗರದಿಂದ ನಾಪತ್ತೆಯಾಗಿದ್ದ ಯುವಕ ರಿಪ್ಪನ್‌ಪೇಟೆಯಲ್ಲಿ ಪತ್ತೆ ರಿಪ್ಪನ್‌ಪೇಟೆ : ಸಾಗರ ಪಟ್ಟಣದಿಂದ ನಾಪತ್ತೆಯಾಗಿದ್ದ ಯುವಕನನ್ನು ರಿಪ್ಪನ್‌ಪೇಟೆ ಪಟ್ಟಣದಲ್ಲಿ ಪೊಲೀಸರು ಪತ್ತೆ ಹಚ್ಚಿ ಪೋಷಕರಿಗೆ ಒಪ್ಪಿಸಿರುವ ಘಟನೆ ನಡೆದಿದೆ. ಸಾಗರ ಪಟ್ಟಣದಲ್ಲಿರುವ ಮನೆಯಿಂದ ಮಾತು ಬಾರದ ಯುವಕನೊಬ್ಬ ಮನೆಯಿಂದ ನಾಪತ್ತೆಯಾಗಿದ್ದನು.ಪೋಷಕರು ಕುಟುಂಬಸ್ಥರ ಮನೆಯಲೆಲ್ಲಾ ವಿಚಾರಿಸಿ ಸ್ಥಳೀಯ ಠಾಣೆ ವಿಷಯ ಮುಟ್ಟಿಸಿದ್ದಾರೆ. ಮಾತು ಬಾರದ ಯುವಕ ಸಾಗರದಿಂದ ಬಸ್ ನಲ್ಲಿ ಹೊಸನಗರಕ್ಕೆ ಬಂದು ಅಲ್ಲಿಂದ ಶಿವಮೊಗ್ಗ ಬಸ್ ಗೆ ಹತ್ತಿರುವ ಮಾಹಿತಿ ಪಡೆದ ಪಟ್ಟಣದ ಪಿಎಸ್‌ಐ ಪ್ರವೀಣ್ ಎಸ್ ಪಿ…

Read More

ಐಶರಾಮಿ ಜೀವನ ನಡೆಸುವ ಬೇಳೂರು ದೇಣಿಗೆಯ ನಾಟಕವಾಡುತಿದ್ದಾರೆ – ಹರತಾಳು ಹಾಲಪ್ಪ ವಾಗ್ದಾಳಿ|election

ರಿಪ್ಪನ್‌ಪೇಟೆ : ಯಡಿಯೂರಪ್ಪನವರ ರಾಜ್ಯದ ಮುಖ್ಯಮಮತ್ರಿಗಳಾಗಿದ್ದ ಆವಧಿಯಲ್ಲಿ ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ರೆಸಾರ್ಟ್ ರಾಜಕೀಯ ಮಾಡುವ ಮೂಲಕ ಕಣ್ಣಿರು ಹಾಕಿಸಿದರ ಪರಿಣಾಮ ಈಗ ಮತದಾರರ ಮುಂದೆ ಕಣ್ಣಿರು ಹಾಕಿ ಅನುಕಂಪ ಗಿಟ್ಟಿಸಿಕೊಳ್ಳುವ ಕಾರ್ಯದಲ್ಲಿ ತೊಡಗಿದ್ದಾರೆ, ಈಗ ಹೋದಲ್ಲಿ ಬಂದಲ್ಲಿ ಕಣ್ಣೀರು ಹಾಕುತ್ತಿರುವುದು ಯಡಿಯೂರಪ್ಪ ನವರಿಗೆ ಕಣ್ಣೀರು ಹಾಕಿಸಿದ ಪಾಪ,ಯಡಿಯೂರಪ್ಪ ನವರಿಗೆ ಕಣ್ಣಿರು ಹಾಕಿಸಿದ ಮೊದಲ ವ್ಯಕ್ತಿ ಈ ಬೇಳೂರು ಗೋಪಾಲಕೃಷ್ಣ ಎಂದು ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪ ಹೇಳಿದರು. ಅವರು ಇಂದು ರಿಪ್ಪನ್‌ಪೇಟೆಯಲ್ಲಿ ಕಾರ್ಯಕರ್ತರ…

Read More

ಪೂಜಾಗೌಡ ಎಂಬ ಹೆಸರಿನಲ್ಲಿ ಜಾಲ – ಶಿವಮೊಗ್ಗದ ವ್ಯಕ್ತಿಗೆ ₹53 ಲಕ್ಷ ಆನ್‌ಲೈನ್ ವಂಚನೆ

An online fraudster posing as a social media contact cheated a Shivamogga salesman of ₹53 lakh by luring him with fake online store profits. ಪೂಜಾಗೌಡ ಎಂಬ ಹೆಸರಿನಲ್ಲಿ ಜಾಲ – ಶಿವಮೊಗ್ಗದ ವ್ಯಕ್ತಿಗೆ ₹53 ಲಕ್ಷ ಆನ್‌ಲೈನ್ ವಂಚನೆ ಶಿವಮೊಗ್ಗ: ಸಾಮಾಜಿಕ ಜಾಲತಾಣದ ಮೂಲಕ ಸಂಪರ್ಕಿಸಿ ಹೆಚ್ಚಿನ ಲಾಭದ ಆಮಿಷವೊಡ್ಡಿದ ಆನ್‌ಲೈನ್ ವಂಚಕರು, ನಗರದ ಸೇಲ್ಸ್‌ಮನ್ ಒಬ್ಬರಿಂದ ಸುಮಾರು ₹52,93,646 ಹಣ ಪಡೆದು ವಂಚಿಸಿದ ಘಟನೆ ಬೆಳಕಿಗೆ…

