Headlines

ಸ್ನೇಹಿತನೊಂದಿಗೆ ಸೇರಿಕೊಂಡು ತನ್ನದೇ ಮನೆಯ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳ್ಳತನಗೈದ ಯುವತಿ ಅರೆಸ್ಟ್

ಸ್ನೇಹಿತನೊಂದಿಗೆ ಸೇರಿಕೊಂಡು ತನ್ನದೇ ಮನೆಯ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳ್ಳತನಗೈದ ಯುವತಿ ಅರೆಸ್ಟ್ ತನ್ನದೇ ಮನೆಯಲ್ಲಿ ಕಳ್ಳತನವೆಸಗಿ ಪೊಲೀಸರ ಬಳಿ ಸುಳ್ಳು ಕಂಪ್ಲೆಂಟ್ ನೀಡಿದ್ದ ಚಾಲಾಕಿ ಯುವತಿಯೊಬ್ಬಳು ಈಗ ಪೊಲೀಸರ ಅತಿಥಿಯಾಗಿರುವ ಘಟನೆ ಚನ್ನಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಶಿವಮೊಗ್ಗದ ಮೂಲದ ವ್ಯಕ್ತಿಯೊಬ್ಬನ ಜೊತೆಗೆ ಸೇರಿಕೊಂಡು ತನ್ನ ಮನೆಯಲ್ಲಿ ತಾನೆ ಕಳ್ಳತನ ಮಾಡಿದ ಚನ್ನಗಿರಿ ತಾಲೂಕಿನ ಯುವತಿ ಚನ್ನಗಿರಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಲು ಹೋಗಿ ಅರೆಸ್ಟ್ ಆಗಿದ್ದಾಳೆ. ಶಿವಮೊಗ್ಗದ ವ್ಯಕ್ತಿಯೊಬ್ಬನ ಜೊತೆ ಸಂಬಂಧ ಹೊಂದಿದ್ದ…

Read More

ರಾಜ್ಯ ಸರ್ಕಾರದಿಂದ ಪ್ರತಿ ತಾಲ್ಲೂಕಿಗೂ ಉಸ್ತುವಾರಿ ಅಧಿಕಾರಿ ನೇಮಕ – ಜಿಲ್ಲೆಯ ಏಳು ತಾಲೂಕಿನ ಅಧಿಕಾರಿಗಳು ಯಾರು ಗೊತ್ತಾ..??| State government

ರಾಜ್ಯ ಸರ್ಕಾರದಿಂದ ಪ್ರತಿ ತಾಲ್ಲೂಕಿಗೂ ಉಸ್ತುವಾರಿ ಅಧಿಕಾರಿ ನೇಮಕ ರಾಜ್ಯ ಸರ್ಕಾರ ಅಭಿವೃದ್ಧಿ ಕಾರ್ಯಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಪ್ರತಿ ತಾಲ್ಲೂಕಿಗೂ ಒಬ್ಬರು ಉಸ್ತುವಾರಿ ಅಧಿಕಾರಿಯನ್ನು ನಿಯೋಜಿಸಲಾಗಿದೆ.  ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿಗೆ ರವಿಚಂದ್ರ ನಾಯಕ್ ಕೆಎಎಸ್ , ಸಾಗರ ತಾಲೂಕಿಗೆ ಡಾ. ಬಸಂತಿ KAS ,ಶಿಕಾರಿಪುರ ತಾಲೂಕಿಗೆ ನಾಗೇಂದ್ರ ಎಫ಼್ ಹೊನ್ನಾಳಿ KAS , ಭದ್ರಾವತಿ ತಾಲೂಕಿಗೆ ಸಂಗಪ್ಪ KAS , ಸೊರಬ ತಾಲೂಕಿಗೆ ಅಭಿಷೇಕ್ ವಿ KAS , ತೀರ್ಥಹಳ್ಳಿ ತಾಲೂಕಿಗೆ ಸಿದ್ದಲಿಂಗಪ್ಪ KAS ಹಾಗೂ…

Read More

Accident | ಚಾಲಕನ ನಿಯಂತ್ರಣ ತಪ್ಪಿ ಅಂಗಡಿಯೊಳಗೆ ನುಗ್ಗಿದ ಕಾರು

Accident | ಚಾಲಕನ ನಿಯಂತ್ರಣ ತಪ್ಪಿ ಅಂಗಡಿಯೊಳಗೆ ನುಗ್ಗಿದ ಕಾರು ತೀರ್ಥಹಳ್ಳಿ: ಪಟ್ಟಣದಲ್ಲಿ ಕಾರೊಂದು ಏಕಾಏಕಿ ಬಟ್ಟೆ ಅಂಗಡಿ ಒಳಗೆ ನುಗ್ಗಿರುವ ಘಟನೆ ತೀರ್ಥಹಳ್ಳಿ ಪಟ್ಟಣದ ಗಾಂಧಿ ಚೌಕದಲ್ಲಿ ಮಂಗಳವಾರ ತಡ ರಾತ್ರಿ ಸಂಭವಿಸಿದೆ. ಕರ್ನಾಟಕ ಬ್ಯಾಂಕ್ ಕಟ್ಟಡದ ಗಜಾನನ ಟೆಕ್ಸ್ ಟೈಲ್ಸ್  ಅಂಗಡಿಯ ಕೆಳಗೆ ಕಾರು ಬಿದ್ದಿದ್ದು, ಒಂದು ಸ್ಕೂಟಿ ಕೂಡ ಪುಡಿ ಪುಡಿಯಾಗಿದೆ. ಸ್ಥಳದಲ್ಲಿ ಯಾರಾದರೂ ಇದ್ದಿದ್ದರೆ ದೊಡ್ಡ ದುರಂತ ನಡೆಯುತ್ತಿತ್ತು ಎಂದು ಸ್ಥಳೀಯರು ಹೇಳುತಿದ್ದಾರೆ. ಆಗುಂಬೆ ರಸ್ತೆಯಿಂದ ಛತ್ರಕೇರಿ ಕಡೆಗೆ ತಿರುಗಿಸುವ ವೇಳೆ…

Read More

ಹೊಸನಗರ : ಹುಲ್ಲಿನ ಬಣವೆಗೆ ತಗುಲಿದ ಬೆಂಕಿ – ನಷ್ಟ..!!|fire

ಹೊಸನಗರ : ಹುಲ್ಲಿನ ಬಣವೆಗೆ ತಗುಲಿದ ಬೆಂಕಿ – ನಷ್ಟ..!! ಹೊಸನಗರ ತಾಲ್ಲೂಕಿನ ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಯ ಬೆಳ್ಳಂಡ ಗ್ರಾಮದ ಹಾಲಪ್ಪ ಗೌಡ ಬಿನ್ ರುದ್ರಪ್ಪ ಗೌಡರಿಗೆ ಸೇರಿದ ಒಣ ಹುಲ್ಲಿನ ಬಣವೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಪಕ್ಕದಲ್ಲಿದ್ದ ಕೊಟ್ಟಿಗೆಗೂ ಬೆಂಕಿ ಹೊತ್ತಿದ ಘಟನೆ ಇಂದು ಮಧ್ಯಾಹ್ನ ಸಂಭವಿಸಿದ್ದು ಸುಮಾರು ಅಂದಾಜು 50 ಸಾವಿರ ರೂಪಾಯಿಯಷ್ಟು ನಷ್ಟವಾಗಿದೆ. ಆಗ್ನಿ ಶಾಮಕ ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ತಕ್ಷಣ ಆಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದರಿಂದ…

Read More

ಫೆಂಗಲ್ ಚಂಡಮಾರುತ – ಶಿವಮೊಗ್ಗ ಜಿಲ್ಲಾದ್ಯಂತ ಡಿ.3 ರಂದು ಶಾಲಾ , ಕಾಲೇಜು ಹಾಗೂ ಅಂಗನವಾಡಿಗಳಿಗೆ ರಜೆ ಘೋಷಣೆ

ಫೆಂಗಲ್ ಚಂಡಮಾರುತ – ಶಿವಮೊಗ್ಗ ಜಿಲ್ಲಾದ್ಯಂತ ಡಿ.3 ರಂದು ಶಾಲಾ , ಕಾಲೇಜು ಹಾಗೂ ಅಂಗನವಾಡಿಗಳಿಗೆ ರಜೆ ಘೋಷಣೆ ಶಿವಮೊಗ್ಗ ಜಿಲ್ಲೆಯಾದ್ಯಂತ ಯೆಲ್ಲೋ ಅಲರ್ಟ್ ಹಿನ್ನಲೆಯಲ್ಲಿ ಅಧಿಕ ಮಳೆ ಸಂಭವವಾಗುವ ಹಿನ್ನಲೆಯಲ್ಲಿ ಜಿಲ್ಲಾದ್ಯಂತ ಪದವಿ, ಪದವಿ ಪೂರ್ವ ಕಾಲೇಜುಗಳು, 1-10 ನೇ ತರಗತಿ ಮತ್ತು ಅಂಗನವಾಡಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಈ ಕುರಿತು ಪ್ರಭಾರ ಜಿಲ್ಲಾ ಪಂಚಾಯತ್ ಸಿಇಒ ಹೇಮತ್ ಕುಮಾರ್ ಅಧಿಕ ಮಳೆ ಹಿನ್ನಲೆಯಲ್ಲಿ ರಜೆ ಘೋಷಿಸಿದ್ದಾರೆ. ಮುಂದಿನ ಎರಡು ದಿನಗಳು ಅಧಿಕ ಮಳೆಯಾಗುವ ಹಿನ್ನಲೆಯಲ್ಲಿ…