Read More

ಸಹೃದಯಿ ಶಾಸಕ ಕುಮಾರ್ ಬಂಗಾರಪ್ಪರವರಿಗೆ ಸಚಿವ ಸ್ಥಾನ ನೀಡಿ: ಸಿಗಂದೂರು ಧರ್ಮದರ್ಶಿ ರಾಮಪ್ಪ

ಸೊರಬ:ಬಸವರಾಜ ಬೊಮ್ಮಾಯಿರವರ ನೂತನ ಸಚಿವ ಸಂಪುಟದಲ್ಲಿ ಶಾಸಕರಾದ ಕುಮಾರ್ ಬಂಗಾರಪ್ಪನವರಿಗೆ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನ ನೀಡಬೇಕೆಂದು ಸಿಗಂದೂರು ದೇವಸ್ಥಾನದ ಧರ್ಮದರ್ಶಿಗಳಾದ ರಾಮಪ್ಪನವರ ನೇತ್ರತ್ವದಲ್ಲಿ ಶಾಸಕರ ಬೆಂಬಲಿಗರೊಂದಿಗೆ ಸೊರಬದ  ಶ್ರೀ ರಂಗನಾಥಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.   ಈ ಸಂದರ್ಭದಲ್ಲಿ ಮಾತನಾಡಿದ ಧರ್ಮದರ್ಶಿಗಳಾದ ರಾಮಪ್ಪನವರು ಸಹೃದಯಿ ಜನರ ಕಷ್ಟಕ್ಕೆ ಸ್ಪಂದಿಸುವ ಶಾಸಕ ಕುಮಾರ್ ಬಂಗಾರಪ್ಪನವರಿಗೆ ಸಚಿವ ಸ್ಥಾನ ಸಿಗಲಿ ಎಂದು ಸ್ವಾಮಿಯಲ್ಲಿ ಬೇಡಿಕೊಂಡೆವು, ಅವರಿಗೆ ಈ ಬಾರಿ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸುತ್ತಿದ್ದೇವೆ…

Read More

ಹಾಲುಗುಡ್ಡೆಯ ಕೇಶವ್ ಮೂರ್ತಿ ಗೌಡ ನಿಧನ

ಹಾಲುಗುಡ್ಡೆಯ ಕೇಶವ್ ಮೂರ್ತಿ ಗೌಡ ನಿಧನ ಹೊಸನಗರ ತಾಲೂಕ್ ಒಕ್ಕಲಿಗ ಸಂಘದ ಮಾಜಿ ನಿರ್ದೇಶಕರು ಹಾಗೂ ಸಮಾಜಮುಖಿ ವ್ಯಕ್ತಿತ್ವದ ಹಾಲುಗುಡ್ಡೆಯ ಕೇಶವ್ ಮೂರ್ತಿ ಗೌಡರು ಇಂದು ಬೆಳಗ್ಗೆ ನಿಧನರಾದರು. ಅಲ್ಪಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಮುಂಜಾನೆ ತಮ್ಮ ಸ್ವಗೃಹದಲ್ಲಿ ಕೊನೆಯುಸಿರೆಳೆದರು. ಮೃತರು ಪತ್ನಿ , ಓರ್ವ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರ ಹೊಸನಗರ ತಾಲೂಕು ಒಕ್ಕಲಿಗ ಸಂಘದ ಎಲ್ಲಾ ಪದಾಧಿಕಾರಿಗಳು, ನಿರ್ದೇಶಕರು ಹಾಗೂ ಕುಲಬಾಂಧವರು ಆಘಾತ ವ್ಯಕ್ತಪಡಿಸಿ, ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು…

Read More

Shivamogga | ದರೋಡೆಗೆ ಹೊಂಚು ಹಾಕಿದ್ದ ನಾಲ್ವರು ಯುವಕರ ಬಂಧನ

Shivamogga | ದರೋಡೆಗೆ ಹೊಂಚು ಹಾಕಿದ್ದ ನಾಲ್ವರು ಯುವಕರ ಬಂಧನ ಶಿವಮೊಗ್ಗ : ದರೋಡೆಗೆ ಹೊಂಚು ಹಾಕಿ ನಿಂತಿದ್ದ ಯುವಕರನ್ನ ದೊಡ್ಡಪೇಟೆ ಪೊಲೀಸರು ಬಂಧಿಸಿ, 2 ಸ್ಟೀಲ್ ಡ್ರಾಗನ್, ಕಬ್ಬಿಣದ ರಾಡು ಹಾಗೂ ಲಾಂಗ್‌ ವಶಪಡಿಸಿಕೊಂಡಿದ್ದಾರೆ. ಹೋಟೆಲ್ ಕಾರ್ಮಿಕ, ಭದ್ರಾವತಿ ತಾಲೂಕಿನ ಬಾಬಳ್ಳಿ ಗ್ರಾಮದ ದೇವರಾಜ್ (31), ಕೋಟೆಗಂಗೂರಿನ ಸಾಗರ್ ಯಾನೆ ಶಬರೀಶ್ (22), ಭದ್ರಾವತಿ ಎಪಿಎಂಸಿ ಅಡಕೆ ಮಂಡಿಯಲ್ಲಿ ಕೆಲಸ ಮಾಡಿಕೊಂಡಿದ್ದ ನಾಗರಾಜ್ ಯಾನೆ ಕುಮಾರ (38), ರಾಗಿಗುಡ್ಡದ ಶೇಯಸ್ (22) ಬಂಧಿತ ಆರೋಪಿಗಳಾಗಿದ್ದು ಕೋಟೆಗಂಗೂರಿನ…

Read More