Read More

ಆನಂದಪುರ – ಶಿಕಾರಿಪುರ – ರಾಣೆಬೆನ್ನೂರು ನೂತನ ರೈಲು ಮಾರ್ಗ – ಫೆ.27 ಕ್ಕೆ ಪಿಎಂ ಮೋದಿಯಿಂದ ಕಾಮಗಾರಿಗೆ ಚಾಲನೆ : ಬಿ ವೈ ರಾಘವೇಂದ್ರ

ರಿಪ್ಪನ್‌ಪೇಟೆ : ಬ್ರಿಟೀಷ್ ಕಾಲದ ರೈಲ್ವೆ ಮಾರ್ಗ ಹೊರತು ಈತನಕ ಶಿವಮೊಗ್ಗದಿಂದ ಯಾವುದೆ ಹೊಸ ಮಾರ್ಗಗಳು ಇರಲಿಲ್ಲ.ಇದೆ ಮೊದಲ ಭಾರಿ ಹೊಸ ರೈಲ್ವೆ ಮಾರ್ಗ ಸಿದ್ಧವಾಗಿದೆ ಎಂದು ಸಂಸದ ಬಿ.ವೈ ರಾಘವೇಂದ್ರ ತಿಳಿಸಿದರು. ಸಮೀಪದ ಹೊಂಬುಜ ಅತಿಶಯ ಮಹಾಷೇತ್ರದಲ್ಲಿ ಚತುರ್ವಿಂಶತಿ ತೀರ್ಥಂಕರರ ಜಿನಬಿಂಬಗಳ ಪಂಚಕಲ್ಯಾಣ ಪೂರ್ವಕ ಮಹೋತ್ಸವದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ಸ್ವಾತಂತ್ರ್ಯ ಬಂದ ನಂತರ ಶಿವಮೊಗ್ಗದಿಂದ ಯಾವುದೆ ಹೊಸ ಮಾರ್ಗಗಳನ್ನು ಮಾಡಿಲ್ಲ. 2500 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸುತ್ತಿರುವ ಆನಂದಪುರ…

Read More

ಹೊಂಬುಜ : ಶ್ರವಣಬೆಳಗೊಳದ ಪರಮಪೂಜ್ಯ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರಿಗೆ ಶ್ರದ್ಧಾಂಜಲಿ|hombuja

ಶ್ರವಣಬೆಳಗೊಳದ ಪರಮಪೂಜ್ಯ ಜಗದ್ಗುರು ಕರ್ಮಯೋಗಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರಿಗೆ  ಶ್ರದ್ಧಾಂಜಲಿಯ ನುಡಿನಮನಗಳು ಆಧುನಿಕ ಬೆಳಗೊಳದ ಶಿಲ್ಪಿ, ಅತಿಶಯ ಶ್ರೀಕ್ಷೇತ್ರ ಶ್ರವಣಬೆಳಗೊಳದ ಪರಮಪೂಜ್ಯ ಜಗದ್ಗುರು ಕರ್ಮಯೋಗಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು 54 ವರ್ಷ ಜನಸಮುದಾಯ ಹಾಗೂ ಶ್ರೀಮಠವನ್ನು ಮುನ್ನಡೆಸಿದ ಪ್ರಾತಃ ಸ್ಮರಣೀಯರು ಹಾಗೂ ಮಾರ್ಗದರ್ಶಕರೂ ಆಗಿದ್ದ ಅವರ ನೇತೃತ್ವವನ್ನು ಕಳೆದುಕೊಂಡ ನಮ್ಮ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ.  ಪೂಜ್ಯರು ತಮ್ಮ ಬಾಲ್ಯ ಜೀವನದ ವಿದ್ಯಾಭ್ಯಾಸವನ್ನು ಶ್ರೀಕ್ಷೇತ್ರ ಹೊಂಬುಜದ ಶ್ರೀಮಠದ ಗುರುಕುಲದಲ್ಲಿ ಮಾಡಿದ್ದರು ಎಂಬುದು ನಮ್ಮೆಲ್ಲರ ಹೆಮ್ಮೆಯ ಸಂಗತಿಯಾಗಿದೆ….

Read More

SSLC ಪಲಿತಾಂಶಕ್ಕೆ ಕ್ಷಣಗಣನೆ : ಪಲಿತಾಂಶ ಮೊಬೈಲ್ ನಲ್ಲಿ ನೋಡುವುದು ಹೇಗೆ???? ಈ ಸುದ್ದಿ ನೋಡಿ!!!!

2021- 22ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ  ಮೇ 19 ರಂದು  ಪ್ರಕಟವಾಗಲಿದೆ.  ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮೇ 19 ರ ಗುರುವಾರ  ಮಧ್ಯಾಹ್ನ 12.30ಕ್ಕೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಕಚೇರಿಯಲ್ಲಿ ಫಲಿತಾಂಶ ಪಕಟಿಸಲಿದ್ದಾರೆ. ಬಳಿಕ ವಿವಿಧ ವೆಬ್‌ಸೈಟ್‌ಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಕರ್ನಾಟಕದಲ್ಲಿ ಮಾರ್ಚ್​ 28ರಿಂದ ಏಪ್ರಿಲ್​ 11ರವರೆಗೆ ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆದಿತ್ತು. ಈ ಮೊದಲು ಮೇ 15ರಂದು ಫಲಿತಾಂಶ ಪ್ರಕಟಿಸುವುದಾಗಿ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಚಿಂತನೆ ನಡೆಸಿತ್ತು. ಆದರೆ ರಜೆಗಳು…

Read More

ಹಿಂದೂ ಹರ್ಷನ ಸಹೋದರಿ ಅಶ್ವಿನಿ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು??? ಈ ಸುದ್ದಿ ನೋಡಿ

ನ್ಯಾಯ ಕೇಳಲು ಹೋದರೆ, ಗೃಹ ಸಚಿವರು ಬೈದು ಕಳಿಸಿದ್ದಾರೆ ಎನ್ನುವ ಹರ್ಷ ಸಹೋದರಿ ಆರೋಪಕ್ಕೆ ಗೃಹ ಸಚಿವ ಅರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದು, ಅವರು ಏನೇನೋ ಮಾತನಾಡಿದ್ರು, ಆ ರೀತಿ ಮಾತನಾಡಿದ್ರೆ ನಾವೇನು ಮಾಡೋಣ ಎಂದು ಸಚಿವರು ಪ್ರಶ್ನಿಸಿದರು. ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅರಗ ಜ್ಞಾನೇಂದ್ರ, ರಾಜು ನನ್ನ ಅತ್ಯಂತ ಆಪ್ತ ಮಿತ್ರ ಎಂದು ಮೊದಲು ಹೇಳಿದರು. ಈ ವೇಳೆ ಪತ್ರಕರ್ತರು ರಾಜು ಅಲ್ಲ ಹರ್ಷ ಎಂದು ನೆನಪಿಸಿದ್ದು, ಈ ವೇಳೆ ಸಚಿವರು, ಸಾರಿ ಹರ್ಷ ನನ್ನ…

Read More

ರಿಪ್ಪನ್ ಪೇಟೆ : ಕುಗ್ರಾಮದಲ್ಲೊಂದು ಖಾಸಗಿ ಶಾಲೆಯನ್ನು ಮೀರಿಸುವಂತಹ ಸುಸಜ್ಜಿತ ಸರ್ಕಾರಿ ಶಾಲೆ

ರಿಪ್ಪನ್ ಪೇಟೆ: ಸರ್ಕಾರಿ ಶಾಲೆ ಎಂದು ಮೂಗು ಮುರಿಯುವವರೆಲ್ಲ ರಿಪ್ಪನ್ ಪೇಟೆ ಸಮೀಪದ ಬಿದರಹಳ್ಳಿ ಶಾಲೆಗೆ ಒಮ್ಮೆ ಭೇಟಿ ನೀಡಬೇಕು. ಮೂಗಿನ ಮೇಲೆ ಬೆರಳಿಟ್ಟುಕೊಂಡು ಅಹುದಹುದು ಎನ್ನದಿದ್ದರೆ ಹೇಳಿ! ಮಲೆನಾಡ ಗಾಂಧಿ ಎಚ್‌.ಜಿ. ಗೋವಿಂದೇಗೌಡ ಹೆಸರಿನ ರಾಜ್ಯಮಟ್ಟದ ಅತ್ಯುತ್ತಮ ಸರ್ಕಾರಿ ಶಾಲೆ ಪ್ರಶಸ್ತಿ ಹಾಗೂ ಇನ್ನಿತರ ರಾಜ್ಯ ಮಟ್ಟದ ಪ್ರಶಸ್ತಿಯನ್ನು ಪಡೆಯುವ ಮೂಲಕ ಮಲೆನಾಡಿನ ಹಳ್ಳಿಯೊಂದು ರಾಜ್ಯದಲ್ಲಿ ಗುರುತಿಸಿಕೊಂಡಿದೆ. ಶಿಕ್ಷಕರ ನಿಸ್ವಾರ್ಥ ಸೇವೆ, ಶಿಕ್ಷಣ  ಪ್ರೇಮ, ಊರವರ ಸಹಾಯ-ಸಹಕಾರ ಸೇರಿದರೆ ಸರ್ಕಾರಿ ಶಾಲೆಯೊಂದು ಹೇಗೆ ಅಭಿವೃದ್ಧಿ ಪಥದಲ್ಲಿ…

Read More